ಅಥವಾ
(17) (3) (0) (0) (3) (0) (0) (0) (7) (0) (0) (1) (0) (0) ಅಂ (4) ಅಃ (4) (4) (0) (2) (0) (0) (1) (0) (1) (0) (0) (0) (0) (0) (0) (0) (3) (0) (5) (0) (6) (2) (0) (4) (4) (5) (1) (1) (0) (3) (5) (9) (1) (4) (7) (0)

ಅಂ ಪದದಿಂದ ಪ್ರಾರಂಭವಾಗುವ ವಚನಗಳು:

ಅಂದಂದಿಗೆ ನೂರು ತುಂಬಿತ್ತೆಂಬ ದಿಟವಿರಬೇಕು. ಸಂದ ಪುರಾತನರ ನೆನೆಯುತ್ತಿರಬೇಕು. ಜಂಗಮ ಮಠಕ್ಕೆ ಬಂದಡೆ, ವಂಚನೆಯಿಲ್ಲದೆ ಮಾಡಬೇಕು. ಎನಗಿದೇ ವರವನೀವುದು, ಬಸವಪ್ರಿಯ ಕೂಡಲಚನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಅಂಗದ ಕಳೆ ಲಿಂಗದಲ್ಲಿ ಲೀಯವಾಗದು. ಲಿಂಗದ ಕಳೆ ಅಂಗದಲ್ಲಿ ಲೀಯವಾಗದು. ಮಾತಿನಮಾಲೆಯ ಬೊಮ್ಮವೇತರದೊ ? ಕಾಯ ಭಕ್ತನಾದರೆ ಭೃತ್ಯಾಚಾರವಿರಬೇಕು. ಪ್ರಾಣ ಜಂಗಮವಾದಡೆ ಅರಿದಿರಬೇಕು. ಇಂತು ಭಕ್ತಿಜ್ಞಾನವುಳ್ಳವರಲ್ಲದೆ ಭಕ್ತರಲ್ಲ, ಶರಣರಲ್ಲ. ಹಿರಿಯರು ಬಂದಡೆ ಇದಿರೆದ್ದು ಬಾರದವರ ಮನೆಗೆ ಅಡಿಯ ಇಡೆವೆಂದು, ಬಸವಪ್ರಿಯ ಕೂಡಲಚನ್ನಸಂಗನ ಶರಣರು ಕಾಡಿಹರು ಕಾಣಾ, ಸಂಗನಬಸವಣ್ಣಾ.
--------------
ಸಂಗಮೇಶ್ವರದ ಅಪ್ಪಣ್ಣ
ಅಂಗ ಲಿಂಗವೆಂದರಿದಾತಂಗೆ, ಅಂಗದಲೆ ಐಕ್ಯ. ಕಂಗಳು ಲಿಂಗವೆಂದರಿದಾತಂಗೆ, ಕಂಗಳಲೆ ಐಕ್ಯ. ಕರವೆ ಲಿಂಗವೆಂದರಿದಾತಂಗೆ, ಕರದಲೆ ಐಕ್ಯ. ಈ ತ್ರಿವಿಧದ ನೆಲೆಯ, ಶ್ರುತಿ ಸ್ಮೃತಿಗಳರಿಯವು. ಎಮ್ಮ ಬಸವಪ್ರಿಯ ಕೂಡಲಚನ್ನಸಂಗಮದೇವನಲ್ಲಿ ಈ ಇರವ ಶರಣರೆ ಬಲ್ಲರು.
--------------
ಸಂಗಮೇಶ್ವರದ ಅಪ್ಪಣ್ಣ
ಅಂಗದ ಪ್ರಕೃತಿ ಲಿಂಗದಲ್ಲಿ ಅಳಿದು, ಮನದ ಪ್ರಕೃತಿ ಅರಿವಿನಲ್ಲಿ ಅಳಿದು, ಜೀವಭ್ರಾಂತಿ ನಿಶ್ಚಿಂತಪದದಲ್ಲಿ ಅಳಿದು, ನಿಶ್ಶೂನ್ಯ ನಿರಾಮಯವಾದ ನಿವಾಸಕ್ಕೆ ಸದಾಚಾರವೆಂಬ ಕೆಸರುಗಲ್ಲನಿಕ್ಕಿ, ಸರ್ವಾಚಾರಸಂಪತ್ತೆಂಬ ಹೂಗಲ್ಲ ಮುಚ್ಚಿ, ಅಂತಃಕರಣಚತುಷ್ಟಯವೆಂಬ ನಾಲ್ಕು ಕಂಬಗಳಂ ನಿಲಿಸಿ, ಜ್ಞಾತೃವೆಂಬ ಭಿತ್ತಿಯ ಮೇಲೆ ಜ್ಞಾನವೆಂಬ ಶಿಖರಿಯನನುಗೊಳಿಸಿ, ಜ್ಞೇಯವೆಂಬ ಹೊನ್ನಕಳಶಮಂ ಶೃಂಗಾರಮಂ ಮಾಡಿ, ಬ್ರಹ್ಮರಂಧ್ರದ ಊಧ್ರ್ವದ್ವಾರವೆಂಬ ನಿಜದ್ವಾರಮಂ ಮಾಡಿ, ನಿರ್ವಯಲಲ್ಲಿ ನೆಲೆಗೊಳಿಸಿ, ಬಸವಪ್ರಿಯ ಕೂಡಲಚನ್ನಸಂಗನ ಶರಣ ಪ್ರಭುದೇವರ ಬರವಿಂಗೆ ಶೂನ್ಯಸಿಂಹಾಸನವಂ ರಚಿಸಿ, ಬರವ ಹಾರುತ್ತಿದನೆನ್ನ ಪರಮಗುರು ಬಸವಣ್ಣನು.
--------------
ಸಂಗಮೇಶ್ವರದ ಅಪ್ಪಣ್ಣ