ಅಥವಾ
(52) (19) (6) (1) (11) (4) (0) (0) (26) (0) (1) (12) (1) (0) ಅಂ (10) ಅಃ (10) (56) (0) (14) (1) (0) (6) (0) (6) (0) (0) (0) (0) (0) (0) (0) (21) (0) (5) (2) (26) (16) (1) (20) (10) (28) (0) (2) (0) (13) (10) (8) (0) (24) (30) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಹುಟ್ಟಿದೆ ಶ್ರೀಗುರುವಿನ ಹಸ್ತದಲ್ಲಿ, ಬೆಳೆದೆನು ಅಸಂಖ್ಯಾತರ ಕರುಣದೊಳಗೆ. ಭಾವವೆಂಬ ಹಾಲು, ಸುಜ್ಞಾನವೆಂಬ ತುಪ್ಪ, ಪರಮಾರ್ಥವೆಂಬ ಸಕ್ಕರೆಯನಿಕ್ಕಿದರು ನೋಡಾ. ಇಂತಪ್ಪ ತ್ರಿವಿಧಾಮೃತವನು ದಣಿಯಲೆರೆದು ಸಲಹಿದಿರೆನ್ನ. ವಿವಾಹವ ಮಾಡಿದಿರಿ, ಸಯವಪ್ಪ ಗಂಡಂಗೆ ಕೊಟ್ಟಿರಿ, ಕೊಟ್ಟ ಮನೆಗೆ ಕಳುಹಲೆಂದು ಅಸಂಖ್ಯಾತರೆಲ್ಲರೂ ನೆರೆದು ಬಂದಿರಿ. ಬಸವಣ್ಣ ಮೆಚ್ಚಲು ಒಗತನವ ಮಾಡುವೆ. ಚೆನ್ನಮಲ್ಲಿಕಾರ್ಜುನನ ಕೈವಿಡಿದು ನಿಮ್ಮ ತಲೆಗೆ ಹೂವ ತಹೆನಲ್ಲದೆ ಹುಲ್ಲ ತಾರೆನು. ಅವಧರಿಸಿ, ನಿಮ್ಮಡಿಗಳೆಲ್ಲರೂ ಮರಳಿ ಬಿಯಂಗೈವುದು, ಶರಣಾರ್ಥಿ.
--------------
ಅಕ್ಕಮಹಾದೇವಿ
ಹಿತವಿದೆ ಸಕಲಲೋಕದ ಜನಕ್ಕೆ, ಮತವಿದೆ ಶ್ರುತಿಪುರಾಣಾಗಮದ, ಗತಿಯಿದೆ, ಭಕುತಿಯ ಬೆಳಗಿನುನ್ನತಿಯಿದೆ. ಶ್ರೀ ವಿಭೂತಿಯ ಧರಿಸಿದಡೆ ಭವವ ಪರಿವುದು ದುರಿತಸಂಕುಳವನೊರಸುವುದು ಹರನ ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯದಲ್ಲಿರಿಸುವುದು. ನಿರುತವಿದು ನಂಬು ಮನುಜಾ, ಜನನಭೀತಿ ಈ ವಿಭೂತಿ. ಮರಣಭಯದಿಂದ ಅಗಸ್ತ್ಯ ಕಾಶ್ಯಪ ಜಮದಗ್ನಿಗಳು ಧರಿಸಿದರಂದು ನೋಡಾ. ಶ್ರೀಶೈಲ ಚೆನ್ನಮಲ್ಲಿಕಾರ್ಜುನನ ಒಲಿವ ವಿಭೂತಿ.
--------------
ಅಕ್ಕಮಹಾದೇವಿ
ಹುಟ್ಟದ ಯೋನಿಯಲ್ಲಿ ಹುಟ್ಟಿಸಿ, ಬಾರದ ಭವಂಗಳಲ್ಲಿ ಬರಿಸಿ, ಉಣ್ಣದ ಊಟವನುಣಿಸಿ ವಿಧಿಗೊಳಗಾಗಿಸುವ ಕೇಳಿರಣ್ಣಾ. ತನ್ನವರೆಂದಡೆ ಮನ್ನಿಸುವನೆ ಹತ್ತರಿದ್ದ ಭೃಂಗಿಯ ಚರ್ಮವ ಕಿತ್ತೀಡಾಡಿಸಿದವನು ಮತ್ತೆ ಕೆಲಂಬರ ಬಲ್ಲನೆ? ಇದನರಿತು ಬಿಡದಿರು ಬಿಡದಿರು. ಚೆನ್ನಮಲ್ಲಿಕಾರ್ಜುನನಿಂತಹ ಸಿತಗನವ್ವಾ.
--------------
ಅಕ್ಕಮಹಾದೇವಿ
ಹರನೆ ನೀನೆನಗೆ ಗಂಡನಾಗಬೇಕೆಂದು ಅನಂತಕಾಲ ತಪಸ್ಸಿದ್ದೆ ನೋಡಾ. ಹಸೆಯಮೇಲಣ ಮಾತ ಬೆಸಗೊಳಲಟ್ಟಿದಡೆ, ಶಶಿಧರನ ಹತ್ತಿರಕೆ ಕಳುಹಿದರೆಮ್ಮವರು. ಭಸ್ಮವನೆ ಹೂಸಿ, ಕಂಕಣವನೆ ಕಟ್ಟಿದರು ಚೆನ್ನಮಲ್ಲಿಕಾರ್ಜುನ ತನಗೆ ನಾನಾಗಬೇಕೆಂದ.
--------------
ಅಕ್ಕಮಹಾದೇವಿ
ಹೋದೆನೂರಿಗೆ, ಇದ್ದೆ ನಾನಲ್ಲಿ, ಹೋದಡೆ ಮರಳಿತ್ತ ಬಾರೆನವ್ವಾ. ಐವರು ಭಾವದಿರು, ಐವರು ನಗೆವೆಣ್ಣು ಈ ಐವರು ಕೂಡಿ ಎನ್ನ ಕಾಡುವರು ಬೈವರು ಹೊಯ್ವರು ಮಿಗೆ ಕೇಡನುಡಿವರು. ಇವರೈವರ ಕಾಟಕ್ಕೆ ನಾನಿನ್ನಾರೆ ಕಂಡವ್ವಾ. ಅತ್ತೆ ಮಾವ ಮೈದುನ ನಗೆವೆಣ್ಣು, ಚಿತ್ತವನೊರೆದು ನೋಡುವ ಗಂಡ. ಕತ್ತಲೆಯಾದಡೆ ಕರೆದನ್ನವ ನೀಡವ್ವಾ, ಅತ್ತಿಗೆ ಹತ್ತೆಂಟ ನುಡಿವಳಮ್ಮಮ್ಮ ತಾಯೆ. ಉಪಮಾತೀತರು ಬಂಧುಬಳಗಂಗಳು. ಶ್ರೀಶೈಲ ಚೆನ್ನಮಲ್ಲಿಕಾರ್ಜುನ ಒಲಿದಡೆ ಮರಳಿ ಬಾರೆನಮ್ಮ ತಾಯೆ.
--------------
ಅಕ್ಕಮಹಾದೇವಿ