ಅಂಗವುಂಟಾದಲ್ಲಿ ಲಿಂಗವನರಿಯಬೇಕು.
ಲಿಂಗವುಂಟಾದಲ್ಲಿ ಚೇತನ ಭೂತಹಿತವನರಿಯಬೇಕು.
ಆ ಅರಿವು ನೆಲೆಗೊಂಡಲ್ಲಿ ಒಳಗು ಹೊರಗ ವಿಚಾರಸಲಿಲ್ಲ.
ಮಹಾರ್ಣವ ಬಲುಜಲವನಿಂಬಿಟ್ಟುಕೊಂಡಂತೆ.
ಶರಣಸತಿಯಲ್ಲಿ ಲಿಂಗಕುಲದಲ್ಲಿ ಜಂಗಮಪದದಲ್ಲಿ ಗುರುಸ್ಥಲದಲ್ಲಿ
ಕಂಗಳ ಮುಂದೆ ಮಹೇಂದ್ರಜಾಲ ನಿಂದಂತೆ,
ನಿಂದ ನಿಲವೆ ಸದ್ಭಕ್ತನಿರವು;
ಕಾಲಾಂತಕ ಭೀಮೇಶ್ವರಲಿಂಗದ ನಿಜವಾಸದ ಬೆಳಗು.