ಅಥವಾ
(17) (3) (0) (0) (3) (0) (0) (0) (7) (0) (0) (1) (0) (0) ಅಂ (4) ಅಃ (4) (4) (0) (2) (0) (0) (1) (0) (1) (0) (0) (0) (0) (0) (0) (0) (3) (0) (5) (0) (6) (2) (0) (4) (4) (5) (1) (1) (0) (3) (5) (9) (1) (4) (7) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕುಲಜರೆಂದು ಹುಟ್ಟಿ, ಅಂತ್ಯಜರಾದರು ನೋಡಾ ದ್ವಿಜರು ; ಶಿವನೆ ದೇವನೆಂದರಿದು ಪೂಜಿಸರಾಗಿ, ಶ್ರುತಿಗಳು ಹೇಳಿದ ಶ್ರೀವಿಭೂತಿಯನೊಲ್ಲರಾಗಿ, `ಏಕೋ ರುದ್ರೋ ನ ದ್ವಿತೀಯಾಯ ತಸ್ಥೆ' ಎಂಬ ಶ್ರುತಿಯ ವಿಚಾರದಲ್ಲಿ ಇಲ್ಲವಾಗಿ, ಅರಿದರಿದೆ, ಹೊಲೆಯ ಕೊಂಡಾಡಿತ್ತು ಲೋಕ. ಇದೇನು ಸೋಜಿಗ, ಬಸವಪ್ರಿಯ ಕೂಡಲಚೆನ್ನಸಂಗಾ ?
--------------
ಸಂಗಮೇಶ್ವರದ ಅಪ್ಪಣ್ಣ
ಕಾಮಸಂಹಾರಿ, ಹರಿಯಜರಹಂಕಾರ ದರ್ಪಚ್ಚೈದನ ಲಿಂಗವೆಂದೆಂಬರು, ಅದ ನಾವರಿಯೆವಯ್ಯಾ ! ನಾವು ಬಲ್ಲುದಿಷ್ಟಲ್ಲದೆ ಕಾಮ ಕ್ರೋಧ ಲೋಭ ಮೋಹ ಮಾತ್ಸರ್ಯವಿರಹಿತರು, ನಮ್ಮ ಜಂಗಮದೇವರು ಕಾಣಿರಯ್ಯಾ ! ಇಹನಾಸ್ತಿ ಪರನಾಸ್ತಿ ಫಲಪಥಕ್ಕೆ ಹೊರಗಾಗಿ ಮಾಡುವ ಭುಕ್ತಿಯ ಕೊಟ್ಟು, ಮುಕ್ತಿಯನೀವ. ಚರಿಸಿದಡೆ ವಸಂತ, ನಿಂದಡೆ ನೆಳಲಿಲ್ಲ, ನಡೆದಡೆ ಹೆಜ್ಜೆಯಿಲ್ಲ. ದಗ್ಧಪಟನ್ಯಾಯ, ಯಥಾಸ್ವೇಚ್ಛ ತನ್ನ ನಿಲುವು ಅದಾರಿಗೆ ವಿಸ್ಮಯ, ಅಗೋಚರ. ಚರಾಚರಾ ಸ್ಥಾವರಾತ್ಮಕನು ನಮ್ಮ ಜಂಗಮದೇವರು ಕಾಣಿರಯ್ಯಾ. ಆ ಜಂಗಮವು ಭಕ್ತರಿಗೆ ಚರಣವ ಕರುಣಿಪನು. ಆ ಭಕ್ತರು ಪಾದಪ್ರಕ್ಷಾಲನಂ ಗೆಯ್ದು, ಗಂಧಾಕ್ಷತೆ ಪುಷ್ಪ ಧೂಪ ದೀಪ ನೈವೇದ್ಯ ತಾಂಬೂಲ ವಿಭೂತಿ ರುದ್ರಾಕ್ಷಿಯಂ ಧರಿಸಿ, ಮೈವಾಸವಂ ಭೂಷಣ ಎರೆದಲೆಯನ ಕರದಲ್ಲಿ ಹಿಡಿದು, ಆ ಜಂಗಮದೇವರು ತೀರ್ಥವನೀವುದಯ್ಯಾ. ಆಮೇಲೆ ತಂಡ ಮೊತ್ತಕ್ಕೆ ಮಂಡೆ ಬಾಗಿ, ತಮ್ಮಿಷ್ಟಲಿಂಗಕ್ಕೆ ಮುಷ್ಟಿ ಅರ್ಪಿಸಿ, ತಾವು ಸಲಿಸುವುದಯ್ಯಾ. ಆಮೇಲೆ ಗಣಸಮೂಹವು, ತಾವು ರೋಹ ಅವರೋಹದಿಂದ ಅರ್ಪಿತವ ಮಾಡುವದು, ಆಗಮಾಚಾರವಯ್ಯಾ. ಲಿಂಗ ನಿರ್ಮಾಲ್ಯವನೆ ಲಿಂಗಕ್ಕೆ ಮತ್ತೆ ಮತ್ತೆ ಧರಿಸುವೆ,ಭಾವನಿರ್ಭಾವವನರಿದು, ಇನ್ನೊಂದು ನಿರಂತರದ ಅವಧಾನವುಂಟು. ತಾ ಪ್ರಸಾದವ ಸವಿವಾಗ, ಜಂಗಮಲಿಂಗಕ್ಕೆ ಪದಾರ್ಥವ ಸಮೀಪಸ್ಥವ ಮಾಡಲು, ಅದೇ ಹಸ್ತದಲ್ಲಿ ಸಜ್ಜಾಗೃಹಕ್ಕೆ ಸಮರ್ಪಿಸಿಕೊಂಬುವದೊಂದವಧಾನ. ಆಚೆಗೆ ತೀರ್ಥ ಸಂಬಂಧಿಸಿ, ಎಯ್ದದಿರಲ್ಲದರಲ್ಲಿ ಪಾದೋದಕವ ನೀಡುವದ ದಯಗೊಟ್ಟಡೆ ಸಂದಿಲ್ಲ. ಅವು ಮೂರು, ಇವು ಮೂರು, ಆಚೆ ಹನ್ನೊಂದು, ಈಚೆ ಹತ್ತರ ಅರುವತ್ತರಾಯ ಸಂದಿತ್ತು . ಭಾಷೆ ಪೂರೈಸಿತ್ತು, ಲೆಕ್ಕ ತುಂಬಿತ್ತು, ಬಿತ್ತಕ್ಕೆ ವಟ್ಟವಿಲ್ಲ, ಕಾಳೆಗ ಮೊಗವಿಲ್ಲ. ಕಾಳಿಂಗನ ಹಸ್ತಾಭರಣ, ನಮ್ಮ ಜಂಗಮಲಿಂಗಕ್ಕಯ್ಯಾ ! ಇಂತಪ್ಪ ಈ ನಡೆಯನರಿದಾಚರಿಸಿದ ಸಂಗನಬಸವಣ್ಣಂಗೆ ಆಯತವನಾಯತವೆಂಬ ಅನಾಚಾರಿಯನು ಎನ್ನ ಮುಖದತ್ತ ತೋರದಿರಯ್ಯಾ. ಆ ಮಹಾಮಹಿಮನ ಹೆಜ್ಜೆ ಹೆಜ್ಜೆಗಶ್ವಮೇಧಫಲ ತಪ್ಪದಯ್ಯಾ. ಆ ಸಿದ್ಧಪುರುಷಂಗೆ ನಮೋ ನಮೋ ಎಂಬೆನು ಕಾಣಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಕುಲವುಳ್ಳನ್ನಕ್ಕ ಭಕ್ತನಲ್ಲ, ಛಲವುಳ್ಳನಕ್ಕ ಮಹೇಶ್ವರನಲ್ಲ, ಫಲವುಳ್ಳನ್ನಕ್ಕ ಪ್ರಸಾದಿಯಲ್ಲ. ಕುಲ ಗುರುಕೃಪೆಯ ಕೆಡಿಸಿತ್ತು, ಛಲ ಲಿಂಗಾರ್ಚನೆಯ ಕೆಡಿಸಿತ್ತು. ಫಲ ದುಃಖಂಗಳಿಗೆ ಗುರಿ ಮಾಡಿತ್ತು. ಕುಲಂ ಛಲಂ ಧನಂ ಚೈವ ಯೌವನಂ ರೂಪಮೇವ ಚ | ವಿದ್ಯಾ ರಾಜ್ಯಂ ತಪಶ್ಚೈವ ತೇ ಚಾಷ್ಟಮದಾ ಸ್ಮøತಾಃ || ಎಂದುದಾಗಿ, ಒಂದು ಸುರೆಯ ಕುಡಿದವರು ಬಂಧುಬಳಗವನರಿಯರು. ಎಂಟು ಸುರೆಯ ಕುಡಿದವರು ನಿಮ್ಮನೆತ್ತಬಲ್ಲರಯ್ಯಾ, ಬಸವಪ್ರಿಯ ಕೂಡಲಚೆನ್ನಸಂಗಮದೇವಾ ?
--------------
ಸಂಗಮೇಶ್ವರದ ಅಪ್ಪಣ್ಣ
ಕರ್ಮದಿಂದ ಬೊಮ್ಮದಿಂದ ಪುತ್ರರಿಂದ ಗೋತ್ರದಿಂದ ಕಳತ್ರಯರಿಂದ ಗತಿಯಾಗದೆಂದು ಸಾರಿತ್ತು ಯಜುರ್ವೇದ. ಅಪಾಧಿಯನಿಟ್ಟು ನಿರುಪಾಧಿಕನಾಗಿ, ಅಂಗವನಾರಾಧಿಸಿ ನಿತ್ಯರಾದರೆಂದು ಸಾರಿತ್ತು ಯಜುರ್ವೇದ. `ಒಂ ನ ಕರ್ಮಣಾ ನ ಪ್ರಜಾಯಾಧನೇನ ತ್ಯಾಗೇನೈಕೇನ ಅಮೃತತ್ವಮಾನಶುಃ' ಎಂದುದು ಶ್ರುತಿವಾಕ್ಯ. ಈ ಪರಿಯಲಿ ವೇದ ಹೊಗಳಲ್ಕೆ, ಎಮ್ಮ ಪುರಾತನರು ನಡೆದರು, ನಡೆದು ಮೆರೆಯಿತ್ತು , ಕಂಡು ನಂಬರು, ಬಸವಪ್ರಿಯ ಕೂಡಲಚೆನ್ನಸಂಗಯ್ಯ.
--------------
ಸಂಗಮೇಶ್ವರದ ಅಪ್ಪಣ್ಣ