ತೋರುವ ತೋರಿಕೆ ಸಬರೆ ಮುಟ್ಟಾಗಿ,
ಭಾವಭ್ರಮೆ ಸರ್ವತ್ರವ್ಯಾಪಾರ ವಿದಳ ಧಾನ್ಯವಾಗಿ,
ಚಿತ್ತವನರಿಯದ ಭಾವ ಎತ್ತಾಗಿ,
ಜಗವ ಸಿಕ್ಕಿಸುವ ವೇಷ ಲಾಂಛನಧಾರಿ ಸೆಟ್ಟಿಯಾಗಿ,
ಸರ್ವಪ್ರಕೃತಿ ದೇಶದಲ್ಲಿ ಬೆವಹಾರವ ಮಾಡುತ್ತಿರಲು,
ನಿರಾಸಕ ಕೋಲುಕಾರ ತನುವಿನ ಸೆಟ್ಟಿಯ ತಡೆ ಬಿಟ್ಟಿತ್ತು.
ಗತವಾಗಿ, ಕಾಲದ ಮಂದಿರಕ್ಕೆ ಒಪ್ಪದ ಚೀಟಲ್ಲದೆ,
ಬಂಕೇಶ್ವರಲಿಂಗಕ್ಕೆ ಸುಂಕಲಾಭವಾಯಿತ್ತು.