ಅಥವಾ
(0) (1) (0) (0) (0) (0) (0) (0) (0) (0) (0) (0) (0) (0) ಅಂ (0) ಅಃ (0) (1) (0) (0) (0) (0) (0) (0) (0) (0) (0) (0) (0) (0) (0) (0) (1) (0) (0) (0) (2) (2) (0) (0) (0) (0) (0) (0) (0) (0) (3) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ವೇದದ ಮೊದಲಧ್ಯಾಯದಲ್ಲಿ ಒಂಕಾರಕ್ಕೆ ಒಡೆಯನಾರೆಂಬುದ ತಿಳಿದು, ಸದ್ಯೋಜಾತಾದ್ಭವೇದ್ಭೂಮಿರ್ವಾಮದೇವಾದ್ಭವೇಜ್ಜಲಂ ಅಘೋರಾದ್ವನ್ಹಿರಿತ್ಯುಕ್ತಸ್ತತ್ಪುರುಷಾದ್ವಾಯುರುಚ್ಯತೇ | ಈಶಾನ್ಯಾದ್ಗಗನಾಕಾರಂ ಪಂಚಬ್ರಹ್ಮಮಯಂ ಜಗತ್ || ಇಂತೀ ವೇದವೇದ್ಯರು ಶಿವಭಕ್ತರಲ್ಲದಿಲ್ಲ. ಇಂತಿದನರಿಯದೆ, ಘನ ಕಿರಿದೆಂದು ಹೋರುವವರಿಗೆ ತಿಳಿವಳವ ಕೊಡುವೆ. ನಿಮ್ಮ ಶಾಂಕರಸಂಹಿತೆಯಲ್ಲಿ ದೃಷ್ಟವ ತಿಳಿದುಕೊಳ್ಳಿ. ಲಲಾಮಬ್ಥೀಮಸಂಗಮೇಶ್ವರಲಿಂಗವಲ್ಲದಿಲ್ಲಾ ಎಂದೆ.
--------------
ವೇದಮೂರ್ತಿ ಸಂಗಣ್ಣ
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ವೇಳೆಯನರಿದು ಧ್ವನಿದೋರುವ ತಾಮ್ರಚೂಡಂಗೆ ಅದಾವ ಜ್ಞಾನ ? ಮಧುರರಸಂಗಳಿದ ಠಾವನರಿದೆಯಿದುವ ಪಿಪೀಲಿಕಂಗೆ ಅದಾವ ಜ್ಞಾನ ? ತಾನುಂಡು ನೆನದಡೆ ಶಿಶು ತೃಪ್ತಿಯಹ ಕೂರ್ಮಂಗೆ ಅದಾವ ಜ್ಞಾನ ? ಅರಿದು ನಡೆದಡೆ ವೇದವೇದ್ಯನು, ಅರಿದು ನಡೆದಡೆ ಶಾಸ್ತ್ರಸಂಬಂಧಿ, ಅರಿದು ನಡೆದಡೆ ಪುರಾಣಪುಣ್ಯವಂತನು, ಅರಿದು ನಡೆದಡೆ ಸಕಲಾಗಮಭರಿತನು. ಇಂತೀ ಪಂಚಾಕ್ಷರಿಯ ಮೂಲಷಡಕ್ಷರಿಯ ಭೇದ. ಜಗಕ್ಕಾಧಾರವಾರೆಂಬುದ ಏಕಮೇವನದ್ವಿತೀಯನೆಂಬುದ ತಿಳಿದು, ಸೋಹಂ ಕೋಹಂ ಎಂಬುದ ತಿಳಿದು, ಆ ನಿಜವೆ ವಸ್ತುವಿಗೊಡಲೆಂಬುದ ಪ್ರಮಾಣಿಸಿ, ನುಡಿದು ನಡೆಯಬಲ್ಲವನೆ ವೇದವೇದ್ಯನು ಕಾಣಾ, ಲಲಾಮಭೀಮಸಂಗಮೇಶ್ವರಲಿಂಗವು ತಾನಾದ ಶರಣ.
--------------
ವೇದಮೂರ್ತಿ ಸಂಗಣ್ಣ