ಬ ಪದದಿಂದ ಪ್ರಾರಂಭವಾಗುವ ವಚನಗಳು:
ಬೆಡಗು :ಕೊಡಲಿ ಪಿಡಿದಲ್ಲದೇ ಕಾಡು ಕಡಿಯದು.ಆ ಕಾಡ ಕಡಿದಲ್ಲದೆ ಕಲ್ಪವೃಕ್ಷದ ವನವು ಕಾಣದು.ಆ ಕಲ್ಪವೃಕ್ಷದ ವನವ ಕಂಡಡೂ,ಆ ಕಲ್ಪವೃಕ್ಷದ ವನವನಳಿದಲ್ಲದೆ ಕದಳಿಯು ಸಿಗದು.ಆ ಕದಳಿಯ ಸುಲಿದು ಒಳಪೊಕ್ಕಲ್ಲದೆ ನಿಜವು ತಿಳಿಯದು.ಆ ನಿಜವು ತಿಳಿದಲ್ಲದೆ ನಿರ್ಬಯಲು ತಾನಾಗದುನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
ಬೈಲ ಬ್ರಹ್ಮವು ತನ್ನ ಬೈಲಿನೊಳಗೆ ತಾನೆಬೈಲುರೂಪವಾಗಿ ಬೈಲಾದುದು ತಾನೆ | ಪಲ್ಲ |ಜಾರನೋರ್ವಗೆ ಸುತರು ನೂರೆಂಟು ಹುಟ್ಟಿಹರುಚೋರತನಕ್ಕೆ ಬಿದ್ದು ಹೋರುವ ತಾನೆಚೋರತನಕೆ ಬಿದ್ದು ಹೋರುವ ಮಕ್ಕಳಜಾರ ತಾ ಕೊಂದು ಅಳಿವನು ತಾನೆ. | 1 |ಪುಂಡಪುಂಡರು ಕೂಡಿ ದಂಡೆತ್ತಿ ಬರುವರುಕಂಡಕಂಡ್ಹಂಗೆ ಕಡಿದಾಡಿ ತಾನೆ.ಕಂಡಕಂಡ್ಹಂಗೆ ಕಡಿದಾಡಿ ಆ ದಂಡುಬಂಡಾಟವಾಗಿ ಹೋಗುದು ತಾನೆ. | 2 |ಇರವಿಯ ದಂಡೆದ್ದು ಧರೆಯೆಲ್ಲ ಮುತ್ತುವುದುನರರಿರುವುದಕ್ಕೆ ನೆಲೆಯಿಲ್ಲ ತಾನೆ.ನರರಿರುವುದಕ್ಕೆ ನೆಲೆಯಿಲ್ಲದಂತಾಗಿಧರೆ ಉರಿದಿರಿವಿ ಅಳಿವುದು ತಾನೆ. | 3 |ಇದ್ದ ದೈವಗಳೆಲ್ಲ ಬಿದ್ದುರುಳಿ ಹೋದಾವುಸುದ್ದಿ ಕೇಳೋರ್ವ ಬರುವನು ತಾನೆಸುದ್ದಿ ಕೇಳೋರ್ವ ಬಂದು ತಾ ಮಾಡಿದಬುದ್ಧಿಂದ ಸೀಮಾ ನೇಮವು ತಾನೆ. | 4 |ಮಾಡಿದ ನೇಮ ಸೀಮಾ ಮಾಡಿದಂತಿರದೆ ತಾಕೂಡೋದು ಜಾತಿಸಂಕರ ತಾನೆಕೂಡೋದು ಜಾತಿಸಂಕರವಾಗಲುರೂಢಿಯೊಳಗೆ ಮಹಾಶ್ಚರ್ಯವು ತಾನೆ. | 5 |ಹಿಂದೆ ಬಸವರಾಜ ಬಂದು ತೋರಿದ ಮಹತ್ವಕ್ಕೆಅಂದೇ ಆಯಿತು ವಿಘ್ನ ಪ್ರಮಥರಿಗೆ ತಾನೆಅಂದಾದ ವಿಘ್ನಕ್ಕೆ ಪ್ರಮಥರು ತಾವೆಲ್ಲಾಮುಂದಾಗುವದು ಸೂಚಿಸಿದರು ತಾನೆ. | 6 |ಮುಂದಾದುದು ತಾನೆ ಮುಂದೇನಾಗುವದು ಅದರಂದವ ಅರಿಯದೆ ಉಳುವಿಟ್ಟರು ತಾನೆಅಂದವರಿಯದೆ ತಾವು ಉಳುವಿಟ್ಟು ಹೋದ ಕಾರಣಬಂದುಹೋಗುವದು ಭವವುಂಟು ತಾನೆ. | 7 |ಚನ್ನಣ್ಣ ಬರುವದು ಬಿನ್ನಣ ಮುಂದುಂಟುಚನ್ನಣ್ಣನಿಂದೇನಾಗುವದು ತಾನೆಚನ್ನಣ್ಣನಿಂದೇನಾಗದಿರಲು ಆಗತನ್ನ ತಾ ತಿಳಿದು ನಿಜವಹ ತಾನೆ | 8 |ಆರು ಕೂಡಿಸಿದರೆ ಕೂಡದು ಆರು ಅಗಲಿಸಿದರೆ ಅಗಲದುಆರಿಗೆ ಆರಾಗಿ ಮೀರುವದು ತಾನೆಆರಿಗೆ ಆರಾಗಿ ಮೀರುವ ಮಾತಿಗೆಘೋರಾಟವಾಯಿತು ಬಹುಜನ್ಮ ತಾನೆ | 9 |ಒಂದೊಂದು ಜೀವದಿಂದೆ ಮುಂದೊಮ್ಮೆ ಸರ್ವಜೀವವುಹೊಂದಿ ಹೋಗುವದು ಲಯವಾಗಿ ತಾನೆಹೊಂದಿ ಹೋಗುವದು ಲಯವಾಗಿ ಅದರೊಳ್ಬಂದುಳಿದು ಹಲವಾಗುವದು ತಾನೆ | 10 |ನಿಷೆ* ನೆಲೆಗೊಳಿಸಿ ನಿಷೆ*ಯೊಳ್ ಅಳಿವರುನಿಷೆ* ಉಳ್ಳವರು ನಿಜವಲ್ಲ ತಾನೆನಿಷೆ*ಯುಳ್ಳವರು ನಿಜವಲ್ಲ ಇದರಂತೆದುಷ್ಟರು ದುಷ್ಟರೊಳ್ ಅಳಿವರು ತಾನೆ | 11 |ಅಳಿದದ್ದು ಅಳಿವುದು ಉಳಿದದ್ದು ಉಳಿವುದುಇಳೆಯು ನೀರೊಳ್ ಕರಗುವದು ತಾನೆಇಳೆಯು ನೀರೊಳು ಕರಗಿದ ಕಾಲಕ್ಕೆಬಲವಂತನೊಬ್ಬನು ಬರುವನು ತಾನೆ | 12 |ಬಲವಂತ ಬಂದಾಗ ನೆಲಜಲ ನೆಲಮಾಡಲುಹಲವುಕಾಲ ಮತ್ತಾಗುವದು ತಾನೆಹಲವುಕಾಲ ಮತ್ತಾಗುವದು ಈ ಪರಿನೆಲೆಯೊಳಳಿವು ಸಾಕಾರಕ್ಕೆ ತಾನೆ | 13 |ಆರಾರ ವ್ಯಾಳ್ಯಕ್ಕೆ ಮೀರುವದು ಈ ಭೂಮಿನೀರೊಳು ಕೂಡಿ ನೀರಾಗುವದು ತಾನೆನೀರೊಳು ಕೂಡಿ ನೀರಾಗಿರಲು ಆ ನೀರುನೀರರ್ತು ಅಗ್ನಿ ಆಗುವದು ತಾನೆ | 14 |ಅನಲಾನ ಉರಿನುಂಗಿ ಅನಿಲಾನ ಒಳಕೊಂಡುಅನುವಾಯಿತು ಆಕಾಶ ಆತ್ಮನೊಳು ತಾನೆಅನುವಾಯಿತು ಆತ್ಮನೊಳು ಆಕಾಶ ಆ ಆತ್ಮಚಿನುಮಯನೊಳಗೆ ತನುಮಯ ತಾನೆ | 15 |ಲೀಲವನುಳಿದು ತಾ ಲೀಲವಾಗಲು ಮಹಾಂತಮೂಲೋಕವೆಲ್ಲಾ ಸಾಲೋಕ್ಯ ತಾನೆಮೂಲೋಕವೆಲ್ಲಾ ಸಾಲೋಕ್ಯವೆಲ್ಲುಂಟುಲೀಲ ಮೇಲಾಗಿ ತಾನಹನು ತಾನೆ.
