ಅಥವಾ

ಒಟ್ಟು 42 ಕಡೆಗಳಲ್ಲಿ , 16 ವಚನಕಾರರು , 22 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಜಗವನೊಳಕೊಂಡ ಲಿಂಗವು ಸೊಗಸಿಂದೆ ಎನ್ನ ಕರಸ್ಥಲಕ್ಕೆ ಬಂದಿರಲು, ಕಂಡು ಹಗರಣವಾಯಿತ್ತೆನಗೆ. ಗುರುಲಿಂಗಜಂಗಮಸ್ವರೂಪವಾಗಿ ಮೂರ್ತಿಗೊಂಡಿತ್ತು ನೋಡಾ. ಆಹಾ ಎನ್ನ ಪುಣ್ಯವೇ ! ಆಹಾ ಎನ್ನ ಭಾಗ್ಯವೇ ! ಆಹಾ ಅಖಂಡೇಶ್ವರಾ, ನಿಮ್ಮ ಘನವ ಕಂಡು ಎನ್ನ ಮನಕ್ಕೆ ಮಂಗಳವಾಯಿತ್ತು ನೋಡಾ.
--------------
ಷಣ್ಮುಖಸ್ವಾಮಿ
ಗುರುವ ನೆನೆದೆಹೆನೆಂದು ನೆನೆಯುತ್ತಿದ್ದಡೆ ನೆನೆವ ಮನವು ತಾನು ಗುರುವಾಯಿತು ನೋಡಾ. ಆಹಾ ! ಮಹಾದೇವ, ಇನ್ನಾವುದರಿಂದ ? ಆವುದನು ? ಏನೆಂದು ನೆನೆವೆ ? ಮನವೆ ಗುರುವಾದ ಕಾರಣ,_ ಮನವೆ ಗುರುವಾಗಿ ನೆನಹನಿಂಬುಗೊಂಡನು ಗುಹೇಶ್ವರಲಿಂಗ ಚೋದ್ಯಚರಿತ್ರನು !
--------------
ಅಲ್ಲಮಪ್ರಭುದೇವರು
ತಾವು ಭಕ್ತರೆಂದು ಪುರಾತರ ವಚನವ ಕೇಳಿ, ಆಹಾ ಇನ್ನು ಸರಿಯುಂಟೆಯೆಂದು ಕೈವಾರಿಸುವರು ನೋಡಾ. ಆ ಪುರಾತರ ವಚನವನೊತ್ತಿ ಹೇಳಹೋದಡೆ, ನಮಗೆ ಅಳವಡುವುದೆ ಗೃಹಸ್ಥರಿಗೆ ಎಂಬರು. ಕೇಳಿ ಕೇಳಿ ಸತ್ಯವ ನಂಬದ ಮೂಳರನೇನೆಂಬೆನಯ್ಯಾ, ಕಲಿದೇವಯ್ಯ?
--------------
ಮಡಿವಾಳ ಮಾಚಿದೇವ
ಆಹಾ ಎನ್ನಪುಣ್ಯದ ಫಲ ! ನಿರಾಕಾರ ಗುರುವೆನಗೆ ಸಾಕಾರವಾಗಿ ಬಂದುದು. ಆಹಾ ಎನ್ನ ಬಹುಜನ್ಮದ ತಪಸ್ಸಿನ ಫಲ ! ನಿರವಯಾನಂದ ನಿಜವೆನಗೆ ಸಾಧ್ಯವಾದುದು. ಆಹಾ ಎನ್ನ ಭಾಗ್ಯದ ನಿದ್ಥಿಯೆನಗಿತ್ತ ನಿರಂಜನ ಚನ್ನಬಸವಲಿಂಗವೆಂಬ ಸದ್ಗುರುದೇವನು.
--------------
ದೇಶಿಕೇಂದ್ರ ಸಂಗನಬಸವಯ್ಯ
ಬಂದ ಪದಾರ್ಥವ ಸವಿದು ಚಪ್ಪರಿದು, ಆಹಾ ಲಿಂಗಕ್ಕೆ ಅರ್ಪಿತವಾಯಿತ್ತೆಂದು ಕಂಗಳ ಮುಚ್ಚಿ, ಅಂಗವ ತೂಗಿ, ಮಹಾಲಿಂಗವೆ ನೀನೇ ಬಲ್ಲೆ ಎಂದು ಕಂಡವರು ಕೇಳುವಂತೆ, ಹಿಂಗದ ಲಿಂಗಾಂಗಿ ಇವನೆಂದು ವಂದಿಸಿಕೊಳ್ಳಬೇಕೆಂದು, ಅಂದಗಾರಿಕೆಯಲ್ಲಿ ನಡೆವ ಭಂಡರಿಗೆಲ್ಲಿಯದೊ ಲಿಂಗಾರ್ಪಿತ ? ಲಿಂಗಕ್ಕೆ ಸಂದ ಸವಿಯ, ಹಿಂದೆ ಮುಂದೆ ಇದ್ದವರು ಕೇಳುವಂತೆ ಲಿಂಗಾರ್ಪಿತವುಂಟೆ ? ಭ್ರಮರ ಕೊಂಡ ಕುಸುಮದಂತೆ, ವರುಣ ಕೊಂಡ ಕಿರಣದಂತೆ, ವಾರಿ ಕೊಂಡ ಸಾರದಂತೆ, ತನ್ನಲ್ಲಿಯೇ ಲೇಪ ಅರ್ಪಿತ ಅವಧಾನಿಗೆ. ಹೀಂಗಲ್ಲದೆ ಕೀಲಿನೊಳಗಿಪ್ಪ ಕೀಲಿಗನಂತೆ, ಇನ್ನಾರಿಗೆ ಹೇಳುವೆ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಆಹಾ ಆಶ್ಚರಿಯವೆಂಬುದಕ್ಕೆ ಮುನ್ನವೆ, ಹೋ ಹೋ ಹೋಯಿತ್ತೆಂಬುದಕ್ಕೆ ಮುನ್ನವೆ, ನಿಜವಸ್ತುವಿನ ಠಾವನರಿದು ವ್ಯವಧಾನದಿಂದ ಸಾವಧಾನ ಸಂಬಂಧಿ ತಾನೆ. ಶಂಭುವಿನಿಂದಿತ್ತ ಸ್ವಯಂಭುವಿನಿಂದತ್ತ ಅತಿಬಳ ನೋಡಾ, ಮಾತುಳಂಗ ಮಧುಕೇಶ್ವರನು.
--------------
ದಾಸೋಹದ ಸಂಗಣ್ಣ
ಯುಗಜುಗಂಗಳ ಅಳಿವು ಉಳಿವನರಿಯದೆ, ಹಗಲಿರುಳೆಂಬವ ನೆನಹಿನಲೂ ಅರಿಯದೆ, ಲಿಂಗದಲ್ಲಿ ಪರವಶವಾಗಿರ್ದ ಪರಮಪರಿಣಾಮಿಯನೇನೆಂದುಪಮಿಸುವೆನಯ್ಯಾ ? ಆಹಾ ! ಎನ್ನ ಮುಕ್ತಿಯ ಮುಕುರದ ಇರವ ನೋಡಾ. ಆಹಾ ! ಎನ್ನ ಸತ್ಯದಲ್ಲಿ ಸ್ವಾನುಭಾವದ ಕಳೆಯ ನೋಡಾ. ಆಹಾ ! ಅಷ್ಟತನುಗಳ ಪಂಗನಳಿದು, ನಿಬ್ಬೆರಗಾಗಿ ನಿಂದ ಚಿತ್ಸುಖಿಯ ನೋಡಾ. ಬಸವಪ್ರಿಯ ಕೂಡಲಚೆನ್ನಸಂಗಮದೇವಯ್ಯಾ, ಪರಮಪ್ರಸಾದಿ ಮರುಳಶಂಕರದೇವರ ನಿಲವ ಪ್ರಭು ಬಸವಣ್ಣನಿಂದ ಕಂಡು ಬದುಕಿದೆನು, ಬದುಕಿದೆನು.
--------------
ಸಂಗಮೇಶ್ವರದ ಅಪ್ಪಣ್ಣ
ಅರಲುಗೊಂಡ ಕೆರೆಗೆ ತೊರೆ ಬಂದು ಹಾಯ್ದಂತೆ ಎಲೆ ಅಯ್ಯಾ, ನಿಮ್ಮ ಕಂಡು ಕಂಡು ಕಡೆಗೋಡಿವರಿದುವಯ್ಯಾ ಎನ್ನ ಮನಕ್ಕೆ ಮನ ವೇದ್ಯವಾದಡೆ ಕೈಮರದೆನೆಲೆ ಆಹಾ, ಅಯ್ಯಾ ಕಪಿಲಸಿದ್ಧಮ್ಲನಾಥನ ಕಂಡ ಸುಖವು ಆರಿಗೆಯೂ ಇಲ್ಲ.
--------------
ಸಿದ್ಧರಾಮೇಶ್ವರ
ಆನಂದಿಸಿ ಕಣ್ಣ ಮುಚ್ಚಿ ಆಹಾ ಎಂಬುದು ಆವೇಶಭಕ್ತಿ. ತಲೆದೂಗಿ ಝಂಪಿಸಿ ಅಂತಃಕರಣ ಕದಡಿ ಆನಂದಿಸುವುದು ಭಾವಭಕ್ತಿ. ಬಿಂಬಿಸುವುದಕ್ಕೆ ಪ್ರತಿರೂಪಿಲ್ಲದೆ ಆನಂದ ಅಶ್ರುಗಳು ನಿಂದು, ಮುತ್ತಿನೊಳಗಣ ಅಪ್ಪುವಿನಂತೆ ಹೆಪ್ಪಳಿಯದೆ ನಿಂದುದು ಜ್ಞಾನಭಕ್ತಿ. ಇಂತೀ ತುರೀಯಾತುರೀಯವು ಏಕಚಿತ್ತವೆಂಬುದು ನಿಹಿತವಾದಲ್ಲಿ, ಸ್ಥಲಲೇಪ, ನಿಃಕಳಂಕ ಮಲ್ಲಿಕಾರ್ಜುನನಲ್ಲಿ.
