ಅಥವಾ

ಒಟ್ಟು 272 ಕಡೆಗಳಲ್ಲಿ , 39 ವಚನಕಾರರು , 197 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಕರ ಬ್ರಹ್ಮಾದಿಗಳೇನು ಕಾರಣ ಯೋನಿ, ನಾನಾ ಭವಂಗಳಲಿ ಬಂದರಯ್ಯ. ಧ್ಯಾನ ಮೌನ ಸಮಾದ್ಥಿಕಾರಣದ ಸಮತೆಯನು ಭೇದಿಸಲು ಅರಿಯದೆ, ನಾನಾ ಭವಂಗಳ ಮಗ್ನವಾಗಿ, ಅನಾದಿ ಸಂಸಿದ್ಧ ಕಪಿಲಸಿದ್ಧಮಲ್ಲಿಕಾರ್ಜುನ ಆದಿಯಕ್ಷರ ಸಮತೆ ಸಮಗೂಡದು
--------------
ಸಿದ್ಧರಾಮೇಶ್ವರ
ಕ್ರೀವಿಡಿದು ಗುರುಸಂಬಂದ್ಥಿಯಾಗಿ, ಜಾÕನವಿಡಿದು ಲಿಂಗಸಂಬಂದ್ಥಿಯಾಗಿ. ಘನವಿಡಿದು ಮಹಾಜಾÕನಿಯಾಗಿ, ಅರಿವು ಆಚರಣೆಯ ಕಂಡು, ಜಾÕನ ಮುಕುರವೆಂಬ ಮುಂದಣ ಶ್ರೀಸಂಬಂದ್ಥಿಯಾಗಿ, ಆಚಾರದಲ್ಲಿ ಸಂಪನ್ನನಾಗಿ, ಮಹೇಶ್ವರಸ್ಥಲವನರಿದು, ಅದೇ ಜಂಗಮವಾದ ಬಳಿಕ ನಿರಾಕುಳನಾಗಿ ಆಚರಿಸಿದರೆ ಅನಾದಿ ಜಂಗಮವೆಂಬೆ. ಸಾಮವೇದೇ- ವಿವಚಾಸೋವಿಚಾ ಲಿಂಗಾಲಿಂಗಿ ಚ ಫಲಾದಿ ಬ್ರಹ್ಮರಾಕ್ಷಸ ಸೋವಿಸಂಗಶ್ಚ | ಸೂಕರ ಶತಕೋಟಿ ಜನ್ಮ ಚ ಸೋಪಿ ಕ್ರೀಡಾಲಿಂಗ ಮಲಮೂತ್ರ ಮಾಂಸ ಭುಂಜಿತಃ | ಬ್ರಹ್ಮೇನ ಕೋಟಿ ರಾಕ್ಷಸಃ ಸೋಸಂಗೇನ ಶತಕೋಟಿಗಾರ್ದಭ ಜನ್ಮ ಚ | ಅದೇ ದಾಸಿ ದಾಸೇ ಸೂಕರ ಸಂಗಶಃ ಚ ನಾಃ | ಸೋವ ಮಾತ್ರವೆಂದು ತಂದ ಸ್ತ್ರೀಗಳನು ಶಿಷ್ಯಾದಿ ಪುತ್ರರ ಕೈಯ ಗುರು ತಾಯಿ ಎಂಬ ನಾಮಕರಣಂಗಳನುಂಟುಮಾಡಿ, ತನ್ನ ಅಂಗವಿಕಾರಕ್ಕೆ ತಂದ ಸಂತೆಯ ಡೊಂಬಿತಿಯ ತಂದು, ಹಿರಿಯರಲ್ಲಿ ಸರಿಮಾಡುವ ಜಂಗಮವೆ ಗುರುವೆ? ಅಜಾÕನ ಪುರುಷನಲ್ಲ, ಅವ ಹಿರಿಯತನಕ್ಕೆ ಸಲ್ಲ, ಅವಂಗೆ ಗುರುವಿಲ್ಲ ಲಿಂಗವಿಲ್ಲ, ಜಂಗಮ ಮುನ್ನವೆಯಿಲ್ಲ. ಅವ ಘಟಾತ್ಮನು ಸೋವಿಯ ಸಂಗ ಬೇಡ ಬಿಡಿರಣ್ಣಾ, ಸೋವಿಯ ಸಂಗವ ಮಾಡಿದರೆ ಶತಕೋಟಿ ದಾಸಿಯ ಬಸುರಲ್ಲಿ ಬಂದು, ಹೇಸಿಕೆಯಿಲ್ಲದೆ ಮಲಮೂತ್ರವನು ಹೇಗೆ ಸೂಕರ ಭುಂಜಿಸುವುದೊ ಹಾಂಗೆ ಭುಂಜಿಪನು. ನಾನಾ ಯೋನಿಯ ನರಕುವದು. ಸೋವಿ ಮಾತ್ರೇಣ ಆ ಲಿಂಗನಂ ಗುರು ತಾಯ ಅಪಮಾನ ಸಾಮಾನ್ಯವೆಂದು ಸೋವಿಯ ಸಂಗವ ಮಾಡಿದಡೆ ಎಪ್ಪತ್ತೇಳುಕೋಟಿ ಶ್ವಪಚಯೋನಿ ತಪ್ಪದಯ್ಯ. ಹನ್ನೆರಡು ಕಂಬ ಸಾಕ್ಷಿಯಾಗಿ, ಕಳಕನ್ನಡಿ ಸಾಕ್ಷಿಯಾಗಿ, ತೆಳೆಮಲು ಕಟ್ಟಿ ಸಾಕ್ಷಿಯಾಗಿ, ಆಯಿರಣೆಕೋಲು ಸಾಕ್ಷಿಯಾಗಿ, ಮುತ್ತೈದೆತನದಲ್ಲಿ ಶ್ರೇಷ್ಠಯಾಗಿ, ಜಾÕನ ದೃಕ್ಕಿನಿಂ ತಿಳಿದು, ಅನುಭಾವದ ಮುಖವನರಿದಂತೆ, ಆ ಜಾÕನನೇತ್ರವ ಅರಿದು ಧಾರೆಯನೆರೆಸಿಕೊಂಡು, ಅರಿವಿನಲ್ಲಿ ಇರದೆ ಕುರಿಯ ಹೇಲ ತಿಂಬಂತೆ, ಬಾಯಿಗೆ ಬಂದಂತೆ ಸೋವಿಯ ಸಂಗವ ಮಾಡುವವರ ಸರ್ವಾಂಗವೆಲ್ಲ ಗಣಿಕೆಯ ಯೋನಿಯ ಬಸುರ ನೋಡಾ. ಧಾರೆಯನೆರೆಸಿಕೊಂಡು ಕ್ರೀವಿಡಿದು ನಡೆಯದೆ, ತೊತ್ತಿನ ಮಗನಿಗೆ ಪಟ್ಟ ಕಟ್ಟಿದರೆ ಹಾದಿಯ ಎಲುವ ಕಂಡು ಓಡಿಹೋಗಿ ಗಡಗಡನೆ ಕಡಿವಂತೆ, ಸೋವಿಯ ಎಂಜಲ ತಿಂದವಂಗೆ ಗುರುವಿಲ್ಲ. ಅವ ದೇವಲೋಕ ಮತ್ರ್ಯಲೋಕ ಎರಡಕ್ಕೆ ಸಲ್ಲ. ಆವಾಗಮದಲ್ಲಿ ಉಂಟು, ಗಳಹಿ ಹೇಳಿರೊ, ಮಕ್ಕಳಿರಾ. ನೀವು ಬಲ್ಲರೆ ಕಾಳನಾಯ ಹೇಲ ತಿಂಬಂಗೆ ಹಿರಿಯನೆಂದು, ಹೋತನಂತೆ ಗಡ್ಡವ ಬೆಳಸಿಕೊಂಡು ಗುಡರಗುಮ್ಮನಂತೆ ಸುಮ್ಮನಿರುವಿರಿ. ಗರ್ವತನಕ್ಕೆ ಬಂದು ಹಿರಿಯರೆಂದು ಆಚರಣೆ ನ್ಯಾಯವ ಬಗಳುವಿರಿ. ಸೋವಿಸಂಗದಿಂದ ಕನಿಷ್ಠ ನರಕ ಕಾಣಿರಣ್ಣಾ. ಸೋವಿಯ ಸಂಗವ ಬಿಟ್ಟು ಧಾರೆಯ ಸ್ತ್ರೀಯಳ ನೆರದರೆ, ಆಚಾರವಿಡಿದು ನಡೆದು ಆಚರಣೆಯ ನುಡಿದರೆ ಶುದ್ಧವಾಗುವದಲ್ಲದೆ ತೊತ್ತಿನ ಮಗನಾಗಿ ಎಡೆಯ ಸಮಗಡಣವ ಬೇಡುವ ಪಾತಕರ, ಅವರ ಜಂಗಮವೆಂಬೆನೆ? ಸೋವಿಯ ಸಂಗದಿಂದ ಬಂದುದು ಬ್ರಹ್ಮೇತಿ. ಅಥರ್ವಣ ಸಾಮವೇದ ಯಜುರ್ವೇದ ಋಗ್ವೇದ ಇಂತಪ್ಪ ನಾಲ್ಕು ವೇದದಲ್ಲಿ ಶ್ರುತಿ ಸ್ಮøತಿಗಳಲ್ಲಿ ಆಗಮ ಪುರಾಣಂಗಳಲ್ಲಿ ಸೋವಿಯ ವಾಚ್ಯವೆಂಬುದುಂಟೆ ಪರಮಪಾತಕರಿರಾ? ನೂತನವ ಗಂಟಿಕ್ಕಿ ಜಗಲಿಯೆನ್ನದೆ ಪಟ್ಟಶಾಲೆಯೆಂಬಿಂ ತೊಂಡರಿರಾ. ತೊತ್ತನೊಯ್ದು ತೊತ್ತೆದಾಸಿ ಬಾಯೆನ್ನದೆ ಹೋವಿಯೆಂದು ಬಗಳುವಿರಿ. ಕಲಿಯುಗದಲ್ಲಿ ನೂತನದ ಸೂಳೆಯ ಮಕ್ಕಳು ನೀವು. ಸೋವಿಯ ಸಂಗವ ಮಾಡಿದವನು ಅರಿವುಳ್ಳ ಪುರುಷನಾದರೂ ಆಗಲಿ, ಅರಿದು ಮತ್ತೆ ಅರೆಮರುಳಾದ ಹಿರಿಯರನೇನೆಂಬೆನಯ್ಯಾ. ಅವನು ಪಾತಕನಘೋರಿಗಳು. ಅವರು ಇವರುವನರಿಯದ ಅಘೋರಿಗಳೆಂಬ ಇಂತಪ್ಪ ಸೋವಿಯ ಸಂಗವ ಮಾಡುವ ಬ್ರಹ್ಮೇತಿಕಾರ ಪಂಚಮಹಾಪಾತಕರು ಇಹಪರಕ್ಕೆ ಸಲ್ಲರೆಂದುದು. ನಿಮ್ಮಾಣೆ ನಿಮ್ಮ ಪ್ರಮಥರಾಣೆ, ಇಹವಿಲ್ಲ ಪರವಿಲ್ಲ, ಮುಕ್ತಿಯ ಫಲವಿಲ್ಲ, ಅಘೋರವಲ್ಲದೆ ಮತ್ತೇನೂ ಇಲ್ಲ. ನಿಮ್ಮಾಣೆ ಬ್ಥೀಮಬಂಕೇಶ್ವರಾ.
