ಅಯ್ಯಾ, ಏನನಹುದೆಂಬೆ, ಏನನಲ್ಲಾ ಎಂಬೆ.
ಕಾಯವುಳ್ಳನ್ನಕ್ಕ ಕರ್ಮ ಬಿಡದು,
ಜೀವವುಳ್ಳನ್ನಕ್ಕ ಕಾರ್ಪಣ್ಯ ಕೆಡದು.
ಆರ ಕೇಳಿ ಆರಿಗೆ ಹೇಳಿಹೆನೆಂದಡೂ ಭಾವದ ಭ್ರಮೆ ಬಿಡದು.
ಮಹಾಸಮುದ್ರವನೀಜುವವನಂತೆ ಕರ ಕಾಲು ಆಡುವನ್ನಕ್ಕ
ಜೀವಭ್ರಮೆ ನಿಂದಲ್ಲಿ ನಿಂದಿತ್ತು.
ಭಾವಭ್ರಮೆ ಒಂದನರಿತು ಒಂದನರಿದೆಹೆನೆಂಬನ್ನಕ್ಕ
ಬಂದಿತ್ತು ದಿನ, ಅಂಗವ ಹರಿವುದಕ್ಕೆ.
ಈ ಸಂದೇಹದ ಸಂದಿಯಲ್ಲಿ ಕೆಡಹದೆ
ನಿಜದಂಗವ ತೋರು ಗೋಪತಿನಾಥ ವಿಶ್ವೇಶ್ವರ ಲಿಂಗ.