ಎನ್ನ ಭಾವಕ್ಕೆ ಗುರುವಾದನಯ್ಯಾ ಬಸವಣ್ಣನು.
ಎನ್ನ ನೋಟಕ್ಕೆ ಲಿಂಗವಾದನಯ್ಯಾ ಚೆನ್ನಬಸವಣ್ಣನು.
ಎನ್ನ ಜ್ಞಾನಕ್ಕೆ ಜಂಗಮವಾದನಯ್ಯಾ ಪ್ರಭುದೇವರು.
ಎನ್ನ ಪರಿಣಾಮಕ್ಕೆ ಪ್ರಸಾದವಾದನಯ್ಯಾ ಮರುಳಶಂಕರದೇವರು.
ಎನ್ನ ಹೃದಯಕ್ಕೆ ಮಂತ್ರವಾದನಯ್ಯಾ ಮಡಿವಾಳಯ್ಯನು.
ಇಂತೀ ಐವರ ಕಾರುಣ್ಯಪ್ರಸಾದವ ಕೊಂಡು
ಬದುಕಿದೆನಯ್ಯಾ ಅಜಗಣ್ಣತಂದೆ.