ಅಥವಾ

ಒಟ್ಟು 60 ಕಡೆಗಳಲ್ಲಿ , 31 ವಚನಕಾರರು , 57 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಟ್ಟಬಯಲಿನಲ್ಲಿ ಒಂದು ಮರ ಹುಟ್ಟಿತ್ತು. ಅದಕ್ಕೆ ಸುತ್ತಲು ಬೇರು ಆವರಿಸಿತ್ತು. ಅದಕ್ಕೆ ಶತಕೋಟಿ ಕೊನೆ ಬಿಟ್ಟಿತ್ತು. ಅಡಗಿದ ಬೇರನೆ ಸವರಿ, ಶತಕೋಟಿ ಕೊನೆಯನೆ ಕಡಿಯೆ, ಮರ ಒಣಗಿತ್ತು, ಉಲುಹು ನಿಂದಿತ್ತು, ಎಲೆ ಉದುರಿತ್ತು. ತರಗೆಲೆಯಾದ ಶರಣರ ಚರಣವಿಡಿದು ನಿಜಮುಕ್ತಳಾದೆನಯ್ಯಾ ಅಪ್ಪಣ್ಣಪ್ರಿಯ ಚೆನ್ನಬಸವಣ್ಣಾ.
--------------
ಹಡಪದಪ್ಪಣ್ಣಗಳ ಪುಣ್ಯಸ್ತ್ರೀ ಲಿಂಗಮ್ಮ
ಮಾಡಿದ ಮಾಟವನರಿಯದ ಭಕ್ತ. ಕೂಡಿದ ಕೂಟವನರಿಯದ ಭಕ್ತ. ಮಾಟ ಕೂಟವೆಂಬ ಕೋಟಲೆಯನುಳಿದ ನಿಸ್ಸಂಗತ್ವ ನಿರಾಭಾರಿ ನಿಸ್ಸೀಮ ನಿರ್ದೇಹಿ ನಿಜದಲ್ಲಿ ಅಡಗಿದ ನಿತ್ಯ ಮುಕ್ತನಯ್ಯಾ ಭಕ್ತನು, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಖಂಡಿತವಿಲ್ಲಾಗಿ ಸರ್ವಾಂಗವೂ ನಾಸಿಕವಾಯಿತ್ತು. ತಾನಲ್ಲದೆ ಅನ್ಯವಾಸನೆಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಪೃಥ್ವಿಯಡಗಿತ್ತು. ಖಂಡತವಿಲ್ಲಾಗಿ ಸರ್ವಾಂಗವೂ ಜಿಹ್ವೆಯಾಯಿತ್ತು. ತಾನಲ್ಲದೆ ಅನ್ಯ ರುಚಿಯಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಪ್ಪುವಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ನೇತ್ರವಾಯಿತ್ತು. ತಾನಲ್ಲದೆ ಅನ್ಯ ರೂಪಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ಅಗ್ನಿಯಡಗಿತ್ತು. ಖಂಡಿತವಿಲ್ಲಾಗಿ ಸರ್ವಾಂಗವೂ ಮಹಾತ್ವಕ್ಕಾಯಿತ್ತು. ತಾನಲ್ಲದೆ ಅನ್ಯಸ್ಪರ್ಶವಿಲ್ಲಾಗಿ, ಅಲ್ಲಿಯೆ ಮಹತ್ತಪ್ಪ ವಾಯುವಡಗಿತ್ತು ಖಂಡಿತವಿಲ್ಲಾಗಿ ಸರ್ವಾಂಗವೂ ಶ್ರೋತ್ರವಾಯಿತ್ತು ತಾನಲ್ಲದೆ ಅನ್ಯ ಶಬ್ದವಿಲ್ಲಾಗಿ ಅಲ್ಲಿಯ ಮಹತ್ತಪ್ಪ ಆಕಾಶವಡಗಿತ್ತು. ಇಂತು ಬ್ರಹ್ಮಾಂಡವೆ ಪಂಚಭೂತಮಯವಾದಡೆ, ಶರಣನ ಸರ್ವಾಂಗದಲ್ಲಿ ಪಂಚಬ್ರಹ್ಮಮಯವಡಗಿತ್ತು. ಅದೆ ಪಂಚವರ್ಣಾತೀತವಾದ ಮಹಾಬಯಲೊಳಗೆ ನಿಂದ ಭೇದವು. ಅದರಲ್ಲಿ ಜಗತ್ತು ಅಡಗಿದ ಭೇದವ, ಮಹತ್ತು ಮಹತ್ತನೊಳಕೊಂಡ ಭೇದವ ಏನೆಂದುಪಮಿಸುವೆನಯ್ಯಾ, ಕೂಡಲಚೆನ್ನಸಂಗಯ್ಯಾ !
