ಒಡಲೆಂಬಾರಣ್ಯದ ಪಡುವಣ ಕಾಳುಗಟ್ಟದ
ಗಹ್ವರದ ನವದ್ವಾರದೊಳಗೆ ಅಡಗಿಪ್ಪ ಐವರ ಕಳ್ಳರ ತಿಳಿದು
ನೋಡಿರಯ್ಯಾ.
ಆ ಕಳ್ಳರು ಇಹನ್ನಕ್ಕರ ಊರಿಗುಪಟಳ ಮನೆಗೆ ಮಾರಿ,
Zõ್ಞಕ ಗ್ರಾಮದ ಮಧ್ಯದವರಿಗುಳುಹಿಲ್ಲ.
ತನುಪ್ರಪಂಚಿಗಳು ಮನಪ್ರಪಂಚಿಗಳು ಧನಪ್ರಪಂಚಿಗಳು
ವಾದಿಗಳು ತರ್ಕಿಗಳು ನಾನಾ ಕುಟಿಲ ಕುಹಕ ಬಹುಪಾಪಿಗಳೆಲ್ಲ ನೆರೆದು,
ಆ ಕ?್ಳರ ಹಿಡಿದಿಹೆವೆನುತ್ತಿಹರಯ್ಯಾ.
ಅದಕ್ಕೆಂಟು ಬೀದಿ ಒಂಬತ್ತು ಓಡುಗಂಡಿ ಕಾಣಬಾರದ ಕತ್ತಲೆ,
ಹೆಜ್ಜೆಯ ಹೊಲಬ ಕಂಡೆಹೆನೆಂಬನು ಭ್ರಾಂತ ನೋಡಾ !
ಓಂ ಬ್ರಹ್ಮಸ್ನಾನಂ ಪವನಜ್ಞಾನಂ ಲಿಂಗಧ್ಯಾನಂ
ಸುಜ್ಞಾನದರ್ಶನಂ ಪ್ರಭಾಕರಂ ದಿವಾಕರಂ
ಇಂತೀ ಶ್ರುತಿಮತದಲ್ಲಿ ತಿಳಿದು ನೋಡಲಿಕೆಯಾಗಿ ಆ ಹೆಜ್ಜೆ ಹೋಯಿತು !
ಅಂಗಸಂಗನ ಹಳ್ಳಿಯ ಒಳಗೆರೆಯ ಒಸರುಬಾವಿಯ
ಲಿಂಗಗೂಡಿನ ಶಿವಪುರದ ಸೀಮೆಯ,
ನಿಟಿಲಪುರದ ತಲೆವಲದಲ್ಲಿ ಸಿಕ್ಕಿದ ಕ?್ಳರ ಅಂಗದ ಮೇಲೆ ಕಟ್ಟಿತಂದು
ಎನ್ನೊಡೆಯ ಪ್ರಭುರಾಯಂಗೊಪ್ಪಿಸಲು
ಆ ಪ್ರಭುರಾಯ ತನ್ನವರೆಂದು ಒಕ್ಕುದ ಮಿಕ್ಕುದನಿಕ್ಕಿ ರಕ್ಷಿಸುವ ಕಾಣಿರೆ !
ಇಂತಪ್ಪ ಘಟ ಪಂಚಭೂತಂಗ? ಕಟ್ಟಿ ನಿಲಿಸಿ,
ಆತ್ಮಜ್ಞಾನ ಭಕ್ತಿರಸಾಮೃತಸಾರಾಯವನುಣಬಲ್ಲವರಾರೆಂದಡೆ
ಪ್ರಭುವಿನ ಬಳಿಯ ಬಸವಸಂತತಿಗಲ್ಲದೆ ಅ?ವಡದು
ಮಿಕ್ಕಿನ ಪ್ರಪಂಚಿಗಳಿಗೆ ಅಸಾಧ್ಯ ಕಾಣಾ
ಕೂಡಲಚೆನ್ನಸಂಗಮದೇವಯ್ಯಾ.