ಅಥವಾ

ಒಟ್ಟು 52 ಕಡೆಗಳಲ್ಲಿ , 22 ವಚನಕಾರರು , 51 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸರ್ವವೂ ಶಿವನಿಂದ ಉದ್ಭವಿಸುವವೆಂದರೆ, ಉದ್ಭವಿಸುವವೆಲ್ಲವೂ ಶಿವನೆ? ಸಕಲ ಬೀಜವ ಬಿತ್ತುವನೊಕ್ಕಲಿಗನೆಂದರೆ ಆ ಬೆಳೆ ತಾನೊಕ್ಕಲಿಗನೆ? ಮಡಕೆಯ ಕುಂಬಾರ ಮಾಡುವನೆಂದರೆ, ಆ ಮಡಕೆ ತಾ ಕುಂಬಾರನೆ? ಕಬ್ಬುನವ ಕಮ್ಮಾರ ಮಾಡುವನೆಂದರೆ, ಆ ಕಬ್ಬುನ ತಾ ಕಮ್ಮಾರನೆ? ಆ ಪರಿಯಲಿ ಸಕಲ ಜಗತ್ತಿನ ಸಚರಾಚರವನು ಮಾಡುವನೆಂದರೆ, ಆ ಸಚರಾಚರವು ಶಿವನೆ? ಅಹಂಗಾದರೆ ಅಷ್ಟಾದಶವರ್ಣವೇಕಾದವು? ಚೌರಾಸಿಲಕ್ಷ ಜೀವರಾಶಿಗಳೇಕಾದವು? ಸುಖ-ದುಃಖ ಸ್ವರ್ಗ-ನರಕಂಗಳೇಕಾದವು? ಉತ್ತಮ-ಮಧ್ಯಮ-ಕನಿಷ್ಠಂಗಳೇಕಾದವು? ಪುಣ್ಯ-ಪಾಪ, ಭವಿ-ಭಕ್ತರೆಂದೇಕಾದವು? ಇದು ಕಾರಣ ಸದಾಚಾರ ಸದ್ಭಕ್ತಿಯಲ್ಲಿಪ್ಪಾತನೆ ಶಿವ. ಅಂತಲ್ಲದೆ ಸರ್ವವೂ ಶಿವನೆಂದರೆ ಅಘೋರ ನರಕ ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ತೆರಹಿಲ್ಲದ ಮಹಾಘನ ಪರಿಪೂರ್ಣ ಲಿಂಗಭರಿತವೆಂದೇ ಭಾವಿಸಿ, ಪೂಜಿಸಿ, ಮರಳಿ ಬಿದ್ದಿತ್ತು ಕೆಡೆಯಿತ್ತು ಎಂಬ ಅಜಾÕನವ ನೋಡಾ ! ತೆರಹಿಲ್ಲದ ಪರಿಪೂರ್ಣ ಲಿಂಗವು, ಬೀಳಲಿಕ್ಕೆ ತೆರಹುಂಟೆ ? ಅರಿಯರು ಪ್ರಾಣಲಿಂಗದ ನೆಲೆಯನು. ಅರಿಯದೆ ಅಜಾÕನದಲ್ಲಿ ಕುರುಹು ಬಿದ್ದಿತ್ತೆಂದು ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗ? ನೋಡಾ ! ಅರದು ಕೂಡಿ ಸ್ವಯವಾಗಿರ್ದ ಲಿಂಗವು ಓಕರಿಸಿತ್ತೆಂದು ಆ ಲಿಂಗದೊಡನೆ ಪ್ರಾಣಘಾತವ ಮಾಡಿಕೊಂಡು ಸಾವ ಅಜಾÕನಿಗಳಿಗೆ ಅಘೋರ ನರಕ ತಪ್ಪದು ಕಾಣಾ_ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಅಯ್ಯ, ಪರಮಸಚ್ಚಿದಾನಂದಮಂತ್ರಮೂರ್ತಿ ಜಂಗಮದೇವನು