ಕೋಣನ ಕೊರಳಲ್ಲಿ ಕಪಿ, ಬೆನ್ನಿನಲ್ಲಿ ರಕ್ಷಿ,
ಬಾಲದ ಜವೆಗೊಂದೊಂದು ಮುಸುವ,
ಕೊಂಬಿನ ಮೇಲೆ ಕುಣಿವ ಗಿಡುಗ ;
ಇಂತಿವೆಲ್ಲವ ಸಂತೈಸಿಕೊಂಡು ರಕ್ಷಿ ನಡೆದಳು.
ತಮಪುರವೆಂಬ ಪಟ್ಟಣಕ್ಕೊಸ್ತಿಯ ಹೋಗಿ,
ಆ ಪಟ್ಟಣದೊಳು ಸ್ಥಿರವಾಗಿ ನಿಂದು,
ಬದುಕು ಮನೆ ಅರ್ಥವಂ ಗಳಿಸಿ,
ತಮಪುರದರಸಿಂಗೆ ಸರಿಗೊರನಿಕ್ಕಿ
ತಮದ ಮರೆಯಲ್ಲಿಪ್ಪ ವನಿತೆಯ ಕಂಡರೊ[ಂದ]ಗ್ನಿ,
ನಡೆದರೆರಡಗ್ನಿ, ನುಡಿದರೆ ಮೂರಗ್ನಿ,
ಕೇಳಿದರೆ ನಾಲ್ಕಗ್ನಿ, ವಾಸಿಸಿದರೈದಗ್ನಿ.
ಆ ಗಿರಿಯೊಳು ನಿಂದು, ಗಿಡುಗನನಡಸಿ, ಮುಸುವನ ಹರಿಯಬಿಟ್ಟು,
ಕಪಿಯ ಕೈವಿಡಿದು ಜಪವ ಮಾಡಿ,
ಕೋಣನ ನೆರೆ ಕೂಗುವವ ನುಡಿಯ ಪಾಶದೊಳು ಸಿಲ್ಕಿ,
ತ್ರಿಲೋಕವೆಲ್ಲ ವ್ರತಭ್ರಷ್ಟರಾದ ಚೋದ್ಯವ ಕಂಡು
ನಾ ಬೆರಗಾಗುತಿರ್ದೆನು
ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.