ಅಥವಾ
(52) (19) (6) (1) (11) (4) (0) (0) (26) (0) (1) (12) (1) (0) ಅಂ (10) ಅಃ (10) (56) (0) (14) (1) (0) (6) (0) (6) (0) (0) (0) (0) (0) (0) (0) (21) (0) (5) (2) (26) (16) (1) (20) (10) (28) (0) (2) (0) (13) (10) (8) (0) (24) (30) (0)

ಪದದಿಂದ ಪ್ರಾರಂಭವಾಗುವ ವಚನಗಳು:

ಜಂಗಮವೆನ್ನ ಪ್ರಾಣ, ಜಂಗಮವೆನ್ನ ಜೀವ, ಜಂಗಮವೆನ್ನ ಪುಣ್ಯದ ಫಲ, ಜಂಗಮವೆನ್ನ ನಿಧಿನಿಧಾನ, ಜಂಗಮವೆನ್ನ ಹರುಷದ ಮೇರೆ. ಚೆನ್ನಮಲ್ಲಿಕಾರ್ಜುನಾ, ಜಂಗಮದ ತಿಂಥಿಣಿಯಲ್ಲಿ ಓಲಾಡುವೆನು.
--------------
ಅಕ್ಕಮಹಾದೇವಿ
ಜಾಲಗಾರನೊಬ್ಬ ಜಲವ ಹೊಕ್ಕು ಶೋಧಿಸಿ, ಹಲವು ಪ್ರಾಣಿಯ ಕೊಂದು, ನಲಿನಲಿದಾಡುವ. ತನ್ನ ಮನೆಯಲೊಂದು ಶಿಶು ಸತ್ತಡೆ ಅದಕ್ಕೆ ಮರುಗುವಂತೆ ಅವಕೇಕೆ ಮರುಗ ? ಅದೆಂತೆಂದಡೆ 'ಸ್ವಾತ್ಮಾನಮಿತರಂ ಚೇತಿ ಭಿನ್ನತಾ ನೈವ ದೃಶ್ಯತಾಂ ಸರ್ವಂ ಚಿಜ್ಜ್ಯೋತಿರೇವೇತಿ ಯಃ ಪಶ್ಯತಿ ಸ ಪಶ್ಯತಿ' ಎಂದುದಾಗಿ, ಜಾಲಗಾರನ ದುಃಖ ಜಗಕೆಲ್ಲ ನಗೆಗೆಡೆ. ಇದು ಕಾರಣ, ಚೆನ್ನಮಲ್ಲಿಕಾರ್ಜುನಯ್ಯನ ಭಕ್ತನಾಗಿರ್ದು ಜೀವಹಿಂಸೆ ಮಾಡುವ ಮಾದಿಗರನೇನೆಂಬೆನಯ್ಯಾ ?
--------------
ಅಕ್ಕಮಹಾದೇವಿ
ಜಲದ ಮಂಟಪದ ಮೇಲೆ ಉರಿಯ ಚಪ್ಪರವನಿಕ್ಕಿ, ಆಲಿಕಲ್ಲ ಹಸೆಯ ಹಾಸಿ ಬಾಸಿಗವ ಕಟ್ಟಿ, ಕಾಲಿಲ್ಲದ ಹೆಂಡತಿಗೆ ತಲೆಯಿಲ್ಲದ ಗಂಡ ಬಂದು ಮದುವೆಯಾದನು. ಎಂದೆಂದೂ ಬಿಡದ ಬಾಳುವೆಗೆ ಕೊಟ್ಟರೆನ್ನ. ಚೆನ್ನಮಲ್ಲಿಕಾರ್ಜುನನೆಂಬ ಗಂಡಂಗೆನ್ನ ಮದುವೆಯ ಮಾಡಿದರೆಲೆ ಅವ್ವಾ.