--------------
ಚನ್ನಬಸವಣ್ಣ
ಕವಡೆ ಕಟಕವ ನುಂಗಿತ್ತು, ಕುಡಿಕೆ ಹಿರಿದಪ್ಪ ಮಡಕೆಯ ನುಂಗಿತ್ತು. ಅಡಕೆ ಮರನ ನುಂಗಿದ ಮತ್ತೆ ಫಲವುಂಟೆ? ಅರ್ಚನೆ ಭಕ್ತಿಯಲಡಗಿ, ಭಕ್ತಿ ಮುಕ್ತಿಯಲಡಗಿ, ಮುಕ್ತಿ ಜ್ಞಾನದಲಡಗಿ, ಜ್ಞಾನ ನಾನೆಂಬಲ್ಲಿ ಅಡಗಿದ ಮತ್ತೆ ಲಿಂಗೈಕ್ಯ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಗುರುಪೂಜೆಯ ಮಾಡುವಲ್ಲಿ ಗುರುಪೂಜೆಯಲ್ಲಿಯೇ ಮುಕ್ತರು, ಲಿಂಗಪೂಜೆಯ ಮಾಡುವಲ್ಲಿ ಲಿಂಗಪೂಜೆಯಲ್ಲಿಯೇ ಮುಕ್ತರು, ಜಂಗಮಪೂಜೆಯ ಮಾಡುವಲ್ಲಿ ಜಂಗಮಪೂಜೆಯಲ್ಲಿಯೇ ಮುಕ್ತರು. ಮೂರೊಂದಾಗಲಾಗಿ ಬೇರೊಂದಂಗವಿಲ್ಲ. ಆಗುಚೇಗೆ ಮೂರರಲ್ಲಿ ಅಡಗಿದ ಮತ್ತೆ ಅಮರೇಶ್ವರಲಿಂಗವ ಪೂಜಿಸಲಿಲ್ಲ.
--------------
ಆಯ್ದಕ್ಕಿ ಮಾರಯ್ಯ
ಅಜಕಲ್ಪನೆಗೊಳಗಾದ ಊರೊಳಗೆ ಮುನ್ನೂರು ಅರುವತ್ತು ಮಂದಿ ಅಸಾಸುರರು ನಿಚ್ಚ ನಿಚ್ಚ ಊರಿಗುಪಟಳ ಮಾಡುತ್ತಿರ್ದರಲ್ಲಯ್ಯಾ. ಅಚ್ಯುತನ ಆಜ್ಞೆಯಲ್ಲಿ ಅಡಗಿದ ಕಪಿಯೊಳಗೆ ಬಾವನ್ನ ವೀರರು ಮುಳುಗಿ ಬಂಧಮೋಕ್ಷಂಗಳ ಬಗೆವುತಿರ್ದರಲ್ಲಯ್ಯಾ. ಮೇಲೆ ರುದ್ರನೂಳಿಗದ ದಾಳಿ ಹತ್ತಿ ಘೋಳಿಟ್ಟು ಹಾಳಾಯಿತಲ್ಲಾ, ಮೂರು ಲೋಕವೆಲ್ಲ. ಇಂತೀ ಮೂವರ ಮುಂದುಗೆಡಿಸಿ ಅಯಿವತ್ತಿಬ್ಬರನಣಕಿಸಿ ಮೂನ್ನೂರ ಅರುವತ್ತು ಮಂದಿ ಅಸಾಸುರರನಡಿಗದ್ದಿದ ಸ್ವತಂತ್ರರು ಸೌರಾಷ್ಟ್ರ ಸೋಮೇಶ್ವರಾ, ನಿಮ್ಮ ಶರಣರು.
--------------
ಆದಯ್ಯ
ಅರಿದ ಶರಣಂಗೆ ಅಡಗುವ ಠಾವುಂಟೆ ? ಅಡಗಿದ ಮತ್ತೆ ಬಿಡಬೇಕು [ಆದಿ]ಯ ಮೆಟ್ಟುವ ಜಡರ ಸಂಸರ್ಗ ಬಿಡವು ಸರಿ. ಇಂತೀ ದೃಢಚಿತ್ತಂಗೆ ಕಡೆ ನಡು ಮೊದಲಿಲ್ಲ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಪ್ರಮಥಗಣಂಗಳ ಪ್ರಸಾದಕೊಂಡದಲ್ಲಿ ಅಡಗಿದ ಗೊತ್ತ ಆರೂ ಅರಿಯರಲ್ಲ, ಬಸವಣ್ಣಂಗೆ ಪ್ರಭುದೇವರು ತೋರಿ ಕೊಟ್ಟನು. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಬ್ಥಿನ್ನವಿಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಮನೆಯೊಳಗಣ ಜ್ಯೋತಿ ಮನೆಯ ಸುಟ್ಟು, ಮನೆ ಉಳಿದಿತ್ತು, ಅರಣ್ಯಸುಟ್ಟು ಅರಣ್ಯದ ಪಕ್ಷಿಯ ಕಾಲು ಸುಟ್ಟು ನಡೆಯಿತ್ತು, ತಲೆ ಸುಟ್ಟು ಕಣ್ಣು ಉಳಿದಿತ್ತು. ಮೈಸುಟ್ಟು ಪ್ರಾಣ ಉಳಿದಿತ್ತು, ಉಭಯ ರೆಕ್ಕೆ ಸುಟ್ಟು ಉರಿಯ ನುಂಗಿ ಗಗನಕ್ಕೆ ಹಾರಿ, ಮೇಲುಗಿರಿಯಲ್ಲಿ ಅಡಗಿತ್ತು. ಅದು ಅಡಗಿದ ಠಾವಿನಲ್ಲಿ ಅಡಗಬಲ್ಲರೆ ಭಕ್ತನೆಂಬೆ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಮಲೆಯಮಂದಿರದ ವಟವೃಕ್ಷದ ಘಟದಲ್ಲಿ ಮಕ್ಷಿಕ ಮನೆಯ ಮಾಡಿ ಹಂದಿಯನೇರಿ, ಮೂಡಲಗಿರಿಯಲ್ಲಿ ಕೋಳಿ ಕೂಗಿ, ಪಶ್ಚಿಮಗಿರಿಯಲ್ಲಿ ಬೆಳಗುತೋರಿ, ವೃಕ್ಷದಡಿಯಲ್ಲಿ ಅಗ್ನಿಪುಟವಾಗಿ ಬೇರುಸುಟ್ಟು, ವೃಕ್ಷ ಉಳಿದು, ಮಕ್ಷಿಕ ಹಂದಿ ಸತ್ತುಳಿದು, ಕೂಗಡಗಿದ ಕುಕ್ಕುಟನಲ್ಲಿ ಮಕ್ಷಿಕ ಹಂದಿಯು ಕೂಡಿ ಕುಕ್ಕುಟನ ಮನೆಯಲ್ಲಿ ಅಡಗಿದರು. ಅಡಗಿದ ಭೇದವ ನಿಮ್ಮ ಶರಣಬಲ್ಲ ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಹೆಡತಲೆಯ ಮಾತ ಬಲ್ಲಡೆ ಪ್ರಸಾದಿ. ನಡುನೆತ್ತಿಯ ಮರ್ಮವನರಿದಡೆ ಪ್ರಸಾದಿ. ಕಂಗಳ ಮೊಲೆ ಕೂರ್ಮನ ಆಪ್ಯಾಯನವ ಬಲ್ಲಡೆ ಪ್ರಸಾದಿ. ಅಂಗೇಂದ್ರಿಯವನೊಂದು ಮುಖವ ಮಾಡಬಲ್ಲಡೆ ಪ್ರಸಾದಿ. ನಿರಂಜನ ಜಂಗಮನನಾರೋಗಿಸಬಲ್ಲಡೆ ಪ್ರಸಾದಿ. ನಿರಾಲಂಬ ಪ್ರಣವಮನುಚ್ಚರಿಸಬಲ್ಲಡೆ ಪ್ರಸಾದಿ. ಹ್ರೀಂ ಶಕ್ತ್ಯಾರೂಢನಾದ ಚರಪಾದಾಂಬುವ ಹ್ರೈಂಶಕ್ತಿ ಬದ್ಧನಾದ ಲಿಂಗಕ್ಕೆ ಶಾಂತಿಯ ಮಾಡಬಲ್ಲಡೆ ಪ್ರಸಾದಿ. ಆಧಾರ ಬ್ರಹ್ಮದೊಳಗೆ ಅಡಗಿದ ಅಕ್ಷರವ ನೋಡಿ ಓದಬಲ್ಲಡೆ ಪ್ರಸಾದಿ. ಭಾವವ ಕ್ರೀಯಲ್ಲಿ ತಂದು ಭಾವದಲ್ಲಿ ನೆಲೆಗೊಳಿಸಬಲ್ಲಡೆ ಪ್ರಸಾದಿ. ಒಳಹೊರಗೆಂಬ ಭಾವಗೆಟ್ಟು ಸುಳುಹಿನ ಪ್ರಸಾದದ ಕಳೆವೆಳಗ ನುಂಗಿದ ಲಿಂಗಕ್ಕೆ ಅರ್ಪಿಸಿ ಸುಖಿಸಬಲ್ಲಡೆ ಪ್ರಸಾದಿ. ಸ್ಥಾವರವ ಜಂಗಮದೊಳಡಗಿಸಿ ಜಂಗಮವ ಸ್ಥಾವರವ ಮಾಡಬಲ್ಲಡೆ ಪ್ರಸಾದಿ. ಇದು ಕಾರಣ ನಿಜಗುಣನೆಂಬ ಮಹಾಜಂಗಮ ನಿಜಾನಂದವೆಂಬ ಒಕ್ಕುಮಿಕ್ಕ ಘನಪ್ರಸಾದವ ಕೊಟ್ಟನಾಗಿ ಸಿಮ್ಮಲಿಗೆಯ ಚೆನ್ನರಾಮನೆಂಬ ಲಿಂಗವೆನ್ನ ಹಿಂಗದಾಲಿಂಗಿಸಿದನಾಗಿ ಪ್ರಸಾದಿಯಾದೆ.
--------------
ಚಂದಿಮರಸ
ಆರು ಬಣ್ಣದ ಆರು ಲಿಂಗದಲ್ಲಿ ಮೂರು ಬಣ್ಣದ ಮೂರು ಲಿಂಗವ ಕೂಡಲು ನವಲಿಂಗದ ಒಂಬತ್ತು ಬಣ್ಣದಲ್ಲಿ ಗುರುಲಿಂಗಜಂಗಮಪ್ರಸಾದವೆಂಬ ನಾಲ್ಕು ಬಣ್ಣವ ಕೂಡಿದ ಹದಿಮೂರು ಬಣ್ಣವ ಕ್ರೀಯೆಂಬ ಕಮ್ಮರನ ಕೈಯಲ್ಲಿ ಕೊಟ್ಟಡೆ, ವಾಸನೆಯೆಂಬ ಸೀಸವ ಬೆರಸಿದ ನೋಡಾ. ಕಮ್ಮಾರನ ಬಾಯಕುಟ್ಟಿ ಸೆಳೆಯಲಾಗಿ ಆ ವಾಸನೆ ಅಲ್ಲಿಯೇ ಅಡಗಿ, ಅಂಗಭವಿ ಲಿಂಗಭವಿಯೆಂಬ ಅಡಗಿದ ಕಾಳಿಕೆಯಳಿದ ಸ್ವಯಬಣ್ಣದ ಮಿಸುನಿಗೆ ತನುವೆಂಬ ಒರೆಗಲ್ಲ ಹಂಗಿಲ್ಲ, ಮನವೆಂಬ ಮಚ್ಚದ ಹಂಗಿಲ್ಲ. ಭಾವವೆಂಬ ಹಸ್ತದ ಹಂಗಿಲ್ಲ, ತಮೋಗುಣವೆಂಬ ಮಯಣದ ಹಂಗಿಲ್ಲ. ಬೋಧವೆಂಬ ನೇತ್ರದ ಹಂಗಿಲ್ಲ. ಇಂತಿವರ ಹಂಗು ಹರಿದಲ್ಲಿ ಸೌರಾಷ್ಟ್ರ ಸೋಮೇಶ್ವರಲಿಂಗ ಪರವಳಿದು ಸಯವಾಯಿತ್ತು
--------------
ಆದಯ್ಯ
ಕಾಳಿಯ ಹೊಲದ ಓಣಿಯ ದಾರಿಯಲ್ಲಿ ಮೂವರು ಕಳ್ಳರು ಕಟ್ಟಿ ಬೆಳ್ಳನೊಬ್ಬನ ಆ ಕಳ್ಳರು ಹಿಡಿಯಲಾಗಿ ಬೆಳ್ಳನ ಬೆಳುವೆ ತಾಗಿ, ಕಳ್ಳರು ಮೈಮರೆದು, ಮೂರು ಹಳ್ಳದಲ್ಲಿ ಬಿದ್ದರು. ಬಿದ್ದು ಸಾವರ ಕೊಲ್ಲಲೊಲ್ಲದೆ ಬೆಳ್ಳನಲ್ಲಿಯೆ ಅಡಗಿದ. ಅಡಗಿದವನಾರೆಂದರಿ, ಪುಣ್ಯಾರಣ್ಯದಹನ ಭೀಮೇಶ್ವರಲಿಂಗ ನಿರಂಗಸಂಗ.
--------------
ಕೋಲ ಶಾಂತಯ್ಯ
ಅರಸಿಯ ಪುತ್ರನು ಶಿರವಿಲ್ಲದೆ ಐದರಲ್ಲಿರಲು, ಕೋತಿಯ ತಲೆಯಲ್ಲಿ ಇರುವೆ ಪುಟ್ಟಲು, ಇಬ್ಬರು ಸತ್ತು ಶಿರ ಚಿಗಿದು, ಅರಸಿಯ ನೆರದು ಅರಸಿನಲ್ಲಿ ಅಡಗಿತ್ತು. ಅದು ಅಡಗಿದ ಸ್ಥಾನದಲ್ಲಿ ಅಡಗಿದವರು ಲಿಂಗೈಕ್ಯರು, ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಇನ್ನಷ್ಟು ... -->