ಅಥವಾ
(4) (1) (3) (1) (0) (0) (0) (0) (1) (0) (0) (0) (1) (0) ಅಂ (2) ಅಃ (2) (1) (0) (5) (1) (0) (0) (0) (1) (0) (0) (0) (0) (0) (0) (0) (1) (0) (1) (1) (4) (2) (0) (1) (1) (0) (0) (0) (0) (5) (1) (2) (0) (2) (0) (0)

ಅಂ ಪದದಿಂದ ಪ್ರಾರಂಭವಾಗುವ ವಚನಗಳು:

ಅಂದಿನವರಿಗೆ ಪರುಷವಿಪ್ಪುದು ಇಂದಿನವರಿಗೆ ಪರುಷವೇಕಿಲ್ಲ ? ದಯದಿಂದ ಕರುಣಿಸಿ ಸ್ವಾಮಿ. ಕೇಳಯ್ಯ ಮಗನೆ : ಲಾಂಛನಧಾರಿಗಳು ಸ್ವಯಪಾಕ ಭಿಕ್ಷಕ್ಕೆ ಬಂದ ವೇಳೆಯಲ್ಲಿ ಗೋದಿಯ ಬೀಸುವಗೆ ಆ ಹಿಟ್ಟು ಬಿಟ್ಟು ಕಡೆಯಲಿದ್ದ ಹಿಟ್ಟು ನೀಡುವವರಿಗೆ ಎಲ್ಲಿಹುದೊ ಪರುಷ ? ಲಾಂಛನಧಾರಿಗಳು ಧಾನ್ಯ ಭಿಕ್ಷಕ್ಕೆ ಬಂದಡೆ ಘನವ ಮಾಡಿಕೊಳ್ಳಿರಿ ಎಂಬವರಿಗೆ ಎಲ್ಲಿಹುದೊ ಪರುಷ ? ಶಿವಯೋಗಿ ಲಿಂಗಾರ್ಪಿತ ಭಿಕ್ಷಕ್ಕೆ ಬಂದಡೆ ಸುಮ್ಮನಿಹರು. ಇದು ಭಿಕ್ಷವೇಳೆಯೆ ? ಎಂಬವರಿಗೆ ಎಲ್ಲಿಹುದೊ ಪರುಷ ? ಮತ್ತಂ, ಹಬ್ಬವ ಮಾಡುವಾಗ ಭಿಕ್ಷಕ್ಕೆ ಬಂದಡೆ ತಂಗಳ ನೀಡಿ ಕಳಿಸುವವರಿಗೆ ಎಲ್ಲಿಹುದೊ ಪರುಷ ? ಪರುಷ ಎಲ್ಲಿಹುದು ಎಂದಡೆ : ಜಂಗಮವು ಮನೆಗೆ ಬಂದಡೆ ಬಂದ ಬರವ, ನಿಂದ ನಿಲವ ಅರಿತವರಿಗೆ ಅದೇ ಪರುಷ. ಯಾವ ವೇಳೆಯಾಗಲಿ, ಯಾವ ಹೊತ್ತಾಗಲಿ ಜಂಗಮವು ಭಿಕ್ಷಕ್ಕೆ ಬರಲು ಹಿಂದಕ್ಕೆ ತಿರುಗಗೊಡ[ದ]ವರನ್ನೆಲ್ಲ ಸುಖವಬಡಿಸುವುದೇ ಪರುಷ. ಸಮಸ್ತ ಒಡವೆಯೆಲ್ಲವನು ಎನ್ನ ಒಡವೆಯಲ್ಲವೆಂದವರಲ್ಲಿ ಅದೇ ಪರುಷ. ತನ್ನ ಪ್ರಪಂಚಿನ ಪುತ್ರ ಮಿತ್ರ ಕಳತ್ರರಿಗೆ ಮಾಡುವ ಹಾಗೆ ಗುರು-ಲಿಂಗ-ಜಂಗಮಕ್ಕೆ, ಕೇವಲ ಸದ್ಭಕ್ತಿಗೆ ಭಕ್ತಿಯ ಮಾಡಿದವರಿಗೆ ಅದೇ ಪರುಷ. ಹೀಗೆ ಮಾಡಿದವರಿಗೆ ಅಂದೇನು ಇಂದೇನು ಎಂದರುಹಿದಾತ ನಮ್ಮ ಶಾಂತಕೂಡಲಸಂಗಮದೇವ
--------------
ಗಣದಾಸಿ ವೀರಣ್ಣ