ಪ್ರಮಥಗಣಾರಾಧ್ಯ ಭಕ್ತಮಾಹೇಶ್ವರರೊಪ್ಪಿಗೆಯಿಂದ ನಿರಂಜನಜಂಗಮಕ್ಕೆ ಉಪರಿಸಿಂಹಾಸನ ಮಾಡಿ, ಮುಹೂರ್ತಮಾಡಿದ ಮೇಲೆ ಷಡಕ್ಷರಮಂತ್ರಸ್ವರೂಪವಾದ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಮಧ್ಯದಲ್ಲಿ ಮೂರ್ತಿಗೊಂಡಿರುವ ಈಶಾನ್ಯಕಲಶ ಮೊದಲಾಗಿ ಪಂಚಕಲಶಂಗಳಿಗೆ ಜಂಗಮದೀಕ್ಷಾಪಾದೋದಕವ ತುಂಬಿ, ಮಂಟಪಷಟ್ಸಮ್ಮಾರ್ಜನೆ, ಷಡ್ವಿಧ ವರ್ಣದ ರಂಗಮಾಲೆ, ನವಧಾನ್ಯ, ನವಸೂತ್ರ, ವಿಭೂತಿವಿಳ್ಯೆ, ಸುವರ್ಣಕಾಣಿಕೆ, ಪಂಚಮುದ್ರೆ, ಅಷ್ಟವಿಧ ಷೋಡಶೋಪಚಾರಂಗಳಿಂದೊಪ್ಪುವ ಸದ್ಯೋಜಾತ, ವಾಮದೇವ, ಅಘೋರ, ತತ್ಪುರುಷ, ಈಶಾನ ಕಲಶಮೂರ್ತಿಗಳ ಪಶ್ಚಿಮಭಾಗದಲ್ಲಿ ಜಂಗಮಪಾದ ಸೋಂಕುವಂತೆ ಗುರುವು ಮುಹೂರ್ತಮಾಡಿ, ಆ ಕಲಶಂಗಳ ಸೂತ್ರವ ತನ್ನ ಪಾದಕ್ಕೆ ಹಾಕಿ, ತನ್ನ ಚಿದ್ಬೆಳಗಿನ ಮುಂದೆ ಮೂರ್ತಿಗೊಂಡಿರುವ ಕಲಶಂಗಳ ಪೂರ್ವಭಾಗದಲ್ಲಿ ಕರಿಯಕಂಬಳಿಯ ಗರ್ದುಗೆಯ ಮಾಡಿಸಿ, ಹಸೆಯ ರಚಿಸಿ, ಆ ಗರ್ದುಗೆಯ ಮೇಲೆ ಶಿಷ್ಯೋತ್ತಮನ ಮುಹೂರ್ತವ ಮಾಡಿಸಿ, ಆತನಂಗಕ್ಕೆ ಗುರುಸೂತ್ರವ ಹಾಕಿ, ಶಿಷ್ಯನಂಗದ ಮೇಲೆ ಮೂರ್ತಿಗೊಂಡಿರುವ ಪರಶಿವಲಿಂಗವ ಗಣಸಾಕ್ಷಿಯಾಗಿ ಶ್ರೀ ಗುರುದೇವನು ತನ್ನ ಕರಸ್ಥಲದಲ್ಲಿ ಮುಹೂರ್ತವ ಮಾಡಿಸಿ, ಆ ಲಿಂಗದ ಮಸ್ತಕದ ಮೇಲೆ ನಿರಂಜನಜಂಗಮದ ಪಾದವಿಡಿಸಿ, ಆ ಪಂಚÀಕಲಶಂಗಳಲ್ಲಿ ಶೋಬ್ಥಿಸುವಂಥ ದೇವಗಂಗಾಜಲಸ್ವರೂಪವಾದ ಗುರುಪಾದೋದಕವನ್ನು ಒಂದು ಪಾತ್ರೆಯಲ್ಲಿ ಆ ಕಲಶಂಗಳೈದರಲ್ಲಿ ತೆಗೆದುಕೊಂಡು ಗುರುವಿನ ದಕ್ಷಿಣಭಾಗದಲ್ಲಿ ಮೂರ್ತಿಗೊಂಡಿರುವ ಪಾದೋದಕ ಕುಂಭದಲ್ಲಿ ಒಂದು ಬಿಂದುವ ತಗೆದುಕೊಂಡು ಆ ಪಾತ್ರೆಯಲ್ಲಿ ಹಾಕಿ, ಇವಾರುತೆರದ ಅರ್ಘೋದಕಂಗಳ ಪ್ರಮಥಗಣರಾಧ್ಯ ಭಕ್ತಮಹೇಶ್ವರರೆಲ್ಲ ಆ ಗುರುವಿನ ಹಸ್ತಕಮಲದಲ್ಲಿರುವಂಥ ಉದಕವನ್ನು