ಉರಿದು ಬೇವದು ಉರಿಯೋ, ಮರನೋ ?
ಹರಿದು ಕೊರೆವದು ನೆಲನೋ, ನೀರೋ ?
ನೆಲ ನೀರಿನಂತಾದುದು ಅಂಗಲಿಂಗಸಂಬಂಧ.
ಉರಿ ಮರನಂತಾದುದು ಪ್ರಾಣಲಿಂಗಸಂಬಂಧ.
ಈ ನಾಲ್ಕರ ಗುಣ ಉಭಯಕೂಟವಾದುದು ಶರಣಸ್ಥಲ.
ಆ ಸ್ಥಲ ಸುರಧನುವಿನ ಕೆಲವಳಿಯಂತೆ,
ಮರೀಚಿಕಾಜಲವಳಿಯಂತೆ,
ಮಂಜಿನ ರಂಜನೆಯ ಜಂಝಾಮಾರುತನಂತೆ,
ಆ ಸಂಗ ನಿಸ್ಸಂಗ ಐಕ್ಯಸ್ಥಲ, ನಿಃಕಳಂಕ ಮಲ್ಲಿಕಾರ್ಜುನ
ರೂಪಳಿದು ನೀರಾದಂತೆ
ಅಂಗಲಿಂಗಸಂಬಂಧಿ ಏಣಾಂಕಧರ ಸೋಮೇಶ್ವರಲಿಂಗದಲ್ಲಿ.