ಅಥವಾ
(2) (1) (3) (0) (0) (0) (0) (0) (3) (1) (0) (0) (0) (0) ಅಂ (1) ಅಃ (1) (0) (0) (1) (0) (0) (0) (0) (2) (0) (0) (0) (0) (0) (0) (0) (3) (0) (0) (1) (0) (0) (0) (3) (2) (2) (0) (0) (0) (2) (0) (3) (1) (3) (2) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹೆಣ್ಣಿನೊಳಗೆ ಕಣ್ಣುಗೊಂಡು ಹುಟ್ಟಿ, ಮಣ್ಣು ಹೊಯ್ದುಕೊಂಬ ಅಣ್ಣಗಳು ನೀವು ಕೇಳಿರೆ. ಈ ಬಣ್ಣದ ಪರಿಯಾಯಕ್ಕೆ ಕಣ್ಣುಗೆಟ್ಟು ಬಿದ್ದಿರಲ್ಲಾ. ಈ ಹೆಣ್ಣಿನ ಸಂಗ ನಿಮಗೇತಕಣ್ಣಾ. ತನ್ನಲ್ಲಿ ಹೆಣ್ಣುಂಟು, ತನ್ನಲ್ಲಿ ಹೊನ್ನುಂಟು, ತನ್ನಲ್ಲಿ ಮಣ್ಣುಂಟು. ಇಂತಿವ ನಿಮ್ಮಲ್ಲಿ ನೀವು ತಿಳಿದು ನೋಡಲಿಕ್ಕೆ, ತನ್ನಲ್ಲಿ ತಾನೆ ಕಾಣಬಹುದು. ತನ್ನ ತಾನರಿಲ್ಲದೆ ಇದಿರನರಿಯಬಾರದು. ಇದಿರನರಿದಲ್ಲದೆ ಪರವನರಿಯಬಾರದು. ಪರವನರಿದಲ್ಲದೆ ಸ್ವಯವನರಿಯಬಾರದು. ಸ್ವಯವನರಿದಲ್ಲದೆ ಅರಿವು ತಲೆದೋರದು ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಮಾಯ ಹಿಂಗಿದಲ್ಲದೆ ಮದವಳಿಯದು. ಮದವಳಿದಲ್ಲದೆ ಮತ್ಸರ ಹೆರೆಸಾರದು. ಮತ್ಸರ ಹೆರೆಸಾರಿದಲ್ಲದೆ ಮಹಾಘನವಳವಡದು. ಮಹಾಘನವಳವಟ್ಟಲ್ಲದೆ ಮಹಾಲಿಂಗವ ಕಾಣಬಾರದು. ಮಹಾಲಿಂಗವ ಕಂಡಲ್ಲದೆ ಮಹಾಪ್ರಕಾಶವ ಕಾಣಬಾರದು. ಮಹಾಪ್ರಕಾಶವ ಕಂಡಲ್ಲದೆ ನಿತ್ಯವ ಕಾಣಬಾರದು. ನಿತ್ಯವ ಕಂಡಲ್ಲದೆ ನಿಜವ ಕಾಣಬಾರದು. ನಿಜವ ಕಂಡಲ್ಲದೆ ನಿರ್ಣಯವನರಿಯಬಾರದು. ನಿರ್ಣಯವನರಿದಲ್ಲದೆ ಗುರುಲಿಂಗಜಂಗಮವನರಿಯಬಾರದು. ಗುರುಲಿಂಗಜಂಗಮವನರಿದಲ್ಲದೆ ಪಾದತೀರ್ಥಪ್ರಸಾದವನರಿಯಬಾರದು. ಪಾದತೀರ್ಥಪ್ರಸಾದವನರಿದಲ್ಲದೆ ಸಹಜ ಶರಣರ ಸಂಗವನರಿಯಬಾರದು. ಇಂತಪ್ಪ ಶರಣರ ಸಂಗವನರಿದಲ್ಲದೆ ಸರ್ವನಿರ್ಣಯವನರಿಯಬಾರದು. ಸರ್ವನಿರ್ಣಯವನರಿದಲ್ಲದೆ ಸಹಜಸದ್ಭಕ್ತರು ಮೆಚ್ಚರು. ಸಹಜಸದ್ಭಕ್ತರು ಕೂಡಿ ನಡೆಯಬಲ್ಲಡೆ ಇದೇ ಸುಖವು. ಸಂಗದೊಳಗೆ ಶರಣರ ಸಂಗವೆ ಸಂಗವು ಕೇಳಿರಯ್ಯಾ. ಇಂತು ಸಾಯದೆ ನೋಯದೆ ಸ್ವಯವನರಿದು, ಸದ್ಭಕ್ತರ ಸಂಗವ ಮಾಡಬಲ್ಲಾತನೆ ಲಿಂಗೈಕ್ಯನು. ಅವ ತಾನೆ ಘನಲಿಂಗವು. ಹೀಂಗಲ್ಲದೆ ಹಿಂದೆ ಮೆಟ್ಟಿಹೋಹ ಸಂದೇಹಿ ಮಾನವರೆಲ್ಲರೂ ಜಗದ ಜಂಗುಳಿಗಳ ದಂದುಗದೊಳಗಾಗಿಪ್ಪರು. ಆ ಗುಣವ ಬಿಟ್ಟು, ಶರಣರ ಸಂಗ ಸಹಜವೆಂದರಿದು, ನಿಜವಾಗಿ ಬಂದಬಳಿಕ ಪೂರ್ವಭಾಗೆಗೆ ಬಾರೆನೆಂಬ ನಿಶ್ಚಯದಿಂ ಪರಮ ಪ್ರಸಾದವನರಿದು, ಜಗದ ಹಂಗ ಹರಿದ ಶರಣನು ಎನ್ನ ತಂದೆಯಾಗಿಪ್ಪನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಈ ಬಂದ ಪರಿಯಾಯವರಿದು, ತಾಮಸವ ಹಿಂಗಿ, ಸಹಜ ನಿಜನಿತ್ಯವನರಿದು ಹೋದ ಶರಣರ ನಿಲವಿನ ಪರಿಯ, ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ
--------------
ಮರುಳಶಂಕರದೇವ
ಹೃದಯದ ಕೊನೆಯ ಮೇಲೆ ಬಂದ ಪರಿಣಾಮದ ತೃಪ್ತಿಯ ಸುಖವ, ಹೃದಯದ ಮನದ ಕೊನೆಯ ಮೊನೆಯ ಮೇಲೆ, ಮಹಾಲಿಂಗಕ್ಕೆ ಸಮರ್ಪಿಸಬೇಕು. ಶ್ರೋತ್ರದ ಕೊನೆಯಲ್ಲಿ ಬಂದ ಸಂಗೀತದ ಪರಿಣಾಮವ, ಅವಧಾನದ ಶ್ರೋತ್ರದ ಕೊನೆಯ ಮೊನೆಯ ಮೇಲೆ, ಪ್ರಸಾದಲಿಂಗಕ್ಕೆ ಅರ್ಪಿಸಬೇಕು. ನೇತ್ರದ ಕೊನೆಯಲ್ಲಿ ಬಂದ ಸುಲಕ್ಷಣ ಸುರೂಪಿನ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಶಿವಲಿಂಗಕ್ಕೆ ಸಮರ್ಪಿಸಬೇಕು. ನಾಸಿಕದ ಕೊನೆಯಲ್ಲಿ ಬಂದ ಸುಗಂಧದ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಆಚಾರಲಿಂಗಕ್ಕೆ ಅರ್ಪಿಸಬೇಕು. ಜಿಹ್ವೆಯ ಕೊನೆಯಲ್ಲಿ ಬಂದ ಸುಸ್ವಾದುವಿನ ಪ್ರಸಾದದ ರುಚಿಯ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಗುರುಲಿಂಗಕ್ಕೆ ಸಮರ್ಪಿಸಬೇಕು. ತ್ವಕ್ಕಿನ ಕೊನೆಯಲ್ಲಿ ಬಂದ ಸುಪರ್ಶನದ ಸುಖದ ಪರಿಣಾಮವ, ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಜಂಗಮಲಿಂಗಕ್ಕೆ ಸಮರ್ಪಿಸಬೇಕು. ಮನದಲ್ಲಿ ತಟ್ಟುವ ಮುಟ್ಟುವ ತಾಗುನಿರೋಧವೆಲ್ಲವನೂ ಅವಧಾನದ ಮನದ ಕೊನೆಯ ಮೊನೆಯ ಮೇಲೆ, ಮಹಾಘನಲಿಂಗಕ್ಕೆ ಸಮರ್ಪಿಸಬೇಕು. ಈ ಕ್ರಮವನರಿದು ಸರ್ವಾವಧಾನಿಯಾಗಿ, ಗುರುಲಿಂಗಜಂಗಮಮುಖದಲ್ಲಿ ತನುಮನಧನವನರ್ಪಿಸಿ, ಆ ಶುದ್ಧಸಿದ್ಧಪ್ರಸಿದ್ಧಪ್ರಸಾದದ ರೂಪುರುಚಿತೃಪ್ತಿಯ ಆದಿಮಧ್ಯಾಂತವನರಿದು, ಸಾವಧಾನಭಕ್ತಿಯಿಂ ಇಷ್ಟಪ್ರಾಣಭಾವಲಿಂಗಕ್ಕರ್ಪಿಸಿ, ಮಹಾಪ್ರಸಾದಿಯಾಗಿಪ್ಪಾತ, ನಮ್ಮ ಚನ್ನಬಸವಣ್ಣ ಕಾಣಿರಯ್ಯಗಳಿರಾ. ಈ ಪ್ರಕಾರದ ಅವಧಾನ ಮನದ ಕೊನೆಯ ಮೊನೆಯ ಮೇಲೆ, ಸರ್ವಾರ್ಪಿತಕ್ರಮವನರಿದು ಪ್ರಸಾದಭೋಗಿಯಾಗಿಪ್ಪಾತನು, ನಮ್ಮ ಸಂಗನಬಸವಣ್ಣನು ಕೇಳಿರಣ್ಣಗಳಿರಾ. ಈ ಬಸವಣ್ಣನ ಪ್ರಸಾದವ ಕೊಂಡು ನಾನು ಬದುಕಿದೆನು ಕಾಣಾ, ಶುದ್ಧಸಿದ್ಧ ಪ್ರಸಿದ್ಧ ಪ್ರಸನ್ನ ಪ್ರಭುವೆ ಶಾಂತಚೆನ್ನಮಲ್ಲಿಕಾರ್ಜುನದೇವಯ್ಯಾ. ಮತ್ತೀ ಕ್ರಮವನರಿದು, ಅರ್ಪಿತಮುಖವನರಿದು ಅರ್ಪಿಸಿ, ತೃಪ್ತಿಯನೈದಬಲ್ಲ ಶರಣರ ಮಹಾತ್ಮೆಯ ನೀವೆ ಬಲ್ಲಿರಲ್ಲದೆ ನಾನೆತ್ತ ಬಲ್ಲೆನಯ್ಯಾ, ನಿಮ್ಮ ಧರ್ಮ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಮರುಳಶಂಕರದೇವ