ಬೆಟ್ಟವ ನೆಮ್ಮಿದಡೆ ಕಟ್ಟಿಗೆಯ ತಾಳುವದು,
ಅದಾವ ಅಚ್ಚರಿ ಎನಿಸುವದು ?
ಪ್ರಾಣಕ್ಕೆ ಹೊಣೆಯಾದಲ್ಲಿ ಕಾದುವದು,
ಅದಾವ ಅಚ್ಚರಿ ಎಂದೆನಿಸುವದು ?
ಪರಕಾಯವ ತೊಟ್ಟಿರ್ದಲ್ಲಿ ಅಚ್ಚರಿಗೆ ಅರಿಬಿರಿದೇಕೆ ?
ನಿಮ್ಮುವ ಕಾರುಣ್ಯವನಾಗಿರ್ದಲ್ಲಿ
ಎನಗೆಲ್ಲೆಲ್ಲಿ ಸುಖವಲ್ಲಲ್ಲಿಯೂ ನೀವೆ.
ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುದೇವಯ್ಯಾ,
ಪ್ರಭುದೇವರ ಕಾರುಣ್ಯ ಪ್ರಸಾದದಿಂದ
ಆನು ಬದುಕಿದೆನು ಕಾಣಾ, ಸಂಗನಬಸವಣ್ಣ.