ಗತಿಯ ಪಥವನರಿವಡೆ, ದಿಟವ ಸುಯಿದಾನ ಮಾಡು.
ದಿಟ ಬೇರೆ ಆಚಾರ ಶಿವಾಚಾರವೆಂ[ದರು]ಮರುಳೆ.
ಗುರು ದೇವನೆಂದರು ಮರುಳೆ.
ದೂರತೋsಂ ಗುರುಂ ದಷ್ಟ್ವಾ ಉದಾಸೀನೇನ ಯೋ ವ್ರಜೇತ್ |
ಶ್ವಾನಯೋನಿಂ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ||
ಶಿವೇ ಕೃದ್ಧೇ ಗುರುಸ್ತ್ರಾತಾ ಗುರೌ ಕೃದ್ಧೇ ನ ಕಶ್ಚನ |
ತಸ್ಮಾದಿಷ್ಟಂ ಗುರೋಃ ಕುರ್ಯಾತ್ ಕಾಯೇನ ಮನಸಾ ಗಿರಾ ||
ಎಂದುದಾಗಿ,
ಬಸವಪ್ರಿಯ ಕೂಡಲಚೆನ್ನಸಂಗಮದೇವ ಮುನಿದಡೆ ತಿಳುಹಬಹುದು,
ಗುರು ಮುನಿದಡೆ ತಿಳುಹಬಾರದು, ಏಳೇಳು ನರಕ ತಪ್ಪದು.