--------------
ಭೀಮಬಂಕೇಶ್ವರ
ಅಯ್ಯ, ನಿರಾಲಂಬ ನಿಃಕಳಂಕ ನಿಃಪ್ರಪಂಚತ್ವದಿಂದ ನಾಲ್ವತ್ತೆಂಟು ಪ್ರಣಮಸ್ಮರಣೆಯಿಂದ ಏಕಾದಶಲಿಂಗಂಗಳಿಗೆ ಏಕಾದಶಪ್ರಸಾದವ ಸಮರ್ಪಿಸಿ, ತಾನಾ ಸಂತೃಪ್ತಿಮಹಾಪ್ರಸಾದದಲ್ಲಿ ಲೋಲುಪ್ತನಾದಡೆ ನಿಜಪ್ರಸಾದಿಯೆಂಬೆ ನೋಡ. ಅದರ ವಿಚಾರವೆಂತೆಂದಡೆ : ನಾಲ್ವತ್ತೆಂಟು ಪ್ರಣವದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಆಪ್ಯಾಯನಪ್ರಸಾದ, ಸಮಯಪ್ರಸಾದ, ಗುರುಪ್ರಸಾದವ ಆಚಾರಲಿಂಗ-ಗುರುಲಿಂಗ-ಇಷ್ಟಲಿಂಗದೇವಂಗೆ ಸುಚಿತ್ತ, ಸುಬುದ್ಧಿ, ನಿರುಪಾದ್ಥಿಕಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿನಿಃಕಳಂಕ ಗುರುಬಸವರಾಜನೆಂಬೆ ನೋಡ. ಛತ್ತೀಶಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಪಂಚೇಂದ್ರಿಯವಿರಹಿತಪ್ರಸಾದ, ಕರಣಚತುಷ್ಟಯವಿರಹಿತಪ್ರಸಾದ, ಲಿಂಗಪ್ರಸಾದವ ಶಿವಲಿಂಗ-ಜಂಗಮಲಿಂಗ-ಪ್ರಾಣಲಿಂಗದೇವಂಗೆ ನಿರಹಂಕಾರ, ಸುಮನ, ನಿರಾಲಂಬಹಸ್ತದಿಂದ ಸಮರ್ಪಿಸಿ, ಆ ತೃಪ್ತಿಯ ಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿಃಕಾಮ ಶೂನ್ಯಲಿಂಗಸ್ವರೂಪ ಚೆನ್ನಬಸವರಾಜನೆಂಬೆ ನೋಡ ! ಇಪ್ಪತ್ತುನಾಲ್ಕು ಪ್ರಣಮದೊಳಗೆ ದ್ವಾದಶಪ್ರಣಮಸ್ಮರಣೆಯಿಂದ ಸಮತಾಪ್ರಸಾದ-ಪ್ರಸಾದಿಯಪ್ರಸಾದ-ಜಂಗಮಪ್ರಸಾದವ ಪ್ರಸಾದಲಿಂಗ-ಮಹಾಲಿಂಗ-ಭಾವಲಿಂಗದೇವಂಗೆ ಸುಜಾÕನ, ಸದ್ಭಾವ, ನಿಃಪ್ರಪಂಚಹಸ್ತದಿಂದ ಸಮರ್ಪಿಸಿ, ಆ ಪರಿಣಾಮಲೋಲುಪ್ತಿಯಲ್ಲಿ ತಾನಾದಡೆ ಅನಾದಿ ನಿರಂಜನ ಜಂಗಮ ಸ್ವರೂಪ ಪ್ರಭುದೇವರೆಂಬೆ ನೋಡ. ಇನ್ನು ಉಳಿದ ದ್ವಾದಶಪ್ರಣಮಸ್ಮರಣೆಯಿಂದ ಸದ್ಭಾವಪ್ರಸಾದ-ಜಾÕನಪ್ರಸಾದವ ಇಂತು ನವಲಿಂಗಪ್ರಸಾದ ಪಾದೋದಕಂಗಳ ಸಂತೃಪ್ತಿಯಲ್ಲಿ ಸಾಕಾರ ನಿರಾಕಾರನಾದ ಪರತತ್ವಜ್ಯೋತಿರ್ಮಯಲಿಂಗದೇವಂಗೆ ನಿಜಾನಂದಹಸ್ತದಿಂದ ಸಮರ್ಪಿಸಿ, ಮತ್ತಾ ಅನಾದಿಕುಳಸನ್ಮತನಾದ ದಶವಿಧಪಾದೋದಕ, ಏಕಾದಶಪ್ರಸಾದದಲ್ಲಿ ಕೂಡಿ, ಘನಸಾರದಂತಾದಡೆ ಅನಾದಿಪೂರ್ಣಮಯ ನಿಜವಸ್ತು ತಾನೆ ನೋಡ, ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
