ಅಥವಾ

ಒಟ್ಟು 51 ಕಡೆಗಳಲ್ಲಿ , 16 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗುರುಶಿಷ್ಯರಿಬ್ಬರೂ ಸಹಪಂಕ್ತಿಯಲ್ಲಿ ಲಿಂಗಾರ್ಚನೆ ಮಾಡಿಹೆವೆಂಬರಯ್ಯಾ! ಹೋ! ಹೋ! ಬಾಲಭಾಷೆಯ ಕೇಳಲಾಗದು. ಅಲ್ಲಲ್ಲ, ಮಾಡಬಹುದು. ಅದೇನು ಕಾರಣ? ಗುರುವಿನ ಅರಿವಿನ ಹರಿವನರಿಯಬಲ್ಲಡೆ ಮಾಡಬಹುದು, ಮಾಡಬಹುದು. ಶಿಷ್ಯ ಪ್ರಸಾದವೆಂಬುಭಯಸಂದೇಹ ಹಿಂದುಳಿಯಬಲ್ಲಡೆ, ಮಾಡಬಹುದು, ಮಾಡಬಹುದು. ಇದಲ್ಲದೆ ಲಿಂಗಪ್ರಸಾದದ ಮೇಲೆ ಗುರುಪ್ರಸಾದವನಿಕ್ಕಿಹೆನೆಂಬ ಶಿವದ್ರೋಹಿಗಳನೇನೆಂಬೆ! ಕೊಂಡೆಹೆನೆಂಬ ಗುರುದ್ರೋಹಿಗಳನೇನೆಂಬೆ! ಇದು ಕಾರಣ, ಮಹಾಘನಸೋಮೇಶ್ವರಾ, ನಿಮ್ಮಲ್ಲಿ, ಇವರಿಬ್ಬರ ಗುರು ಶಿಷ್ಯರೆಂದೆನಾದಡೆ, ಎನ್ನನದ್ದಿ ನೀನೆದ್ದು ಹೋಗಯ್ಯಾ?
--------------
ಅಜಗಣ್ಣ ತಂದೆ
ಜಗದ ಮಧ್ಯದಲ್ಲಿ ಶರಣ ಜನಿಸಿದಡೇನು ಆ ಜಗದ ಸ್ವರೂಪನೆ ? ಅಲ್ಲಲ್ಲ. ಅದೇನು ಕಾರಣವೆಂದೊಡೆ : ಕೋಗಿಲೆಯ ತತ್ತಿಯನೊಡೆದು ಕಾಗೆ ಮರಿಯಮಾಡಿ ಸಲಹಿದಡೇನು ಅದು ತನ್ನ ಕೋಗಿಲೆಯ ಹಿಂಡ ಕೂಡುವುದಲ್ಲದೆ ಮರಳಿ ಕಾಗೆಯ ಹಿಂಡ ಬೆರೆವುದೆ ಹೇಳಾ ? ಲೋಕದ ಮಧ್ಯದಲ್ಲಿ ಅನಾದಿಶರಣನು ಲೋಕೋಪಕಾರಕ್ಕಾಗಿ ಜನಿಸಿದಡೇನು ತನ್ನ ಮುನ್ನಿನ ಶಿವತತ್ವವನೆ ಬೆರೆವನಲ್ಲದೆ ಮರಳಿ ಲೋಕವ ಬೆರೆಯನು ನೋಡಾ, ನಿಮ್ಮನರಿದ ಶಿವಜ್ಞಾನಿಶರಣನು ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಕನ್ನವನ್ನಿಕ್ಕಿ ಚಿನ್ನವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಹಾದರವಮಾಡಿ ಹಾಗವ ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಗಾಣವ ಹಾಕಿ ಮೀನ ಹಿಡಿದು ತಂದು ಜಂಗಮಾರ್ಚನೆಯ ಮಾಡುವದಾವ ಸದಾಚಾರ? ಇಂತಿವರೆಲ್ಲರು ಶಿವಯುಕ್ತವಾದ ಅನಾಚಾರ ಹಿಡಿದು ಬಿಡದೆ ಸದಾಚಾರಕ್ಕೊಳಗಾಗಿ ಮುಕ್ತಿವಡೆದರು. ಮೋಕ್ಷಾಪೇಕ್ಷಿತರಾಗಿ ಪಂಚಾಚಾರಕ್ಕೊಪ್ಪುವ ವ್ರತನೇಮಗಳ ಹಿಡಿದು ಬಿಟ್ಟವಂಗೆ ಮುಂದು ಹಿಂದಾಯಿತು, ಆತ ವ್ರತಗೇಡಿ. ಅದು ಹೇಗೆಂದೊಡೆ ಹಿಡಿದ ನೈಷ್ಠೆಯ ಬಿಟ್ಟಲ್ಲಿಯೇ ಕರ್ಮತ್ರಯಂಗಳು ಬೆನ್ನ ಬಿಡವೆಂದು ಶರಣರ ವಚನಂಗಳು ಸಾರುತ್ತಿವೆ. || ಗ್ರಂಥ || `ಸ್ಥಾವರಂ ಬ್ಥಿನ್ನದೋಷೇಣ ವ್ರತಭ್ರಷ್ಟೇನ ಜಂಗಮಂ| ಉಭಯೋಬ್ರ್ಥಿನ್ನಭಾವೇನ ನಾರ್ಚನಂ ನ ಚ ವಂದನಂ||' ಇಂತೆಂದುದಾಗಿ ಹಿಡಿದು ಬಿಡುವಲ್ಲಿ ಕಮ್ಮಾರನ ಕೈಯ್ಯ ಇಕ್ಕುಳವೇ ಶರಣ? ಹಿಡಿದು ಬಿಡುವಲ್ಲಿ ಚಂದ್ರಸೂರ್ಯರುಗಳ ಗ್ರಹಣವೇ ಶರಣ? ಹಿಡಿದು ಬಿಡುವಲ್ಲಿ ಸಲ್ಲದ ನಾಣ್ಯವೇ ಶರಣ? ಹಿಡಿದು ಬಿಡುವಲ್ಲಿ ಬಾಲಗ್ರಹವೇ ಶರಣ? ಅಲ್ಲಲ್ಲ. ಉರಿ ಕರ್ಪೂರವ ಹಿಡಿದಂತೆ ಹಿಡಿದ ವ್ರತನೇಮಂಗಳ ಬಿಡದಿಪ್ಪುದೀಗ ಶರಣಸ್ಥಲದ ಮತವಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಕಲ್ಪವೃಕ್ಷಕ್ಕೆ ಸಮಮಾಡಿ ಹೇಳಿದೆನಯ್ಯಾ, ಕರಸ್ಥಲದ ಮಹಾಂಗಮೂರ್ತಿಗೆ. ಅಲ್ಲಲ್ಲ, ಕಲ್ಪಿಸಿ ಬೇಡಿದಡೆ ಕೊಡುವುದದು ಸುರಾಮೃತವ; ಮೃತ [ವ] ಬೇಡಿದಡೆ ಕೊಡುವುದಯ್ಯಾ ಭವದ ಗೋಳಾಟ ಕಾಣಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ವೇದಶಾಸ್ತ್ರಪುರಾಣಾಗಮಗ್ರಂಥಂಗಳ ನೋಡಿದವರೆಲ್ಲರೇನು ಹಿರಿಯರೆಂಬೆನೆ ? ಅಲ್ಲಲ್ಲ, ನಿಲ್ಲು, ಮಾಣು. ಅವರೇ ಹಿರಿಯರಾದಡೆ, [ಟ್ಟುನವೆ], ಗಳೆಯಾಟ, ಮಿಣಿಯಾಟ, ಅದೃಶ್ಯಕರಣ, ಅಗ್ನಿಸ್ತಂಭ, ಆಕರ್ಷಣ, eõ್ಞಷಷ್ಠಿಕಲಾವಿದ್ಯೆಯ ಸಾದ್ಥಿಸಿದ ಡೊಂಬನೇನು ಕಿರಿಯನೇ ? ಇದು ಹಿರಿದು