ಎನ್ನ ಜ್ಞಾನಾತ್ಮನ ಚೇತನನಯ್ಯ ಪ್ರಭುದೇವರು.
ಎನ್ನ ಪರಮಾತ್ಮನ ಚೇತನನಯ್ಯ ಸಿದ್ಧರಾಮೇಶ್ವರದೇವರು.
ಎನ್ನ ಚಿನ್ಮಯಾತ್ಮನ ಚೇತನನಯ್ಯ ಬಸವಣ್ಣನು.
ಎನ್ನ ನಿರ್ಮಲಾತ್ಮನ ಚೇತನನಯ್ಯ ಷಟ್ಸ್ಥಲಬ್ರಹ್ಮಿ ಚೆನ್ನಬಸವಣ್ಣನು.
ಎನ್ನ ಮಹಾತ್ಮನ ಚೇತನನಯ್ಯ
ಸಂಗನಬಸವಣ್ಣನ ನಿಜಸುಖಿ ಅಪ್ಪಣ್ಣನು.
ಎನ್ನ ಜೀವಾತ್ಮನ ಚೇತನನಯ್ಯ ಮಡಿವಾಳ ಮಾಚಯ್ಯನು.
ಎನ್ನ ಅಂತರಾತ್ಮನ ಚೇತನನಯ್ಯ ಸೊಡ್ಡಳ ಬಾಚರಸರು.
ಎನ್ನ ಅರಿವಿನ ಚೇತನಾತ್ಮಕನಯ್ಯ ಕಿನ್ನರ ಬೊಮ್ಮಯ್ಯನು.
ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ
ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ,
ನಿಮ್ಮ ಶರಣರ ಕರುಣವ ಪಡೆದೆನಾಗಿ,
ಎನ್ನ ಕರ್ಮ ನಿರ್ಮೂಲವಾಯಿತ್ತಯ್ಯ, ನಿಮ್ಮ ಧರ್ಮ ನಿಮ್ಮ ಧರ್ಮ.