--------------
ಅಕ್ಕಮಹಾದೇವಿ
ಜ್ಞಾನದ ಕಾರಣಾಂಗವೆ ಭಕ್ತಿಯು. ಭಕ್ತಿಯ ಮಹಾಕಾರಣಾಂಗವೆ ಜ್ಞಾನವು. ಭಕ್ತಿ ಜ್ಞಾನವೆಂಬುದು ಕಾಕಾಕ್ಷಿಯಂತೆ. ಭಕ್ತಿ ಜ್ಞಾನವೆಂಬುದು ಎನ್ನ ಮೋಹದ ಚೆನ್ನಮಲ್ಲಿಕಾರ್ಜುನಾ ನಿಮ್ಮಂತೆ.
--------------
ಅಕ್ಕಮಹಾದೇವಿ
ಜೀವೇಶ್ವರಗಾಶ್ರಯವಾದ ಸೂಕ್ಷ್ಮದೇಹಮಧ್ಯದಲ್ಲಿ ಷಟ್‍ಚಕ್ರಂಗಳಲ್ಲಿ ಹುಟ್ಟಿರ್ದ ಷಟ್ಕಮಲಂಗಳನು ಆಧಾರ ತೊಡಗಿ ಆಜ್ಞಾಚಕ್ರವೇ ಕಡೆಯಾಗುಳ್ಳ ಬ್ರಹ್ಮಾದಿಗಳ ಸ್ಥಾನಂಗಳ ಗುರೂಪದೇಶದಿಂದೆ ಭಾವಿಸುವುದು. ಆಜ್ಞಾಚಕ್ರದತ್ತಣಿಂದೆ ಊರ್ಧ್ವ ಭಾಗವಾದ ಬ್ರಹ್ಮರಂಧ್ರದಲ್ಲಿಯಾಯಿತ್ತಾದಡೆ ಸಹಸ್ರದಳ ಕಮಲವನು ಭಾವಿಸುವುದು. ಆ ಸಹಸ್ರದಳ ಕಮಲದಲ್ಲಿ ನಿರ್ಮಲವಾದ ಚಂದ್ರಮಂಡಲವನು ಧ್ಯಾನಿಸುವುದು. ಆ ಚಂದ್ರಮಂಡಲದ ಮಧ್ಯದಲ್ಲಿ ವಾಲಾಗ್ರ ಮಾತ್ರದೋಪಾದಿಯಲ್ಲಿ ಪರಮ ಸೂಕ್ಷ್ಮರಂಧ್ರವನು ಉಪದೇಶದಿಂದರಿವುದು. ಆ ಸೂಕ್ಷ್ಮರಂಧ್ರವನೆ ಕೈಲಾಸಸ್ಥಾನವಾಗಿ ಅರಿದು ಆ ಕೈಲಾಸದಲ್ಲಿ ಇರುತಿರ್ದ ಪರಮೇಶ್ವರನನು ಸಮಸ್ತ ಕಾರಣಂಗಳಿಗೆ ಕಾರಣವಾಗಿದ್ದಾತನಾಗಿ ಧ್ಯಾನಿಸುವುದಯ್ಯಾ ಶ್ರೀ ಚೆನ್ನಮಲ್ಲಿಕಾರ್ಜುನದೇವಾ.
--------------
ಅಕ್ಕಮಹಾದೇವಿ
ಜಂಗಮದ ಕೈ ಹೊಯ್ದು ಹೊಯ್ದು ನಕ್ಕು ಕೆಟ್ಟರಯ್ಯ ? ಸರಸದಲ್ಲಿ ಮುಟ್ಟಿ ಪೂಜಿಸುವರೆ ನಿಮಗೆ ಲಿಂಗವಿಲ್ಲ. ಹುತ್ತಿನೊಳಗೆ ಕೈಯನಿಕ್ಕೆ ಸರ್ಪದಷ್ಟವಾದರೆ ಮತ್ತೆ ಗಾರುಡವುಂಟೆ ಚೆನ್ನಮಲ್ಲಿಕಾರ್ಜುನಾ ?
--------------
ಅಕ್ಕಮಹಾದೇವಿ