ಒಮ್ಮೆಗೆ ಸುರಿದು, ಮತ್ತೊಮ್ಮೆಗೆ ಬೇಡದಿಪ್ಪುದೆ ಭರಿತಾರ್ಪಣವೆ ?
ಮುಟ್ಟಿ ಮುಟ್ಟಿ ಅರ್ಪಿಸಲಾರದೆ
ಗುಪ್ಪೆಯಾಗಿ ಸುರಿಯಿಸಿ ಕೊಂಡು ಕೊಂಬುದು
ಇದು ಕೃತ್ಯದ ನೇಮ, ಭರಿತಾರ್ಪಣವೆ? ಭರಿತಾರ್ಪಣವಾವುದೆಂದಡೆ:
ಪರಸ್ತ್ರಿ ಒಲಿದು ಬಂದಲ್ಲಿ, ನೇಮಕಲ್ಲದ ದ್ಯವ್ಯನೆರೆದು,
ನಿಕ್ಷೇಪ ಕೈಲೆಡೆಯ ಕಡವರ ವಿಶ್ವಾಸಿಸಿದಲ್ಲಿ, ಘಾತಕತನವ ಬಿಟ್ಟು
ಇಂತೀ ಅವಗುಣದಲ್ಲಿ ಮಲಿನನಲ್ಲದೆ ಸ್ವಾನುಭಾವಸಿದ್ಧಾನಾಗಿ
ಕಾಯಕರ್ಮಕ್ಕೊಳಗಲ್ಲದೆ,
ಜೀವ ನಾನಾ ಜೀವಂಗಳಲ್ಲಿ ಹುಟ್ಟಿ ಹೊಂದದೆ,
ಆತ್ಮನ ವಸ್ತುವಲ್ಲದೆ ಮತ್ತೇನನೂ ಅರಿಯದೆ,
ಪರಿಭ್ರಮವ ಹರಿದುದು ಭರಿತಾರ್ಪಣ.
ಈ ಗುಣ ಚೆನ್ನ ಚೆನ್ನ ಕೂಡಲ ರಾಮೇಶ್ವರಲಿಂಗ ಸಂಗ.