ಅಥವಾ
(4) (6) (8) (1) (0) (0) (0) (0) (0) (0) (0) (0) (1) (0) ಅಂ (1) ಅಃ (1) (4) (0) (4) (0) (0) (0) (0) (1) (0) (0) (0) (0) (0) (0) (0) (1) (0) (1) (0) (2) (1) (1) (2) (2) (3) (0) (0) (0) (1) (0) (0) (0) (0) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅರುಹಿನ ಕುರುಹ ಕಾಣದೆ ಗಿರಿ ಕೋಡಗಲ್ಲ ಮೇಲೆ ತಲೆಕೆಳಗೆ ಮಾಡಿ ತಪಸ್ಸವ ಮಾಡಿದಡಿಲ್ಲ, ಕಾಲಕರ್ಮಂಗಳ ದಂಡಿಸಿದಡಿಲ್ಲ, ಪೃಥ್ವಿ ತಿರುಗಿ, ತೀರ್ಥಂಗಳ ಮಿಂದು, ನಿತ್ಯನೇಮಂಗಳ ಮಾಡಿದಡಿಲ್ಲ. ಜಲಸಮಾದ್ಥೀಯಲ್ಲಿ ಕುಳಿತಡಿಲ್ಲ, ಇದಕ್ಕೆ ಶ್ಲೋಕ : ಪೂಜಾಕೋಟಿಸಮಂ ಸ್ತೋತ್ರಂ ಸ್ತೋತ್ರಕೋಟಿಸಮಂ ಜಪಃ | ಜಪಕೋಟಿಸಮಂ ಧ್ಯಾನಂ ಧ್ಯಾನಕೋಟಿಮನೋಲಯಂ || ಇಂತೆಂದುಂದಾಗಿ, ಸುತ್ತಿಸುಳಿವ ಮನವನು ಚಿತ್ತದಲ್ಲಿರಿಸಿ ನಿಶ್ಚಿಂತವಾದಡೆ ನಿತ್ಯಪ್ರಕಾಶ ಗುರು ಗುಹೇಶ್ವರಲಿಂಗವು ಮತ್ತೆ ಅರಸಲುಂಟೇನಯ್ಯಾ? ಮಠವ್ಯಾಕೊ, ಪರ್ವತವ್ಯಾಕೊ, ಜನವ್ಯಾಕೋ, ನಿರ್ಜನವ್ಯಾಕೊ ಚಿತ್ತ ಸಮಾಧನವುಳ್ಳ ಪುರುಷಂಗೆ ? ಹೊರಗಣ ಧ್ಯಾನ ಮೌನ ಜಪತಪ ನಿತ್ಯನೇಮಂಗಳ್ಯಾಕೊ ತನ್ನ ತಾನರಿದ ಶರಣಂಗೆ ನಮ್ಮ ಗೊಹೇಶ್ವರಪ್ರಿಯ ನಿರಾಳಲಿಂಗ?
--------------
ಗುಹೇಶ್ವರಯ್ಯ
ಅಂಗಗರಡಿಯೊಳು ನಿಜಲಿಂಗದ ಸಾಧನವ ಬಲ್ಲಡೆ ಹಂಗಿನ ಮನುಜಂಗೆ ಅರಿವುಂಟೆ ? ಡಂಗುರದೊಳು ಸ್ವಯವಿಲ್ಲದೆ ಕೆಟ್ಟತ್ತು. ಡಿಂಗರಿಗನೆಂದಲ್ಲಿ ಮುಕ್ತಿ ಕಂಡಿತ್ತು ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ
ಅರಿವಿನ ನಡೆ, ಅರಿವಿನ ನುಡಿ, ಭಕ್ತಿಯ ಮೂಲವನರಿತ ಶರಣರ ಚರಣದೊಳೆನ್ನನಿಟ್ಟು ಸಲಹಯ್ಯ, ಗೊಹೇಶ್ವರಪ್ರಿಯ ನಿರಾಳಲಿಂಗಾ.
--------------
ಗುಹೇಶ್ವರಯ್ಯ
ಅಕ್ಷರದ ಆದಿಮೂಲವನರಿಯಬಲ್ಲರೆ ಪ್ರಾಣಲಿಂಗದ ಅಕ್ಷರದ ಹುಟ್ಟಾವಳಿಯು ಸ್ಥೂಲದಲ್ಲಿಹುದು. ಅಕ್ಷರದ ನಿಲವು ಸೂಕ್ಷ್ಮದಲ್ಲಿಹುದು. ಮಾತಿಗೆ ಮೊದಲು ಶಬ್ದಮುಗ್ಧವಾಗಿರಲು ಕಾರಣದಲ್ಲಿಹುದು. ಇಂತೀ ತ್ರಿವಿಧಪರಿಯ ಭೇದಾಭೇದಂಗಳ ಸಂಬಂದ್ಥಿಸಿಕೊಂಡು ಪ್ರಾಣಲಿಂಗಸಾಹಿತ್ಯವಾದ ಕಾರಣ ಭಕ್ತರ ಶ್ರೀಚರಣಕ್ಕೆ ನಮೋ ನಮೋ ಎನುತಿರ್ದೆ ಕಾಣಾ ಗೊಹೇಶ್ವರಪ್ರಿಯ ನಿರಾಳಲಿಂಗ.
--------------
ಗುಹೇಶ್ವರಯ್ಯ