ತೆಗೆದುಕೊಂಡು, ಶರಣಸತಿ ಲಿಂಗಪತಿಯಾಗಿ ಒಪ್ಪುವ ಶಿಷ್ಯೋತ್ತಮನ ಮಸ್ತಕದಮೇಲೆ ಮಂತ್ರಧ್ಯಾನದಿಂದ ಸಂಪ್ರೋಕ್ಷಣೆಯ ಮಾಡುವಂಥಾದೆ ಕಲಶಾಬ್ಥಿಷೇಕದೀಕ್ಷೆ. ಇಂತುಟೆಂದು ಶ್ರೀಗುರು ನಿಷ್ಕಳಂಕ ಚನ್ನಬಸವರಾಜೇಂದ್ರನು ನಿರ್ಲಜ್ಜಶಾಂತಲಿಂಗದೇಶಿಕೋತ್ತಮಂಗೆ ನಿರೂಪಮಂ ಕೊಡುತಿರ್ದರು ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಎರದೆಲೆಯಂತೆ ಒಳಗೊಂದು ಹೊರಗೊಂದಾದಡೆ ಮೆಚ್ಚುವನೆ ಬಾರದ ಭವಂಗಳ ಬರಿಸುವನಲ್ಲದೆ ಮೆಚ್ಚುವನೆ ಅಘೋರ ನರಕವನುಣಿಸುವನಲ್ಲದೆ ಮೆಚ್ಚುವನೆ ! ಉಡುವಿನ ನಾಲಗೆಯಂತೆ ಎರಡಾದಡೆ ಕೂಡಲಸಂಗಯ್ಯ ಮೆಚ್ಚುವನೆ 102
--------------
ಬಸವಣ್ಣ
ಭಕ್ತ ಮಹೇಶ್ವರರು ಆರಾದರೂ ಆಗಲಿ ಶಿವಗಣಂಗಳಲ್ಲಿ ಕುಲವನರಸಿದರೆ ಅವರು ಕುಲಸೂತಕರೆಂದು ಶಿವನು ಯಮನ ಕೈಯಲ್ಲಿ ಕೊಟ್ಟು ಅಘೋರ ನರಕದೊಳು ಹಾಕೆಂದನು ಕಾಣಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಹರಗುರುವಾಕ್ಯ ಪ್ರಮಾಣವರಿಯದೆ ಅಜ್ಞಾನವಾವರಿಸಿ ವಾರ ತಿಥಿಯೆಂದು, ಸಂಕ್ರಾಂತಿ ಅಮವಾಸ್ಯೆಯೆಂದು ನೇಮಿಸಿ, ಮಾಡಿ ನೀಡಿ ಕರ್ಮ ಕಳೆದೆನೆಂಬ ವರ್ಮಗೇಡಿಗಳ ನೋಡಾ! ಮತ್ತೊಂದು ವೇಳೆ ಜಂಗಮ ಮನೆಗೆ ಬಂದರೆ ಅಡ್ಡಮೋರೆಯಿಕ್ಕುವ ಗೊಡ್ಡು ಮಾದಿಗರ ಶಿವಭಕ್ತರೆಂದರೆ ಅಘೋರ ನರಕವೈ ಗುರುನಿರಂಜನ ಚನ್ನಬಸವಲಿಂಗಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ಶಿವಂಗೆ ಪಂಚಮುಖವೆಂಬುದ ಮೂಲೋಕವೆಲ್ಲ ಬಲ್ಲುದು; ನರಂಗೆ ಪಂಚಮುಖವೆಂಬುದ ಆರೂ ಅರಿಯರು. ಮುಂಭಾಗವದು ಸದ್ಯೋಜಾತ, ಬಲಭಾಗವದು ತತ್ಪುರುಷ, ಎಡಭಾಗವದು ಅಘೋರ, ಹಿಂಭಾಗವದು ವಾಮದೇವ, ಮಧ್ಯಭಾಗವದು ಕಪಿಲಸಿದ್ಧಮಲ್ಲಿಕಾರ್ಜುನನ ಈಶಾನ್ಯಮುಖ ನೋಡಾ, ಕಲ್ಲಯ್ಯಾ.
