ನವಸಾಸಾ ಅತಿಬಳನೆಂದಡೆ, ಒಂದು ಕೇಶವ ಕಿತ್ತನೆ ?
ಶಿವನಿತ್ತ ಪಿಂಡವ, ಶ್ರೀರಾಮನು ಸೀತೆಗೆ ದಿಬ್ಯವನಿಕ್ಕಿಹೆನೆಂದು,
ಹೋಮಕುಂಡಲದೊಳಗುರುಹಿದಡೆ,
ಬ್ರಹ್ಮಾಂಡವನೊಡೆದು ಮರುಳುತಿದ್ದಲಿ ್ಲ, ಉರಿನಾಲಗೆಯ ಕೀಳನೆ ?
ಪರಮನೊಲಿದ, ಪಶುಪತಿ ನಿರೂಪನೊಲಿದ, ಋಷಿಯನೊಂದು ವಾಕ್ಯದಿಂದ
ಜಲ ಸಾಗರಂಗಳು ಬಂಧನಕ್ಕೆ ಬಾರವೆ, ನಳನೀಲರ ಕೈಯಲ್ಲಿ ?
ಈಶ್ವರನ ಶರಣರ ಘಾಸಿಮಾಡನೆನೆಂದಡೆ, ನೊಸಲಕ್ಕರವ ತೊಡೆಯರೆ ?
ಅಸುರನ ಪ್ರಹಾರವಿಡಿದು, ಹಿರಣ್ಯಾಕ್ಷನ ಕೊಂದು,
ಶಿರವ ಹೋಗಾಡನೆ ನರಸಿಂಹನು?
ಸ್ವತಂತ್ರನಯ್ಯಾ, ಸಕಳೇಶ್ವರದೇವ ನಿಮ್ಮ ಶರಣನು.
ಸಿಡಿಲ ಸ್ವೀಕರಿಸನೆ ಶಿವಯೋಗಿ ಸಿದ್ಧರಾಮಯ್ಯನು?