--------------
ಮೋಳಿಗೆ ಮಾರಯ್ಯ
ಮನದ ಸಂಚದೋವರಿಯೊಳಗೆ, ಮಿಂಚಿನ ಗೊಂಚಲು ಬಳ್ಳಿವರಿಯಿತ್ತಯ್ಯಾ. ಎನ್ನ ಕಾಯದ ಕರಣಂಗಳೊಳಗೆ, ನಿರುಪಮಸುಖ ಸಾಧ್ಯವಾಯಿತ್ತು. ಬಯಸುವ ಬಯಕೆ ಕೈಸಾರಿತ್ತು, ಅರಸುವ ಅರಕೆ ನಿಂದಿತ್ತು. ಆಹಾ, ಕರತಲಾಮಲಕವಾಯಿತ್ತಲ್ಲಾ ! ಸತ್ಯಶರಣರ ದರುಶನ ಏನ ಮಾಡದೊ ? ಮಹಾದಾನಿ ಸೊಡ್ಡಳನ ಶರಣ ಪ್ರಭುದೇವರ ಶ್ರೀಪಾದವ ಕಂಡು, ಬದುಕಿದೆನಯ್ಯಾ.
--------------
ಸೊಡ್ಡಳ ಬಾಚರಸ
ಬಸವಣ್ಣನೆ ಗುರುಮೂರ್ತಿಯಾಗಿ ಎನ್ನ ಕರಸ್ಥಲಕ್ಕೆ ಬಂದನಯ್ಯಾ. ಚೆನ್ನಬಸವಣ್ಣನೆ ಲಿಂಗಮೂರ್ತಿಯಾಗಿ ಎನ್ನ ಕರಸ್ಥಲಕ್ಕೆ ಬಂದನಯ್ಯಾ. ಸಿದ್ಧರಾಮಯ್ಯನೆ ಜಂಗಮಮೂರ್ತಿಯಾಗಿ ಎನ್ನ ಕರಸ್ಥಲಕ್ಕೆ ಬಂದನಯ್ಯಾ. ಮರುಳಶಂಕರದೇವರೆ ಪ್ರಸಾದಮೂರ್ತಿಯಾಗಿ ಎನ್ನ ಕರಸ್ಥಲಕ್ಕೆ ಬಂದರಯ್ಯಾ. ಪ್ರಭುದೇವರೆ ಜ್ಞಾನಮೂರ್ತಿಯಾಗಿ ಎನ್ನ ಹೃದಯಸ್ಥಲಕ್ಕೆ ಬಂದರಯ್ಯಾ. ಇವರು ಮುಖ್ಯವಾದ ಏಳ್ನೂರೆಪ್ಪತ್ತಮರಗಣಂಗಳು, ಎನ್ನ ಸರ್ವಾಂಗದಲ್ಲಿ ಮೂರ್ತಿಗೊಂಡರು, ಸರ್ವತೋಮುಖವಾಗಿ. ಆಹಾ ಎನ್ನ ಪುಣ್ಯವೆ, ಆಹಾ ಎನ್ನ ಭಾಗ್ಯವೆ, ಆಹಾ ಎನ್ನ ಸತ್ಯವೆ, ಆಹಾ ಎನ್ನ ನಿತ್ಯವೆ. ಹರಹರಾ, ಶಿವಶಿವಾ ಮಹಾದೇವಾ ಮಹಾದೇವಾ, ತ್ರಿಕಾಲದಲ್ಲಿಯೂ ನಿಮ್ಮ ಶರಣರ ಶ್ರೀಪಾದವ ನೆನೆವುತಿರ್ದೆನಯ್ಯಾ, ವೀರಬಂಕೇಶ್ವರಾ.
--------------
ಸುಂಕದ ಬಂಕಣ್ಣ
ಶ್ರೀಗುರುಸ್ವಾಮಿ ಕರುಣಿಸಿಕೊಟ್ಟು ಪ್ರಾಣಲಿಂಗವು ಪಂಚಬ್ರಹ್ಮಮುಖವುಳ್ಳ ವಸ್ತುವೆಂದರಿವುದು. ಆ ಪಂಚಬ್ರಹ್ಮಮುಖಸಂಜ್ಞೆಯ ಭೇದವೆಂತೆಂದಡೆ: ಆವುದಾನೊಂದು ಶಿವಸಂಬಂಧವಾದ ಪರಮತೇಜೋಲಿಂಗವು ತನ್ನ ಭೋಗಾದಿಕಾರಣ ಮೂರ್ತಿಗಳಿಂದುದಯವಾದ ಬ್ರಹ್ಮಾದಿತೃಣಾಂತವಾದ ದೇಹಿಗಳಿಂದಲೂ ವೋಮಾದಿಭೂತಂಗಳಿಂದಲೂ ಇತ್ಯಾದಿ ಸಮಸ್ತತತ್ತ್ವಂಗಳಿಂದಲೂ ಮೇಲಣ ತತ್ತ್ವವುಪ್ಪುದೇ ಕಾರಣವಾಗಿ ಪರವೆಂಬ ಸಂಜ್ಞೆಯದುಳ್ಳುದಾಗಿಹುದು. ಅನಂತಕೋಟಿಬ್ರಹ್ಮಾಂಡಗಳ ತನ್ನೊಳಡಗಿಸಿಕೊಂಡು ಸಮಸ್ತಜಗಜ್ಜನಕ್ಕೆ ತಾನೇ ಕಾರಣವಾಗಿ ಅವ್ಯಕ್ತಲಕ್ಷಿತವಾದ ನಿಮಿತ್ತಂ ಗೂಢವೆಂಬ ಸಂಜ್ಞೆಯದುಳ್ಳುದಾಗಿಹುದು. ತಾನು ಶೂನ್ಯ ಶಿವತತ್ತ್ವಭೇದವಾಗಿ ಆಯಸ್ಕಾಂತ ಸನ್ನಿಧಿಯಿಂದ ಲೋಹವೇ ಹೇಗೆ ಭ್ರಮಿಸುವುದೋ ಹಾಗೆ ಬ್ರಹ್ಮಾದಿಗಳ ಹೃತ್ಕಮಲಮಧ್ಯದಲ್ಲಿದ್ದು ತನ್ನ ಚಿಚ್ಛಕ್ತಿಯ ಸನ್ನಿಧಿಮಾತ್ರದಿಂದ ಅಹಮಾದಿಗಳಿಂ ವ್ಯೋಮಾದಿಭೂತಂಗಳಂ ಸೃಷ್ಟಿಸುವುದಕ್ಕೆ ತಾನೇ ಕಾರಣವಪ್ಪುದರಿಂದ ಶರೀರಸ್ಥವೆಂಬ ಸಂಜ್ಞೆಯದುಳ್ಳುದಾಗಿಹುದು. ತನ್ನ ಸೃಷ್ಟಿಶಕ್ತಿಯಿಂದುದಯವಾದ ಸಮಸ್ತಸಂಸಾರಾದಿ ಪ್ರಪಂಚವು ತನ್ನಿಂದಲೇ ಕಾರಣವಪ್ಪುದರಿಂ ಅನಾದಿವತ್ತೆಂಬ ಸಂಜ್ಞೆಯದುಳ್ಳುದಾಗಿಹುದು. ತನ್ನ ಮಾಯಾಶಕ್ತಿಯಿಂದುದಯವಾದ ಸ್ತ್ರೀಲಿಂಗ ಪುಲ್ಲಿಂಗ ನಪುಸಕಲಿಂಗವೆಂಬ ತ್ರಿಲಕ್ಷಿತವಾದ ಸಮಸ್ತಪ್ರಪಂಚವು ವರ್ತಿಸುವುದಕ್ಕೆ ತಾನೇ ಕ್ಷೇತ್ರವಾದ ಕಾರಣ ಲಿಂಗಕ್ಷೇತ್ರವೆಂಬ ಸಂಜ್ಞೆಯದುಳ್ಳುದಾಗಿಹುದು. ಈ ಪ್ರಕಾರದಿಂ ಪರಬ್ರಹ್ಮಲಿಂಗವು ಪಂಚಮುಖಸಂಜ್ಞೆಯ ನುಳ್ಳುದಾಗಿಹುದೆಂದರಿವುದು. ಅದೆಂತೆಂದಡೆ:ಅದಕ್ಕೆ ವಾತುಳಾಗಮದಲ್ಲಿ, ಅಖಿಳಾರ್ಣವಲಯಾನಾಂ ಲಿಂಗತತ್ತ್ವಂ ಪರಂ ತತಃ ಪರಂ ಗೂಢಂ ಶರೀರಸ್ಥಂ ಲಿಂಗಕ್ಷೇತ್ರಮನಾದಿವತ್ ಯದಾದ್ಯಮೈಶ್ವರಂ ತೇಜಸ್ತಲ್ಲಿಂಗಂ ಪಂಚಸಂಜ್ಞಕಂ ಎಂದೆನಿಸುವ ಲಿಂಗವು. ಮತ್ತಂ, ವಾಶಿಷ*ದಲ್ಲಿ: ಪಿಂಡಬ್ರಹ್ಮಾಂಡಯೋರೈಕ್ಯಂ ಲಿಂಗಸೂತ್ರಾತ್ಮನೋರಪಿ ಸ ಬಾಹ್ಯಾಂತರಯೋರೈಕ್ಯಂ ಕ್ಷೇತ್ರಜ್ಞಪರಮಾತ್ಮನೋಃ ಎಂದೆನಿಸುವ ಲಿಂಗವು. ಮತ್ತಂ ಬ್ರಹ್ಮಾಂಡಪುರಾಣದಲ್ಲಿ, ಅಧಿಷಾ*ನಂ ಸಮಸ್ತಸ್ಯ ಸ್ಥಾವರಸ್ಯ ಚರಸ್ಯ ಚ ! ಜಗತೋ ಯದ್ಭವೇತ್‍ತತ್ತ್ವಂ ತದ್ದಿವ್ಯಂ ಸ್ಥಲಮುಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಶಿವರಹಸ್ಯದಲ್ಲಿ, ಮಹಾಲಿಂಗಮಿದಂ ದೇವಿ ಮನೋ[s]ತೀತಮಗೋಚರಂ ನಿರ್ನಾಮಂ ನಿರ್ಗುಣಂ ನಿತ್ಯಂ ನಿರಂಜನಂ ನಿರಾಮಯಂ ಎಂದೆನಿಸುವ ಲಿಂಗವು. ಮತ್ತಂ ಉತ್ತರವಾತುಳದಲ್ಲಿ, ಆದ್ಯಂತಶೂನ್ಯಮಮಲಂ ಪರಿಪೂರ್ಣಮೇಕಂ ಸೂಕ್ಷ್ಮಂ ಪರಾತ್ಪರಮನಾಮಯಮಪ್ರಮೇಯಂ ಚಿಚ್ಛಕ್ತಿಸಂಸ್ಫುರಣರೂಢಮಹಾತ್ಮಲಿಂಗಂ ಭಾವೈಕಗಮ್ಯಮಜಡಂ ಶಿವತತ್ತ್ವಮಾಹುಃ ಎಂದೆನಿಸುವ ಲಿಂಗವು. ಮತ್ತಂ ಅಥರ್ವಣವೇದದಲ್ಲಿ, ಶಿವಂ ಪರಾತ್ಪರಂ ಸೂಕ್ಷ್ಮಂ ನಿತ್ಯಂ ಸರ್ವಗತಾವ್ಯಯಂ ಅನಿಂದಿತಮ£õ್ಞಪಮ್ಯಮಪ್ರಮಾಣಮನಾಮಯಮ್ ಶುದ್ಧತ್ವಾಚ್ಛಿವಮುದ್ದಿಷ್ಟಂ ಪರಾದೂಧ್ರ್ವಂ ಪರಾತ್ಪರಂ ಎಂದೆನಿಸುವ ಲಿಂಗವು. ಮತ್ತಂ ಸಾಮವೇದದಲ್ಲಿ, ಅನಂತಮವ್ಯಕ್ತ ಮಚಿಂತ್ಯಮೇಕಂ ಹರಂ ತಮಾಶಾಂಬರಮಪ್ರಮೇಯಂ ಲೋಕೈಕನಾಥಂ ಭುಜಗೇಂದ್ರಹಾರಂ ಅಜಂ ಪುರಾಣಂ ಪ್ರಣಮಾಮಿ ನಿತ್ಯಂ `ಅಣೋರಣೀಯಾನ್ ಮಹತೋ ಮಹೀಯಾನ್' ಎಂದೆನಿಸುವ ಲಿಂಗವು. ಮತ್ತಂ ಶಿವಧರ್ಮಪುರಾಣದಲ್ಲಿ, ಆಕಾಶಂ ಲಿಂಗಮಿತ್ಯಾಹುಃ ಪೃಥ್ವೀ ತಸ್ಯಾದಿಪೀಠಿಕಾ ಆಲಯಸ್ಸರ್ವಭೂತಾನಾಂ ಲಯನಾಲ್ಲಿಂಗಮುಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಗಾರುಡಪುರಾಣದಲ್ಲಿ, ಲಿಂಗಮಧ್ಯೇ ಜಗತ್‍ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂದೆನಿಸುವ ಲಿಂಗವು. ಮತ್ತಂ ಯಜುರ್ವೇದದಲ್ಲಿ, ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಸ್ಪಾತ್ ಸಂಬಾಹುಭ್ಯಾಂಧಮತಿ ಸಂಪತತ್ರೈದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೆನಿಸುವ ಲಿಂಗವು. ಮತ್ತಂ ಗಾಯತ್ರಿಯಲ್ಲಿ, `ಓಂ ಭೂಃ ಓಂ ಭುವಃ ಓಂ ಸುವಃ ಓಂ ಮಹಃ ಓಂ ಜನಃ ಓಂ ತಪಃ ಓಂ ಸತ್ಯಂ ಓಂ ತತ್ಸವಿತುರ್ವರೇಣ್ಯಂ ಭರ್ಗೋ ದೇವಸ್ಯ ಧೀಮಹಿ ಧಿಯೋ ಯೋ ನಃ ಪ್ರಚೋದಯಾತ್ ಎಂದೆನಿಸುವ ಲಿಂಗವು. ಮತ್ತಂ ಸ್ಕಂದಪುರಾಣದಲ್ಲಿ ಲೀಯತೇ ಗಮ್ಯತೇ ಯತ್ರ ಯೇನ ಸರ್ವಂ ಚರಾಚರಂ ತದೇವ ಲಿಂಗಮಿತ್ಯಕ್ತಂ ಲಿಂಗತತ್ತ್ವಪರಾಯಣೈಃ ಎಂದೆನಿಸುವ ಲಿಂಗವು. ಮತ್ತಂ ಜ್ಞಾನವೈಭವಖಂಡದಲ್ಲಿ, ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿರುಚ್ಯತೇ ಲಯನಾದ್ಗಮನಾಚ್ಚೈವ ಲಿಂಗಶಬ್ದಮಿಹೋಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಮಹಿಮ್ನದಲ್ಲಿ, 'ಚಕಿತಮಭಿಧತ್ತೇ ಶ್ರುತಿರಪಿ' ಎಂದೆನಿಸುವ ಲಿಂಗವು. ಮತ್ತಂ ಶಿವಧರ್ಮೋತ್ತರದಲ್ಲಿ, 'ನ ಜಾನಂತಿ ಪರಂ ಭಾವಂ' ಯಸ್ಯ ಬ್ರಹ್ಮಸುರಾದಯಃ ಎಂದೆನಿಸುವ ಲಿಂಗವು. ಮತ್ತಂ ಪುರುಷಸೂಕ್ತದಲ್ಲಿ, `ಅತ್ಯತಿಷ*ದ್ದಶಾಂಗುಲಂ ಎಂದೆನಿಸುವ ಲಿಂಗವು. ಮತ್ತಂ ಉಪನಿಷತ್ತಿನಲ್ಲಿ, 'ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ' ಎಂದೆನಿಸುವ ಲಿಂಗವು. ಮತ್ತಂ ಕೂರ್ಮಪುರಾಣದಲ್ಲಿ, 'ವಾಚಾತೀತಂ ಮನೋತೀತಂ ಭಾವಾತೀತಂ ನಿರಂಜನಂ ಅವರ್ಣಮಕ್ಷರಂ ಬ್ರಹ್ಮ ನಿತ್ಯಂ ಧ್ಯಾಯಂತಿ ಯೋಗಿನಃ ' ಎಂದೆನಿಸುವ ಲಿಂಗವು. ಮತ್ತಂ ಋಗ್ವೇದದಲ್ಲಿ, 'ಆಯಂ ಮೇ ಹಸ್ತೋ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜೋ[s]ಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಾಗಮ್ ಎಂದೆನಿಸುವ ಲಿಂಗವು. ಮತ್ತಂ ಉತ್ತರವಾತುಳದಲ್ಲಿ, ಸ ಬಾಹ್ಯಾಭ್ಯಂತರಂ ಸಾಕ್ಷಾಲ್ಲಿಂಗಜ್ಯೋತಿಃ ಪರಂ ಸ್ವಕಂ ತಿಲೇ ತೈಲಮಿವಾಭಾತಿ ಅರಣ್ಯಾಮಿವ ಪಾವಕಃ ಕ್ಷೀರೇ ಸರ್ಪಿರಿವ ಸ್ರೋತಸ್ಯಂಬುವತ್ ಸ್ಥಿತಮಾತ್ಮನಿ ಏಕೋ[s]ಯಂ ಪುರುಷೋ ವಿಶ್ವತೈಜಸಪ್ರಾಜ್ಞರೂಪತಃ ಸದಾ ಸ್ವಾಂಗೇಷು ಸಂಯುಕ್ತಮುಪಾಸ್ತೇ ಲಿಂಗಮದ್ವಯಂ ಎಂದೆನಿಸುವ ಲಿಂಗವು. ಮತ್ತಂ ಲೈಂಗ್ಯದಲ್ಲಿ, ಅನಯೋರ್ದೃಷ್ಟಿಸಂಯೋಗಾಜ್ಞಾಯತೇ ಜ್ಞಪ್ತಿರೂಪಿಣೀ ವೇಧಾದೀಕ್ಷಾ ತು ಸೈವಸ್ಯಾನ್ಮಂತ್ರರೂಪೇಣ ತಾಂ ಶ್ರುಣು ಎಂದೆನಿಸುವ ಲಿಂಗವು. ಮತ್ತಂ ¸õ್ಞರಪುರಾಣದಲ್ಲಿ, ಹಸ್ತಮಸ್ತಕಸಂಯೋಗಾತ್ಕಲಾ ವೇಧೇತಿ ಗೀಯತೇ ಗುರುಣೋದೀರಿತಾ ಕರ್ಣೇ ಸಾ ಮಂತ್ರೇತಿ ಕಥ್ಯತೇ ಶಿಷಾಣಿತಲೇದತ್ತಾ ಸಾ ದೀಕ್ಷಾ ತು ಕ್ರಿಯೋಚ್ಯತೇ ಎಂದೆನಿಸುವ ಲಿಂಗವು. ಮತ್ತಂ ಕಾಳಿಕಾಖಂಡದಲ್ಲಿ, ಅಂಗಂ ಚ ಲಿಂಗಂ ಚ ಮುಖಂ ಚ ಹಸ್ತಂ ಶಕ್ತಿಶ್ಚ ಭಕ್ತಶ್ಚ ತಥಾರ್ಪಣಂ ಚ ಆನಂದಮೇವ ಸ್ವಯಮರ್ಪಣಂ ಚ ಪ್ರಸಾದರೂಪೇಣ ಭವೇತ್ರಿತತ್ತ್ವಂ ಎಂದೆನಿಸುವ ಲಿಂಗವು. ಮತ್ತಂ ಶಂಕರಸಂಹಿತೆಯಲ್ಲಿ, ತದೇವ ಹಸ್ತಾಂಬುಜಪೀಠಮಧ್ಯೇ ನಿಧಾಯ ಲಿಂಗಂ ಪರಮಾತ್ಮಚಿಹ್ನಂ ಸಮರ್ಚಯೇದೇಕಧಿಯೋಪಚಾರರೈರ್ನರಶ್ಚ ಬಾಹ್ಯಾಂತರಭೇದಭಿನ್ನಂ ಎಂದೆನಿಸುವ ಲಿಂಗವು. ಮತ್ತಂ ವೀರಾಗಮದಲ್ಲಿ, ಭಾವಪ್ರಾಣಶರೀರೇಷು ಲಿಂಗಂ ಸಂಸಾರಮೋಚಕಂ ಧಾರಯೇದವಧಾನೇನ ಭಕ್ತಿನಿಷ*ಸ್ಸುಬುದ್ಧಿಮಾನ್ ಎಂದೆನಿಸುವ ಲಿಂಗವು. ಮತ್ತಂ ಶಿವರಹಸ್ಯದಲ್ಲಿ, ಕರ್ಣದ್ವಾರೇ ಯಥಾವಾಕ್ಯಂ ಗುರುಣಾ ಲಿಂಗಮೀರ್ಯತೇ ಇಷ್ಟಂ ಪ್ರಾಣಸ್ತಥಾ ಭಾವಸ್ತ್ರಿಧಾ ಚೈಕಂ ವರಾನನೇ ಎಂದೆನಿಸುವ ಲಿಂಗವು ಮತ್ತಂ ಶಿವರಹಸ್ಯದಲ್ಲಿ, ಏಕಮೂರ್ತಿಸ್ತ್ರಯೋಭಾಗಾಃ ಗುರುರ್ಲಿಂಗಂ ತು ಜಂಗಮಃ ಜಂಗಮಶ್ಚ ಗುರುರ್ಲಿಂಗಂ ತ್ರಿವಿಧಂ ಲಿಂಗಮುಚ್ಯತೇ ಎಂದೆನಿಸುವ ಲಿಂಗವು. ಗುರುಲಿಂಗಜಂಗಮರೂಪಾಗಿ ಎನ್ನ ಕರಸ್ಥಲಕ್ಕೆ ಬಿಜಯಂಗೈದು ಕರತಲಾಮಲಕವಾಗಿ ತೋರುತ್ತೈದಾನೆ. ಆಹಾ ಎನ್ನ ಪುಣ್ಯವೇ, ಆಹಾ ಎನ್ನ ಭಾಗ್ಯವೇ, ಆಹಾ ಎನ್ನ ಸತ್ಯವೇ, ಆಹ ಎನ್ನ ನಿತ್ಯವೇ, ಶಿವ ಶಿವ, ಮಹಾದೇವ, ಮಹಾದೇವ, ಮಹಾದೇವ ನೀನೇ ಬಲ್ಲೆ, ನೀನೇ ಬಲ್ಲೆ, ಉರಿಲಿಂಗಪೆದ್ದಿಪ್ರಿಯವಿಶ್ವೇಶ್ವರ.
