ಅಥವಾ

ಒಟ್ಟು 82 ಕಡೆಗಳಲ್ಲಿ , 18 ವಚನಕಾರರು , 49 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹಾರುವನ ಕೊಂದು ಹಾರುವನಾಗಿ ಕರ್ಮಜ್ಞಾನ ಕಂಡು ಕಾಣಿಸದಿರ್ದು ಕರಗಿದರೆ ಆತನೇ ಗುರುನಿರಂಜನ ಚನ್ನಬಸವಲಿಂಗ.
--------------
ದೇಶಿಕೇಂದ್ರ ಸಂಗನಬಸವಯ್ಯ
ಆದಿ ಅನಾದಿ ಸುರಾಳ ನಿರಾಳ ಶೂನ್ಯ ನಿಃಶೂನ್ಯದಿಂದತ್ತತ್ತಲಾದ ಘನಮಹಾಲಿಂಗವೆಂಬ ಪರಬ್ರಹ್ಮವು, ಗುರುಕರುಣದಿಂ ಬಹಿಷ್ಕರಿಸಿ ಕರಸ್ಥಲಕ್ಕೆ ಇಷ್ಟಲಿಂಗವಾಗಿ ಬರಲು ಆ ಲಿಂಗದಲ್ಲಿ ಕೃಷ್ಣಾ ಭಾಗೀರಥಿ ಮೊದಲಾದ ಅನೇಕ ತೀರ್ಥಂಗಳು, ಕಾಶಿರಾಮೇಶ್ವರ ಮೊದಲಾದ ಅನೇಕ ಕ್ಷೇತ್ರಂಗಳು, ಹಿಮಾಚಲ ಶ್ರೀಶೈಲಪರ್ವತ ಮೊದಲಾದ ಅನೇಕ ಪುಣ್ಯಶೈಲಂಗಳುಂಟೆಂದು, ತನ್ನ ಸ್ವಾನುಭಾವಮೂಲಜ್ಞಾನದಿಂ ತಿಳಿದು, ಸಕಲ ಸಂಶಯಂ ಬಿಟ್ಟು ನಿಶ್ಚಿಂತನಾಗಿ, ಮನವ ಮಹಾಘನದಲ್ಲಿರಿಸಿ ಇರಬಲ್ಲಡೆ ಆತನೇ ಅನಾದಿಸದ್ವೀರಮಹೇಶ್ವರನ ಭಕ್ತನು ನೋಡಾ. ಕಾಡನೊಳಗಾದ ಶಂಕರಪ್ರಿಯ ಚನ್ನಕದಂಬಲಿಂಗ ನಿರ್ಮಾಯಪ್ರಭುವೆ.
--------------
ಕಾಡಸಿದ್ಧೇಶ್ವರ
ಯೋಗದ ನೆಲೆಯನರಿದೆನೆಂಬವರಿಗೆ ಹೇಳಿಹೆವು ಕೇಳಿರೇ. ಪೃಥ್ವಿ, ಅಪ್ಪುಗಳೆರಡ ಆಧಾರಗೊಳಿಸಿ, ಅಗ್ನಿ ವಾಯುಗಳೆರಡ ಅಂಬರಸ್ಥಾನಕ್ಕೊಯ್ದು, ಆತ್ಮ ಆಕಾಶವೆರಡ ಅನುಭಾವ ಮುಖಕ್ಕೆ ತಂದು, ಮನದೆ ಅನುಮಾನವಳಿದು, ನೆನಹು ನಿಶ್ಚಲವಾಗಿ, ಒಳಗೆ ಜ್ಯೋರ್ತಿಲಿಂಗವ ನೋಡುತ್ತ, ಹೊರಗೆ ಎರಡು ಹುಬ್ಬಿನ ನಡುವೆ ಉಭಯ ಲೋಚನವಿರಿಸಿ, ಹಿಂದು ಮುಂದನೆಣಿಸದೆ ಸಂದೇಹವಿಲ್ಲದೆ ಖೇಚರಿಯನಾಚರಿಸಲು, ಲೋಚನ ಮೂರುಳ್ಳ ಶಿವ ತಾನಹನು, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಆತನೇ ಶಿವಯೋಗಿ.