ಅಂದಿನವರಿಗೆ ಅಷ್ಟಾವರಣವು ಸಾಧ್ಯವಪ್ಪುದಲ್ಲದೆ ಇಂದಿನವರಿಗೆ ಅಷ್ಟಾವರಣವು ಸಾಧ್ಯವಾಗದೆಂಬರು. ಅದೇನು ಕಾರಣ ಸಾಧ್ಯವಿಲ್ಲ ಶ್ರೀಗುರುವೆ ? ಅಂದಿನ ಸೂರ್ಯ ಚಂದ್ರ ಆತ್ಮ ಆಕಾಶ ವಾಯು ಅಗ್ನಿ ಅಪ್ಪು ಪೃಥ್ವಿ ಎಂಬ ಅಷ್ಟತನುಮೂರ್ತಿಗಳು ಅಂದುಂಟು ಇಂದುಂಟು. ಅಂದು ಬೆಳೆವ ಹದಿನೆಂಟು ಜೀನಸಿನ ಧಾನ್ಯಗಳು ಇಂದು ಬಿತ್ತಿದರೆ ಬೆಳೆವವು. ಅಂದು ವಾರ ತಿಥಿ ನಕ್ಷತ್ರ ಸಂವತ್ಸರಗಳು ನಡೆದುದುಂಟು. ಇಂದು ವಾರ ತಿಥಿ ನಕ್ಷತ್ರ ಸಂವತ್ಸರಗಳು ನಡೆವುದುಂಟು. ಅಂದಿನ ಅಷ್ಟಾವರಣಸ್ವರೂಪ ಇಂದುಂಟು. ಅಂದು ಇಂದೆಂಬ ಸಂದೇಹದ ಕೀಲವ ಕಳೆದು ನಿಂದರೆ ಸಾಕು ದಯಮಾಡು ಸದ್ಗುರುವೆ. ಕೇಳೈ ಮಗನೆ : ದೃಢವಿಡಿದು ಏಕಚಿತ್ತದಲ್ಲಿ ನಂಬಿಗೆಯುಳ್ಳ ಶಿವಭಕ್ತಂಗೆ ಅಂದೇನು, ಇಂದೇನು ? ಗುರುಲಿಂಗಜಂಗಮದಲ್ಲಿ ಪ್ರೇಮ ಭಕ್ತಿ ಇದ್ದವರಿಗೆ, ವಿಭೂತಿ ರುದ್ರಾಕ್ಷಿಯಲ್ಲಿ ವಿಶ್ವಾಸ ಇದ್ದವರಿಗೆ, ಶಿವಮಂತ್ರವಲ್ಲದೆ ಎನಗೆ ಬೇರೆ ಮಂತ್ರವಿಲ್ಲವೆಂಬವರಿಗೆ ಅಂದೇನೊ, ಇಂದೇನೊ ? ಗುರುಲಿಂಗಜಂಗಮಕ್ಕೋಸ್ಕರವಾಗಿ ಕಾಯಕ ಮಾಡುವವರಿಗೆ ಪಂಚಾಚಾರವೇ ಪ್ರಾಣವಾಗಿ, ಅಷ್ಟಾವರಣವೇ ಅಂಗವಾಗಿಪ್ಪವರಿಗೆ ಅಂದೇನೊ, ಇಂದೇನೊ ? ಪುರಾತರ ವಚನವಿಡಿದು ಆರಾಧಿಸುವವರಿಗೆ, ಆದಿ ಮಧ್ಯ ಅವಸಾನ ತಿಳಿದವರಿಗೆ, ಅಂದು ಇಂದೆಂಬ ಸಂದೇಹವಿಲ್ಲವೆಂದು ಹೇಳಿದಿರಿ ಸ್ವಾಮಿ ಎನ್ನಲ್ಲಿ ನೋಡಿದರೆ ಹುರಿಳಿಲ್ಲ, ಹುರುಳಿಲ್ಲ. ಎನ್ನ ತಪ್ಪಿಂಗೇನೂ ಎಣೆಯಿಲ್ಲ, ನಿಮ್ಮ ಸೈರಣೆಗೆ ಲೆಕ್ಕವಿಲ್ಲ. ಮೇರುಗುಣವನರಸುವುದೆ ಕಾಗೆಯಲ್ಲಿ? ಪರುಷಗುಣವನರಸುವುದೆ ಕಬ್ಬುನದಲ್ಲಿ? ನೀವು ಎನ್ನ ಗುಣವನರಸಿದರೆ ಎಂತು ಜೀವಿಸುವೆನಯ್ಯಾ, ಶಾಂತಕೂಡಲಸಂಗಮದೇವ, ನಿಮ್ಮ ಧರ್ಮ, ನಿಮ್ಮ ಧರ್ಮ.
--------------
ಗಣದಾಸಿ ವೀರಣ್ಣ