ಅಥವಾ
(2) (0) (3) (0) (0) (0) (0) (0) (2) (0) (0) (1) (0) (0) ಅಂ (1) ಅಃ (1) (4) (0) (14) (0) (0) (1) (0) (3) (0) (0) (0) (0) (0) (0) (0) (1) (0) (0) (0) (3) (1) (0) (1) (1) (0) (0) (1) (0) (2) (0) (2) (0) (3) (3) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಸತ್ಯ ಶುದ್ಧ ಕಾಯಕದಿಂದ ಬಂದ ದ್ರವ್ಯದಲ್ಲಿ ಚಿತ್ತ ವಿಚ್ಛಂದವಾಗದಿರಬೇಕು. ನೇಮದ ಕೂಲಿಯಂದಿನ ನಿತ್ಯ ನೇಮದಲ್ಲಿ ಸಂದಿಲ್ಲದಿರಬೇಕು. ನೇಮದ ಕೂಲಿಯ ಬಿಟ್ಟು ಹೇಮದಾಸೆಗೆ ಕಾಮಿಸಿ ದ್ರವ್ಯವ ಹಿಡಿದಡೆ ತಾ ಮಾಡುವ ಸೇವೆ ನಷ್ಟವಯ್ಯಾ. ನಿನ್ನಾಸೆಯ ವೇಷದ ಪಾಶಕ್ಕೆ ನೀನೆ ಹೋಗು. ನನಗೆ ನಮ್ಮ ಜಂಗಮದ ಪ್ರಸಾದದಾಗೆ ಚಂದೇಶ್ವರಲಿಂಗಕ್ಕೆ ಪ್ರಾಣವಯ್ಯಾ.
--------------
ನುಲಿಯ ಚಂದಯ್ಯ
ಸುಖ ದುಃಖ ಭೋಗಾದಿ ಭೋಗಂಗಳೆಲ್ಲವೂ ಗುರು ಲಿಂಗ ಜಂಗಮದ ಒಡಲಾಗಿ ಬೆಳೆವುತ್ತಿಹವು. ತಾನವ ಒಡಲುಗೊಂಡು ಮಾಡುವ ಕಾರಣ ತನ್ನ ಬೆಂಬಳಿಯ ಮಾಯೆ. ಅವ ಹಿಂಗಿ ತನ್ನ ತಾನರಿತಲ್ಲಿ ಚನ್ನಬಸವಣ್ಣಪ್ರಿಯ ಚಂದೇಶ್ವರಲಿಂಗವ ಕಾಣಬಂದಿತ್ತು.
--------------
ನುಲಿಯ ಚಂದಯ್ಯ
ಸಂಸಾರವೆಂಬ ಸಾಗರದ ಮಧ್ಯದೊಳಗೆ ಬೆಳೆದ ಹೊಡಕೆಯಹುಲ್ಲ ಕೊಯ್ದು ಮತ್ತಮಾ ಕಣ್ಣ ತೆಗೆದು, ಕಣ್ಣಿಯ ಮಾಡಿ ಇಹಪರವೆಂಬ ಉಭಯದ ಗಂಟನಿಕ್ಕಿ ತುದಿಯಲ್ಲಿ ಮಾಟಕೂಟವೆಂಬ ಮನದ ಕುಣಿಕೆಯಲ್ಲಿ ಕಾಯಕವಾಯಿತ್ತು. ಇದು ಕಾರಣ ಚಂದೇಶ್ವರಲಿಂಗವೆಂಬ ಭಾವವೆನಗಿಲ್ಲ
--------------
ನುಲಿಯ ಚಂದಯ್ಯ