ಕಿರಿದಿನ ಪರಿಯಲ್ಲ. ಹಿರಿದು ಕಿರಿದಿನ ಪರಿ ಬೇರೆ ಕಾಣಿರಣ್ಣಾ. ಇದು ಉದರಪೋಷಣವಿದ್ಯೆ ಎನಿಸುವುದು. ಅವರನೆಂತು ಸರಿ ಎಂಬೆನಯ್ಯ, ಲಿಂಗವಂತಂಗೆ ? ಇದು ಕಾರಣ, ಗುಣ, ಜ್ಞಾನ, ಧರ್ಮ, ಆಚಾರ, ಶೀಲ ಸಾದ್ಥಿಸಿದಾತನೇ ಹಿರಿಯ ಕಾಣಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಹತ್ತಕ್ಕೆ ನೀಡಿ ಹನ್ನೊಂದಕ್ಕೆ ನೀಡದಾತ ಭಕ್ತನೇ? ಅಲ್ಲಲ್ಲ. ಭಿಕ್ಷವ ಕೊಡುವಲ್ಲಿ ಮುಖವ ನೋಡಿ ಕೊಡುವಾತ ಭಕ್ತನೇ? ಅಲ್ಲಲ್ಲ. ಗಣಾರಾಧನೆಯ ಮಾಡಿದಲ್ಲಿ ಒಳಗೊಂದು ಹೊರಗೊಂದು ನೀಡುವಾತ ಭಕ್ತನೇ? ಅಲ್ಲಲ್ಲ. ಅದೇನು ಕಾರಣವೆಂದರೆ ಇವರು ತಾಮಸಭಕ್ತರು. ಇಂತಪ್ಪ ತಾಮಸಭಕ್ತರಿಗೆ ಶಿವನು ಒಲಿ ಒಲಿ ಎಂದರೆ ಎಂತೊಲಿಯುವನಯ್ಯ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಶೀಲ ಶೀಲವೆಂದು ನುಡಿವುತಿರ್ಪರೆಲ್ಲರು. ಶೀಲದ ಹೊಲಬನಾರೂ ಅರಿಯರಲ್ಲ. ಕೆರೆ ಬಾವಿ ಹಳ್ಳ ಕೊಳ್ಳ ಹೊಳೆಗಳ ನೀರ ಬಳಸದಿರ್ದಡೆ ಶೀಲವೆ ? ಕೊಡಕ್ಕೆ ಪಾವಡವ ಹಾಕಿ ಚಿಲುಮೆಯ ಶೀತಳವ ತಂದಡೆ ಶೀಲವೆ ? ಒಳ್ಳೆ ಭಂಗಿ ಉಳ್ಳೆ ನುಗ್ಗೆಯ ಬಿಟ್ಟಡೆ ಶೀಲವೆ ? ಬೆಳೆದ ಬೆಳೆಸು ಕಾಯಿಹಣ್ಣುಗಳ ಬಿಟ್ಟಡೆ ಶೀಲವೆ ? ಉಪ್ಪು ಎಣ್ಣೆ ತುಪ್ಪ ಹಾಲು ಇಂಗು ಮೆಣಸು ಅಡಿಕೆ ಬೆಲ್ಲಗಳ ಬಿಟ್ಟಡೆ ಶೀಲವೆ ? ಪರಪಾಕವ ಬಿಟ್ಟು ಸ್ವಯಪಾಕದಲ್ಲಿರ್ದಡೆ ಶೀಲವೆ ? ಅಲ್ಲಲ್ಲ. ಭವಿಕಾಣಬಾರದಂತಿರ್ದಡೆ ಶೀಲವೆ ? ಅಲ್ಲಲ್ಲ. ಅದೇನು ಕಾರಣವೆಂದೊಡೆ : ಇಂತಿವೆಲ್ಲವು ಹೊರಗಣ ವ್ಯವಹಾರವು. ಇನ್ನು ಅಂತರಂಗದ ಅರಿಷಡ್ವರ್ಗಂಗಳೆಂಬ ಭವಿಯ ಕಳೆಯಲಿಲ್ಲ. ಮಾಯಾಮೋಹವೆಂಬ ಒಳ್ಳೆ ಭಂಗಿ ಉಳ್ಳೆ ನುಗ್ಗೆಯ ಬಿಡಲಿಲ್ಲ. ಸಂಸಾರವಿಷಯರಸವೆಂಬ ಹಳ್ಳ ಕೊಳ್ಳ ಕೆರೆ ಬಾವಿಗಳ ನೀರ ನೀಗಲಿಲ್ಲ. ಅಷ್ಟಮದಂಗಳೆಂಬ ಉಪ್ಪು ಎಣ್ಣೆ ತುಪ್ಪ ಹಾಲು ಇಂಗು ಮೆಣಸು ಅಡಿಕೆ ಬೆಲ್ಲಗಳ ಬಿಡಲಿಲ್ಲ. ಸಕಲ ಕರಣಂಗಳೆಂಬ ಬೆಳಸು ಫಲಂಗಳ ಬಿಡಲಿಲ್ಲ. ಮನವೆಂಬ ಕೊಡಕ್ಕೆ ಮಂತ್ರವೆಂಬ ಪಾವಡವ ಮುಚ್ಚಿ ಚಿತ್‍ಕೋಣವೆಂಬ ಚಿಲುಮೆಯಲ್ಲಿ ಚಿದಾಮೃತವೆಂಬ ಶೀತಳವ ತಂದು ಚಿನ್ಮಯಲಿಂಗಕ್ಕೆ ಅಭಿಷೇಕವ ಮಾಡಲಿಲ್ಲ. ಇಂತೀ ಅಂತರಂಗದ ಪದಾರ್ಥಂಗಳ ಬಿಟ್ಟು ಮುಕ್ತಿಯ ಪಡೆವೆನೆಂಬ ಯುಕ್ತಿಗೇಡಿಗಳಿಗೆ ಭವಬಂಧನಂಗಳು ಹಿಂಗಲಿಲ್ಲ, ಜನನಮರಣಂಗಳು ಜಾರಲಿಲ್ಲ, ಸಂಸಾರದ ಮಾಯಾಮೋಹವ ನೀಗಲಿಲ್ಲ. ಇಂತಪ್ಪ ಅಜ್ಞಾನಜೀವಿಗಳ ವಿಧಿಯೆಂತಾಯಿತ್ತೆಂದಡೆ : ಹುತ್ತದೊಳಗಣ ಹಾವ ಕೊಲುವೆನೆಂದು ಮೇಲೆ ಹುತ್ತವ ಬಡಿದ ಅರೆಮರುಳನಂತಾಯಿತ್ತು ನೋಡಾ ಅಖಂಡೇಶ್ವರಾ.
--------------
ಷಣ್ಮುಖಸ್ವಾಮಿ
ಜಾವ ಘಳಿಗೆಯ ನೇಮದ ಪೂಜೆಯ ನೇಮಕರೆಲ್ಲ, ಫಲದಾಯಕರಾಗಿ ಹೋದರು. ಲಿಂಗಭಕ್ತ ಕಾಲ ನೇಮದ ಪೂಜಾ ಫಲದಾಯಕನೆ ಅಲ್ಲಲ್ಲ. ಲಿಂಗಭಕ್ತ ಮಾಡುವ ಪೂಜೆ ನಿರ್ಮಾಲ್ಯವಾಗದು, ತಾ ಸಹಿತ ಲಿಂಗಕ್ಕೆ ಪೂಜೆಯಹನಾಗಿ. ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ನಿಮ್ಮ ನಿಜಭಕ್ತ ಮಾಡುವ ಪೂಜೆಯ ಕ್ರಮವಿದು.
--------------
ಸ್ವತಂತ್ರ ಸಿದ್ಧಲಿಂಗ
ಭಕ್ತಂಗೆ ಜಂಗಮಂಗೆ ರೂಪದಿಂದ ಭೇದವೊ, ಆಚರಣೆಯಿಂದ ಭೇದವೊ ? ಅಲ್ಲಲ್ಲ. ಭಕ್ತನಾದರೊ, ಮೂರಕ್ಕೆ ಒಳಗು ; ಜಂಗಮವಾದರೊ, ಮೂರಕ್ಕೆ ಹೊರಗು. ಒಳಗಾದವರಿಗೆ ಹೊರಗಾದವರ ಪಾದೋದಕವಲ್ಲದೆ ಒಳಗಾದವರ ಪಾದೋದಕ ಸಲ್ಲದು. ತೆಗೆದುಕೊಂಡವರಿಗೆ ನರಕ ತಪ್ಪದು ; ಕೊಟ್ಟವಂಗೆಯೂ ಭವ ಹಿಂಗದು ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನಾ.