--------------
ಸಿದ್ಧರಾಮೇಶ್ವರ
ಇನ್ನು ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆ ಎಂಬ ಪಂಚ ವಿಭೂತಿ ಉತ್ಪತ್ಯವೆಂತೆಂದಡೆ : ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂಬ ಪಂಚಮುಖದಲ್ಲಿ, ಪೃಥ್ವಿ ಅಪ್ಪು ತೇಜ ವಾಯು ಆಕಾಶ ಉತ್ಪತ್ಯವಾಯಿತ್ತು. ಆ ಪೃಥ್ವಿಯಪ್ಪುತೇಜವಾಯುವಾಕಾಶದಿಂದಲ್ಲಿ ನಿವೃತ್ತಿ ಪ್ರತಿಷ್ಠೆ ವಿದ್ಯಾ ಶಾಂತಿ ಶಾಂತ್ಯಾತೀತಯೆಂಬ ಪಂಚಕಲೆಗಳುತ್ಪತ್ಯವಾಯಿತ್ತು. ಆ ಪಂಚಕಲೆಗಳಿಂದ ನಂದೆ ಭದ್ರೆ ಸುರಬ್ಥಿ ಸುಶೀಲೆ ಸುಮನೆಯೆಂಬ ಪಂಚಗೋವುಗಳುತ್ಪತ್ಯವಾಯಿತ್ತು. ಆ ಪಂಚಗೋವುಗಳ ಗೋಮಯದಲ್ಲಿ ವಿಭೂತಿ ಭಸಿತ ಭಸ್ಮಕ್ಷಾರ ರಕ್ಷೆಯೆಂಬ ಪಂಚವಿಭೂತಿ ಉತ್ಪತ್ಯವಾಯಿತ್ತು. ಇದಕ್ಕೆ ಜಾಬಾಲೋಪನಿಷತ್ : ``ಸದ್ಯೋಜಾತಾತ್ ಪೃಥಿವೀ ತಸ್ಯಾ ನಿವೃತ್ತಿಃ ತಸ್ಯಾಃ ಕಪಿಲವರ್ಣಾ ನಂದಾ ತಸ್ಯಾಃ ಗೋಮಯೇನ ವಿಭೂತಿರ್ಜಾತಾ || ವಾಮದೇವಾದುದಕಂ ತಸ್ಮಾತ್ ಪ್ರತಿಷ್ಠಾ ತಸ್ಯಾಃ ಕೃಷ್ಣವರ್ಣಾ ಭದ್ರಾ ತಸ್ಯಾಃ ಗೋಮಯೇನ ಭಸಿತಂ ಜಾತಂ || ಅಘೋರಾದ್ವಹ್ನಿಃ ತಸ್ಮಾತ್ ವಿದ್ಯಾ ತಸ್ಯಾಃ ರಕ್ತವರ್ಣಾ ಸುರಬ್ಥೀ ತಸ್ಯಾಃ ಗೋಮಯೇನ ಭಸ್ಮ ಜಾತಂ || ತತ್ಪುರುಷಾತ್ ವಾಯುಃ ತಸ್ಮಾತ್ ಶಾಂತಿ ಃ ತಸ್ಯಾಃ ಶ್ವೇತವರ್ಣಾ ಸುಶೀಲಾ ತಸ್ಯಾಃ ಗೋಮಯೇನ ಕ್ಷಾರಂ ಜಾತಂ || ಈಶಾನಾದಾಕಾಶಃ ತಸ್ಮಾತ್ ಶಾಂತ್ಯತೀತಾ ತಸ್ಯಾಃ ಚಿತ್ರವರ್ಣಾ ಸುಮನಾಃ ತಸ್ಯಾಃ ಗೋಮಯೇನ ರಕ್ಷಾ ಜಾತಾ ||'' ``ಐಶ್ವರ್ಯಕಾರಣಾತ್ ಭೂತಿಃ, ಭಾಸನಾತ್ ಭಸಿತಂ, ಸರ್ವಾಘಭಕ್ಷಣಾತ್ ಭಸ್ಮಂ, ಅಪದಾಂ ಕ್ಷರಣಾತ್ ಕ್ಷಾರಂ, ಭೂತಪ್ರೇತಪಿಶಾಚಬ್ರಹ್ಮರಾಕ್ಷಸಾಪಸ್ಮಾರ ಭವಬ್ಥೀತಿಭ್ಯೋsಬ್ಥಿರಕ್ಷಣಾತ್ ರಕ್ಷೇತಿ ||'' ಇಂತೆಂದುದು ಶ್ರುತಿ. ಇದಕ್ಕೆ ಕ್ರಿಯಾಸಾರೇ : ``ವಿಭೂತಿರ್ಭಸಿತಂ ಭಸ್ಮ ಕ್ಷಾರಂ ರಕ್ಷೇತಿ ಭಸ್ಮನಃ | ಭವಂತಿ ಪಂಚ ನಾಮಾನಿ ಹೇತು ರಕ್ಷಣಾದ್ರಕ್ಷೇತಿ ||'' ಇಂತೆಂದುದು ಶ್ರುತಿ. ``ಪಂಚಬ್ಥಿಃಬೃಷಂ ಐಶ್ವರ್ಯಕಾರಣಾದ್ಭೂತಿ, ಭಸ್ಮ ಸರ್ವಾಘಭಕ್ಷಣಾತ್, ಭಾಸನಾತ್ ಭಸಿತಂ, ತತ್ವಾ ಕ್ಷರಣಾತ್‍ಕ್ಷಾರಮಾಪದಂ, ಭೂತಪ್ರೇತಪಿಶಾಚೇಭ್ಯೋ ಸ್ವರ್ಗಹೇತುಭ್ಯೋಬ್ಥಿರಕ್ಷಣಾತ್ ರಕ್ಷಾ ಸ್ಯಾತ್ ಕ್ರೂರಸರ್ಪೇಭ್ಯೋ ವ್ಯಾಘ್ರಾದಿಭ್ಯಶ್ಚ ಸರ್ವದಾ ||'' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನ್ಯವೆಂಬ ಐವರನೆತ್ತಿ ನುಂಗಿದ ಅವಿರಳ ಪರಬ್ರಹ್ಮ ನೋಡಾ. ಆ ಪರಬ್ರಹ್ಮವ ನುಂಗಿದನು ನಿರವಯ. ನಿರವಯವ ನುಂಗಿದ ನಿರಾಳ. ನಿರಾಳವ ನುಂಗಿದ ನಿತ್ಯ ನಿರಂಜನ ಪರವಸ್ತು ನೋಡಾ. ಇವರೆಲ್ಲರ ನುಂಗಿದ ಪರವಸ್ತು ಎನ್ನ ನುಂಗಿತ್ತಾಗಿ, ಆ ಪರವಸ್ತುವ ನಾನು ನುಂಗಿದೆನಾಗಿ, ನಿಃಶಬ್ದಮಯವಾಯಿತ್ತು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಅರಮನೆಯ ಕೂಳನಾದಡೆಯು ತಮ್ಮುದರದ ಕುದಿಹಕ್ಕೆ ಲಿಂಗಾರ್ಪಿತವೆಂದೆಡೆ ಅದು ಲಿಂಗಾರ್ಪಿತವಲ್ಲ ಆನರ್ಪಿತ. ಅದೆಂತೆಂದೆಡೆ : ಅರ್ಪಿತಂಚ ಗುರೋರ್ವಾಕ್ಯಂ ಕಿಲ್ಬಿಷಸ್ಯ ಮನೋ[s]ರ್ಪಿತಂ ಅನರ್ಪಿತಸ್ಯ ಭುಂಜಿಯಾನ್ ರೌರವಂ ನರಕಂ ವ್ರಜೇತ್ ಎಂದುದಾಗಿ ತನ್ನ ಒಡಲಕಕ್ಕುಲತೆಗೆ ಆಚಾರವನನುಸರಿಸಿ ಭವಿಶೈವ ದೈವ ತಿಥಿವಾರಂಗಳ ಹೆಸರಿನಲ್ಲಿ ಅಟ್ಟಿ ಕೂಳತಂದು ತಮ್ಮ ಇಷ್ಟಲಿಂಗಕ್ಕೆ ಕೊಟ್ಟು ಹೊಟ್ಟೆಯ ಹೊರೆವ ಆಚಾರಭ್ರಷ್ಟ ಪಂಚಮಹಾಪಾತಕರಿಗೆ ಗುರುವಿಲ್ಲ ಲಿಂಗವಿಲ್ಲ ಜಂಗಮವಿಲ್ಲ ಪಾದೋದಕವಿಲ್ಲ ಪ್ರಸಾದವಿಲ್ಲ, ಪ್ರಸಾದವಿಲ್ಲವಾಗಿ ಮುಕ್ತಿಯಿಲ್ಲ. ಮುಂದೆ ಅಘೋರ ನರಕವನುಂಬರು. ಇದನರಿದು ನಮ್ಮ ಬಸವಣ್ಣನು ತನುವಿನಲ್ಲಿ ಆಚಾರಸ್ವಾಯತವಾಗಿ. ಮನದಲ್ಲಿ ಅರಿವು ಸಾಹಿತ್ಯವಾಗಿ ಪ್ರಾಣದಲ್ಲಿ ಪ್ರಸಾದ ಸಾಹಿತ್ಯವಾಗಿ ಇಂತೀ ತನು-ಮನ-ಪ್ರಾಣಂಗಳಲ್ಲಿ ಸತ್ಯ ಸದಾಚಾರವಲ್ಲದೆ ಮತ್ತೊಂದನರಿಯದ ಭಕ್ತನು ಭವಿಶೈವ ದೈವ ತಿಥಿ ಮಾಟ ಕೂಟಂಗಳ ಮನದಲ್ಲಿ ನೆನೆಯ. ತನುವಿನಲ್ಲಿ ಬೆರಸ ಭಾವದಲ್ಲಿ ಬಗೆಗೊಳ್ಳ ಏಕಲಿಂಗ ನಿಷ್ಠಾಪರನು ಪಂಚಾಚಾರಯುಕ್ತನು ವೀರಶೈವ ಸಂಪನ್ನ ಸರ್ವಾಂಗಲಿಂಗಿ ಸಂಗನಬಸವಣ್ಣನು ಈ ಅನುವ ಎನಗೆ ಅರುಹಿಸಿ ತೋರಿದ ಕಾರಣ ನಾನು ಬದುಕಿದೆನು ಕಾಣಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
ಸದ್ಯೋಜಾತ ವಾಮದೇವ ಅಘೋರ ತತ್ಪುರುಷ ಈಶಾನವೆಂದು ಶಿವಲಿಂಗದ ಮೇಲೆ ಪಂಚವಕ್ತ್ರವ ಸ್ಥಾಪಿಸುವ ಅನಾಚಾರಿಯ ಮಾತ ಕೇಳಲಾಗದು. ಇಂತಪ್ಪ ಲಿಂಗದ್ರೋಹಿಯ ತೋರದಿರಯ್ಯಾ, ಸಕಲ ನಿಃಕಲದಂತಹನೆ ಲಿಂಗವು ? ಕೂಡಲಚೆನ್ನಸಂಗಯ್ಯನಲ್ಲಿ ಸರ್ವಾಂಗಲಿಂಗಿ ಬಸವಣ್ಣ ಬಲ್ಲ.
