ಉರಿ ಆತ್ಮಸ್ಥಾವರಂಗಳಲ್ಲಿ ನಂದದಿಹನ್ನಕ್ಕ,
ನೀರು ಒಂದರಲ್ಲಿಯೆ ಇಂಗದಿಹನ್ನಕ್ಕ,
ಲಿಂಗವೆಂಬುದೊಂದು ಪ್ರಮಾಣವುಂಟು
ಆ ಪ್ರಮಾಣು ಅಪ್ರಮಾಣಹನ್ನಕ್ಕ,
ಭಾವ ಮೂರು, ನಿರ್ಭಾವ ಮೂರು,
ಸ್ಥೂಲವಾರು, ತತ್ತ್ವವೈದು, ಇಂತಿವು ಕೂಡೆ,
ಅಳೆದು ಮರಳಲಿಕ್ಕೆ ಹಲವು ಸ್ಥಲ ಕುಳ ಬೇರಾಯಿತ್ತು.
ಬಂಗಾರವೊಂದು ಹಲವು ತೊಡಿಗೆಯ ಹೊಲಬಾದಂತೆ,
ತನ್ನಷ್ಟೇ ತದ್ದøಷ್ಟವುಭಯವ ಕೂಡುವನ್ನಬರ,
ನಿಃಕಳಂಕ ಮಲ್ಲಿಕಾರ್ಜುನನೆಂದೆನುತ್ತಿರಬೇಕು.