ಎನ್ನ ಆಧಾರಚಕ್ರವೆ ಶ್ರೀಶೈಲಕ್ಷೇತ್ರ : ಅಲ್ಲಿರ್ಪ ಆಚಾರಲಿಂಗವೇ ಶ್ರೀಮಲ್ಲಿಕಾರ್ಜುನದೇವರು. ಎನ್ನ ಸ್ವಾದ್ಥಿಷ್ಠಾನಚಕ್ರವೆ ಸೇತುಬಂಧಕ್ಷೇತ್ರ; ಅಲ್ಲಿರ್ಪ ಗುರುಲಿಂಗವೆ ರಾಮೇಶ್ವರನು. ಎನ್ನ ಮಣಿಪೂರಕ ಚಕ್ರವೇ ಪಂಪಾಕ್ಪೇತ್ರ; ಅಲ್ಲಿರ್ಪ ಶಿವಲಿಂಗವೆ ವಿರೂಪಾಕ್ಷೇಶ್ವರನು. ಎನ್ನ ಅನಾಹತಚಕ್ರವೇ ಹಿಮವತ್ಕೇದಾರಕ್ಷೇತ್ರ; ಅಲ್ಲಿರ್ಪ ಜಂಗಮಲಿಂಗವೆ ಹಿಮಗಿರೀಶ್ವರನು. ಎನ್ನ ವಿಶುದ್ಧಿಚಕ್ರವೆ ಅವಿಮುಕ್ತಿಕ್ಷೇತ್ರ: ಅಲ್ಲಿರ್ಪ ಪ್ರಸಾದಲಿಂಗವೆ ವಿಶ್ವೇಶ್ವರನು. ಎನ್ನ ಆಜಾÕಚಕ್ರವೆ ಸಂಗಮಕ್ಷೇತ್ರ: ಅಲ್ಲಿರ್ಪ ಮಹಾಲಿಂಗವೆ ಸಂಗಮೇಶ್ವರನು. ಇಂತಿವು ಮೊದಲಾದ ಸಕಲಕ್ಷೇತ್ರಂಗಳನೊಳಕೊಂಡ ಎನ್ನ ಬ್ರಹ್ಮಚಕ್ರವೆ ಮಹಾಕೈಲಾಸ. ಅಲ್ಲಿರ್ಪ ನಿಷ್ಕಲಲಿಂಗವೆ ಅನಾದಿ ಪರಶಿವನು ನೀನೇ ಅಯ್ಯಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಇನ್ನು ಅಖಂಡಪರಿಪೂರ್ಣ ಅಪ್ರಮಾಣ ಅಗೋಚರ ಅಪ್ರಮೇಯ ಅವ್ಯಕ್ತ ಅನಂತತೇಜ ಅನಂತಪ್ರಚಯ ಅನಂತಕೋಟಿ ಸೂರ್ಯಚಂದ್ರಾಗ್ನಿಪ್ರಕಾಶವಾಗಿಹ ಮಹಾಘನಲಿಂಗದಲ್ಲಿ ವಿಶ್ವತೋ ಮುಖ, ವಿಶ್ವತೋ ಚಕ್ಷು, ವಿಶ್ವತೋ ಹಸ್ತ, ವಿಶ್ವತೋ ಪಾದ, ವಿಶ್ವತೋ ಬಾಹುವನುಳ್ಳ ಅನಾದಿ ಸದಾಶಿವತತ್ವ ಉತ್ಪತ್ಯವಾಯಿತ್ತು. ಆ ಸದಾಶಿವನ ಈಶಾನಮುಖದಲ್ಲಿ ಆಕಾಶ ಉತ್ಪತ್ಯವಾಯಿತ್ತು. ಆ ಅನಾದಿ ಶಿವತತ್ವದಿಂದ ಅನೇಕ ಮುಖ, ಅನೇಕ ಚಕ್ಷು, ಅನೇಕ ಬಾಹು, ಅನೇಕ ಪಾದವನುಳ್ಳ ಅನಾದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಈಶ್ವರತತ್ವದಲ್ಲಿ ಸಹಸ್ರ ಶಿರ, ಸಹಸ್ರ ಅಕ್ಷ, ಸಹಸ್ರ ಬಾಹು, ಸಹಸ್ರ ಪಾದವನುಳ್ಳ ಅನಾದಿ ಮಹೇಶ್ವರತತ್ವ ಉತ್ಪತ್ಯವಾಯಿತ್ತು. ಆ ಅನಾದಿ ಮಹೇಶ್ವರತತ್ವದಲ್ಲಿ ತ್ರಿಪಂಚಮುಖ, ತ್ರಿದಶಭುಜ, ತ್ರಿದಶಪಾದವನುಳ್ಳ ಆದಿ ಸದಾಶಿವ ಉತ್ಪತ್ಯವಾಯಿತ್ತು. ಆ ಆದಿ ಸದಾಶಿವತತ್ವದಲ್ಲಿ ಷಷ್ಠ ವಕ್ತ್ರ, ದ್ವಾದಶಭುಜ, ತ್ರಿಪಾದವನುಳ್ಳ ಆದಿ ಈಶ್ವರತತ್ವ ಉತ್ಪತ್ಯವಾಯಿತ್ತು. ಆ ಆದಿ ಈಶ್ವರತತ್ವದಲ್ಲಿ ಪಂಚವಿಂಶತಿ ಮುಖ, ಪಂಚದಶಭುಜವನುಳ್ಳ ಸದಾಶಿವತತ್ವ ಉತ್ಪತ್ಯವಾಯಿತ್ತು. ಇದಕ್ಕೆ ಅತಿ ಮಹಾಗಮೇ : ``ಅಖಂಡಲಿಂಗ ಸಂಭೂತಾ ಅನಾದಿ ಸಾದಾಖ್ಯಸ್ತಥಾ | ಅನಾದಿ ವಿಶ್ವತೋಮುಖತತ್ವೇ ಚ ಅನಾದಿ ಈಶ್ವರೋದ್ಭವಃ || ಅನಾದಿ ಈಶ್ವರತತ್ವೇ ಚ ಅನಾದಿ ಮಾಹೇಶ್ವರೋ ಭವೇತ್ | ಅನಾದಿ ಮಾಹೇಶ್ವರ ಶಂಭುತೊ ಆದಿ ಸದಾಖ್ಯ ಸ್ತಥಾ || ಆದಿ ಸಾದಾಖ್ಯತತ್ವೇ ಚ ಆದಿ ಈಶ್ವರೋದ್ಭವಂ | ಆದಿ ಈಶ್ವರತತ್ವೇ ಚ ಆದಿ ಮಾಹೇಶ್ವರೋ ಭವೇತ್ || ಆದಿ ಮಾಹೇಶ್ವರ ಶಂಭುತೊ ಶಿವಸದಾಶಿವಾಯುವೋ | ಇತಿ ತತ್ವೋದ್ಭವಜ್ಞಾನಂ ದುರ್ಲಭಂ ಕಮಲಾನನೇ|| '' ಇಂತೆಂದುದಾಗಿ, ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇಷ್ಟಲಿಂಗದ ಭೇದವನರಿಯದೆ ಪ್ರಾಣಲಿಂಗದ ಭೇದವ ಬಲ್ಲೆನೆಂಬ ಭ್ರಷ್ಟಾಚಾರಿಗಳು ನೀವು ಕೇಳಿರೋ. ಇಷ್ಟಲಿಂಗದ ಕಳಾಭೇದವನರಿತು, ಪ್ರಾಣಲಿಂಗಸಂಬಂದ್ಥಿಯಾಗಿ, ದೃಷ್ಟಲಿಂಗವ ಕಾಣಬಲ್ಲಾತನೆ ಅನಾದಿ ಶರಣ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಆದಿ ಅನಾದಿ ಸುರಾಳ ನಿರಾಳ ಶೂನ್ಯ ನಿಃಶೂನ್ಯದಿಂದತ್ತತ್ತಲಾದ ಘನಮಹಾಲಿಂಗವೆಂಬ ಪರಬ್ರಹ್ಮವು, ಗುರುಕರುಣದಿಂ ಬಹಿಷ್ಕರಿಸಿ ಕರಸ್ಥಲಕ್ಕೆ ಇಷ್ಟಲಿಂಗವಾಗಿ ಬರಲು ಆ ಲಿಂಗದಲ್ಲಿ ಕೃಷ್ಣಾ ಭಾಗೀರಥಿ ಮೊದಲಾದ ಅನೇಕ ತೀರ್ಥಂಗಳು, ಕಾಶಿರಾಮೇಶ್ವರ ಮೊದಲಾದ ಅನೇಕ ಕ್ಷೇತ್ರಂಗಳು, ಹಿಮಾಚಲ ಶ್ರೀಶೈಲಪರ್ವತ ಮೊದಲಾದ ಅನೇಕ ಪುಣ್ಯಶೈಲಂಗಳುಂಟೆಂದು, ತನ್ನ ಸ್ವಾನುಭಾವಮೂಲಜ್ಞಾನದಿಂ ತಿಳಿದು, ಸಕಲ ಸಂಶಯಂ ಬಿಟ್ಟು ನಿಶ್ಚಿಂತನಾಗಿ, ಮನವ ಮಹಾಘನದಲ್ಲಿರಿಸಿ ಇರಬಲ್ಲಡೆ ಆತನೇ ಅನಾದಿಸದ್ವೀರಮಹೇಶ್ವರನ ಭಕ್ತನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಸ್ತ್ರೀಲಿಂಗ ಪುಲ್ಲಿಂಗ ನಪುಂಸಕಲಿಂಗವೆಂದೆಂಬರು, ಆದಿ ಅನಾದಿ ಸಂದಣಿ ಸಯವಾಯಿತ್ತು. ಪ್ರಣಮಪ್ರಜ್ವಲಿತ ಕುಳವಳಿಯದ ಪ್ರಣಮಲಿಂಗ ಕೂಡಲಚೆನ್ನಸಂಗಾ ನಿಮ್ಮ ಶರಣಂಗೆ.
--------------
ಚನ್ನಬಸವಣ್ಣ
ಆದಿ ಅನಾದಿ ತತ್ವವ ಭೇದಿಸಿಕೊಟ್ಟ ಗುರುವೆ, ಅಪ್ರಮಾಣದ ಬೆಳಗ ಭೇದಿಸಿಕೊಟ್ಟ ಗುರುವೆ, ಅಕಾರ ಉಕಾರ ಮಕಾರ ಕಳೆಯನರುಹಿಸಿಕೊಟ್ಟ ಗುರುವೆ, ಇಷ್ಟ ಪ್ರಾಣ ಭಾವವಿದೆಂದು ತೋರಿದ ಗುರುವೆ, ನಿಜದರಿವನರುಹಿಸಿಕೊಟ್ಟ ಗುರುವೆ, ನಿರ್ಮಳಪ್ರಭೆಯ ತೋರಿದ ಗುರುವೆ, ನಿಜವನನುಭವಕ್ಕೆ ತಂದ ಗುರುವೆ ನಿಮ್ಮ ಘನವ ಕಾಬ ಕಣ್ಣು ಕ್ರಮಗೆಟ್ಟಿತ್ತು ಸಂಗಯ್ಯಾ, ಬಸವನ ಪ್ರಭೆ ಎಲ್ಲಿ ಅಡಗಿತ್ತೊ?
--------------
ನೀಲಮ್ಮ
ಆದಿ ಅನಾದಿ ಎಂದು ಗಾದೆಯ ಮಾತು ನುಡಿದಾಡುವರೆಲ್ಲ ಇವೆರಡರ ಮಧ್ಯದಲ್ಲಿಪ್ಪ ಮಾಯಾಪ್ರಪಂಚನೆ ಅಳೆವುತ್ತ ಸುರಿವುತಿಪ್ಪರಲ್ಲದೆ, ಆದಿಯಿಂದಲತ್ತತ್ತಲಾರು ಬಲ್ಲರು? ಅನಾದಿಯಿಂದತ್ತತ್ತಲಾರು ಬಲ್ಲರು? ಇದರ ಭೇದಾದಿ ಭೇದವ ಮುನ್ನಿನ ಆದ್ಯರು ಬಲ್ಲರಲ್ಲದೆ, ಸಾಧಕರಿಗಳವಲ್ಲ. ವೇದಶಾಸ್ತ್ರಾಗಮ ಪುರಾತರ ವಚನ ಬಹುಶ್ರುತಿ ಇದಿರಿಟ್ಟುಕೊಂಡು, ಕೂಗಿಯಾಡಿ, ಗೋಡೆ ಹಾಯಿಸುವ ಜಡವಾದಿಗಳ ಮಾತ ಮೆಚ್ಚರು ನಮ್ಮ ಶರಣರು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಅಲುಪ್ತ ಶಕ್ತಿತ್ವಾನುಭಾವಪ್ರಕಾಶದೊಳ್ಮುಳುಗಿ ಆಚಾರಲಿಂಗಭಕ್ತನೆಂಬ ನಾಮನಷ್ಟವಾಯಿತ್ತು ನೋಡಾ ! ಸ್ವತಂತ್ರತ್ವಾನುಭಾವಪ್ರಕಾಶದೊಳ್ಮುಳುಗಿ ಗುರುಲಿಂಗಮಹೇಶನೆಂಬ ನಾಮನಷ್ಟವಾಯಿತ್ತು ನೋಡಾ. ನಿತ್ಯತ್ವಾನುಭಾವಪ್ರಕಾಶದೊಳ್ಮುಳುಗಿ ಶಿವಲಿಂಗಪ್ರಸಾದಿಯೆಂಬ ನಾಮನಷ್ಟವಾಯಿತ್ತು ನೋಡಾ. ಅನಾದಿ ಭೇದತ್ವಾನುಭಾವಪ್ರಕಾಶದೊಳ್ಮುಳುಗಿ ಜಂಗಮಲಿಂಗ ಪ್ರಾಣಲಿಂಗಿಯೆಂಬ ನಾಮನಷ್ಟವಾಯಿತ್ತು ನೋಡಾ. ಸರ್ವಜ್ಞತ್ವಾನುಭಾವಪ್ರಕಾಶದೊಳ್ಮುಳುಗಿ ಪ್ರಸಾದಲಿಂಗಶರಣನೆಂಬ ನಾಮನಷ್ಟವಾಯಿತ್ತು ನೋಡಾ. ತೃಪ್ತತ್ವಾನುಭಾವಪ್ರಕಾಶದೊಳ್ಮುಳುಗಿ ಮಹಾಲಿಂಗೈಕ್ಯನೆಂಬ ನಾಮವನುಡುಗಿ ಗುರುನಿರಂಜನ ಚನ್ನಬಸವಲಿಂಗಾ ನಿಮ್ಮೊಳಗೆ ನಿಜೈಕ್ಯನಾದೆನು ಕಾಣಾ.
--------------
ದೇಶಿಕೇಂದ್ರ ಸಂಗನಬಸವಯ್ಯ
ದಿಟದ ಚಂದ್ರನು ಅನೇಕ ಘಟದ ಜಲದೊಳಗೆ ಜನಿಸಿ ಅನೇಕ ವ್ಯವಹಾರವಾದಂತೆ ಜೀವನೆ ಜಗ, ಜಗವೆ ಜೀವನಾದ. ಆದಿ ಅನಾದಿ ವಿಚಿತ್ರತರವಾದ ಮಾಯೆ. ಈ ಮಾಯೆಯಿಂದ ತನಗೆ ತಾನೇ ಪ್ರತಿಬಿಂಬ. ಆ ಮಾಯಾ ಪ್ರತಿಬಿಂಬವೆ ತನಗೆ ಸಂಸಾರ. ಆ ಸಂಸಾರವನು ಆ ಪರಮಾತ್ಮನು ಕೂಡಿಯೂ ಕೂಡದೆ ಆ ಘಟ ಜಲ ಚಂದ್ರಮನ ಹಾಂಗೆ ವರ್ತಿಸುತ್ತಿಹನು. ಅದೆಂತೆಂದಡೆ: ``ಏಕ ಏವ ಹಿ ಭೂತಾತ್ಮಾಭೂತೇ ಭೂತೇ ವ್ಯವಸ್ಥಿತಃ| ಏಕಧಾ ಬಹುಧಾಚೈವ ದೃಶ್ಯತೇ ಜಲಚಂದ್ರವತ್||' ಎಂದುದಾಗಿ, ಸಟೆಯ ಮಾಯೆಯ ಸಟೆಯೆಂದು ಕಳೆದುಳಿದ ದ್ಥೀರ ನೀನೇ, ಸಿಮ್ಮಲಿಗೆಯ ಚೆನ್ನರಾಮಾ.
--------------
ಚಂದಿಮರಸ
ಅಯ್ಯಾ, ಪರಾತ್ಪರ ಸತ್ಯ ಸದಾಚಾರ ಗುರುಲಿಂಗಜಂಗಮದ ಶ್ರೀಚರಣವನು ಹಿಂದೆ ಹೇಳಿದ ಅಚ್ಚಪ್ರಸಾದಿಯೋಪಾದಿಯಲ್ಲಿ ನಿರ್ವಂಚಕತ್ವದಿಂದ ಗುರುಲಿಂಗಜಂಗಮಕ್ಕೆ ಅರ್ಥಪ್ರಾಣಾಭಿಮಾನವ ಸಮರ್ಪಿಸಿ, ಒಪ್ಪತ್ತು ಅಷ್ಟವಿಧಾರ್ಚನೆ ಷೋಡಶೋಪಚಾರದಿಂದ ಅರ್ಚನೆಯ ಮಾಡಿ, ಆ ಚರಣೋದಕ ಪ್ರಸಾದವನು ತನ್ನ ಸರ್ವಾಂಗದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗದೇವಂಗೆ ಕೊಟ್ಟು ಕೊಂಬುವಂತಹದೆ ಇದಿರಿಟ್ಟು ಜಂಗಮ ಪಾದೋದಕ ಪ್ರಸಾದವ ಕೊಂಬ ಆಚರಣೆಯ ನಿಲುಗಡೆ ನೋಡಾ. ಆಮೇಲೆ ಒಪ್ಪತ್ತು