--------------
ಚನ್ನಬಸವಣ್ಣ
ಅಂಗದ ಮೇಲೆ ಲಿಂಗಸಾಹಿತ್ಯವನುಳ್ಳ ಭಕ್ತಾಂಗನೆಯರು ತಮ್ಮ ಲಿಂಗಶರೀರಂಗ? ಮಧ್ಯದಲ್ಲಿ ಹರಭಕ್ತಿಗೆ ಹೊರಗಾದ ಅಸು[ರಾಂಶಿ] ಕವಪ್ಪ ಹಸುರು ಹಚ್ಚೆಗಳೆಂಬ ಪತಿತ ಲೇಖನ ಇವಾದಿಯಾದ ಅನ್ಯ ಚಿಹ್ನೆಗಳನು ಅಂಕಿತಧಾರಣ ಲೇಖನಂಗ? ಮಾಡಿಕೊಂಡು ಮತ್ತೆ ತಾವು ಲಿಂಗವನರ್ಚಿಸಿ ಭಕ್ತರಾದೆವೆಂಬ ಈ ಭಂಗಮಾರಿ ಹೊಲೆಜಂಗುಳಿಗಳಿಗೆ ಉಪದೇಶವ ಕೊಟ್ಟ ಗುರು, ಪ್ರಸಾದ ನೀಡುವ ಜಂಗಮ, ಅವರಗೊಡಗೂಡಿಕೊಂಡು ನಡೆವ ಭಕ್ತತತಿ ಈ ಚತುರ್ವಿಧರು ಶ್ವಪಚಗೃಹದ ಶ್ವಾನಯೋನಿಗಳಲ್ಲಿ ಶತಸಹಸ್ರ ವೇಳೆ ಬಂದು ನರಕವಿಪ್ಪತ್ತೆಂಟುಕೋಟಿಯನೈದುವರು, ಅದೆಂತೆಂದೊಡೆ: ``ಭಕ್ತನಾರೀ ಸ್ವಯಾಂಗೇಷು ಪತಿತಾದ್ಯನ್ಯ ಚಿಹ್ನೆಯೇತ್ ಲೇಖನಾಂಕಂ ಯದಿ ಕೃತ್ವಾ ತೇ[s]ಪಿ ಸ್ತ್ರೀ ಪತಿತ ಸ್ತ್ರೀಣಾಂ ತಸ್ಯೋಪದೇಶಶೇಷಂಚ ದತ್ವಾಶ್ಚೈ ಗುರುಃ ಚರಾನ್ ತಪತ್ಸಂಗ ಸಯೋದ್ಭಕ್ತಾ ತದಾದಿ ಚತುರಾನ್ವಯಂ ಶ್ವಾನಯೋನಿ ಶತಂ ಗತ್ವಾ ಚಾಂಡಾಲಗೃಹಮಾಚರೇತ್ ಅಷ್ಟವಿಂಶತಿಕೋಟ್ಯಸ್ತು ನರಕಂ ಯಾತಿ ಸಧ್ರುವಂ ಇಂತೆಂದುದಾಗಿ ಇದು ಕಾರಣ ಇಂತಪ್ಪ ಅನಾಚಾರಿಗಳನು ಕೂಡಲಚೆನ್ನಸಂಗಯ್ಯ ಅಘೋರ ನರಕದಲ್ಲಿಕ್ಕುವ.
