ಜಗದಗಲ ಮುಗಿಲಗಲ ಮಿಗೆಯಗಲ ನಿಮ್ಮಗಲ
ವಾಙõïಮಾನಸಾಗೋಚರವೆಂದು ಹೇಳುತ್ತೈದಾವೆ ವಾಕ್ಯಂಗಳು.
ಅದಂತಿರಲಿ,
ಐತಿಹಾಸಿಕರು ಪೌರಾಣಿಕರು ಆಗಮಿಕರು ಅರಿದರಾದಡೆ
ದೃಶ್ಯನೆಂಬರೆ ಶಿವನನು? ಅದೃಶ್ಯನೆಂಬರೆ ಶಿವನನು?
ವಾಙõïಮಾನಸಾಗೋಚರನೆಂಬರೆ ಶಿವನನು?
`ಅತ್ಯತಿಷ್ಠದ್ದಶಾಂಗುಲಂ `ಏಕ ಏವ ಪುರುಷಃ
ಎಂಬ ಶ್ರುತಿಯಿರಲು
ಮತ್ತಚಿತ್ತನೆ ಶರಣನು?
ಅಣುವಿನೊಳಗಣುವಾಗಿ, ಮಹತ್ತಿನೊಳಗೆ ಮಹತ್ತಾಗಿ,
ಇಹಪರವೆಂಬ ಸಂದ ಹರಿದು, ಅಧ್ಯಕ್ಷತನಕ್ಕೆ ಕಾರಣಿಕನಾಗಿ
ಇಹಲೋಕವೆ ಪರ, ಪರವೆ ಇಹಲೋಕ.
ಅದು ಹೇಗೆಂದಡೆ:
ನಿತ್ಯಂ ಲಿಂಗಾರ್ಚನಂ ಯಸ್ಯ ನಿತ್ಯಂ ಜಂಗಮಪೂಜನಂ
ನಿತ್ಯಂ ಗುರುಪದಧ್ಯಾನಂ ನಿತ್ಯಂ [ನಿತ್ಯಂ]ನ ಸಂಶಯಃ
ಎಂಬ ಆಗಮವಾಕ್ಯವನರಿದು,
ಗುರುವಿಂಗೆ ತನುಮುಟ್ಟಿ, ತ್ರಿವಿಧಲಿಂಗಕ್ಕೆ ಮನಮುಟ್ಟಿ,
ತ್ರಿವಿಧಜಂಗಮಕ್ಕೆ ಧನಮುಟ್ಟಿ, ತ್ರಿವಿಧ ನಿವೇದಿಸಿ,
ಆ ಗುರುವಿಂ ಶುದ್ಧ[ಪ್ರಸಾದವ] ಆ ಲಿಂಗದಿಂ ಸಿದ್ಧನಪ್ರಸಾದವಫ
ಅ ಜಂಗಮದಿಂ ಪ್ರಸಿದ್ಧ[ಪ್ರಸಾದವ]ನವಗ್ರಹಿಸಿ
ಈ ಲಿಂಗಾರ್ಚನೆಯ ಸ್ವಾನುಭಾವದಿಂದೇಕವ ಮಾಡಿ ಅರ್ಚಿಸಲಲ್ಲಿ
ಶರಣರು ಸ್ವತಂತ್ರರು.
ಅಂಗದಾಸೆಯಲ್ಲಿ ಹರಿವುದ ಬಿಟ್ಟ ನಿಸ್ಸಂಗಿಗಳು.
ಶ್ರೋತ್ರ ನೇತ್ರ ತ್ವಕ್ಕು ಜಿಹ್ವೆ ಘ್ರಾಣ ಪಂಚೇಂದ್ರಿಯಂಗಳ
ಶಿವನ ಮುಖವೆಂದರಿದು ಅನ್ಯಸಂಗಂಗಳಿಗೆ
ಎಳಸಿ ಬಳಸಿ ಬಣ್ಣಕರಪ್ಪರೆ ಶರಣರು?
ಲಿಂಗಾರ್ಚನವಿಹೀನಸ್ತು ದ್ವಿಜೋ[s]ಪಿ ಶ್ವಪಚಾಧಮಃ
ಲಿಂಗಾರ್ಚನಪರೋ ನಿತ್ಯಂ ಶ್ವಪಚೋ[s]ಪಿ ದ್ವಿಜೋತ್ತಮಃ
ಎಂದುದಾಗಿ,
ಅಮ್ಮ ಶರಣರಿಗೆ ಸರಿ ಉಂಟೆ ಲೋಕದೊಳಗೆ?
ಶೂನ್ಯವೆನಿಸುವ ವಸ್ತುವ ರೂಹಿಂಗೆ ತಂದು
ನೆರೆದು ತಾನೆ ರೂಪಾಗಬಲ್ಲ ಶರಣನು.
ಆತನ ಮಹಾಮಹಿಮೆಗೆ ನಮೋ ನಮೋ ಎಂಬೆನು ಕಾಣಾ,
ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರ.