ಅಥವಾ
(3) (3) (2) (0) (0) (0) (0) (0) (0) (1) (1) (0) (0) (0) ಅಂ (1) ಅಃ (1) (3) (0) (4) (1) (0) (0) (0) (3) (0) (0) (0) (0) (0) (0) (0) (1) (0) (2) (0) (3) (17) (0) (2) (1) (1) (0) (1) (0) (1) (1) (2) (0) (5) (1) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಕಾಯವೆಂಬ ಪುರನಾಳುವ ಜೀವನೆಂಬರಸು ನಿಜಬಲದಿಂ ಕರ್ಮವೆಂಬ ರಾಜ್ಯದಲ್ಲಿ ಸಂಪಾದಿಸಿದ ಸುಕೃತ ದುಷ್ಕøತಗಳೆಂಬ ದ್ರವ್ಯವನ್ನು ಮನವೆಂಬ ಬೊಕ್ಕಸದೊಳಗಿಟ್ಟು, ಅಲ್ಲಿಂದ ಶಬ್ದಾಚಾರಮುಖದಿಂದ ನರಕಾದಿ ಯಾತನೆಗಳನ್ನೂ ಸ್ವರ್ಗಾದಿ ಭೋಗಂಗಳನ್ನೂ ಅನುಭವಿಸುತ್ತಿರ್ಪ ಕೋಟಲೆಗಲಸಿ, ವೇದಾಂತಸಮುದ್ರದಲ್ಲಿ ಮುಳುಗಿ, ಅಲ್ಲಿರ್ಪ ಜ್ಞಾನವೆಂಬ ಮಕ್ತಾರತ್ನಮಂ ಕೊಂಡು, ಪರತತ್ವದೇಶದಲ್ಲಿ ಪರಿಣಾಮಿಸುತ್ತಿರ್ಪ ಗುರುವೆಂಬ ಮಹಾರಾಜಂಗೆ ಕಾಣಿಕೆಯಂ ಕೊಟ್ಟು, ಅನಂತಬ್ರಹ್ಮಾಂಡಗಳಂ ತುಂಬಿ, ತಾನನುಭವಿಸಿ, ಲಿಂಗವೆಂಬಕ್ಷಯನಿಧಾನಮಂ ಪಡೆದು, ಅದನ್ನು ಮನೋಭಂಡಾರದೊಳಿಟ್ಟು, ಅತಿಜಾಗರೂಕತೆಯಿಂ ತಾನೇ ಕಾಪಾಡುತ್ತಿರಲು, ಕತಪಯಕಾಲಕ್ಕೆ ಕಾಲದೂತರು ಬಂದು, ಅಂಗಪುರಭಂಗವಂ ಮಾಡಲು, ತತ್ಪುರವಾಸಿಗಳಾದ ರುದ್ರರು ಕಾಲದೂತರಂ ತರಿದು, ಯಮನಂ ಪರಿದು, ಲಿಂಗವಿಧಾನಬಲದಿಂ ಮೋಕ್ಷಸಾಮ್ರಾಜ್ಯಮಂ ಸಂಪಾದಿಸುತ್ತಾ ಬಾಳುವ ನಿತ್ಯಸುಖವನ್ನು ನನಗೆ ಕೊಟ್ಟು ಸಲಹಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕಳಾಯುಕ್ತಮಾಗಿ ರೂಪುಳ್ಳ ಹೆಣ್ಣನು ಲಿಂಗಕ್ಕೆ ಕೊಟ್ಟು, ಬಿಂದುಯುಕ್ತಮಾಗಿ ರುಚಿಯುಳ್ಳ ಮಣ್ಣನು ಗುರುವಿಗೆ ಕೊಟ್ಟು, ನಾದಯುಕ್ತಮಾಗಿ ತೃಪ್ತಿಯುಳ್ಳ ಹೊನ್ನನು ಜಂಗಮಕ್ಕೆ ಕೊಟ್ಟು, ಕರಿಯು ನುಂಗಿದ ಕಪಿತ್ಥಫಲದಂತೆ, ಹೊರಗೆ ಸಾಕಾರಮಾಗಿಯೂ, ಒಳಗೆ ನಿರಾಕಾರಮಾಗಿಯೂ ಇರ್ಪುದೇ ಭಕ್ತಿಯು ; ಉಳಿದುದೆಲ್ಲಾ ಅಭಕ್ತಿಯು ಕಾಣಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ
ಕೇವಲ ಸದ್ರೂಪಮಾದ ನಿಷ್ಕಳಶಿವತತ್ವವು ತನ್ನೊಳ್ತಾನೇ ಪ್ರಕಾಶಿಸುತ್ತಿರ್ಪುದರಿಂ ಪರಮಾತ್ಮನೆಂಬ ಸಂಜ್ಞೆಯಿಂ ತನ್ನ ನಿಜಮಹಾತ್ಮ್ಯ ಪ್ರಕಟನೆಗೋಸುಗ ತಾನೇ ಆತ್ಮನಾಗಿ, ಆತ್ಮನೇ ಆಕಾಶವಾಗಿ, ಆಕಾಶವೇ ವಾಯುವಾಗಿ, ವಾಯುವೇ ಅಗ್ನಿಯಾಗಿ, ಅಗ್ನಿಯೇ ಜಲಮಾಗಿ, ಆ ಜಲವೇ ಪೃಥ್ವೀರೂಪವಾಗಿ ಘÀಟ್ಟಿಕೊಂಡು ಆ ಪೃಥ್ವಿಗೆ ಜಲವೇ ಕಾರಣಮಾಗಿ, ಆ ಜಲಕಗ್ನಿಯೇ ಕಾರಣಮಾಗಿ, ಆ ಅಗ್ನಿಗೆ ವಾಯುವೇ ಕಾರಣಮಾಗಿ, ಆ ವಾಯುವಿಗೆ ಆಕಾಶವೇ ಕಾರಣಮಾಗಿ, ಆ ಆಕಾಶಕ್ಕಾತ್ಮನೇ ಕಾರಣಮಾಗಿ, ಆ ಆತ್ಮನಿಗೆ ಪರಮಾತ್ಮನೇ ಕಾರಣಮಾಗಿ, ಒಂದಕ್ಕೊಂದು ತಮ್ಮಲ್ಲಿಯೇ ತಾವು ಸೃಷ್ಟಿ ಸ್ಥಿತಿ ಸಂಹಾರಂಗಳಿಗೆ ಕಾರಣಮಾಗಿರ್ಪ, ಆತ್ಮಾದಿ ಷಡ್ಭೂತಂಗಳಿಗೆ ತಾನೇ ಚೈತನ್ಯ ಸ್ವರೂಪಮಾಗಿರ್ಪ ಪರಮನು ಆತ್ಮಸಂಗದಿಂ ಜೀವಕೋಟಿಗಳಂ ಸೃಷ್ಟಿಸಿ, ಕರ್ಮಕ್ಕೆ ಕಾರಣಮಂ ಮಾಡಿ ಕ್ರೀಡಿಸುತ್ತಿರ್ದನದೆಂತೆಂದೊಡೆ: ಜಲವು ತಾನೇ ಪೃಥ್ವೀಸ್ವರೂಪಮಾಗಿ ಬಲಿದು, ಆ ಪೃಥ್ವಿಯನ್ನೇ ತನಗಾಧಾರವಂ ಮಾಡಿಕೊಂಡು, ತಾನೇ ಪೃಥ್ವಿಗೆ ಆಧಾರಮಾಗಿ, ಪೃಥ್ವಿಯಂ ಪರಿವೇಷಿ*ಸಿರ್ಪ ಜಲವೇ ಪತಿಯಾಗಿ, ಪೃಥ್ವಿಯಲ್ಲಿ ಪರಿವ ಜಲವೇ ಸತಿಯಾಗಿರ್ಪ ಆ ಜಲಬಂಧದಿಂ ಕುಡ್ಯ ಸೌಧ ಗೃಹಾದಿ ನಾನಾಸ್ವರೂಪಂಗಳಾಗಿ ನಿಂತು, ತನ್ನಲ್ಲಿರ್ಪ ಜಲವಾರಿಹೋಗಲು, ಆ ಸೃಷ್ಟಿಶಕ್ತಿಯಿಂ ತಾಂ ಘಟ್ಟಿಕೊಂಡು, ಜೀವರಿಗೆ ಜಲಹಿಂಸೆಯಂ ನಿವಾರಣಮಾಡುತ್ತಾ, ಆ ಜಲದಿಂದಲ್ಲೇ ತಾನು ಲಯವನೈದುತ್ತಿರ್ದಂದದಿ, ಆ ಪರಮಾತ್ಮನೇ ಆತ್ಮನಂ ಸುತ್ತಿ, ಆತ್ಮನಲ್ಲೇ ಸುಳಿದು, ತಾನೇ ಶಿವಶಕ್ತಿಸ್ವರೂಪಮಾಗಿ, ತನ್ನಿಂದ ಬುದ್ಧಮಾಗಿರ್ಪ ಆತ್ಮಪದಾರ್ಥದಲ್ಲಿ ಜೀವಜಾಲಂಗಳಂ ಸೃಷ್ಟಿಸಿ, ಪೃಥ್ವಿಯಲ್ಲಿ ಬೆಳೆದ ಬೆಳೆಯನ್ನು ಗೃಹದಲ್ಲಿ ತುಂಬಿ, ಶರೀರದಿಂದ ಅನುಭವಿಸುವಂದದಿ ಆತ್ಮನಿಂದ ಬೆಳೆದ ಕರ್ಮದ ಬೆಳಸನ್ನು ಜೀವಂಗಳಲ್ಲಿ ತುಂಬಿ, ತದನುಭವಕ್ಕೆ ತಾನೇ ಕಾರಣಮಾಗಿ, ನಿಜಮಹಾತ್ಮ್ಯ ಪ್ರಕಟನಮಂ ಮಾಡಿಯಾಡುತಿರ್ಪಭವನೆ ನಿನ್ನ ಸಂಬಂಧಮಾಗಿರ್ಪುದಂ ಭಾವದಲ್ಲಿ ತಿಳಿದುನೋಡಿದಲ್ಲಿ, ಎಲ್ಲವೂ ನೀನಾಗಿರ್ಪೆಯಲ್ಲದೆ, ಪೆರೆತೊಂದುಂಟೇನಯಾ? ನಿನ್ನ ಕ್ರೀಡಾನಿಮಿತ್ತ ನಾನೆಂಬ ಬರಿಯ ಭ್ರನೆಯಂ ಸೃಷ್ಟಿಸಿ, ಕಷ್ಟಬಡಿಪುದೊಳ್ಳಿತ್ತೇನಯ್ಯಾ? ಅರಿತವನ ಮುಂದೆ ಇಂದ್ರಜಾಲವಂ ಮಾಡಲು ಪರಿಶೋಭಿಸಬಲ್ಲುದೆ? ನಿನ್ನ ಮಾಯೆಯೆನಗೆ ಮನೋರಥಮಾಗಬಲ್ಲುದೆ? ಬೇರ ಬಲ್ಲವಂಗೆ ಎಲೆಯಂ ತೋಋಹೋದರೆ, ಅಪಹಾಸ್ಯಕಾರಣಮಾಗಿಹುದು. ಇದನರಿತು ನನ್ನಂ ಕಾಡದಿರು ಕಂಡ್ಯಾ ಮಹಾಘನ ದೊಡ್ಡದೇಶಿಕಾರ್ಯಗುರುಪ್ರಭುವೆ.
--------------
ಮುಮ್ಮಡಿ ಕಾರ್ಯೇಂದ್ರ /ಮುಮ್ಮಡಿ ಕಾರ್ಯ ಕ್ಷಿತೀಂದ್ರ