--------------
ಚನ್ನಬಸವಣ್ಣ
ಹಾಲಹಿಡಿದು ಬೆಣ್ಣೆಯನರಸಲುಂಟೆ ? ಲಿಂಗವಹಿಡಿದು ಪುಣ್ಯತೀರ್ಥಕ್ಕೆ ಹೋಗಲುಂಟೆ ? ಲಿಂಗದ ಪಾದತೀರ್ಥ ಪ್ರಸಾದವ ಕೊಂಡು ಅನ್ಯಬೋಧೆ ಅನ್ಯಶಾಸ್ತ್ರಕ್ಕೆ ಹಾರೈಸಲೇತಕ್ಕೆ ? ಇಷ್ಟಲಿಂಗವಿದ್ದಂತೆ ಸ್ಥಾವರಲಿಂಗಕ್ಕೆ ಶರಣೆಂದೆನಾದಡೆ ತಡೆಯದೆ ಹುಟ್ಟಿಸುವನು ಶ್ವಾನನ ಗರ್ಭದಲ್ಲಿ. ಅದೆಂತೆಂದಡೆ ಶಿವಧರ್ಮಪುರಾಣದಲ್ಲಿ 'ಇಷ್ಟಲಿಂಗಮವಿಶ್ವಸ್ಯ ತೀರ್ಥಲಿಂಗಸ್ಯ ಪೂಜಕಃ ೀ ಶ್ವಾನಯೋನಿಶತಂ ಗತ್ವಾ ಚಾಂಡಾಲಗೃಹಮಾಚರೇತ್' ||ú ಎಂದುದಾಗಿ, ಇದನರಿದು ಗುರು ಕೊಟ್ಟ ಲಿಂಗದಲ್ಲಿಯೆ ಎಲ್ಲಾ ತೀರ್ಥಂಗಳೂ ಎಲ್ಲಾ ಕ್ಷೇತ್ರಂಗಳೂ ಇದ್ದಾವೆಂದು ಭಾವಿಸಿ ಮುಕ್ತರಪ್ಪುದಯ್ಯಾ. ಇಂತಲ್ಲದೆ ಗುರು ಕೊಟ್ಟ ಲಿಂಗವ ಕಿರಿದುಮಾಡಿ, ತೀರ್ಥಲಿಂಗವ ಹಿರಿದುಮಾಡಿ ಹೋದಾತಂಗೆ ಅಘೋರ ನರಕ ತಪ್ಪದು ಕಾಣಾ ಚೆನ್ನಮಲ್ಲಿಕಾರ್ಜುನಾ.
--------------
ಅಕ್ಕಮಹಾದೇವಿ
ಸದ್ಯೋಜಾತ ವಾಮದೇವ ತತ್ಪುರುಷ ಅಘೋರ ಈಶಾನ್ಯವೆಂಬ ಪಂಚಬ್ರಹ್ಮವೇ ಮೊದಲಾದ ಪಂಚಮುಖದ ರುದ್ರಾಕ್ಷಿ. ಆ ರುದ್ರಾಕ್ಷಿಯ ಹಸ್ತ ತೋಳು ಕರ್ಣ ಕಂಠ ಮಸ್ತಕದಲ್ಲಿ ಧರಿಸಿಪ್ಪ ಶಿವಭಕ್ತನೇ ರುದ್ರನು. ಆತನ ದರ್ಶನದಿಂದ ಭವರೋಗ ದುರಿತ ಇರಲಮ್ಮವು ನೋಡಾ. `ಓಂ ಅತ ಏವ ರುದ್ರಾಕ್ಷಧಾರಣಾತ್ ರುದ್ರಃ' ಎಂದುದಾಗಿ ರುದ್ರಪದವಿಯನೀವ ರುದ್ರಾಕ್ಷಿಯಂ ಧರಿಸಿಪ್ಪ ಭಕ್ತರಿಗೆ ಶರಣೆಂಬೆನಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಕೇಳು ಕೇಳಾ, ಎಲೆ ಅಯ್ಯಾ, ಬಸವಣ್ಣನು ಅನಿಮಿಷಂಗೆ ಲಿಂಗವ ಕೊಟ್ಟ ಕಾರಣ ಮತ್ರ್ಯಕ್ಕೆ ಬಂದೆನೆಂಬರು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ ಜೈನ ಚಾರ್ವಾಕ ಕಾಳಾಮುಖ ಎನಿಸುವ ಷಡ್ದರ್ಶನಾಗಳು ಹೆಚ್ಚಿ, ವಿಭೂತಿ ರುದ್ರಾಕ್ಷಿ ಪಂಚಾಕ್ಷರವನರಿಯದೆ ನರಕಕ್ಕೆ ಭಾಜನವಾಗಿ ಪೋಪರೆಂದು, ದೇವರು ನಂದಿಕೇಶ್ವರನ ಮುಖವ ನೋಡಲು, ಆ ಪ್ರಶ್ನೆಯಿಂದ ಬಂದನಯ್ಯಾ ಬಸವಣ್ಣ ಪರಹಿತಾರ್ಥನಾಗಿ. ದೇವರು ದೇವಿಯರಿಗೆ ಪ್ರಣವಾರ್ಥವ ಬೋಧಿಸುವಾಗ ದೇವಿಯರ ಮುಡಿಯಲ್ಲಿ ಹೊನ್ನ ತುಂಬಿಯಾಗಿ ಷಣ್ಮುಖ ಕೇಳಿದ ಪ್ರಶ್ನೆಯಿಂದ ಬಂದನೆಂಬರಯ್ಯಾ, ಚೆನ್ನಬಸವಣ್ಣನು. ಸಟೆ ಸಟೆ! ಆ ನುಡಿಯ ಕೇಳಲಾಗದು. ಅದೇನು ಕಾರಣವೆಂದಡೆ: ಷಡ್ವಿಧಸ್ಥಲಕ್ಕೆ ಸ್ಥಾಪನಾಚಾರ್ಯನಾಗಿ ಸಕಲ ಪ್ರಮರ್ಥರ್ಗೆ ವೀರಶೈವವ ಪ್ರತಿಷೆ*ಯ ಮಾಡಲೋಸ್ಕರ ಬಂದನಯ್ಯಾ ಚೆನ್ನಬಸವಣ್ಣನು. ದೇವರ ಸಭೆಯಲ್ಲಿ ನಿರಂಜನನೆಂಬ ಗಣೇಶ್ವರನು ಮಾಯಾಕೋಳಾಹಳನೆಂದು ಹೊಗಳಿಸಿಕೊಂಡು ಬರಲಾಗಿ ಆ ಸಮಯದಲ್ಲಿ ದೇವಿಯರು ದೇವರ ಮಾಯಾಕೋಳಾಹಳನಾದ ಪರಿಯಾವುದೆಂದು ಬೆಸಗೊಳಲು, ಆ ಪ್ರಶ್ನೆಯಿಂದ ಪ್ರಭುದೇವರು ಮತ್ರ್ಯಕ್ಕೆ ಬಂದರೆಂಬರಯ್ಯಾ. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಸುಜ್ಞಾನಿ ನಿರಹಂಕಾರರ ಭಕ್ತಿಗೋಸ್ಕರ ಪ್ರತ್ಯಕ್ಷವಾಗಿ ಬಸವಾದಿ ಪ್ರಮಥರ್ಗೆ ಬೋಧಿಸಿ, ತನ್ನ ನಿಜಪದವ ತೋರಬಂದರಯ್ಯಾ ಪ್ರಭುದೇವರು. ದಕ್ಷಸಂಹಾರದಿಂದ ಬರುವಾಗ ಗುಪ್ತಗಣೇಶ್ವರನ ನಿರಿ ಸೋಂಕಲು, ಆ ಪ್ರಶ್ನೆಯಿಂದ ಬಂದನೆಂಬರಯ್ಯಾ ಮಡಿವಾಳನು. ಸಟೆ ಸಟೆ! ಆ ನುಡಿಯ ಕೇಳಲಾಗದು, ಅದೇನು ಕಾರಣವೆಂದಡೆ: ಬಿಜ್ಜಳ ಪರವಾದಿಗಳ ಸಂಹರಿಸಲೋಸ್ಕರ ಬಸವಣ್ಣನ ನಿಮಿತ್ತವಾಗಿ ಬಂದನಯ್ಯಾ ಮಡಿವಾಳ ಮಾಚಯ್ಯಗಳು. ಇಂತಿವರು ಮುಖ್ಯವಾದ ಏಳುನೂರು ಎಪ್ಪತ್ತು ಅಮರಗಣಂಗಳಿಗೆ ವಾಸನಾಧರ್ಮವೆಂದಡೆ ಅಘೋರ ನರಕ ತಪ್ಪದಯ್ಯಾ. ಇವರು ಮುಖ್ಯವಾದ ಪ್ರಮಥ ಗಣಂಗಳಿಗೆ ಶಾಪವೆಂದು ಕಲ್ಪಸಿದಡೆ, ನಾಯಕ ನರಕ ತಪ್ಪದು, ಎಲೆ ಶಿವನೆ ಕಪಿಲಸಿದ್ಧಮಲ್ಲಿಕಾರ್ಜುನ, ನಿಮ್ಮಾಣೆ
--------------
ಸಿದ್ಧರಾಮೇಶ್ವರ
ಇನ್ನಷ್ಟು ... -->