ಅಥವಾ
(2) (4) (0) (0) (0) (0) (0) (0) (0) (0) (1) (0) (0) (0) ಅಂ (0) ಅಃ (0) (3) (0) (0) (1) (0) (0) (0) (1) (0) (0) (0) (0) (0) (0) (0) (0) (0) (0) (0) (4) (4) (1) (1) (0) (2) (0) (2) (0) (0) (2) (0) (0) (1) (0) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಅಪ್ಪು ಬಲಿದು ಪೃಥ್ವಿಯ ಮೇಲೆ ಶತಕೋಟಿ ಸಹಸ್ರಕೋಟಿ ಬಯಲಿಂದತ್ತ ಭರಿತವಪ್ಪುದೊಂದು ರಥ. ಆ ರಥಕ್ಕೆ ಬ್ರಹ್ಮ ವಿಷ್ಣು ಸೂರ್ಯ ಚಂದ್ರ (?) ವೇದಶಾಸ್ತ್ರಪುರಾಣಸಕಲಾಗಮಪ್ರಮಾಣಗೂಡಿದ ಷಟ್ಕಲೆ ಮೇರುಮಂದಿರವೆಂಬ ಅಚ್ಚುಗಂಬವ ನೆಟ್ಟಿದೆ. ಆ ರಥದ ಸುತ್ತಲು ದೇವಾದಿದೇವರ್ಕಳೆಲ್ಲರ ತಂದು ಸಾರಥಿಯನಿಕ್ಕಿ ಆ ರಥದ ನಡುಮಧ್ಯಸ್ಥಾನದಲ್ಲಿ ಅಷ್ಟದಳಕಮಲವಾಯಾಗಿ ಅನಂತಸಹಸ್ರಕೋಟಿ ಕಮಲಪದ್ಮಾಸನವ ರಚಿಸಿದೆ. ಆ ಪದ್ಮಾಸನದ ಮೇಲೆ ಶಂಭು ಸದಾಶಿವನೆಂಬ ಮಹಾದೇವನ ತಂದು ನೆಲೆಗೊಳಿಸಿದೆ. ಆ ರಥದ ಪೂರ್ವಬಾಗಿಲಲ್ಲಿ ಆದಿಶಕ್ತಿಯ ನಿಲಿಸಿದೆ. ಉತ್ತರ ಬಾಗಿಲಲ್ಲಿ ಓಂ ಪ್ರಣಮಸ್ವರೂಪಿಣಿಯೆಂಬ ಶಕ್ತಿಯ ನಿಲಿಸಿದೆ. ಆ ಪಶ್ಚಿಮಬಾಗಿಲಲ್ಲಿ ಕ್ರಿಯಾಶಕ್ತಿಯ ನಿಲಿಸಿದೆ. ದಕ್ಷಿಣದ ಬಾಗಿಲಲ್ಲಿ ಚಿಚ್ಫಕ್ತಿಯ ನಿಲಿಸಿದೆ. ಭೈರವ ವಿಘ್ನೆಶ್ವರ ಷಣ್ಮುಖ ವೀರಭದ್ರರೆಂಬ ನಾಲ್ಕು ಧ್ವಜಪಟಗಳನೆತ್ತಿ, ಆ ರಥದ ಅಷ್ಟದಿಕ್ಕುಗಳಲ್ಲಿ ನಾನಾ ಚಿತ್ರವಿಚಿತ್ರವೈಭವಂಗಳೆಂಬ ಕೆಲಸವ ತುಂಬಿ, ಅದರ ಗಾಲಿಯ ಕೀಲುಗಳಲ್ಲಿ ಈರೇಳುಭುವನವೆಂಬ ಹದಿನಾಲ್ಕುಲೋಕಂಗಳ ಧರಿಸಿ ಆಡುತ್ತಿರ್ಪವು. ಅನಾದಿ ಶೂನ್ಯವೆಂಬ ಮಹಾರಥದೊಳಗಿಪ್ಪ ನಮ್ಮ ಬಸವಣ್ಣಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲ ರಾಜೇಶ್ವರಲಿಂಗವು ನಿರಾಳ ನಿಶ್ಚಿಂತ ನಿರ್ಲೇಪನು.
--------------
ಬಾಚಿಕಾಯಕದ ಬಸವಣ್ಣ
ಅನಾದಿಬಿಂದುವೆಂಬ ಆಧಾರ ಕುಂಡಲಿಯ ಸ್ಥಾನದಲ್ಲಿ ಅಂಡವೆಂಟು ಉಂಟು. ಆ ಎಂಟಂಡವನು ಎಂಟು ಪದ್ಮ ಹೊತ್ತುಕೊಂಡಿಪ್ಪವು. ಆ ಪದ್ಮದ ಎಸಳು ಏಳುಸಾವಿರದ ಎಪ್ಪತ್ತು ಕೋಟಿಯು. ಏಳುನೂರ ಮೂವತ್ತಾರು ಎಸಳಿನಲ್ಲಿ ಅಖಂಡ ಪೂಜೆಯ ಮಾಡಲರಿಯದೆ ಆಧಾರ ಸ್ವಾಧಿಷಾ*ನ ಮಣಿಪೂರಕ ಅನಾಹತ ವಿಶುದ್ಧಿ ಆಜ್ಞೇಯ ಬ್ರಹ್ಮರಂಧ್ರ ರೇಚಕ ಪೂರಕ ಕುಂಭಕದಲ್ಲಿ ಚೌಕ ಪದ್ಮಾಸನವ ಮಾಡಿ ಕಂಡೇನೆಂಬ ಯೋಗಿಗಳಿಗೆ ಇದು ಅಪ್ರಮಾಣ, ಅಗೋಚರ. ಬಸವಪ್ರಿಯ ವಿಶ್ವಕರ್ಮಟಕ್ಕೆ ಕಾಳಿಕಾವಿಮಲರಾಜೇಶ್ವರಲಿಂಗವು ಇದೆಂದರಿದುದೆ ನಿಜಾನಂದಯೋಗ.
--------------
ಬಾಚಿಕಾಯಕದ ಬಸವಣ್ಣ