--------------
ಸ್ವತಂತ್ರ ಸಿದ್ಧಲಿಂಗ
ಪಂಚಾಕ್ಷರಿಯೆ ಸರ್ವಮಂತ್ರವೆಲ್ಲವಕ್ಕೆಯು, ಉತ್ಪತ್ತಿ, ಸ್ಥಿತಿ, ಲಯಸ್ಥಾನ, ಸರ್ವಕಾರಣವೆಲ್ಲವಕ್ಕೆಯು ಮೂಲ. ಅದೆಂತೆಂದಡೆ: ಸಪ್ತಕೋಟಿ ಮಹಾಮಂತ್ರಂ ಉಪಮಂತ್ರಸ್ತನೇಕತಃ ಪಂಚಾಕ್ಷರ ಪ್ರತಿಲೀಯಂತೇ ಪುನಸ್ತಸ್ಯವಸರ್ಗತಃ ತಸ್ಮಿನ್ ವೇದಶ್ಚ ಶಾಸ್ತ್ರಾಣಿ ಮಂತ್ರೇ ಪಂಚಾಕ್ಷರಿ ಸ್ಥಿತಂ ಎಂದುದಾಗಿ, ಇದು ಕಾರಣ ಶ್ರೀ ಪಂಚಾಕ್ಷರಿಯುಳ್ಳ ಸದ್ಭಕ್ತನೇ ವೇದವಿತ್ತು. ಆತನೇ ಶಾಸ್ತ್ರವಾನ್, ಆ ಮಹಾಮಹಿಮನೆ ಪುರಾಣಿಕನು, ಆತನೇ ಆಗಮಿಕನು, ಆತನೇ ಸರ್ವಜ್ಞನಯ್ಯಾ, ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಲಿಂಗವಂತರ ಲಿಂಗವೆಂಬುದೇ ಶೀಲ, ಲಿಂಗವಂತರ ರಾಣಿವಾಸವ ಲಿಂಗದ ರಾಣಿವಾಸವೆಂಬುದೇ ಶೀಲ, ಲಿಂಗವಂತರ ಅರ್ಥ ಪ್ರಾಣ ಅಬ್ಥಿಮಾನಕ್ಕೆ ತಪ್ಪದಿಪ್ಪುದೇ ಶೀಲ, ಲಿಂಗವಂತರ ಪಾದೋದಕ ಪ್ರಸಾದ ಸೇವನೆಯ ಮಾಡುವುದೇ ಮಹಾಶೀಲವಯ್ಯಾ, ಇಂತಪ್ಪ ಶೀಲ ಸುಶೀಲದೊಳಗಾದ ಶೀಲವೇ ಶೀಲ. ಈ ಕ್ರೀಯನರಿದು ನಂಬಿ ಭಯಭಕ್ತಿಯಿಂ ತನು ಮನ ಧನದಲ್ಲಿ ದುರ್ಭಾವ ಹುಟ್ಟದೆ ಸ್ವಭಾವ ಸದ್ಭಾವದಿಂ ಏಕಭಾವವಾದಡೆ, ಆತನೇ ಸದ್ಭಕ್ತನು. ಅಂತಹ ಸದ್ಭಕ್ತದೇಹಿಕದೇವನಾಗಿಪ್ಪನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಆಚಾರಲಿಂಗವ ಅಂಗೈಯೊಳಗಳವಡಿಸಿ ಮಜ್ಜನಕ್ಕೆರೆದು ತ್ರಿಪುಂಡ್ರಮಂ ಧರಿಯಿಸಿ ಪುಷ್ಪಜಾತಿಗಳಿಂದರ್ಚಿಸಿ ಪೂಜೆಮಾಡುವ ಕರವು ಆ ಪೂಜೆಗೆ ಮೆಚ್ಚಿ ಪಂಚಸ್ಫರ್ಷನಂಗಳಂ ಮರೆಯಲೊಡನೆ ಆ ಕರದಲ್ಲಿ ಜಂಗಮಲಿಂಗ ನೆಲೆಗೊಂಡಿತ್ತು. ಆ ಲಿಂಗದ ಪ್ರಕಾಶಮಂ ನೋಡುವ ನೇತ್ರಂಗಳು ಆ ಪ್ರಕಾಶಕ್ಕೆ ಮೆಚ್ಚಿ ಪಂಚವರ್ಣಂಗಳಂ ಮರೆಯಲೊಡನೆ ಅ ನೇತ್ರಂಗಳಲ್ಲಿ ಶಿವಲಿಂಗವೆ ನೆಲೆಗೊಂಡಿತ್ತು. ಆ ಲಿಂಗದ ಸದ್ವಾಸನೆಯಂ ವಾಸಿಸುವ ಘ್ರಾಣ ಆ ವಾಸನೆಗೆ ಮೆಚ್ಚಿ ಪಂಚಗಂಧಂಗಳಂ ಮರೆಯಲೊಡನೆ ಆ ಘ್ರಾಣದಲ್ಲಿ ಆಚಾರಲಿಂಗ ನೆಲೆಗೊಂಡಿತ್ತು. ಆ ಲಿಂಗದ ಮಂತ್ರಸ್ವರೂಪವನೆತ್ತಿ ಕೊಂಡಾಡುವ ಜಿಹ್ವೆ ಆ ಮಂತ್ರಕ್ಕೆ ಮೆಚ್ಚಿ ಪಂಚರಸಂಗಳಂ ಮರೆಯಲೊಡನೆ ಆ ಜಿಹ್ವೆಯಲ್ಲಿ ಗುರುಲಿಂಗ ನೆಲೆಗೊಂಡಿತ್ತು. ಆ ಲಿಂಗಮಂ ಮನವೊಲಿದು ಹಾಡುವ ನಾದಮಂ ಕೇಳುವ ಶ್ರೋತ್ರ ಆ ನಾದಕ್ಕೆ ಮೆಚ್ಚಿ ಪಂಚನಾದಂಗಳಂ ಮರೆಯಲೊಡನೆ ಆ ಶ್ರೋತ್ರದಲ್ಲಿ ಪ್ರಸಾದಲಿಂಗ ನೆಲೆಗೊಂಡಿತ್ತು. ಆ ಲಿಂಗವ ನೆನೆವ ಮನ ಆ ನೆನಹಿಂಗೆ ಮೆಚ್ಚಿ ಪಂಚಪರಿಣಾಮಂಗಳಂ ಮರೆಯಲೊಡನೆ ಆ ಮನದಲ್ಲಿ ಮಹಾಲಿಂಗ ನೆಲೆಗೊಂಡಿತ್ತು. ಈ ಷಡಿಂದ್ರಿಯಂಗಳೂ ಲಿಂಗವನಪ್ಪಿ ಅಗಲದ ಕಾರಣ ಆ ಲಿಂಗವೊಲಿದು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ನೆಲೆಗೊಂಡಿತ್ತು. ಇಂತಪ್ಪ ಇಷ್ಟಲಿಂಗದಲ್ಲಿ ಶರಣಂ ನಿಷ್ಠೆ ನಿಬ್ಬೆರಗಾಗಿ ಧ್ಯಾನಯೋಗಮಂ ಕೈಕೊಂಡು ಷಡುವರ್ಣಮಂ ಮರೆಯಲೊಡನೆ ಆ ಲಿಂಗವೊಲಿದು ಅಂಗವೇದ್ಥಿಸಿ ಜ್ಞಾನಕ್ರೀಗಳಲ್ಲಿ ಷಡ್ವಿಧ ಪ್ರಾಣಲಿಂಗವಾಗಿ ನೆಲೆಗೊಂಡಿತ್ತು. ಆ ಪ್ರಾಣಲಿಂಗಳಂ ಶರಣ ಮಂತ್ರಮಾಲೆಯಂ ಹೃದಯದೊಳಿಂಬಿಟ್ಟು ಮನವೆಂಬರಳ್ದ ತಾವರೆಯಲ್ಲಿ ಜಾಗ್ರತ್ ಸ್ವಪ್ನದಲ್ಲಿ ಪೂಜಿಸುವ ಧಾರಣಯೋಗದೊಳಿರ್ದು ಕ್ರೀಯ ಮರೆಯಲೊಡನೆ ಆ ಲಿಂಗವೊಲಿದು ಮನವೇದ್ಥಿಸಿ ಭಾವಂಗಳಡಗಿ ತ್ರಿವಿಧ ಭಾವಲಿಂಗವಾಗಿ ನೆಲೆಗೊಂಡಿತ್ತು. ಆ ಭಾವಲಿಂಗಗಳ ಶರಣನೊಡೆವೆರೆಯಲೊಡನೆ ಕರ್ಪೂರ ಹೋಗಿ ಉರಿಯ ಹಿಡಿದಂತಾದ ಸಮಾದ್ಥಿಯೋಗದೊಳಿರ್ದು ಜ್ಞಾನವ ಮರೆಯಲೊಡನೆ ಆ ಶರಣಂಗೆ ಆ ಲಿಂಗವೊಲಿದು ಸರ್ವಾಂಗಲಿಂಗವಾಯಿತು. ಆತನೇ ಪರಬ್ರಹ್ಮ. ಇದನರಿಯದೆ ಜ್ಞಾನಕ್ರೀಗಳಿಂದಾಚರಿಸಿ ಲಿಂಗಾಂಗ ಸಂಯೋಗವಾಗದೆ ಕೆರಹಿನಟ್ಟೆಗೆ ನಾಯಿ ತಲೆದೂಗುವಂತೆ ತಮ್ಮ ಅರಿವಿಂಗೆ ತಾವೇ ತಲೆದೂಗಿ `ಅಹಂ ಬ್ರಹ್ಮ'ವೆಂಬ ಚೌರಾಶಿ ಹೊಲೆಯರ ಎನಗೆ ತೋರದಿರಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ದೇವಾ, ನಿಮ್ಮ ಪೂಜಿಸಿ ಚೆನ್ನನ ಕುಲ ಚೆನ್ನಾಯಿತ್ತು, ದೇವಾ, ನಿಮ್ಮ ಪೂಜಿಸಿ ದಾಸನ ಕುಲ ದೇಸೆವಡೆಯಿತ್ತು, ದೇವಾ, ನಿಮ್ಮಡಿಗೆರಗಿದ ಮಡಿವಾಳ ಮಾಚಯ್ಯನಿಮ್ಮಡಿಯಾದ. ನೀನೊಲಿದ ಕುಲಕೆ, ನೀನೊಲ್ಲದ ಹೊಲೆಗೆ ಮೇರೆಯುಂಟೆ ದೇವಾ ಶ್ವಪಚೋಪಿ ಮುನಿಶ್ರೇಷೊ*ೀ ಯಸ್ತು ಲಿಂಗಾರ್ಚನೇ ರತಃ ±ಲಿಂಗಾರ್ಚನವಿಹೀನೋ[s]ಪಿ ಬ್ರಾಹ್ಮಣಃ ಶ್ವಪಚಾಧಮಃ± ಎಂದುದಾಗಿ, ಜಾತಿ-ವಿಜಾತಿಯಾದಡೇನು ಅಜಾತಂಗೆ ಶರಣೆಂದನ್ನದವನು ಆತನೇ ಹೊಲೆಯ, ಕೂಡಲಸಂಗಮದೇವಾ.
--------------
ಬಸವಣ್ಣ
ಶಿವಭಕ್ತಿಯುಳ್ಳವಂಗೆ; ಕಾಮ ಬೇಡ, ಕ್ರೋಧ ಬೇಡ, ಲೋಭ ಬೇಡ; ಮೋಹ ಬೇಡ, ಮದ ಬೇಡ, ಮತ್ಸರ ಬೇಡ. ಶಿವಭಕ್ತಿಯುಳ್ಳವಂಗೆ; ಕಾಮ ಬೇಕು, ಕ್ರೋಧ ಬೇಕು, ಲೋಭ ಬೇಕು, ಮೋಹ ಬೇಕು, ಮದ ಬೇಕು, ಮತ್ಸರ ಬೇಕು. ಬೇಕೆಂಬುದಕ್ಕಾವ ಗುಣ ? ಕಾಮ ಬೇಕು ಲಿಂಗದಲ್ಲಿ, ಕ್ರೋಧ ಬೇಕು ಕರಣಂಗಳಲ್ಲಿ, ಲೋಭ ಬೇಕು ಪಾದೋದಕ ಪ್ರಸಾದದಲ್ಲಿ, ಮೋಹ ಬೇಕು ಗುರುಲಿಂಗ ಜಂಗಮದಲ್ಲಿ, ಮದ ಬೇಕು ಶಿವಚಾರದಿಂದ ಘನವಿಲ್ಲವೆಂದು, ಮತ್ಸರ ಬೇಕು ಹೊನ್ನು ಹೆಣ್ಣು ಮಣ್ಣಿನಲ್ಲಿ_ಇಂತೀ ಷಡ್ಗುಣವಿರಬೇಕು. ಬೇಡವೆಂಬುದಕ್ಕಾವುದು ಗುಣ ? ಕಾಮ ಬೇಡ ಪರಸ್ತ್ರೀಯರಲ್ಲಿ, ಕ್ರೋಧ ಬೇಡ ಗುರುವಿನಲ್ಲಿ, ಲೋಭ ಬೇಡ ತನು ಮನ ಧನದಲ್ಲಿ, ಮೋಹ ಬೇಡ ಸಂಸಾರದಲ್ಲಿ, ಮದ ಬೇಡ ಶಿವಭಕ್ತರಲ್ಲಿ, ಮತ್ಸರ ಬೇಡ ಸಕಲಪ್ರಾಣಿಗಳಲ್ಲಿ._ ಇಂತೀ ಷಡ್ಗುಣವನರಿದು ಮೆರೆಯಬಲ್ಲಡೆ ಆತನೇ ಸಹಜ ಸದ್ಭಕ್ತ ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಸ್ವಸ್ಥ ಸಿದ್ಧಾಸನದಲ್ಲಿ ಕುಳ್ಳಿರ್ದು ಅತ್ತಿತ್ತ ಕಂಪಿಸದೆ ನೆಟ್ಟೆಲುವ ನೆಟ್ಟನೆ ಮಾಡಿ ಅಧೋಮುಖಗಮನವಾಯುವ ಊಧ್ರ್ವಮುಖವ ಮಾಡಿ, ಆಧಾರವಂ ಬಲಿದು ಪ್ರಾಣವಾಯುವ ಪಾನವ ಮಾಡಿ ಆರುವೆರಳಿನಿಂ ಆರುದ್ವಾರವನೊತ್ತಲು ಶಶಿ ರವಿ ಬಿಂಬಗಳ ಮಸುಳಿಪ ನಾದ ಬಿಂದು ತೇಜವು ಕೂಡಿ ಮೂರ್ತಿಯಾಗಿ ಥಳಥಳಿಸಿ ಹೊಳೆವ ಲಿಂಗದ ಬೆಳಗಿನೊಳಗೆ ಮನವಳಿದಾತನೆ ಉನ್ಮನಿವನಿತೆಗೆ ವಲ್ಲಭನೆನಿಸುವ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಆತನೇ ಪರಮಯೋಗಿ.
--------------
ಸ್ವತಂತ್ರ ಸಿದ್ಧಲಿಂಗ
ಮೂರ್ಖನಾಗಲಿ, ಪಂಡಿತನಾಗಲಿ, ಬ್ರಹ್ಮಚಾರಿಯಾಗಲಿ, ಗೃಹಸ್ಥನಾಗಲಿ, ವಾನಪ್ರಸ್ಥನಾಗಲಿ, ಯತಿಯಾಗಲಿ, ಶ್ರೀ ವಿಭೂತಿಯನೊಲಿದು ಧರಿಸಿದಾತನೆ ಧನ್ಯನು. ಆತನೇ ಸರ್ವಾಪತ್ತುಗಳ ತೊಲಗ ನೂಂಕಿ, ಸಮಸ್ತ ಪಾತಕೋಪಪಾತಕಂಗಳು ತೊಲಗಿ, ಶುದ್ಧಾತ್ಮನಹನಯ್ಯ. ``ತ್ರಿಪುಂಡ್ರಂ ಭಸ್ಮನಾ ಕರೋತಿ ಯೋ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋ ವಿದ್ವಾನ್ ಬ್ರಹ್ಮಚಾರೀ ಗೃಹಸ್ಥೋ ವಾನಪ್ರಸ್ಥೋ ಯತಿರ್ವಾ ಸಮಸ್ತಪಾತಕೋ ಪಾತಕೇಭ್ಯಃ ಪೂತೋ ಭವತಿ' ಎಂದು ಶ್ರುತಿ ಸಾರುತ್ತಿರೆ ಇಂತಪ್ಪ ಶ್ರೀ ವಿಭೂತಿಯನರಿದು ಧರಿಸಿ, ನಮ್ಮ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನ, ಕೂಡಿರಣ್ಣಾ.
