ಉತ್ತಮತೇಜಿಗೆ ಚಬುಕಿನಲ್ಲಿ ತೆಗೆವರುಂಟೆ ?
ಪಟ್ಟಣಕ್ಕೆ ಒಡೆಯನಾದ ಬಳಿಕ, ಜಾತಿಗೋತ್ರವನರಸಲುಂಟೆ ?
ಪರಮಸುಜ್ಞಾನಿಗೆ ಪ್ರಾಣದ ಹಂಗುಂಟೆ ?
ಲಿಂಗವನಪ್ಪಿದ ಶರಣನ ಕಂಡಕಂಡವರು ಜರಿದಡೆ, ಸಂದೇಹವುಂಟೆ ?
ಇಹಲೋಕದವರು ಜರಿದರೆಂದು ವಿಪರೀತಗೊಳಲೇಕೆ ?
ಅಮುಗೇಶ್ವರಲಿಂಗವನರಿದ ಶರಣಂಗೆ ಆರು ಹರಸಿದಡೇನು, ಆರು ಹಳಿದಡೇನು
?