ಅಂಗದ ಪ್ರಕೃತಿ ಲಿಂಗದಲ್ಲಿ ಅಳಿದು, ಮನದ ಪ್ರಕೃತಿ ಅರಿವಿನಲ್ಲಿ ಅಳಿದು,
ಜೀವಭ್ರಾಂತಿ ನಿಶ್ಚಿಂತಪದದಲ್ಲಿ ಅಳಿದು,
ನಿಶ್ಶೂನ್ಯ ನಿರಾಮಯವಾದ ನಿವಾಸಕ್ಕೆ ಸದಾಚಾರವೆಂಬ ಕೆಸರುಗಲ್ಲನಿಕ್ಕಿ,
ಸರ್ವಾಚಾರಸಂಪತ್ತೆಂಬ ಹೂಗಲ್ಲ ಮುಚ್ಚಿ,
ಅಂತಃಕರಣಚತುಷ್ಟಯವೆಂಬ ನಾಲ್ಕು ಕಂಬಗಳಂ ನಿಲಿಸಿ,
ಜ್ಞಾತೃವೆಂಬ ಭಿತ್ತಿಯ ಮೇಲೆ ಜ್ಞಾನವೆಂಬ ಶಿಖರಿಯನನುಗೊಳಿಸಿ,
ಜ್ಞೇಯವೆಂಬ ಹೊನ್ನಕಳಶಮಂ ಶೃಂಗಾರಮಂ ಮಾಡಿ,
ಬ್ರಹ್ಮರಂಧ್ರದ ಊಧ್ರ್ವದ್ವಾರವೆಂಬ ನಿಜದ್ವಾರಮಂ ಮಾಡಿ,
ನಿರ್ವಯಲಲ್ಲಿ ನೆಲೆಗೊಳಿಸಿ, ಬಸವಪ್ರಿಯ ಕೂಡಲಚನ್ನಸಂಗನ ಶರಣ
ಪ್ರಭುದೇವರ ಬರವಿಂಗೆ ಶೂನ್ಯಸಿಂಹಾಸನವಂ ರಚಿಸಿ,
ಬರವ ಹಾರುತ್ತಿದನೆನ್ನ ಪರಮಗುರು ಬಸವಣ್ಣನು.