--------------
ಸ್ವತಂತ್ರ ಸಿದ್ಧಲಿಂಗ
ಕುಲಕಷ್ಟಮತಿಹೀನನಿಗೆ ಉಪದೇಶವ ಕೊಡಲಾಗದು ವಿಭೂತಿಯ ನೀಡಲಾಗದು, ಕರ್ಣಮಂತ್ರವ ಹೇಳಿ ಲಿಂಗವ ಕಟ್ಟಲಾಗದು. ಕ್ಟದರೂ ಹಿಂದಣ ಪೂರ್ವಜನ್ಮವ ಬಿಡದಿದ್ದಡೆ ಹೊಲೆಯರ ಮನೆಯ ಶ್ವಾನಬಳಗದಂತೆ. ಕುಲಕಷ್ಟನಾದಡೆಯೂ ಆಗಲಿ ಉಪದೇಶವ ಕೊಡಲಿ, ವಿಭೂತಿಯ ನೀಡಲಿ ಕರ್ಣಮಂತ್ರವ ಹೇಳಲಿ, ಲಿಂಗವ ಕಟ್ಟಲಿ, ಕಟ್ಟಿದಡೆ, ಸ್ವಪ್ನ ಜಾಗ್ರದಲ್ಲಿ ಶಿವಜ್ಞಾನಿಯಾಗಿದ್ದಡೆ ಲೋಕಕ್ಕೆ ಆತನೇ ಉಪದೇಶಕರ್ತ ಕಾಣಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಏಕತತ್ತ್ವ ತ್ರಿತತ್ತ್ವ ಪಂಚತತ್ತ್ವ ಪಂಚವಿಂಶತಿತತ್ತ್ವ ಷಟ್‍ತ್ರಿಂಶತ್ ತತ್ತ್ವ ಇಂತೀ ತತ್ತ್ವ ಂಗಳೆಲ್ಲವನೂ ಗರ್ಭೀಕರಿಸಿಕೊಂಡಿಪ್ಪ ಈ ತತ್ತ್ವಂಗಳೆಲ್ಲವಕ್ಕೆಯೂ ಅಧಿಕವಾಗಿಪ್ಪ ಮಹಾತತ್ತ್ವವೂ `ನ ಗುರೋರಧಿಕಂ ನ ಗುರೋರಧಿಕಂ' ಎಂದುದಾಗಿ `ನಾಸ್ತಿ ತತ್ತ್ವಂ ಗುರೋಃ ಪರಂ' ಎಂದುದಾಗಿ 'ಅದ್ವೈತಂ ತ್ರಿಷು ಲೋಕೇಷು ನಾದ್ವೈತಂ ಗುರುಣಾ ಸಹ' ಎಂದುದಾಗಿ `ಗುರುದೇವೋ ಮಹಾದೇವೋ' ಎಂದುದಾಗಿ ಶ್ರೀಗುರುತತ್ತ್ವವೇ ಪರತತ್ತ್ವವು. ಶಿವ ಶಿವಾ ಸಕಲವೇದ ಶಾಸ್ತ್ರಪುರಾಣ ಆಗಮ ಅಷ್ಟಾದಶವಿದ್ಯಂಗಳು ಸರ್ವವಿದ್ಯಂಗಳು ಸಪ್ತಕೋಟಿಮಹಾಮಂತ್ರಂಗಳು ಉಪಮಂತ್ರಂಗಳು ಅನಂತಕೋಟಿಗಳನೂ ಗರ್ಭೀಕರಿಸಿಕೊಂಡಿಪ್ಪ ಇವಕೆ ಮಾತೃಸ್ಥಾನವಾಗಿ, ಇವಕೆ ಉತ್ಪತ್ತಿ ಸ್ಥಿತಿ ಲಯ ಕಾರಣಂಗಳಿಗೆ ಕಾರಣವಾಗಿಪ್ಪ ಮಹಾತತ್ತ್ವ ಮಹಾಮಂತ್ರರಾಜನು, ಶ್ರೀಮೂಲಮಂತ್ರವು. ಈ ಮಹಾತತ್ವ್ತವು ಏಕವಾದ ಮಹಾಲಿಂಗವು. ಈ ಮಹಾಲಿಂಗವೆ ಅಂಗವಾಗಿಪ್ಪ ಮಹತ್ತಪ್ಪ ಮಹಾಸದ್ಭಕ್ತನು. ಆತನೇ ತತ್ತ್ವಜ್ಞನು, ಆತನೇ ತತ್ತ್ವಮಯನು, ಆತನೇ ತತ್ತ್ವಮೂರ್ತಿ. ಈ ಮಹಾಮಂತ್ರ ಮುಖೋದ್ಗತವಾದ ಮಹಾಭಕ್ತನು. ಆತನೇ ವೇದವಿತ್ತು, ಆತನೇ ಶಾಸ್ತ್ರಜ್ಞನು, ಆತನೇ ಪುರಾಣಿಕನು, ಆತನೇ ಆಗಮಜ್ಞನು, ಆತನೇ ಸರ್ವಜ್ಞನು. ಈ ಮಹಾಘನ ಮಹತ್ತನೊಳಕೊಂಡ ಸದ್ಭಕ್ತಂಗೆ ಇತರ ತತ್ತ್ವಂಗಳನೂ ಇತರ ದೇವತೆಗಳನೂ ಇತರ ದೇವದಾನವಮಾನವರುಗಳನೂ ಇತರ ಮಂತ್ರಂಗಳನೂ ಇತರ ಪದಂಗಳನೂ ಸರಿ ಎನಬಹುದೆ ? ಶಿವ ಶಿವಾ ಸರಿ ಎಂದಡೆ ಮಹಾದೋಷವು. ಈ ಮಹಾಭಕ್ತನೇ ಉಪಮಾತೀತನು ವಾಙ್ಮನೋತೀತನು. ಈ ಮಹಾದೇವನ ಭಕ್ತನೇ ಮಹಾದೇವನು. ಈ ಮಹಾಭಕ್ತನ ಪೂಜೆಯೇ ಶಿವಲಿಂಗಪೂಜೆ. ಈ ಮಹಾಭಕ್ತನ ಪದವೇ ಪರಮಪದವಯ್ಯಾ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಅಪರವನರಿದುದೆ ಖರ್ಪರ, ತ್ರಿವಿಧವ ಮುರಿದುದೆ ಕಟ್ಟಿಗೆ. ಸರ್ವವ ಕೇಳಿ ಕೇಳದಂತಿಪ್ಪುದೆ ಕುಂಡಲ. ರುದ್ರಪಾಶವ ಕಿತ್ತು ಗಟ್ಟಿಗೊಂಬುದೆ ಜಡೆ. ಜ್ಞಾನ ವಿಜ್ಞಾನ ಸುಜ್ಞಾನ ಮಹಾಜ್ಞಾನ ಅಪರಜ್ಞಾನ. ಇಂತೀ ಪಂಚಜ್ಞಾನ ದಹ್ಯಮಂ ಮಾಡಿ, ಬ್ರಹ್ಮಲಿಖಿತವ ತೊಡೆವಂತೆ ಧರಿಸುವುದು ತ್ರಿಪುಂಡ್ರವ. ಇಂತೀ ವೇಷವ ಧರಿಸಿ ಭಕ್ತನೆಂಬ ಭೂಮಿಯಲ್ಲಿ, ಸಕಲಕರಣಂಗಳ ತೀರ್ಥಯಾತ್ರೆಯಂ ಮಾಡುತ್ತ, ಕಳೆದುಳಿಯಬಲ್ಲಡೆ, ಆತನೇ ಲಿಂಗಜಂಗಮ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆಸೆಯೆಂಬ ಕೂಸನೆತ್ತಲು, ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ_ ಇಂತೀ ಎರಡಿಲ್ಲದ ಕೂಸನೆತ್ತ ಬಲ್ಲಡೆ ಆತನೇ ಲಿಂಗೈಕ್ಯನು ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
ಜಂಗಮದ ಪಾದತೀರ್ಥವ ಲಿಂಗಕ್ಕೆ ಮಜ್ಜನವ ಮಾಡಲಾಗಿ, ಲಿಂಗತೀರ್ಥವಾಯಿತ್ತು. ಜಂಗಮದ ಪ್ರಸಾದವ ಲಿಂಗಕ್ಕರ್ಪಿಸಲಾಗಿ, ಲಿಂಗಪ್ರಸಾದವಾಯಿತ್ತು. ಶುದ್ಧ ಗುರುವಿನಲ್ಲಿ, ಸಿದ್ಧ ಲಿಂಗದಲ್ಲಿ, ಪ್ರಸಿದ್ಧ ಜಂಗಮದಲಾದ ಮತ್ತೆ , ಸಿಕ್ಕಿತ್ತು ಪ್ರಸಿದ್ಧ ಸಂಖ್ಯೆಯಲ್ಲಿ. ಇದನರಿತು ಅರ್ಪಿಸಬಲ್ಲಡೆ, ಆತನೇ ಪ್ರಸಾದಕಾಯ, ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗದಲ್ಲಿ ಅರ್ಪಿತ ಅವಧಾನಿ.
--------------
ಶಿವಲೆಂಕ ಮಂಚಣ್ಣ
ಇನ್ನಷ್ಟು ... -->