--------------
ಉರಿಲಿಂಗಪೆದ್ದಿ
ಬಡವನೆಡವಿ ಧನಕಂಡಂತೆ, ಭವಪಡುವನ ಕರದೊಳು ಮೃಡಮೂರ್ತಿಲಿಂಗವ ಕಂಡೆನಲ್ಲ | ಬಿಡದೆ ಅರಸುವ ಬಳ್ಳಿ ಕಾಲತೊಡರಿ ಬಂದಂತೆ ಭವಭವಾಂತರದಲರಸಿದರೂ ಕಾಣದ ಕಾಲಸಂಹರದೊಡೆಯನ ಕಂಡೆನಲ್ಲ ಎನ್ನ ಕರದೊಳು ! ವೇದಾತೀತ ನಿರಂಜನನೆಂಬ ಲಿಂಗವ ಕಂಡೆನಲ್ಲ ಎನ್ನ ಕರದೊಳು ! ಹರಿಯಜರ ಮಧ್ಯದಲ್ಲಿ ಉರಿವುತಿಹ ಪರಂಜ್ಯೋತಿಲಿಂಗನ ಕಂಡೆನಲ್ಲ ಎನ್ನ ಕರದೊಳು ! ಕಂಡು ಕಂಡು ಬಿಡಲಾರದ ಸುವಸ್ತುವ ಕಂಡೆನಲ್ಲ ಎನ್ನ ಕರದೊಳು. ಆಹಾ ಎನ್ನ ಪುಣ್ಯವೆ ! ಆಹಾ ಎನ್ನ ಭಾಗ್ಯವೆ ! ಆಹಾ ಎನ್ನ ಪ್ರಾಣದ ನಲ್ಲನೆಂಬ ಪರಮಾತ್ಮಲಿಂಗವನಪ್ಪಿ ಅಗಲದಂತೆ ಮಾಡು ಕಂಡ್ಯಾ ಪರಮಗುರು ಪಡುವಿಡಿ ಸಿದ್ಧಮಲ್ಲಿನಾಥಪ್ರಭುವೆ.
--------------
ಹೇಮಗಲ್ಲ ಹಂಪ
`ಯತೋ ವಾಚೋ ನಿವರ್ತಂತೇ ಅಪ್ರಾಪ್ಯ ಮನಸಾ ಸಹ' ಎಂದೆನಿಸುವ ಲಿಂಗವು, `ಅತ್ಯತಿಷ*ದ್ಧಶಾಂಗುಲಂ' ಎಂದೆನಿಸುವ ಲಿಂಗವು, `ಚಕಿತಮಭಿದತ್ತೇ ಎಂದೆನಿಸುವ ಲಿಂಗವು, `ಅಣೋರಣೀಯಾನ್ ಮಹತೋ ಮಹೀಯಾನ್' ಎಂದೆನಿಸುವ ಲಿಂಗವು, `ಅಯಂ ಮೇ ಹಸ್ತೋ ಭಗವಾನ್ ಅಯಂ ಮೇ ಭಗವತ್ತರಃ ಎಂದೆನಿಸುವ ಲಿಂಗವು, `ಏಕಮೂರ್ತಿಸ್ತ್ರಿಧಾ ಭೇದಾಃ' ಎಂದೆನಿಸಿ ಶ್ರೀಗುರುಲಿಂಗಜಂಗಮರೂಪಾಗಿ, `ಇಷ್ಟಂ ಪ್ರಾಣಿಸ್ತಥಾ ಭಾವಸ್ತ್ರಿಧಾ ಚೈಕಂ ವರಾನನೇ' ಎಂದುದಾಗಿ ತ್ರಿವಿಧ ಏಕೀಭವಿಸಿ ಲಿಂಗರೂಪಾಗಿ, ಎನ್ನ ಕರಸ್ಥಲಕ್ಕೆ ಬಂದು ಕರತಳಾಮಳಕದಂತೆ ತೋರುವೆ. ಆಹಾ ಎನ್ನ ಸತ್ಯವೆ, ಆಹಾ ಎನ್ನ ನಿತ್ಯವೆ, ಆಹಾ ಎನ್ನ ಪುಣ್ಯವೇ, ಆಹಾ ಎನ್ನ ಭಾಗ್ಯವೇ, ಶಿವ ಶಿವ ಮಹಾದೇವ ! ನೀನೇ ಬಲ್ಲೆ ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರಾ.
--------------
ಉರಿಲಿಂಗಪೆದ್ದಿ
ಆಗಿಂಗೆ ಮುಯ್ಯಾನದಿರು, ಚೇಗಿಂಗೆ ಬೆಂಬೀಳದಿರು, ಆಹಾ ಮನವೆ, ಸಂತೈಸಿಕೊ ನಿನ್ನ ನೀನೆ. ಆಗೆಂದಡೆ ನಿನ್ನ ವಶವಲ್ಲ, ಹೋಗೆಂದಡೆ ನಿನ್ನಿಚ್ಫೆಯಲ್ಲ, ಭೋಗಾದಿಭೋಗಂಗಳೆಲ್ಲವು ಸಂಗಯ್ಯನಧೀನವಾಗಿ.
--------------
ನೀಲಮ್ಮ
ಇನ್ನಷ್ಟು ... -->