ಅಥವಾ

ಒಟ್ಟು 5 ಕಡೆಗಳಲ್ಲಿ , 5 ವಚನಕಾರರು , 5 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಶ್ಚಿಮಪದ್ಮಾಸನದಲ್ಲಿ ಕುಳ್ಳಿರ್ದು, ನಿಟ್ಟೆಲುವ ನೆಟ್ಟನೆ ಮಾಡಿ, ಅಧೋಮುಖ ಕಮಲವ ಬಲಿದು, ಊಧ್ರ್ವಮುಖವ ಮಾಡಿ, ಇಂದ್ರಿಯಂಗಳನು ಏಕಮುಖವ ಮಾಡಿ, ಚಂದ್ರ ಸೂರ್ಯರನೊಂದಠಾವಿನಲ್ಲಿರಿಸಿ ಅತ್ತಿತ್ತ ಮಿಸುಕದೆ ನಡುಗೀರ ಜ್ಯೋತಿಯ ದೃಢವಾಗಿ ಹಿಡಿದು, ಪರಮಾನಂದದ ವಠದೊಳಗೆ, ಪ್ರಾಣಲಿಂಗಾರ್ಚನೆಯ ಮಾಡುವ ಮಹಾಮಹಿಮರ ತೋರಿ ಬದುಕಿಸಾ, ಕೂಡಲಚೆನ್ನಸಂಗಯ್ಯಾ.
--------------
ಚನ್ನಬಸವಣ್ಣ
ಉತ್ತರ, ದಕ್ಷಿಣ , ಪೂರ್ವ, ಪಶ್ಚಿಮ ನಾಲ್ಕು ಪಥವನು ಏಕವ ಮಾಡಿ, ಊಧ್ರ್ವಮುಖವ ಮಾಡಿ, ಈಡಾ ಪಿಂಗಳ ನಾಳಮಂ ಕಟ್ಟಿ, ಸುಷಮ್ನನಾಳವಂ ಎತ್ತಿ , ಮನ ಪವನ ಬಿಂದು ಒಡಗೂಡಿ, ಚಂದ್ರ ಸೂರ್ಯ ಶಿಖಿಯರಂ ಮುಪ್ಪುರಿಯ ಮಾಡಿ, ಒಡಗೂಡಿ ಏಕವಾಗಿ ಹುರಿಗೂಡಿ, ಮತ್ರ್ಯಲೋಕವ ಬಿಟ್ಟು, ದೇವಲೋಕವ ಮೆಟ್ಟಿನಿಂದು, ಭಾವ ಬಯಲಾಗಿ, ಬಯಕೆ ಸವೆದು, ಇನ್ನು ಈ ಲೋಕದೊಳಗೆ ಬಂದು ಬದುಕಿದೆನೆಂಬುದನಕ್ಕೆ ಹೇಯ ಹುಟ್ಟಿ, ಇದಾವುದನೂ ಒಲ್ಲದಿರ್ಪರು, ಬಸವಪ್ರಿಯ ಕೂಡಲಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಸ್ವಸ್ಥ ಸಿದ್ಧಾಸನದಲ್ಲಿ ಕುಳ್ಳಿರ್ದು ಅತ್ತಿತ್ತ ಕಂಪಿಸದೆ ನೆಟ್ಟೆಲುವ ನೆಟ್ಟನೆ ಮಾಡಿ ಅಧೋಮುಖಗಮನವಾಯುವ ಊಧ್ರ್ವಮುಖವ ಮಾಡಿ, ಆಧಾರವಂ ಬಲಿದು ಪ್ರಾಣವಾಯುವ ಪಾನವ ಮಾಡಿ ಆರುವೆರಳಿನಿಂ ಆರುದ್ವಾರವನೊತ್ತಲು ಶಶಿ ರವಿ ಬಿಂಬಗಳ ಮಸುಳಿಪ ನಾದ ಬಿಂದು ತೇಜವು ಕೂಡಿ ಮೂರ್ತಿಯಾಗಿ ಥಳಥಳಿಸಿ ಹೊಳೆವ ಲಿಂಗದ ಬೆಳಗಿನೊಳಗೆ ಮನವಳಿದಾತನೆ ಉನ್ಮನಿವನಿತೆಗೆ ವಲ್ಲಭನೆನಿಸುವ ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರನಲ್ಲಿ ಆತನೇ ಪರಮಯೋಗಿ.
--------------
ಸ್ವತಂತ್ರ ಸಿದ್ಧಲಿಂಗ
ಮಣಿಪೂರಕಚಕ್ರದ ದಶದಳ ಪದ್ಮವ ಪೊಕ್ಕು ಸಾಧಿಸಿ, ಅಲ್ಲಿಹ ಮಂತ್ರ-ಪದ-ವರ್ಣ-ಭುವನ-ತತ್ವ-ಕಲೆಗಳಂ ಕಂಡು, ಅಲ್ಲಿ ಕೃಷ್ಣವರ್ಣವಾಗಿಹ ಜ್ಯೋತಿರ್ಮಯಲಿಂಗಮಂ ಬೆರಸಿ ಅಧೋಮುಖವಾಗಿಹ ಕುಂಡಲಿಯ ಸರ್ಪನ ಬಾಲವಂ ಮೆಟ್ಟಿ ಊಧ್ರ್ವಮುಖವಂ ಮಾಡಿ, ಪಶ್ಚಿಮವಾಯು ತಿರುಗಿ ಅನಿಲಾಗ್ನಿಯ ದೆಸೆಯಿಂದ ಗ್ರಂಥಿಗಳು ಕರಗಿ ಮನಪವನಬಿಂದು ಸಂಯೋಗದಿಂದೇಕಾಗ್ರ ಚಿತ್ತದಿಂ ಅನಾಹತಚಕ್ರದ ದ್ವಾದಶದಳದ ಪದ್ಮವ ಹೊಕ್ಕನು ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಪದ್ಮಾಸನದಲ್ಲಿ ಕುಳ್ಳಿರ್ದು, ಕುಂಡಲಿಯ ಸ್ಥಾನವನರಿದು, ಅಂಡಲೆವ ಅಧೋವಾಯುವ ಊಧ್ರ್ವಮುಖವ ಮಾಡಿ ಷಡಂಗುಲವನೊತ್ತಿ ಊಧ್ರ್ವವಾಯುವನಧೋಮುಖಕ್ಕೆ ತಂದು ಉತ್ತರಪೂರ್ವದಕ್ಷಿಣವನತಿಗಳೆದು ಪಶ್ಚಿಮದ ಸುಷುಮ್ನೆಯಲ್ಲಿ ಮನಶ್ಶಕ್ತಿಸಂಧಾನಸಂಯೋಗದಿಂದ ಸಹಸ್ರದಳಕಮಲದಲ್ಲಿ ನಾದಬ್ರಹ್ಮವನೆಯ್ದಿ, ಮಹಾವಾಸನಾಮೃತವ ದಣಿಯುಂಡು ತ್ರಿಸಂಧಾನ ಒಂದಾದ ಬಳಿಕ_ಆತ್ಮ ಪರಮಾತ್ಮ ಇಂತಾಗಿ, ಅಂತರಾತ್ಮ ವಿಚಾರಕ್ಕೆ ಇಳಿದಲ್ಲಿ ಅಭ್ಯಾಸಕ್ಕೆ ಬರಲಾಗದು. ಅದೆಂತೆಂದಡೆ:ದೇವಲೋಕಕ್ಕೆ ಸಂದು ಮರಳಿ ಮಾನವನಪ್ಪಡೆ ಅದೇ ಪಾತಕ ಹಸಿದವನಮೃತವನುಂಡು, ಮರಳಿ ಹಸಿದು, ಉಂಡಿಹೆನೆಂದಡೆ ಅದೇ ಪ್ರಕೃತಿ ಗುಣ. ಇದು ಕಾರಣ_ಪರಮಾತ್ಮ ತಾನಾದಾತನು, ಪರಮಾತ್ಮ ತಾನಾದನಾಗಿ ತನ್ನಲ್ಲಿ ತಾನೆ ಏಕೀ ಭವಿಸಿರಬೇಕು, ಗುಹೇಶ್ವರಾ.
--------------
ಅಲ್ಲಮಪ್ರಭುದೇವರು
-->