ಅಥವಾ

ಒಟ್ಟು 20 ಕಡೆಗಳಲ್ಲಿ , 14 ವಚನಕಾರರು , 20 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪರಮಾರ್ಥವ ನುಡಿದು ಪರರ ಕೈಯಾಂತು ಬೇಡುವುದು ಕರಕಷ್ಟವಯ್ಯ. ಪುರಾತರಂತೆ ನುಡಿಯಲೇಕೆ? ಕಿರಾತರಂತೆ ನಡೆಯಲೇಕೆ? ಆಸೆಯಿಚ್ಛೆಗೆ ಲೇಸ ನುಡಿವಿರಿ. ಇಚ್ಛೆಯ ನುಡಿವುದು ಉಚ್ಚೆಯ ಕುಡಿವುದು ಸರಿ ಕಾಣಿರೋ. ಇಚ್ಛೆಯ ನುಡಿವನೆ ಶಿವಶರಣನು? ಮಾತಿನಲ್ಲಿ ಬೊಮ್ಮವ ನುಡಿದು ಮನದಲ್ಲಿ ಆಸೆಯ ಸೋನೆ ಕರೆವುತಿಪ್ಪುದು. ಈ ವೇಷವ ಕಂಡೆನಗೆ ಹೇಸಿಕೆಯಾಯಿತ್ತು ಕಾಣಾ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಬಚ್ಚಣೆಯ ಬೊಂಬೆ ನೀರಾಗಲಾಗಿ, ನಿಶ್ಚಯಿಸಿಕೊಳ್ಳಬಲ್ಲದೆ ? ಉಚ್ಚೆಯ ಬಚ್ಚಲ, ಕೊಚ್ಚೆಯ ಠಾವು, ಪೂಜಿಸುವ ನಿಶ್ಚಯರಿಗೆ, ಮರೆಮಾಡುವ ಮೆಚ್ಚುನುಂಗಿಗೇಕೆ ನಿಶ್ಚಯದ ಅರಿವು, ಸಗರದ ಬೊಮ್ಮನೊಡೆಯ ತನುಮನ ಸಂಗಮೇಶ್ವರಾ ?
--------------
ಸಗರದ ಬೊಮ್ಮಣ್ಣ
ಉಚ್ಚೆಯ ಜವುಗಿನ ಬಚ್ಚಲ ತಂಪಿನಲ್ಲಿ: ನಿಚ್ಚಕ್ಕೆ ಹೊರಳುವ ಹೀಹಂದಿಯಂತೆ, ಶಿವನ ಇಚ್ಛೆಯನರಿಯದೆ ಮಾತನಾಡುವರ ಮೆಚ್ಚುವನೆ ನಮ್ಮ ಗುಹೇಶ್ವರಲಿಂಗವು ?
--------------
ಅಲ್ಲಮಪ್ರಭುದೇವರು
ವ್ರತ ನೇಮ ಸಪ್ಪೆ ಒರತೆ ಮುಂತಾದ ನೀರ್ವಿಡಿಯ ನೇಮವಂ ತಾಳಿ, ಅಂಗನೆಯರ ಸಂಗಸುಖವ ಮೆಚ್ಚಿ, ಲಿಂಗವ ಕೊಂಡಾಡುವ ಬಾಯಲ್ಲಿ ಹೆಂಗಳ ಅಧರವಂ ಚುಂಬಿಸೆ, ಲಿಂಗಜಂಗಮದ ಪ್ರಸಾದ ಹೋಯಿತ್ತು. ಇಷ್ಟಲಿಂಗ ಹಿಡಿವ ಕೈಯಲ್ಲಿ ಬಟ್ಟಿತ್ತು ಕುಚವ ಹಿಡಿದು, ಉಚ್ಚೆಯ ಬಚ್ಚಲ ತೋಡುವ ಕಸ್ತುಕಾರರನೊಪ್ಪೆನೆಂದ. ಇಂತಪ್ಪವರ ಭಕ್ತರೆಂದಡೆ, ಮೆಟ್ಟುವ ನರಕದಲ್ಲಿ, ಕಲಿದೇವರದೇವ.