--------------
ಸಿದ್ಧರಾಮೇಶ್ವರ
ಪಂಚೇಂದ್ರಿಯಂಗಳ ಮುಖಂಗಳಲ್ಲಿ ಅಲ್ಲಲ್ಲಿ ತಾಗಿದ ಸುಖವ ಸುಖಿಸಿ ಲಿಂಗಾರ್ಪಿತವೆಂಬರು. ಅದು ಲಿಂಗಾರ್ಪಿತವೆ ? ಅಲ್ಲಲ್ಲ. ಅರ್ಪಿತವ ಮಾಡದೆ, ಅನರ್ಪಿತವ ಹೊದ್ದದೆ ಅರ್ಪಿಸಬೇಕು. ಅರ್ಪಿಸುವ ಈ ಭೇದವುಳ್ಳನ್ನಕ್ಕ ಶರಣನೆನಿಸಬಾರದು. ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಆವ ಕ್ರೀಯ ಮಾಡಿದಡೇನು? ಉಪಾಧಿರಹಿತ ನಿರುಪಾಧಿಕ ಚಿದ್ರೂಪ ಪರಮಾನಂದಾತ್ಮ ಶರಣನು. ಕ್ರೀಯ ಮರೆಯಮಾಡಿಕೊಂಡಿಹನೆಂದಡೆ, ಅದು ಪರಮಾರ್ಥವೆ? ಚಂದ್ರಂಗೆ ಮೇಘಸಂಬಂಧವೆಂಬುದು ಕಲ್ಪನೆಯಲ್ಲದೆ, ಅದು ಸಹಜಸಂಬಂಧವೇ? ಅಲ್ಲಲ್ಲ. ಶರಣಂಗೆ ಕಲ್ಪನಾದೇಹವಿದ್ದು, ನಿಃಕ್ರಿಯಾವಂತನಾದ ಮಹಾತ್ಮನು ಚಿತ್ರದೀಪದಂತೆ ತೋರುತ್ತಿಹನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ ಶರಣನು.
--------------
ಸ್ವತಂತ್ರ ಸಿದ್ಧಲಿಂಗ
ಭವಿಯೆಂದಡೆ ಲಿಂಗವಿಲ್ಲದವ ಭವಿಯೇ? ಅಲ್ಲಲ್ಲ. ಭವಿಯೆಂದಡೆ ವೇದವೇದಾಂತರವನೋ, ಅಂಗವ ಧರಿಸದವ ಭವಿಯೆ? ಅಲ್ಲಲ್ಲ. ಅಂಗದ ಸ್ಥ್ಕಿಯನರಿದಡೇನಾಯಿತ್ತು? ಗುಣ ್ಕಳಿದು ಂಗವ ಕೊಡುವ ಗುರುವಿಲ್ಲ. ಬಹಿರಂಗದ್ಲ ಂಗವಿರಹಿತ, ಅಂತರಂಗದ್ಲ ಂಗಲೋಲುಪ್ತ. ಹೊಲಬುಳ್ಳವನಾದಡೇನು, ್ಕಳಿಯದವರಿಲ್ಲದನ್ನಕ್ಕ? ಸತ್ಕ್ರಿಯಾಸಾಮರಸ್ಯಕ್ಕೆ ಭವಿಯಲ್ಲದೆ ಅನುಭವಗೋಷಿ*ಗೆ ಭವಿಯೆ? ಅಲ್ಲಲ್ಲ. ಭವಿಯೆಂದಡೆ ಮದ್ಯಪಾನ ಮಾಂಸಭಕ್ಷಣ ಪರಸ್ತ್ರೀಸಂಗ ಪರಧನಚೋರತ್ವ ನಿಜವಸ್ತು ಅಂತರತ್ವವಿದ್ದವನೆ ಭವಿಯಯ್ಯಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಲಿಂಗದಲ್ಲಿ ಬೆರೆದಲ್ಲಿ ಬಳಿಕ ಅಂಗದ್ಲ ಬೆರೆಯಲುಂಟೆ ದೇವಾ? ಅಲ್ಲಲ್ಲ. ಅಂಗದ್ಲ ಬೆರೆದ ಬಳಿಕ ಲಿಂಗ[ದಲ್ಲಿ] ಬೆರೆಯಲುಂಟೆ ದೇವಾ, ಕಪಿಲಸಿದ್ಧಮಲ್ಲಿಕಾರ್ಜುನಾ, ನಿಮ್ಮ ಪೂಜಿಸಿದ ಫಲ ಪಕ್ವವಾಗದನ್ನಕ್ಕ?
--------------
ಸಿದ್ಧರಾಮೇಶ್ವರ
ಭಸ್ಮವ ಹೂಸಿದ್ಲ ಶರಣನೆ? ಅಲ್ಲಲ್ಲ ; ಮಾಡುವ ಕ್ರಿಯೆ ಭಸ್ಮವಾದಡೆ ಶರಣ. ನೋಡುವ ಕೃತ್ಯ ರುದ್ರಾಕ್ಷಿಯಾದಡೆ ಶರಣ ನೋಡಾ, ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಆಗಮ ನಿಗಮ ಶಾಸ್ತ್ರ ಪುರಾಣವೆಂಬ ಅಂಧಕನ ಕೈಗೆ ಕೋಲಕೊಟ್ಟು ನಡೆಸಿಕೊಂಡು ಹೋಗುವಾಗ, ತನ್ನ ಕಣ್ಣುಗೆಟ್ಟಡೆ ಮುಂದಕ್ಕೆ ಗಮನವಿಲ್ಲ. ಹಿಂದಕ್ಕೆ ತಿರುಗಲರಿಯದೆ, ಎರಡಕ್ಕೆ ಕೆಟ್ಟ ಜಂಬುಕನಂತೆ ಆಯಿತ್ತು ನೋಡಾ. ಸಜ್ಜನ ಗಂಡನ ಕದ್ದು, ಕಳ್ಳನ ಹಿಂದೆ ಹೋದ ಸತಿಯಂತೆ ಆದರಲ್ಲಾ. ಸಂತೆಯಲ್ಲಿ ಗುಡಿಸಲನಿಕ್ಕಿ ಹಡೆದುಂಬ ಸೂಳೆಯಂತೆ, ಮನವೆ ಸೂಳೆಯಾಗಿ, ಮಾತಿನ ಮಾಲೆಯ ಸರವನಿಕ್ಕಿಕೊಂಡು, ವಾಚಾಳಿಗತನದಿಂದ ಒಡಲ ಹೊರೆವವರೆಲ್ಲರೂ ಶರಣರಪ್ಪರೆ ? ಅಲ್ಲಲ್ಲ. ಅದೆಂತೆಂದಡೆ: ತನು ಕರಗಿ, ಮನ ಪುಳಕವಾದ ಮಹಾಮಹಿಮರಿಗಲ್ಲದೆ ಉಚ್ಚಿಯ ಬಚ್ಚಲಲ್ಲಿ ಓಲಾಡುವ ತೂತಜ್ಞಾನಿಗಳಿಗೆಂತಪ್ಪದು ಹೇಳಾ ? ಕಾಲಾಳು ಆಕಾಶವನಡರಿಹೆನೆಂಬ ಪರಿಯೆಂತೊ ? ಬ್ರಹ್ಮಪುರ ವೈಕುಂಠ ರುದ್ರಪುರ ಅಷ್ಟಾದಿ ಕೈಲಾಸವೆಂಬ ಈ ಪಂಚಗ್ರಾಮಂಗಳ ವರ್ಮ ಕರ್ಮವಳಿದ ಮಹಾದೇವಂಗಲ್ಲದೆ ಮುಂದಕ್ಕೆ ಅಡಿಯಿಡಬಾರದು. ಪಿಪೀಲಿಕ ಕಪಿಯ ಮತವೆಂಬ ಪಥ ಮೀರಿ, ವಿಹಂಗವೆಂಬ ವಾಹನಮಂ ಏರಿ, ಬ್ರಹ್ಮಾಂಡಕ್ಕೆ ದಾಳಿ ಮಾಡಿ, ಸುವರ್ಣಪುರಮಂ ಸುಟ್ಟು ಸೂರೆಗೊಂಡ ಮಹಾನುಭಾವಿಗಳ ತೋರಿ ಬದುಕಿಸಾ. ನಿಜಗುರು ಭೋಗೇಶ್ವರಾ, ನಾ ನಿಮ್ಮ ಧರ್ಮವ ಬೇಡಿಕೊಂಬೆ.
--------------
ಭೋಗಣ್ಣ
ಇನ್ನಷ್ಟು ... -->