ಕೃತಯುಗದಲ್ಲಿ ಕುಂಜರಯಾಗಕ್ಕೆ, ತ್ರೇತಾಯುಗದಲ್ಲಿ ಅಶ್ವಯಾಗಕ್ಕೆ,
ದ್ವಾಪರದಲ್ಲಿ ಮಹಿಷಯಾಗಕ್ಕೆ, ಕಲಿಯುಗದಲ್ಲಿ ಅಜಯಾಗಕ್ಕೆ,
ಇಂತೀ ವೇದಗಳಿಂದ ವೇದವೇದ್ಯರೆ ನೀವು ?
ವೇದಯಾಗಕ್ಕೆ ವಧೆಯುಂಟೆ ?
ಇಂತೀ ಭೇದವನರಿಯದೆ ಶಾಪಹತರುಗಳಿಗೆ
ಸರ್ವಜ್ಞಾತೃದೃಷ್ಟವಪ್ಪುದೆ ?
ಇಂತೀ ವೇದವೇದ್ಯರು ಶಾಸ್ತ್ರಸಂಪನ್ನರು.
ಪುರಾಣಪೂರ್ವಜ್ಞಾನಯುತರು, ಸಕಲಾಗಮಕ್ಕತೀತರು ಎಮ್ಮವರು,
ಲಲಾಮ ಭೀಮಸಂಗಮೇಶ್ವರಲಿಂಗದೊಳಗಾದ ಶರಣರು.