ಬಂದದ್ದು ಅತಿಗಳೆಯದೆ, ಬಾರದ್ದು ಬಯಸದೆಷಡ್ರಸವನೊಂದುಮಾಡಿಕೊಂಡು ಸವಿದುಂಡುಚಿಂತೆಗೆಟ್ಟು ಸಂತೋಷವು ಅಳವಟ್ಟುನಗಿಗೆ ಹಗೆಗೆ ಒಂದಾಗಿ, ಝಗಝಗನೆ ಹೊಳೆದುವೈರಾಗ್ಯವೇ ಆರೋಗ್ಯವಾಗಿ ಭವರೋಗಬ್ಯಾನಿಗೆ ನೆಲಿಯಾಗಿಸತ್ತು ಸತ್ತು ಹೋಯಿತು ಅನಂತಕಾಲ ಅನಂತಜನ್ಮ.ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
ಬಂದು ಬಂದದ್ದರಿಯರಿದೆ, ಹೋಗಿ ಹೋದದ್ದರಿಯದೆ,ಇದ್ದು ಇದ್ದದ್ದರಿಯದೆ, ನೊಂದು ನೊಂದದ್ದರಿಯದೆ,ಕೆಟ್ಟು ಕೆಟ್ಟದ್ದರಿಯದೆ, ಎಂಬತ್ನಾಲ್ಕುಲಕ್ಷ ಜೀವರಾಶಿ,ಯೋನಿದ್ವಾರದಲ್ಲಿ ತಿರುತಿರುಗಿ ಬಂದದ್ದನ್ನರಿಯದೆ,ಏನೂ ಏನರಿಯದ್ಹಾಂಗೆ ಅರಿತು ಅರಿಯದ್ಹಾಂಗೆ ಇರ್ದೆಯಲ್ಲಾನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
ಬ್ರಹ್ಮನೆಂಬ ಪೂಜಾರಿಗೆ ಬ್ರಹ್ಮನೇ ಅಧಿದೈವನಾಗಿಪೂರ್ವದಿಕ್ಕಿನೊಳು ಭಕ್ತಿಸ್ಥಲವೆನಿಸಿತ್ತು.ವಿಷ್ಣುನೆಂಬ ಪೂಜಾರಿಗೆ ವಿಷ್ಣುವೆ ಅಧಿದೈವನಾಗಿಪಶ್ಚಿಮದಿಕ್ಕಿನೊಳು ಮಹೇಶ್ವರಸ್ಥಲವೆನಿಸಿತ್ತು.ರುದ್ರನೆಂಬ ಪೂಜಾರಿಗೆ ರುದ್ರನೇ ಅಧಿದೈವನಾಗಿದಕ್ಷಿಣದಿಕ್ಕಿನೊಳು ಪ್ರಸಾದಿಸ್ಥಲವೆನಿಸಿತ್ತು.ಈಶ್ವರನೆಂಬ ಪೂಜಾರಿಗೆ ಈಶ್ವರನೇ ಅಧಿದೈವನಾಗಿಉತ್ತರದಿಕ್ಕಿನೊಳು ಪ್ರಾಣಲಿಂಗಿಸ್ಥಲವೆನಿಸಿತ್ತು.ಸದಾಶಿವನೆಂಬ ಪೂಜಾರಿಗೆ ಸದಾಶಿವನೇ ಅಧಿದೈವನಾಗಿಊಧ್ರ್ವದಿಕ್ಕಿನೊಳು ಶರಣಸ್ಥಲವೆನಿಸಿತ್ತು.ಮಹಾದೇವನೆಂಬ ಪೂಜಾರಿಗೆ ಮಹಾದೇವನೇ ಅಧಿದೈವನಾಗಿಪಾತಾಳದಿಕ್ಕಿನೊಳು ಐಕ್ಯಸ್ಥಲವೆನಿಸಿತ್ತು.ಇಂತು ತತ್ವವನೆ ಅರಿತು ನನ್ನ ನಾ ಮರೆತುನಿನ್ನೊಳು ಬೆರೆತೆನಾಗಿ ನೀ ನಾನೆಂಬ ಉಭಯಭೇದವನಳಿಸಿ ಸಂದಿಲ್ಲದೆ ಒಂದಾಗಿ ತೋರ್ದನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.