ಭವಿ ಮಾಡಿದುದನುಂಡರೆ ಪಾಕ ಕಿಲ್ಬಿಷವೆಂಬಿರಿ.
ಶಿವಭಕ್ತರು ಪಾದೋದಕ ಪ್ರಸಾದವ ಕೊಂಬುವಲ್ಲಿ
ಭವಿಮಿಶ್ರವೆಂದು ವಿಚಾರಿಸಿ ಕೇಳುವಿರಿ.
ಬೆಲ್ಲ, ಸಕ್ಕರೆ, ಉಪ್ಪು, ತೈಲ, ತುಪ್ಪ, ಭವಿಪಾಕವ ಭುಂಜಿಸುವಿರಿ.
'ಯಥಾ ದೇಹಂ ತಥಾಹಂಚ ಲಿಂಗವಾಯತೆ'
ಭವಿಪಾಕ ಕಿಲ್ಬಿಷವೆಂದು ಕಿಲ್ಬಿಷವ ಭುಂಜಿಸಿದ ಬಳಿಕ
ಅಚ್ಚಲಿಂಗಾಗವೆಲ್ಲಿಹುದೊ ವ್ರತಗೇಡಿಗಳಿರಾ ?
ನಿಮ್ಮ ದೇವಭಕ್ತರೆಂದು ಪೂಜಿಸಿದವರಿಗೆ ಭವ ತಪ್ಪದು.
ನಮ್ಮ ಶಿವಗಣಂಗಳು ಅಚ್ಚಲಿಂಗೈಕ್ಯರು.
ಅವರು ಅನಾದಿ ಪಾದೋದಕ ಪ್ರಸಾದವ ಕೊಂಬುವರು.
ಅವರು ಅನಾದಿಲಿಂಗಾಂಗಿಗಳು.
ಅವರು ಮುಟ್ಟಿದ್ದೆಲ್ಲ ಪಾವನ
ಅವರು ನೋಡಿದ್ದೆಲ್ಲ ಪವಿತ್ರವೆಂದ ನಿಮ್ಮ ಶರಣ
ಚೆನ್ನಯ್ಯಪ್ರಿಯ ನಿರ್ಮಾಯಪ್ರಭುವೆ.