ನಾರೀಕೇಳ ಹುಟ್ಟಿದ ಸುಜಲವ ಅಲ್ಲಿಗೆ ಎಯ್ದಿಸಿ ಎರೆದವರಿಲ್ಲ
ಅದು ಬಲಿದು ಅಲ್ಲಿಯೇ ಅರತಾಗ ಬೇರೊಂದು ಕೊಂಡುದಿಲ್ಲ.
ಅಪ್ಪುವರತು ತುಪ್ಪ ತನ್ನಲ್ಲಿಯೆ ಒದಗಿದಂತೆ
ನಿಶ್ಚೆ ೈಸಿದ ಮನ ವಸ್ತುವಿನಲ್ಲಿ ಕೂಡಿ
ಕಾಯದ ಕರಂಡದಲ್ಲಿ ಕರಣಂಗಳರತು
ಜೀವ ಕೆಟ್ಟು ಪರಮನಾದಂತೆ.
ಈ ಭೇದವನರಿದು ಕಾಲನ ಗೆದ್ದು
ಕಾಲಾಂತಕ ಬ್ಥೀಮೇಶ್ವರಲಿಂಗವು ತಾನಾದನು.