ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (2) (2) (0) (0) (0) (0) (0) (0) (0) (0) (3) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ಪೂರ್ವಚಿಂತನೆಯಿಂದ ಕಂಡು, ಉತ್ತರಚಿಂತನೆಯಿಂದ ಖಂಡಿಸಿ, ಲಕ್ಷಾಲಕ್ಷವೆಂಬ ಬೀಜಾಕ್ಷರದ ಪ್ರಣವದ ಮೂಲಾಕ್ಷರದ ಚತುರ್ಭೇದವನರಿದು, ಪಂಚಾಕ್ಷರಿ ಮುಂತಾದ ಷಡಕ್ಷರಿಯೊಳಗಾದ, ಐವತ್ತೊಂದನೆಯ ಅಕ್ಷರದಲ್ಲಿ ನಿರ್ವಾಹವೇದ ಮುಂತಾದ ಶಾಸ್ತ್ರದೊಳಗಾದ, ಪುರಾಣಾಗಮಂಗಳೆಲ್ಲವೂ ನಾನಾರೆಂಬುದ ತಿಳಿವುದಕಿಕ್ಕಿದ ಬ್ಥಿತ್ತಿ. ತನ್ನ ತಾನರಿದ ಮತ್ತೆ ಮಿಕ್ಕಾದ ಉಳುಮೆ ತನಗನ್ಯಬ್ಥಿನ್ನವಿಲ್ಲ. ಲಲಾಮಬ್ಥೀಮಸಂಗಮೇಶ್ವರಲಿಂಗವಲ್ಲದಿದೆರೆಡೆಯಲ್ಲ.
--------------
ವೇದಮೂರ್ತಿ ಸಂಗಣ್ಣ