--------------
ಮಡಿವಾಳ ಮಾಚಿದೇವ
ಆಕಳ ಹೊಟ್ಟೆಯಲ್ಲಿ ಹೋರಿ ಹುಟ್ಟಿದಡೇನು ? ಲಿಂಗಮುದ್ರೆಯನೊತ್ತುವನ್ನಕ್ಕ ಬಸವನಲ್ಲ. ಜಂಗಮದ ಆತ್ಮದಲ್ಲಿ ಪಿಂಡ ಉತ್ಪತ್ತಿಯಾದಡೇನು ? ದೀಕ್ಷಿತನಾಗದನ್ನಕ್ಕ ಜಂಗಮದೇವನಲ್ಲ. ದೀಕ್ಷೆಯಿಲ್ಲದೆ ಹೋಗಿ ಭಕ್ತರಲ್ಲಿ ಅಗ್ಗಣಿಯ ಮುಕ್ಕುಳಿಸಿದಡೆ ಹಾದಿಗೊಂಡು ಹೋಗುವ ನಾಯಿ ಗಿಡದ ಮೇಲೆ ಉಚ್ಚೆಯ ಹೊಯ್ದಂತಾಯಿತ್ತು ಕಾಣಾ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ಉಚ್ಚೆಯ ಬಚ್ಚಲ ಶೋಧಿಸುವವರಿಗೆ ಚಿಲುಮೆಯ ಆಯತವೇಕೊ ? ಸತಿಯರ ನರಮಾಂಸವ ಭುಂಜಿಸುವವರಿಗೆ ಪರಪಾಕವರ್ಜಿತವೆಂದು ಸ್ವಯಂಪಾಕವೇಕೊ ? ಅಷ್ಟೋತ್ತರಶತ ವೇದವ ಓದುವವರಿಗೆ ಅಚ್ಚಪ್ರಸಾದವೇಕೊ ? ಇಂತೀ ತ್ರಿವಿಧ ಡಂಬಿನ ಭಕ್ತಿಗೆ ಊರ ಮುಂದಣ ಡೊಂಬನೆ ಸಾಕ್ಷಿ ಕೂಡಲಚೆನ್ನಸಂಗಮದೇವಾ
--------------
ಚನ್ನಬಸವಣ್ಣ
ನಿತ್ಯ ಚಿಲಮೆಯ ನೋಡುವಾತಂಗೆ ಉಚ್ಚೆಯ ಬಚ್ಚಲ ತೋಡಲಾಗದು. ಭಕ್ತರನಲ್ಲದೆ ಭವಿಗಳ ಬೇಡೆನೆಂಬಾತಂಗೆ ಅಚ್ಚೊತ್ತಿದ ಲಕ್ಷ್ಮಿಯ ಮುದ್ರೆಯ ಹಿಡಿಯಲಾಗದು. ಕೊಂಡ ವ್ರತಕ್ಕೆ ಸಂದೇಹ ಕುಳ್ಳಿರೆ, ಅಂಗವ ಹೊರಲಾಗದು. ಇಂತಿವನರಿಯದೆ, ನಾ ವ್ರತಸ್ಥನೆಂದು ಕೊಂಡಾಡುತಿಪ್ಪ ಭಂಡರನೊಪ್ಪ, ಈಶಾನ್ಯಮೂರ್ತಿ ಮಲ್ಲಿಕಾರ್ಜುನವು.
--------------
ಶಿವಲೆಂಕ ಮಂಚಣ್ಣ
ನಚ್ಚು ಮೆಚ್ಚಿಗೆ ಇಚ್ಫೆಯನಾಡಿ ಉಚ್ಚೆಯ ಕುಡಿವ ಉಪಾಧಿ ಉತ್ತರವು ಪಾತಕರ ನಾಲಗೆ. ಹಿತ್ತಿಲ ಕಡೆ ಕತ್ತೆ ನಾಯಿ ಬಾಲವ ಬಡಿಕೊಂಬ ಹಾಂಗೆ ಬಡಿಕೊಂಬವ ಭಕ್ತನಲ್ಲ ವಿರಕ್ತನಲ್ಲ ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಅಯ್ಯಾ, ಬ್ರಹ್ಮ ಕ್ಷತ್ರಿಯ ವೈಶ್ಯ ಶೂದ್ರ ಕಶ್ಯಪ ಭಾರದ್ವಾಜ ಮೊದಲಾದ ನೂರೊಂದು ಕುಲ, ಹದಿನೆಂಟು ಜಾತಿಯವರೊಳಗಾಗಿ ಯೌವನದ ಸ್ತ್ರೀಯರ ಕಂಡು, ಸಂಪಿಗೆ ಪುಷ್ಪಕ್ಕೆ ಭ್ರಮರನಿಚ್ಫೈಸುವಂತೆ ಕಾಮವಿಕಾರದಿಂದ, ಮೊಲಕ್ಕೆ ನಾಯಿ ಹಂಬಲಿಸಿದಂತೆ, ಮಾಂಸಕ್ಕೆ ಹದ್ದು ಎರಗಿದಂತೆ, ಸತ್ತ ದನವ ನರಿ ಕಾಯ್ದುಕೊಂಡಂತೆ, ಹೆಣ್ಣು ನಾಯಿ ಗಂಡು ನಾಯಿ ಕೂಟವ ಕೂಡಿ ಪಿಟ್ಟಿಸಿಕ್ಕಿ ಒರಲುವಂತೆ, ಮನ್ಮಥರತಿಸಂಗದಿಂದ, ಜನನದ ತಾಯಿಯೆನ್ನದೆ, ಅತ್ತಿಗೆ ನಾದಿನಿಯೆನ್ನದೆ, ಅಕ್ಕತಂಗಿಯೆನ್ನದೆ, ನಡತೆಯ ಒಡಹುಟ್ಟಿದವರೆನ್ನದೆ, ಅತ್ತೆ ಸೊಸೆಯೆನ್ನದೆ, ಮಗಳು ಮೊಮ್ಮಗಳೆನ್ನದೆ, ಅಜ್ಜಿ ಆಯಿಯೆನ್ನದೆ ಪಿಶಾಚರೂಪತಾಳಿ ಉಚ್ಚೆಯ ಬಚ್ಚಲಿಗೆ ಹೊಡದಾಡಿ ಸತ್ತಿತಯ್ಯ ಎನ್ನ ಗುಹ್ಯೇಂದ್ರಿಯವು. ಇಂತೀ ಗುಹ್ಯಲಂಪಟಕ್ಕೆ ದೂರವಾದ ಮಹಾಘನ ಸದ್ಭಕ್ತ ಶಿವಶರಣ ಶಂಕರದಾಸಿಮಯ್ಯನ ದಾಸಿಯ ದಾಸನ ಮಾಡಿ ಸಲಹಯ್ಯ. ಕಾರುಣ್ಯಸಾಗರ, ಪರಮಾನಂದಮೂರ್ತಿ, ಶ್ರೀಗುರುಲಿಂಗಜಂಗಮವೆ ಹರಹರ ಶಿವಶಿವ ಜಯಜಯ ಕರುಣಾಕರ, ಮತ್ಪ್ರಾಣನಾಥ ಮಹಾ ಶ್ರೀಗುರುಸಿದ್ಧಲಿಂಗೇಶ್ವರ.
--------------
ಬಸವಲಿಂಗದೇವ
ಮೂರು ಸ್ಥಲದ ಮೂಲವನರಿಯರು, ಪುಣ್ಯಪಾಪವೆಂಬ ವಿವರವನರಿಯರು. ಇಹಪರವನರಿಯದೆ ಚರ್ಮದ ಬೊಂಬೆಯ ಮೆಚ್ಚಿ ಉಚ್ಚೆಯ ಬಚ್ಚಲಲ್ಲಿ ಬಿದ್ದಿರ್ಪ ಕರ್ಮದ ಸುನಿಗಳನೆಂತು ದೇವರೆಂಬೆನಯ್ಯಾ ? ಹೊನ್ನು ವಸ್ತ್ರವ ಕೊಡುವವ[ನ] ಬಾಗಿಲ ಕಾಯ್ವ ಪಶುಪ್ರಾಣಿಗಳಿಗೆ ದೇವರೆನ್ನಬಹುದೇನಯ್ಯಾ ? ಜಗದ ಕರ್ತನಂತೆ ವೇಷವ ಧರಿಸಿಕೊಂಡು ಸರ್ವವನು ಬೇಡಲಿಕೆ ಕೊಟ್ಟರೆ ಒಳ್ಳಿದನು, ಕೊಡದೆ ಇದ್ದರೆ ಪಾಪಿ, ಚಾಂಡಾಲ, ಅನಾಚಾರಿ ಎಂದು ದೂಷಿಸಿ ಒಳಹೊರಗೆಂದು ಬೊಗಳುವ ಮೂಳಮಾನವರಿಗೆ ಮಹಾಂತಿನ ಆಚರಣೆ ಎಲ್ಲಿಯದೊ ? ಇಲ್ಲವೆಂದಾತ ನಮ್ಮಂಬಿಗರ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಎಲೆ ಕರುಣಿ, ಜನನಿಯ ಜಠರಕ್ಕೆ ತರಬೇಡವಯ್ಯ. ತಂದರೆ ಮುಂದೆ ತಾಪತ್ರಯಕ್ಕೊಳಗಾದ ತರಳೆಯ ದುಃಖದ ಬಿನ್ನಪವ ಕೇಳಯ್ಯ. ಆಚಾರಲಿಂಗಸ್ವರೂಪವಾದ ಘ್ರಾಣ, ಗುರುಲಿಂಗಸ್ವರೂಪವಾದ ಜಿಹ್ವೆ, ಶಿವಲಿಂಗಸ್ವರೂಪವಾದ ನೇತ್ರ, ಜಂಗಮಲಿಂಗಸ್ವರೂಪವಾದ ತ್ವಕ್ಕು, ಪ್ರಸಾದಲಿಂಗಸ್ವರೂಪವಾದ ಶ್ರೋತ್ರ, ಮಹಾಲಿಂಗಸ್ವರೂಪವಾದ ಪ್ರಾಣ, ಪಂಚಬ್ರಹ್ಮ ಸ್ವರೂಪವಾದ ತನು, ಇಂತಿವೆಲ್ಲವು ಕೂಡಿ ಪರಬ್ರಹ್ಮಸ್ವರೂಪ ತಾನೆಯಾಗಿ, ಆನೆಯ ರೂಪತಾಳಿ ಕೇರಿಯ ನುಸುಳುವ ಹಂದಿಯಂತೆ, ಮೆಟ್ಟುಗುಳಿಯೊತ್ತಿನ ಉಚ್ಚೆಯ ಬಚ್ಚಲೆಂಬ ಹೆಬ್ಬಾಗಿಲ ದಿಡ್ಡಿಯಲ್ಲಿ, ಎಂತು ನುಸುಳುವೆನಯ್ಯ?. ಹೇಸಿ ಹೇಡಿಗೊಂಡೆನಯ್ಯ, ನೊಂದೆನಯ್ಯ, ಬೆಂದೆನಯ್ಯ. ಬೇಗೆವರಿದು ನಿಂದುರಿದೆನಯ್ಯ. ಎನ್ನ ಮೊರೆಯ ಕೇಳಯ್ಯ ಮಹಾಲಿಂಗವೇ. ಎನ್ನ ಭವಕ್ಕೆ ನೂಂಕಬೇಡಯ್ಯ. ನಾನು ಅನಾದಿಯಲ್ಲಿ ಭೋಗಕ್ಕಾಸೆಯ ಮಾಡಿದ ಫಲದಿಂದ, ಅಂದಿಂದ ಇಂದು ಪರಿಯಂತರ ನಾನಾ ಯೋನಿಯಲ್ಲಿ ಬಂದು, ನಾಯಿಯುಣ್ಣದ ಓಡಿನಲ್ಲಿ ಉಂಡು, ನರಗೋಟಲೆಗೊಂಡೆನಯ್ಯ. ಎನಗೆ ಹೊನ್ನು ಬೇಡ, ಹೆಣ್ಣು ಬೇಡ, ಮಣ್ಣು ಬೇಡ, ಫಲವು