ಸಂಬಂಧವಿಟ್ಟು ಆಚರಿಸುವ ನಿಲುಕಡೆ ಎಂತೆಂದಡೆ: ಅಯ್ಯಾ, ನಿನ್ನ ಷಟ್‍ಸ್ಥಾನದಲ್ಲಿ ನೆಲೆಸಿರ್ಪ ಇಷ್ಟಮಹಾಲಿಂಗದೇವನ ತ್ರಿವಿಧಸ್ಥಾನದಲ್ಲಿ ಓಂ ಬಸವಣ್ಣ ಚೆನ್ನಬಸವಣ್ಣ ಅಲ್ಲಮಪ್ರಭುವೆಂಬ ತ್ರಿವಿಧ ನಾಮಸ್ವರೂಪವಾದ ಷೋಡಶಾಕ್ಷರಂಗಳೆ ಷೋಡಶವರ್ಣವಾಗಿ ನೆಲೆಸಿಪ್ಪರು ನೋಡಾ. ಇಂತು ಷೋಡಶಕಳಾಸ್ವರೂಪವಾದ ಚಿದ್ಘನ ಮಹಾಲಿಂಗದೇವನ ನಿರಂಜನ ಜಂಗಮದೋಪಾದಿಯಲ್ಲಿ ಸಗುಣ ನಿರ್ಗುಣ ಪೂಜೆಗಳ ಮಾಡಿ ಜಂಗಮಚರಣಸೋಂಕಿನಿಂ ಬಂದ ಗುರುಪಾದೋದಕವಾದಡೂ ಸರಿಯೆ, ಅದು ದೊರೆಯದಿದ್ದಡೆ, ಲಿಂಗಾಣತಿಯಿಂ ಬಂದೊದಗಿದ ಪರಿಣಾಮೋದಕವಾದಡೂ ಸರಿಯೆ, ಒಂದು ಭಾಜನದಲ್ಲಿ ಸೂಕ್ಷ್ಮದಿಂ ರಚಿಸಿ ಆ ಉದಕದೊಳಗೆ ಹಸ್ತೋದಕ ಮಂತ್ರೋದಕ ಭಸ್ಮೋದಕವ ಮಾಡಿ, ಆ ಮೇಲೆ ಅನಾದಿ ಮೂಲಪ್ರಣವ ಪ್ರಸಾದಪ್ರಣವದೊಳಗೆ ಅಖಂಡಜ್ಯೋತಿಪ್ರಣವ, ಅಖಂಡಮಹಾಜ್ಯೋತಿಪ್ರಣವವ ಲಿಖಿತವಮಾಡಿ, ಶುದ್ಧಾದಿಯಾದ ಪೂರ್ಣಭಕ್ತಿಯಿಂದ ಮಹಾಚಿದ್ಘನತೀರ್ಥವೆಂದು ಭಾವಿಸಿ ಪಂಚಾಕ್ಷರ ಷಡಕ್ಷರ ಮಂತ್ರಧ್ಯಾನದಿಂದ ಅನಿಮಿಷದೃಷ್ಟಿಯಿಂ ನಿರೀಕ್ಷಿಸಿ, ಮೂರು ವೇಳೆ ಪ್ರದಕ್ಷಿಣವ ಮಾಡಿ, ಆ ಚಿದ್ಘನ ತೀರ್ಥವನು ದ್ವಾದಶದಳ ಕಮಲದ ಮಧ್ಯದಲ್ಲಿ ನೆಲೆಸಿರ್ಪ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟವಿಧಮಂತ್ರ ಸಕೀಲಂಗಳಿಂದ ಆಚಾರಾದಿ ಶೂನ್ಯಾಂತವಾದ ಅಷ್ಟವಿಧ ಲಿಂಗಧ್ಯಾನದಿಂದ ಅಷ್ಟವಿಧ ಬಿಂದುಗಳ ಸಮರ್ಪಿಸಿದಲ್ಲಿಗೆ ಅಷ್ಟವಿಧೋದಕವಾಗುವುದಯ್ಯಾ. ಆ ಇಷ್ಟಮಹಾಲಿಂಗ ಜಂಗಮವೆತ್ತಿ ಅಷ್ಟಾದಶಮಂತ್ರ ಸ್ಮರಣೆಯಿಂದ ಮುಗಿದಲ್ಲಿಗೆ ನವಮೋದಕವಾಗುವುದಯ್ಯಾ. ಉಳಿದೋದಕವ ತ್ರಿವಿಧ ಪ್ರಣವಧ್ಯಾನದಿಂದ ಮುಕ್ತಾಯವ ಮಾಡಿದಲ್ಲಿಗೆ ದಶವಿಧೋದಕವೆನಿಸುವುದಯ್ಯಾ. ಹೀಗೆ ಮಹಾಜ್ಞಾನ ಲಿಂಗಜಂಗಮಸ್ವರೂಪ ಪಾದತೀರ್ಥ ಮುಗಿದ ಮೇಲೆ ತಟ್ಟೆ ಬಟ್ಟಲಲ್ಲಿ ಎಡೆಮಾಡಬೇಕಾದಡೆ ಗೃಹದಲ್ಲಿರ್ದ ಕ್ರಿಯಾಶಕ್ತಿಯರಿಗೆ ಧಾರಣವಿರ್ದಡೆ ತಾ ಸಲಿಸಿದ ಪಾದೋದಕ ಪ್ರಸಾದವ ಕೊಡುವುದಯ್ಯಾ. ಸಹಜಲಿಂಗಭಕ್ತರಾದಡೆ ಮುಖ ಮಜ್ಜನವ ಮಾಡಿಸಿ ತಾ ಧರಿಸುವ ವಿಭೂತಿಧಾರಣವ ಮಾಡಿಸಿ ಶಿವಶಿವಾ ಹರಹರ ಬಸವಲಿಂಗಾ ಎಂದು ಬೋಧಿಸಿ ಎಡೆಮಾಡಿಸಿಕೊಂಬುವುದಯ್ಯಾ. ಆಮೇಲೆ ತಾನು ಸ್ಥಲವಾದಡೆ ಸಂಬಂಧಪಟ್ಟು, ಪರಸ್ಥಲವಾದಡೆ ಚಿದ್ಘನ ಇಷ್ಟಮಹಾಲಿಂಗ ಜಂಗಮವ ವಾಮಕರಸ್ಥಲದಲ್ಲಿ ಮೂರ್ತಮಾಡಿಸಿಕೊಂಡು ದಕ್ಷಿಣಹಸ್ತದಲ್ಲಿ ಗುರುಲಿಂಗಜಂಗಮ ಸೂತ್ರವಿಡಿದು ಬಂದ ಕ್ರಿಯಾಭಸಿತವ ಲೇಪಿಸಿ, ಮೂಲಪ್ರಣವ ಪ್ರಸಾದಪ್ರಣವದೊಳಗೆ ಗೋಳಕಪ್ರಣವ ಅಖಂಡಗೋಳಕಪ್ರಣವ ಅಖಂಡ ಮಹಾಗೋಳಕಪ್ರಣವ, ಜ್ಯೋತಿಪ್ರಣವ ಧ್ಯಾನದಿಂದ ದ್ವಾದಶ ಮಣಿಯ ಧ್ಯಾನಿಸಿ ಪ್ರದಕ್ಷಿಸಿ, ಮೂಲಮೂರ್ತಿ ಲಿಂಗಜಂಗಮದ ಮಸ್ತಕದ ಮೇಲೆ ಸ್ಪರ್ಶನವ ಮಾಡಿ, ಬಟ್ಟಲಿಗೆ ಮೂರು ವೇಳೆ ಸ್ಪರ್ಶನವ ಮಾಡಿ, ಪದಾರ್ಥದ ಪೂರ್ವಾಶ್ರಯವ ಕಳೆದು ಶುದ್ಧಪ್ರಸಾದವೆಂದು ಭಾವಿಸಿ, ಆ ಇಷ್ಟ ಮಹಾಲಿಂಗ ಜಂಗಮಕ್ಕೆ ಅಷ್ಟಾದಶ ಮಂತ್ರಸ್ಮರಣೆಯಿಂದ ಮೂರುವೇಳೆ ರೂಪ ಸಮರ್ಪಿಸಿ, ಎರಡು ವೇಳೆ ರೂಪ ತೋರಿ, ಚಿರಪ್ರಾಣಲಿಂಗ ಮಂತ್ರ ಜಿಹ್ವೆಯಲ್ಲಿಟ್ಟು ಆರನೆಯ ವೇಳೆಗೆ ಭೋಜ್ಯಗಟ್ಟಿ ಆ ಇಷ್ಟಮಹಾಲಿಂಗ ಮಂತ್ರಧ್ಯಾನದಿಂದ ಸಮರ್ಪಿಸಿ, ಷಡ್ವಿಧ ಲಿಂಗಲೋಲುಪ್ತಿಯಿಂದ ಸಂತೃಪ್ತನಾಗಿ ಆಚರಿಸಿದಾತನೆ ಗುರುಭಕ್ತನಾದ ನಿಚ್ಚಪ್ರಸಾದಿಯೆಂಬೆ ಕಾಣಾ ಚೆನ್ನಮಲ್ಲಿಕಾರ್ಜುನಾ
--------------
ಅಕ್ಕಮಹಾದೇವಿ
ಹರಹರ ಶಿವಶಿವ ಜಯಜ ಕರುಣಾಕರ ಮತ್ಪ್ರಾಣಕಳಾಚೈತನ್ಯಸ್ವರೂಪ ಮಹಾಪ್ರಭು ಶ್ರೀಗುರುಲಿಂಗಜಂಗಮದ ಮಹಾಪ್ರಸಾದವೆ ಪರಬ್ರಹ್ಮ ಪರಮಕಳಾಚೈತನ್ಯ ಚಿತ್ಸ್ವರೂಪ ಅನಾದಿ ನಿಷ್ಕಲ ಪರಶಿವಲಿಂಗಸ್ವರೂಪ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಚೈತನ್ಯಸ್ವರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಶಿವಾನುಭಾವದ ಶುದ್ಧಿನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರುಪಮ ನಿರಾಲಂಬ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿತ್ಯ ಚಿದೈಶ್ವರ್ಯ ಚಿತ್ಕಾಂತಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿಜಮೋಕ್ಷದ ಕಣಿ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಭವರೋಗವೈದ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಗುಣ ನಿಷ್ಕಳಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಪ್ರಮಾಣ ಅಗೋಚರ ನಿಜಚಿನ್ಮಯರೂಪು ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಅಗಣಿತ ನಿರಾತಂಕ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರಾವಯ ನಿಶ್ಶೂನ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ನಿರ್ಮಾಯ ನಿಷ್ಕಾಮ್ಯ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಬೆಳಗು ತಾನೆ ನೋಡ. ಶ್ರೀಗುರುಲಿಂಗಜಂಗಮದ ಪ್ರಸಾದವೆ ಚಿದ್ಘನಮಹಾಲಿಂಗ ತಾನೆ ನೋಡ ಸಂಗನಬಸವೇಶ್ವರ.
--------------
ಗುರುಸಿದ್ಧದೇವರು
`ಬಸವ, ಬಸವ, ಬಸವ' ಎನುತಿರ್ಪವರೆಲ್ಲರು ಬಸವನ ಘನವನಾರೂ ಅರಿಯರಲ್ಲ? ಅನಾದಿ ಪರಶಿವನಲ್ಲಿ ಅಂತರ್ಗತಮಾಗಿರ್ದ ಮಹಾಪ್ರಕಾಶವೆ ಬಹಿಷ್ಕರಿಸಿತ್ತು. ಆ ಚಿತ್ತೆ ಚಿದಂಗ ಬಸವ, ಚಿದಂಗ ಬಸವನಿಂದುದಯಿಸಿದ ಚಿದ್ವಿಭೂತಿಯನೊಲಿದು ಧರಿಸಿದ ಶರಣರೆಲ್ಲರು ಜ್ಯೋತಿರ್ಮಯಲಿಂಗವಪ್ಪುದು ತಪ್ಪದು ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಇನ್ನಷ್ಟು ... -->