ಪರುಷರಸ ಸೋಂಕಿದಲ್ಲಿ ಲೋಹಕ್ಕಿದಿರೆಡೆ ಉಂಟೆ ?
ಸಿಂಧುವೊಳಕೊಂಡ ದ್ರವ್ಯಕ್ಕೆ ಋತುಕಾಲ ವೈಶಾಖಮಾಸಂಗಳಲ್ಲಿ
ಜಲವಿಂಗಲು ಮತ್ತೆ ಕಂಡೆಹೆವೆನಲುಂಟೆ ?
ಸರ್ವಸಂಗಪರಿತ್ಯಾಗವ ಮಾಡಿದ ಯೋಗಿ
ತಂದೆ ತಾಯಿ ಸಹೋದರ ಬಂಧುಗಳೆಂದು
ಪಕ್ಷವ ಅಂಗೀಕರಿಸಿದಡೆ
ತ್ರಿಭಂಗಿಯ ಭುಂಜಿಸಿದವ
ಮರವೆಯ ಸುರಾಪಾನವ ಅಂಗೀಕರಿಸಿದವ, ಆತ ಲಿಂಗಾಂಗಿಯಲ್ಲ.
ಚನ್ನಬಸವಣ್ಣಪ್ರಿಯ ಭೋಗಮಲ್ಲಿಕಾರ್ಜುನಲಿಂಗಕ್ಕೆ ಸಲ್ಲ.