ಬೇಡ, ಪದವು ಬೇಡ ನಿಮ್ಮ ಶ್ರೀಪಾದವನೊಡಗೂಡಲೂಬೇಡ, ಎನಗೆ ಪುರುಷಾಕಾರವೂ ಬೇಡವಯ್ಯ. ಎನ್ನ ಮನ ಒಪ್ಪಿ, ಪಂಚೈವರು ಸಾಕ್ಷಿಯಾಗಿ, ನುಡಿಯುತ್ತಿಪ್ಪೆನಯ್ಯಾ. ನಿಮ್ಮಾಣೆ, ಎನಗೊಂದ ಕರುಣಿಸಯ್ಯ ತಂದೆ, ಡೋಹರ ಕಕ್ಕಯ್ಯ, ಮಾದಾರ ಚೆನ್ನಯ್ಯ, ಅಂಬಿಗರ ಚೌಡಯ್ಯ ಇಂತಪ್ಪ ಶಿವಶರಣರ ಮನೆಯ ಬಾಗಿಲ ಕಾವ ಶುನಕನ ಮಾಡಿ ಎನ್ನ ನೀ ನಿಲಿಸಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಮತ್ರ್ಯದ ಬೀಜವ ಬಿತ್ತಿ ಕುಡಿಯೊಡೆಯದ ಮುನ್ನ ಕತ್ತಲೆ ಬೆಳಗು ವಿಸ್ತರಿಸಿ ತೋರ್ಪುದರತ್ತಲೆ ನಿನ್ನ ಚಿದಂಶಿಕನಪ್ಪ ಶರಣಂಗೆ ಭೂತಳದ ಭೋಗವನೋತು ಬಳಸೆಂದು ಪ್ರೀತಿಯಿಂದ ಕಲ್ಪಿಸಿಕೊಡುವರೆ ಅಯ್ಯ? ರಾಜಹಂಸನಿಗೆ ಅಮೃತಾಹಾರವನಿಕ್ಕಬೇಕಲ್ಲದೆ ಗರುತ್ಮನ ಆಹಾರವನಿಕ್ಕುವರೆ ಅಯ್ಯ? ಅದೆಂತೆನಲು ಅವನಿಯ ಭೋಗಕ್ಕೆ ಅತಿಮಿಗಿಲೆನಿಸಿಕೊಂಬುದು ಮಜ್ಜನ ಭೋಜನ ಅನುಲೇಪನ ಆಭರಣ ವಸ್ತ್ರ ತಾಂಬೂಲವಯ್ಯ. ಇದಕ್ಕೆ ನೂರ್ಮಡಿ ಮಿಗಿಲೆನಿಸಿಕೊಂಬುದು ಸುದತಿಯರ ಮೃದುನುಡಿ ತೆಕ್ಕೆ ಚುಂಬನ ಸುರತಸಂಭ್ರಮದ ಲೀಲಾವಿನೋದವಯ್ಯ. ಆ ಸರಸ ಲೀಲಾವಿನೋದದ ಬಗೆಯ ಹೇಳಲಂಜುವೆನಯ್ಯ. ಹೇಳುವೆ- ನೀನು ಮಾಂಕೊಳದಿರಯ್ಯ. ಹೇಲಕುಳಿಯೊತ್ತಿನ ಉಚ್ಚೆಯ ಬಚ್ಚಲು. ಹಡುಕುನಾರುವ ಕೀವು ತುಂಬಿದ ಹಳೆಯ ಗಾಯ. ಕೋಲುಕುಕ್ಕುವ ತೊಗಲು ಪಡುಗ. ಆ ಪಡುಗದ ಸೊಗಸು ಮಾನವರ ತಲೆಗೇರಿ ಮುಂದಲ ಕಾಲಿನಲಿ ಅಮರ್ದಪ್ಪಿ ಪಿಡಿದು ಹೆಣ್ಣುನಾಯ ಬಾಯಲೋಳೆಯ ಗಂಡುನಾಯಿ ಚಪ್ಪರಿದು ನೆಕ್ಕಿಕೊಳುತ್ತ ಬಾಯೊಳಗೆ ಕಿಸುಕುಳದ ಬಾಯನಿಕ್ಕಿ ಒಡೆಯನೊಂದಾಗಿ ಬಂದ ಹೊಸ ಮನುಷ್ಯರ ಕಂಡ ನಾಯಂತೆ ಕರುಗಳ ಹಾಕುವ ಕಾಮದೈನ್ಯರ ಕರ್ಮಭೋಗಮಂ ಕಂಡು ಹರಣ ಹಾರಿ ಮನ ನಾಚಿ ಹೇಸಿ ಹೇಡಿಗೊಂಡು ಹೊನ್ನು ಹೆಣ್ಣು ಮಣ್ಣೆಂಬ ಮೂರು ಸಂಕಲೆಯ ಕೀಲ ಜ್ಞಾನಚೀರಣದಿಂದ ಕಡಿಗಡಿದು ವಿರಕ್ತನಾಗಿ ನಿರ್ವಾಣ ಪದಕ್ಕೆ ಕಾಮಿತನಾಗಿ ಸ್ವಾನುಭಾವದಲ್ಲಿ ಆಚರಿಸುವ ಆಚರಣೆಯಾವುದೆಂದರೆ- ಅಂಗದ ಮೇಲೆ ಲಿಂಗವುಳ್ಳ ಪಟ್ಟದರಾಣಿ ಅರಸುವೆಣ್ಣು ಅನಾದಿನಾಯಕಿ ಜಾರೆ ಪತಿವ್ರತೆ ಪುಂಡುವೆಣ್ಣು ಕೆಂಪಿ ಕರಿಕಿ ದಾಸಿ ವೇಶಿ ಮೊಂಡಿ ಮೂಕೊರತಿ ಕುಂಟಿ ಕುರುಡಿ ಇವರೆಲ್ಲರ ಭಕ್ತಿಯಿಂ ಸಮಾನಂಗಂಡು ಇವರೆಲ್ಲರಂ ಗುರುವಿನ ರಾಣಿವಾಸಕ್ಕೆ ಸರಿಯೆಂದು ನಿರ್ಧರಿಸಿ ಊರ್ವಶಿ ರಂಭೆ ತಿಲೋತ್ತಮೆಯರಿಗೆ ಸರಿಯಾದ ಶಂಖಿನಿ ಪದ್ಮಿನಿಗೆಣೆಯಾದ ರತಿಯ ಲಾವಣ್ಯಕ್ಕೆ ಸರಿಮಿಗಿಲೆನಿಪ ಚಿಲುವೆಣ್ಣುಗಳ ಗೋಮಾಂಸ ಸುರೆಗೆ ಸರಿಯೆಂದು- ಭಾವಿಸಿದೆನಯ್ಯ ನೀ ಸಾಕ್ಷಿಯಾಗಿ. ಕಬ್ಬುವಿಲ್ಲನಂ ಖಂಡಿಸಿ ಕಾಸೆಯನಳಿದು ಸೀರೆಯನುಟ್ಟು ಗಂಡು ಹೆಣ್ಣಾಗಿ ನಿನಗೆ ವಧುವಾದೆನಯ್ಯಾ, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಉಚ್ಚೆಯ ಬಚ್ಚಲ ಹಲವು ಭಗದ ದೇವತೆಯ ಮಾಯೆಯ ಹಾವಳಿಯ ನೋಡಿರಣ್ಣ. ಕರಣಹಸುಗೆಯನೋದುವಣ್ಣಗಳ ಕಾಲ ಹಿಡಿದೆಳೆಯಿತು ಮಾಯೆ. ಮಿಶ್ರಾರ್ಪಣಗಳನೋದುವಣ್ಣಗಳ ಮೀಸೆಯ ಹಿಡಿದುಯ್ಯಾಲೆಯನಾಡಿತು ಮಾಯೆ. ಆತ್ಮನ ಸ್ವರೂಪವನರಿವಣ್ಣಗಳ ತನಗಾಳು ಮಾಡಿತ್ತು ಮಾಯೆ. ಶಿವಜ್ಞಾನವ ಕೀಳುಮಾಡಿ ತತ್ವಸ್ವರೂಪವನರಿವಣ್ಣಗಳ ತನಗೆ ಮುದ್ದು ಮಾಡಿಸಿ ಮೋಹಿಸಿ ಬತ್ತಲೆ ನಿಲಿಸಿತು ಮಾಯೆ. ಮಂತ್ರಗೋಪ್ಯವನೋದುವಣ್ಣಗಳ ಕುಟಿಲವೆಣ್ಣಿನ ಕುಮಂತ್ರಕ್ಕೆ ಸಿಕ್ಕಿಸಿ ಕಾಡಿತು ಮಾಯೆ. ಬರಿಯ ವೈರಾಗ್ಯದ ಮಾಡುವಣ್ಣಗಳ ಸ್ತ್ರೀಯರ ಮುಡಿಯ ಸಿಂಗರಿಸುವಂತೆ ಮಾಡಿತು ಮಾಯೆ. ಜಪಧ್ಯಾನಗಳ ಮಾಡುವಣ್ಣಗಳ ಭಗಧ್ಯಾನವ ಮಾಡಿಸಿತು ಮಾಯೆ. ಲಿಂಗವ ಕರಸ್ಥಲದಲ್ಲಿ ಹಿಡಿದಣ್ಣಗಳ ಅಂಗನೆಯರ ಹಿಂದಣ ಪುಕಳಿಯ ಮುಂದಣ ಯೋನಿಚಕ್ರವ ಮುಟ್ಟಿಸಿ ಮೂಗನರಿಯಿತು ಮಾಯೆ. ಪ್ರಸಾದ ಲೇಹ್ಯವ ಮಾಡುವಣ್ಣಗಳ ಪೊಸಜವ್ವನೆಯರ ತುಟಿಯ ಲೋಳೆಯ ನೆಕ್ಕಿಸಿತು ಮಾಯೆ. ಬೆಡಗಿನ ವಚನವನೋದುವಣ್ಣಗಳ ಸಖಿಯರ ತೊಡೆಯಲ್ಲಿ ಹಾಕಿತು ಮಾಯೆ. ವಚನವನೋದುವಣ್ಣಗಳ ರಚನೆಗೆ ನಿಲಿಸಿತು ಮಾಯೆ. ಇದು ಕಾರಣ, ಇಚ್ಛೆಯ ನುಡಿದು ಕುಚ್ಫಿತನಾಗಿ ಬರಿವಿರಕ್ತನಂತೆ ಹೊಟ್ಟೆಯ ಹೊರೆದು ಹೊನ್ನು ಹೆಣ್ಣು ಮಣ್ಣು ದೊರೆತಲ್ಲಿ ಹಿಡಿದಿಹ ಕರ್ಮಿಯೆಂಬ ಕಾಳಮೂಳರಿಗೆಲ್ಲಿಯದೋ ವಿರಕ್ತಿ?, ಘನಲಿಂಗಿಯ ಮೋಹದ ಚೆನ್ನಮಲ್ಲಿಕಾರ್ಜುನಾ.
--------------
ಘನಲಿಂಗಿದೇವ
ಹೇಲುಚ್ಚೆಯ ಕೊಂಡ ಜೋಲುವ ಕಂಡ ಮೇಲೆ ನಾರುವ ಬಾಯಿ ಇವು ಮೂರು ಹೇಹವೆಂದರಿಯದೆ ಹೆಚ್ಚುನುಡಿ ಬಣ್ಣವಿಟ್ಟುಕೊಂಬ ಉಚ್ಚೆಯ ಕುಡಿವವರ ಬಾಳು ಕೆಚ್ಚಲ ಕಚ್ಚಿದ ಉಣ್ಣೆಯ ತೆರನಂತೆ. ನಚ್ಚದಿರು ನಾರಿಯರ ಮೋಹವ. ಕರ್ಮದ ಕಾಳಕಿಚ್ಚು ಕಾಣಾ ಅಖಂಡ ಪರಿಪೂರ್ಣ ಘನಲಿಂಗಗುರು ಚೆನ್ನಬಸವೇಶ್ವರ ಶಿವಸಾಕ್ಷಿಯಾಗಿ.
--------------
ಕುಷ್ಟಗಿ ಕರಿಬಸವೇಶ್ವರ
ಪಾಕಲವಣವ ಬಿಟ್ಟಲ್ಲಿ ಪರವಧುವ ಅಪೇಕ್ಷಿಸಿ ಬೇಡಲಾಗದು. ಅಪ್ಪುಲವಣವ ಬಿಟ್ಟು ಸಪ್ಪೆಯ ಕೊಂಬಲ್ಲಿ ಉಚ್ಚೆಯಬಚ್ಚಲ ಮುಟ್ಟಲಾಗದು. ಉಚ್ಚೆಯ ಬಚ್ಚಲ ಬಿಟ್ಟಲ್ಲಿ ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಬಾಗಿಲತಪ್ಪಲ ಕಾಯಲಾಗದು. ಇಂತೀ ವ್ರತ ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದಲ್ಲಿ ತಪ್ಪದ ನೇಮ.
--------------
ಅಕ್ಕಮ್ಮ
ಇನ್ನಷ್ಟು ... -->