ಅಥವಾ

ಒಟ್ಟು 4 ಕಡೆಗಳಲ್ಲಿ , 3 ವಚನಕಾರರು , 4 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಅತಕ್ರ್ಯ ಅಪ್ರಮಾಣ ಅನಾಮಯ ಅನುಪಮ ಸರ್ವಗತ ಸರ್ವಜ್ಞ ಸರ್ವೇಶ್ವರನಪ್ಪ ಪರಶಿವನು ಜಗತ್‍ಸೃಷ್ಟ್ಯರ್ಥವಾಗಿ ಸಮಸ್ತತತ್ವಂಗಳುತ್ಪತ್ತಿಗೆ ಮೂಲಿಗನಾಗಿ ತನ್ನಿಚ್ಛೆಯ ನೆನಹೆಂಬ ಚಿಂತಾಶಕ್ತಿಯ ಸಹಸ್ರದೊಳೊಂದಂಶದಲ್ಲಿ ಕುಂಡಲಿನಿಯಪ್ಪ ಪರೆ ಜನಿಸಿತ್ತು. ಆ ಪರಶಿವನಪ್ಪ ನಿಷ್ಕಲಬ್ರಹ್ಮವು ಈ ಕುಂಡಲಿನಿಯು [ತಾದಾತ್ಯ]ದಿಂ ಬ್ಥಿನ್ನವಿಲ್ಲದಿಹುದೆ ಸಕಲ ನಿಷ್ಕಲವಪ್ಪ ಸದಾಶಿವನು. ಆ ಸದಾಶಿವನು ತಾನೆ ಸಾದಾಖ್ಯದಿಂ ಪಂಚಬ್ರಹ್ಮಮೂರ್ತಿಯಾದುದು. ಎಂತೆಂದೊಡೆ: ಆ ಕುಂಡಲಿನಿಯಪ್ಪ ಪರೆಯ ಸಹಸ್ರದೊಳೊಂದಂಶಂದಲ್ಲಿ ಆದಿಶಕ್ತಿ ಜನಿಸಿತ್ತು. ಆದಿಶಕ್ತಿಯ ಸಹಸ್ರದೊಳೊಂದಂಶದಲ್ಲಿ ಇಚ್ಛಾಶಕ್ತಿ ಜನಿಸಿತ್ತು. ಇಚ್ಛಾಶಕ್ತಿಯ ಸಹಸ್ರದೊಳೊಂದಂಶದಲ್ಲಿ ಜ್ಞಾನಶಕ್ತಿ ಜನಿಸಿತ್ತು. ಜ್ಞಾನಶಕ್ತಿಯ ಸಹಸ್ರದೊಳೊಂದಂಶದಲ್ಲಿ ಕ್ರಿಯಾಶಕ್ತಿ ಜನಿಸಿತ್ತು. ಆ ನಿಷ್ಕಲವಪ್ಪ ಶಿವನ ನಿಷ್ಕಲೆಯಪ್ಪ ಕುಂಡಲಿನಿಯಪ್ಪ ಪರೆಯ ಹತ್ತರೊಳೊಂದಂಶದಲ್ಲಿ ಶಿವಸಾದಾಖ್ಯ ಜನಿಸಿತ್ತು. ಆದಿಶಕ್ತಿಯ ಹತ್ತರೊಳೊಂದಂಶದಲ್ಲಿ ಅಮೂರ್ತಿಸಾದಾಖ್ಯ ಜನಿಸಿತ್ತು. ಇಚ್ಛಾಶಕ್ತಿಯ ಹತ್ತರೊಳೊಂದಂಶದಲ್ಲಿ ಮೂರ್ತಿಸಾದಾಖ್ಯ ಜನಿಸಿತ್ತು. ಜ್ಞಾನಶಕ್ತಿಯ ಹತ್ತರೊಳೊಂದಂಶದಲ್ಲಿ ಕರ್ತೃಸಾದಾಖ್ಯ ಜನಿಸಿತ್ತು. ಕ್ರಿಯಾಶಕ್ತಿಯ ಹತ್ತರೊಳೊಂದಂಶದಲ್ಲಿ ಕರ್ಮಸಾದಾಖ್ಯ ಜನಿಸಿತ್ತು. ಆ ಕರ್ಮಸಾದಾಖ್ಯವಪ್ಪ ಮಾಹೇಶ್ವರನು ಸಕಲಸ್ವರೂಪದಿಂ ಸೋಮಧರ ಮೊದಲಾದ ಲಿಂಗೋದ್ಭವ ಕಡೆಯಾದ ಪಂಚವಿಂಶತಿಲೀಲೆಯ ತಾಳ್ದ ಸಕಲವಪ್ಪ ಮಾಹೇಶ್ವರನು ಸಕಲನಿಷ್ಕಲವಪ್ಪ ಸದಾಶಿವನು ನಿಷ್ಕಲವಪ್ಪ ಶಿವನೊಬ್ಬನಲ್ಲದೆ ಬೇರಲ್ಲವೆಂಬುದಕ್ಕೆ `ತತ್ಪರಂ ಬ್ರಹ್ಮೇತಿ, ಸ ಏಕೋ ರುದ್ರಸ ಈಶಾನಸ್ಸ ಭಗವಾನ್ ಶ್ರುತಿ: ಸ ಮಹೇಶ್ವರಸ್ಸ ಮಹಾದೇವ ಇತಿ ಇಂತೆಂದುದಾಗಿ, ಏಕಮೇವ ಅದ್ವಿತೀಯನಪ್ಪ ಸೋಮಧರನು, ಉಮಾಸಹವಾದ ಸೋಮನಿಂದ ವಾಯು, ಅಗ್ನಿ, ಪೃಥ್ವಿ, ರವಿ ಮೊದಲಾದ ಅಷ್ಟಮೂರ್ತಿಗಳು ದೇವರ್ಕಳು ಸುರಪ ಹರಿವಿರಿಂಚಿಗಳು ಜನಿಸಿದುದಕ್ಕೆ ಶ್ರುತಿ:ಸೋಮಃ ಪವತೇ ಜನಿತಾ ಮತೀನಾಂ ಜನಿತಾ ದಿವೋ ಜನಿತಾ ಪೃಥಿವ್ಯಾರ್ಜನಿತಾಗ್ನಿ ಸೂರ್ಯಸ್ಯ ಜನಿತೇಂದ್ರಸ್ಯ ಜನಿತಾಥ ವಿಷ್ಣೋಃ ಎಂದುದಾಗಿ, ತನ್ಮಹೇಶ್ವರಕೋಟ್ಯಂಶ ಬ್ರಹ್ಮವಿಷ್ಣುಸಮುದ್ಭವಂ ಋಷಯಃ ಕೃತವೋ ಕೋಟಿರ್ನಿಮಿಷೇಣ ಸಮುದ್ಭವಂ ಎಂದುದಾಗಿ, ಅಷ್ಟತನುವಿನೊಳಗಾದ ಜಗದ ರಚನೆ ಆರಿಂದ ರಚಿಸಿತ್ತು? ಅದ್ಥಿಕಾರ ಲಯ ಭೋಗಕ್ಕೆ ಅವನೊರ್ವ ಕರ್ತನು ಸೃಷ್ಟಿ, ಸ್ಥಿತಿ, ಸಂಹೃತಿ ತಿರೋಧಾನಾನುಗ್ರಹವಾವನಿಂದಹುದು; ಸರ್ವಜ್ಞತ್ವ ಕರ್ತೃತ್ವ ಅನಾದಿಬೋಧತ್ವ ಸ್ವತಂತ್ರತ್ವ ನಿತ್ಯತ್ವ ಅಲುಪ್ತಶಕ್ತಿತ್ವವಾವಗುಂಟು, ಆ ಶಿವನೆ ಘೃತಕಾಠಿಣ್ಯದಂತೆ, ನೀರಾಲಿಕಲ್ಲಂತೆ, ಸಕಲ ಸಕಲನಿಷ್ಕಲ ನಿಷ್ಕಲವಾದವನು, ಸೌರಾಷ್ಟ್ರ ಸೋಮೇಶ್ವರಲಿಂಗನೊಬ್ಬನೆ ಕಾಣಿರೆ.
--------------
ಆದಯ್ಯ
ಶ್ರುತಿವಿಧಿಸಿದ ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಭವಭೀತಿ ಮೃತ್ಯುಭಯಕ್ಕಂಜಿ ಜಮದಗ್ನಿ ಅಗಸ್ತ್ಯ ಕಸ್ಯಪ ಮೊದಲಾದ ಎಲ್ಲಾ ಋಷಿಗಳು ಧರಿಸಿ ಕೊರಜರಾದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿಯೆಂದರಿದು ಎಲ್ಲಾ ದೇವರ್ಕಳು ಎಲ್ಲಾ ಶ್ರುತಿ ಸ್ಮøತಿಗಳು ಧರಿಸಿದವು ನೋಡಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂದರಿದು ಗಾಯತ್ರಿ ಬ್ರಹ್ಮ ವಿಷ್ಣು ಇಂದ್ರಾದಿ ದೇವರ್ಕಳು ಧರಿಸಿದರು ನೋಡಾ. ಶ್ರೀವಿಭೂತಿಯ ಪರಂಜ್ಯೋತಿ ನಿರುತವಿದು ನಂಬಿ ಧರಿಸಿ ಬದುಕು ಮನುಜಾ. ಶ್ರೀವಿಭೂತಿಯೆ ಪರಂಜ್ಯೋತಿಯೆಂಬುದು. ಇದಕ್ಕೆ ಜಾಬಾಲೋಪನಿಷತ್ : ``ಓಂ ಸ ಏಷ ಭಸ್ಮ ಜ್ಯೋತಿ ಸ್ಸಏಷ ಭಸ್ಮ ಜ್ಯೋತಿರಿತ'' ಇಂತೆಂದುದು ಶ್ರುತಿ. ಇದಕ್ಕೆ ಮಾನವಪುರಾಣೇ : ``ಭಸ್ಮ ಜ್ಯೋತಿರ್ಭವತ್ಯೇವ ಶಿವಾಖ್ಯಂ ನ ಹಿ ಸಂಶಯಃ | ಜಾಬಾಲೋಪನಿಷತ್ಸರ್ವಂ ಪ್ರಾಹೇದಂ ಪರಯಾ ಮುದಾ ||'' ಇಂತೆಂದುದಾಗಿ, ಇನ್ನು ವಿಭೂತಿ ಅಭಿಮಂತ್ರ ವಿಭೂತಿಧಾರಾ ಎಂಬುದಕ್ಕೆ ಕಾತ್ಯಾಯನ ಗೃಹ್ಯೇ, ಕಾತ್ಯಾಯನ ಸ್ಮೃತಿ, ಬೋಧಾಯನ ಸ್ಮೃತಿ, ಅಭಿಮಂತ್ರ ಶ್ರುತಿ : ``ಮಾನಸ್ತೋಕೇ ತನಯೇ ಮಾನ ಆಯುಷಿ ಮಾನೋ ಗೋಷು ಮಾನೋ ಅಶ್ವೇಷು ರೀರಿಷಃ | ವೀರಾನ್ಮಾನೋ ರುದ್ರ ಭಾಮಿತೋ ವಧೀರ್ಹವಿಷ್ಮಂತೋ ಶಮಿತ್ವಾ ಹವಾಮಹೇ ||'' ಇಂತೆಂದುದು ಶ್ರುತಿ. ಇನ್ನು ವಿಭೂತಿಧಾರಾ ಎಂಬುದಕ್ಕೆ ಶ್ರುತಿ: ``ಓಂ, ಕುಕ್ಷರುಷಿ ರುದ್ರೋ ದೇವತಾ ಜಗತೀ ಛಂದಃ | ಓಂ, ತ್ರಿಯಾಯುಷಂ ಜಮದಗ್ನೇಃ ಕಶ್ಯಪಸ್ಯ ತ್ರಿಯಾಯುಷಂ | ಅಗಸ್ತ್ಯಸ್ಯ ತ್ರಿಯಾಯುಷಂ ತನ್ಮೇ ಅಸ್ತು ತ್ರಿಯಾಯುಷಂ | ಯದ್ದೇವಾನಾಂ ತ್ರಿಯಾಯುಷಂ ಶತಾಯುಷಂ ಕುರು ತ್ವಾನಿ || ಲಲಾಟ ಭುಜದ್ವಯಂ ನಾಭೇರುತ್ವಾರುಷಿ | ಬ್ರಹ್ಮಣ ರುಷಿ ವೈದಿಕಂ ಸದಾ || '' ಇಂತೆಂದುದು ಶ್ರುತಿ. ಇದಕ್ಕೆ ಬೋಧಾಯನ ಶ್ರುತಿ : ``ಮಾನಸ್ತೋಕೇತ್ಯಾದಿ ಮಂತ್ರೇಣ ಮಂತ್ರಿತಂ ಭಸ್ಮ ಧಾರಯೇತ್ | ಊಧ್ರ್ವಪುಂಡ್ರಂ ಭವೇತ್ ಸಾಮ ಮಧ್ಯಪುಂಡ್ರಂ ಯಜೂಂಷಿ ಚ | ಅಧಃ ಪುಂಡ್ರಮೃಚಃ ಸಾಕ್ಷಾತ್ ತಸ್ಮಾತ್ ಪುಂಡ್ರಂ ತ್ರಿಯಾಯುಷಂ ||'' ಇದಕ್ಕೆ ಲೈಂಗ್ಯ ಪುರಾಣೇ : ``ಅಕಾರೋನಾಮಿಕಂ ಪ್ರೋಕ್ತಂ ಉಕಾರೋ ಮಧ್ಯಮಾಂಗುಲಿಃ | ಮಕಾರೋ ತಜ್ರ್ಜನಿಸ್ಥಾನಂ ತ್ರಿಭಿಃ ಕುರ್ಯಾತ್ ತ್ರಿಪುಂಡ್ರಕಂ ||'' ಇಂತೆಂದುದಾಗಿ. ಇದಕ್ಕೆ ಕಾಲಾಗ್ನಿರುದ್ರೋಪನಿಷತ್ : ``ಹರಃ ಓಂ, ಅಥ ಕಾಲಾಗ್ನಿರುದ್ರಂ ಭಗವಂತಂ ಸನತ್ಕುಮಾರಃ ಅಪಪ್ರಚ್ಛಧೀಹಿ ಭಗವನ್ ತ್ರಿಪುಂಡ್ರವಿಧಿಂ ಸತತ್ವಂ ಕಿಂ ದ್ರವ್ಯಂ ಕ್ರಿಯತ್ ಸ್ಥಾನಂ ಕತಿ ಪ್ರಮಾಣಂ ಕಾ ರೇಖಾ ಕೇ ಮಂತ್ರಾಃ ಕಾ ಶಕ್ತಿಃ ಕಿಂ ದೈವತಂ ಕಃ ಕರ್ತಾ ಕಿಂ ಫಲಮಿತಿ ಚ || ತಂ ಹ್ಯೋವಾಚ ಭಗವಾನ್ ಕಾಲಾಗ್ನಿ ರುದ್ರಃ ಯದ್ದ್ರವ್ಯಂ ತದಾಗ್ನೇಯಂ ಭಸ್ಮ, ಸದ್ಯೋಜಾತಾದಿ ಪಂಚಬ್ರಹ್ಮ ಮಂತ್ರೈಃ ಪರಿಗೃಹ್ಯ ಅಗ್ನಿರಿತಿ ಭಸ್ಮೇತ್ಯನೇನ ಚಾಭಿಮಂತ್ರ್ಯ ಮಾನಸ್ತೋಕ ಇತಿ ಸಮುದ್ದøತ್ಯ, ಮಾನೊ ಮಹಾಂತಮಿತಿ ಜಲೇನ ಸಂಸೃಜ್ಯ, ತ್ರಿಯಾಯುಷಮಿತಿ ಶಿರೋ ಲಲಾಟವಕ್ಷ ಸ್ಕಂಧೇಷು ತ್ರಿಯಾಯುಷೈಸ್ತ್ರ್ಯಂಬಕೈಸ್ತ್ರಿಶಕ್ತಿಭಿಸ್ತಿರ್ಯಕ್ ತಿಸ್ರೋ ರೇಖಾಃ ಪ್ರಕುರ್ವೀತ ವ್ರತಮೇತಚ್ಛಾಂಭವಂ ಸರ್ವೇಷು ದೇವೇಷು ವೇದವೇದಾದಿಭಿರುಕ್ತಂ ಭವತಿ ತಸ್ಮಾತ್ತತ್ಸಮಾಚರೇನ್ಮುಮುಕ್ಷುರ್ನಪುನರ್ಭವಾಯ || ಅಥ ಸನತ್ಕುಮಾರಃ ಪಪ್ರಚ್ಛ ಪ್ರಮಾಣಮಸ್ಯ ತ್ರಿಪುಂಡ್ರಧಾರಣಸ್ಯ ತ್ರಿಧಾರೇಖಾಭವತ್ಯಾಲಲಾಟಾದಾಚಕ್ಷುಷೋರಾಮೂಧ್ರ್ನೋರಾಭ್ರುವೋರ್ಮ- ಧ್ಯತಶ್ಚ ಪ್ರಥಮಾ ರೇಖಾ ಸಾ ಗಾರ್ಹಪತ್ಯಶ್ಚಾಕಾರೋ ರಜೋ ಭೂರ್ಲೋಕಃ ಸ್ವಾತ್ಮಾ ಕ್ರಿಯಾಶಕ್ತಿಃ ಋಗ್ವೇದಃ ಪ್ರಾತಃ ಸವನಂ ಮಹೇಶ್ವರೋ ದೇವತೇತಿ || ಯಾsಸ್ಯ ದ್ವಿತೀಯಾ ರೇಖಾ ಸಾ ದಕ್ಷಿಣಾಗ್ನಿರುಕಾರಃ ಸ್ವತ್ವ ಮಂತ್ರರಿಕ್ಷಮಂತರಾತ್ಮಾ ಚೇಚ್ಛಾಶಕ್ತಿಃ ಯಜುರ್ವೇದೋ ಮಾಧ್ಯಂ ದಿನಂ ಸವನಂ ಸದಾಶಿವೋ ದೇವತೇತಿ || ಯಾsಸ್ಯ ತೃತೀಯಾ ರೇಖಾ ಸಾsಹವನೀಯೋ ಮಕಾರಸ್ತಮೋ - ದ್ಯೌರ್ಲೋಕಃ ಪರಮಾತ್ಮಾ ಜ್ಞಾನಶಕ್ತಿಃ ಸಾಮವೇದಸ್ತøತೀಯಂ ಸವನಂ ಮಹಾದೇವೋ ದೇವತೇತಿ || ಏವಂ ತ್ರಿಪುಂಡ್ರವಿಧಿಂ ಭಸ್ಮನಾ ಕರೋತಿ ಯೋ ವಿದ್ವಾನ್ ಬ್ರಹ್ಮಚಾರೀ ಗೃಹೀ ವಾನಪ್ರಸ್ಥೋ ಯತಿರ್ವಾ ಸಃ ಸಮಸ್ತ ಮಹಾಪಾತಕೋ - ಪಪಾತಕೇಭ್ಯಃ ಪೂತೋ ಭವತಿ, ಸ ಸರ್ವೇಷು ತೀರ್ಥೇಷು ಸ್ನಾತೋ ಭವತಿ, ಸ ಸರ್ವಾನ್ ಜ್ಞಾತೋ ಭವತಿ, ಸ ಸರ್ವಾನ್ ವೇದಾನಧೀತೋ ಭವತಿ, ಸ ಸತತಂ ಸಕಲರುದ್ರಮಂತ್ರಜಾಪೀ ಭವತಿ, ಸ ಸಕಲಭೋಗಾನ್‍ಭುಂಕ್ತೆ ದೇಹಂತ್ಯಕ್ತ್ವ ಶಿವಸಾಯುಜ್ಯಮೇತಿ ನ ಸ ಪುನರಾವರ್ತತೇನ ಸ ಪುನರಾವರ್ತತ ಇತ್ಯಾಹ ಭಗವಾನ್ ಕಾಲಾಗ್ನಿರುದ್ರಃ ||'' ಇಂತೆಂದುದಾಗಿ, ಇದಕ್ಕೆ ಭೀಮತಂತ್ರಾಗಮೇ : ``ಸರ್ವತೀರ್ಥೇಷು ಯತ್‍ಪುಣ್ಯಂ ಸರ್ವಯಜ್ಞೇಷು ಯತ್‍ಫಲಂ| ತತ್‍ಫಲಂ ಕೋಟಿಗುಣಿತಂ ಭಸ್ಮಸ್ನಾನಾನ್ನಸಂಶಯಃ||'' ಇಂತೆಂದುದಾಗಿ, ಇದಕ್ಕೆ ಭವಿಷ್ಯೋತ್ತರಪುರಾಣೇ : ``ಶಿವಾಗ್ನಿಕಾರ್ಯಂ ಯಃ ಕೃತ್ವಾ ಕುರ್ಯಾತ್ರಿಯಾಯುಷಂ | ಆತ್ಮವಿತ್ ವಿಶುದ್ಧ ಃ ಸರ್ವಪಾಪೈಶ್ಚ ಸಿತೇನ ಭಸ್ಮನಾ || '' ಇಂತೆಂದುದಾಗಿ, ಇದಕ್ಕೆ ಪರಾಶರಪುರಾಣೇ : ``ಕ್ರಿಯಾಯುಷ್ಯಾಣಿ ಕುರುತೇ ಲಲಾಟೇಚ ಭುಜದ್ವಯೇ | ನಾಶಿಕಾಂತೇ ಚ ಧೃತ್ವಾರ್ಷೇ | '' (?) ಇದಕ್ಕೆ ಬ್ರಹ್ಮಪುರಾಣೇ : ``ಶ್ರಾದ್ಧೇ ಯಜ್ಞೇ ಜಪೇ ಹೋಮೇ ವೈಶ್ವದೇವೇ ಸುರಾರ್ಚನೇ | ಧೃತತ್ರಿಪುಂಡ್ರಪೂತಾತ್ಮಾ ಮೃತ್ಯುಂ ಜಯತಿ ಮಾನವ ಃ || '' ಇಂತೆಂದುದಾಗಿ, ಇದಕ್ಕೆ ಆದಿತ್ಯಪುರಾಣೇ : ``ಸರ್ವಾಶ್ರಮಾಣಾಂ ವರ್ಣಾನಾಂ ಭಸ್ಮ ರುದ್ರಾಕ್ಷ ಧಾರಣಂ | ಕರ್ತವ್ಯಂ ಮಂತ್ರತಶ್ಚೋಕ್ತಂ ದ್ವಿಜಾನಾಂ ನಾತ್ರ ಸಂಶಯಃ || '' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ ಃ ``ವಿಪ್ರಾದೀನಾಂಚ ಸರ್ವೇಷಾಂ ಲಲಾಟಂ ಭಸ್ಮಶೂನ್ಯಕಂ | ಭಿಕ್ಷಾ ಚ ಜಪಹೋಮಂ ಚಾರ್ಪಣಂ ನಿಷ್ಫಲಂ ಭವೇತ್ || '' ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ಸಿತೇನ ಭಸ್ಮನಾ ಕಾರ್ಯಂ ತ್ರಿಸಂಧ್ಯಾಂ ತ್ರಿಪುಂಡ್ರಕಂ | ಸರ್ವಪಾಪವಿನಿರ್ಮುಕ ್ತಃ ಶಿವಸಾಯುಜ್ಯಮಾಪ್ನುಯಾತ್ || '' ಇಂತೆಂದುದಾಗಿ, ಇದಕ್ಕೆ ಲೋಕಾಕ್ಷಿ ಸ್ಮೃತಿ : ``ಮಧ್ಯಮಾನಾಮಿಕಾಂಗುಷೆ*ೀ ತ್ರಿಪುಂಡ್ರಂ ಭಸ್ಮನಾ ಧೃತಂ | ತತ್ತ್ರಿಪುಂಡ್ರಂ ಭವೇತ್ಪುಣ್ಯಂ ಮಹಾಪಾತಕನಾಶಕಂ ''|| ಇಂತೆಂದುದಾಗಿ, ಇದಕ್ಕೆ ಸ್ಕಂದಪುರಾಣೇ : ``ನೃಪಾಣಾವಿೂೀಶ್ವರಾಣಾಂ ಚ ಭಸ್ಮೀ ತ್ರೇಣ ಚ ಚಂದನಂ | ತ್ರಿಪುಂಡ್ರಂ ವಿಧಿವತ್ಕುರ್ಯಾತ್ ಸುಗಂಧೇನಾಪಿ ವಾಗುಹಾಂ || ಭಸ್ಮನಾಯೈ ತ್ರಿಸಂಧ್ಯಾಂ ಚ ಗೃಹಸ್ಥೋ ಜಲಸಂಯುತಂ | ಸರ್ವಕಾಲೇ ಭವೇತ್ ಸ್ತ್ರೀಣಾಂ ಯತಿನಾಂ ಜಲವರ್ಜಿತಂ || ವಾನಪ್ರಸ್ಥೇಷು ಕಾಂಸ್ಯಾನಾಂ ದೀಕ್ಷಾಹೀನಂ ಮೃಣಂ ತಥಾ | ಮಧ್ಯಾಹ್ನೇ ಪ್ರಾಕ್‍ಜಲಯುಕ್ತಂ ಪರಾಕ್ ಜಲವಿವರ್ಜಿತಂ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶುದ್ಧ ತಾ ಜಲೇನೈೀವ ಭಸ್ಮಸ್ಯಾತ್ ತ್ರಿಪುಂಡ್ರಕಂ | ಯೋ ಧಾರಯೇತ್ ಪರಬ್ರಹ್ಮ ಸಂಪ್ರಾಪ್ನೋತಿ ನ ಸಂಶಯಃ|| ಮಧ್ಯಮಾನಾಮಿಕಾಂಗುಷೆ* ೈರನುಲೋಮವಿಲೋಮತಃ ||'' ಧಾರಯದ್ಯಗ್ನಿ ತ್ರಿಪುಂಡ್ರಾಂತಂ ಸ ರುದ್ರೋ ನಾತ್ರ ಸಂಶಯಃ ||'' ಇಂತೆಂದುಗಾಗಿ, ಇದಕ್ಕೆ ಕ್ರಿಯಾಸಾರೇ : ``ಮಧ್ಯಾಂಗುಲಿ ತ್ರಯೇಣೈವ ಸ್ವದಕ್ಷಿಣ ಕರಸ್ಯ ತು | ಷಡಂಗುಲಾಯತಂ ಮಾನಮಪಿವಾsಲಿಕಮಾನನಂ || ಷಡಂಗುಲಪ್ರಮಾಣೇನ ಬ್ರಾಹ್ಮಣಾನಾಂ ತ್ರಿಪುಂಡ್ರಕಂ | ನೃಪಾನಾಂ ಚತುರಂಗುಲ್ಯಂ ವೈಶ್ಯಾನಾಂ ಚ ದ್ವಿರಂಗುಲಂ | ಶೂದ್ರಾಣಾಂ ಚ ಸರ್ವೇಷಾಂ ಏಕಾಂಗುಲಾ ತ್ರಿಪುಂಡ್ರಕಂ ||'' ಇಂತೆಂದುಗಾಗಿ, ಇದಕ್ಕೆ ಭೀಮಸಂಹಿತಾಯಾಂ : ``ಮೂಧ್ರ್ನಾ ಲಲಾಟಕಂ ದ್ಯೌಶ್ಚ ಶ್ರೋತ್ರೇ ಬಾಹೂ ತಥೈೀವ ಚ | ಹೃದಯಂ ನಾಭಿಪೃಷೌ* ಚ ಹಸ್ತೋ ವೈ ಸಂಧಯಃ ಕ್ರಮಾತ್ || ಮೂಧ್ರ್ನಿಃ ಸ್ಯಾತ್ ಬ್ರಹ್ಮಣ ಪ್ರೀತಿಃ ಲಲಾಟೇ ಚ ಸರಸ್ವತೀ | ಕಂಠೋ ಲಕ್ಷ್ಮ್ಯಾ ಭವೇತ್ ಪ್ರೀತಿಃ ಸ್ಕಂದೇ ಪೀಣಾತಿ ಪಾರ್ವತಿ || ಇಂದ್ರ ಪ್ರೀತಿ ಕರಂ ಬಾಹೋ ಹೃದಯಂ ಚ ಶರಪ್ರಿಯಂ | ಅನೇನ ವಿಧಿನಾ ಚೈವ ವಿಭೂತಿಂ ಧಾರಯೇತ್ ಸುಧೀಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ತ್ರಿಪುಂಡ್ರಂ ಬ್ರಹ್ಮಣೋ ವಿದ್ವಾನ್ ಮನಸಾsಪಿ ನ ಲಂಘಯೇತ್ | ಶ್ರುತ್ವಾ ವಿಧೀಯತೇ ಯಸ್ಮಾತ್ ತತ್ಯಾನಿ ಪತಿತೋ ಭವೇತ್ ||'' ಇಂತೆಂದುದಾಗಿ, ಇದಕ್ಕೆ ಮತ್ಸ್ಯಪುರಾಣೇ : ``ನ ಚ ಶೌಚಂ ತಪೋ ಯಜ್ಞಂ ತೀರ್ಥಂ ದೇವಾಗ್ನಿಪೂಜನಂ | ಅಶ್ವಮೇಧಮಿದಂ ವ್ಯರ್ಥಂ ತ್ರಿಪುಂಡ್ರೋ ಯೋ ನ ಧಾರಯೇತ್ ||'' ಇಂತೆಂದುದಾಗಿ, ಇದಕ್ಕೆ ಬ್ರಹ್ಮಾಂಡಪುರಾಣೇ : ``ವಿಪ್ರಾಣಾಂ ವೇದವಿದುಷಾಂ ವೇದಾಂತಜ್ಞೇನ ವೇದಿನಾಂ | ಸಿತೇನ ಭಸ್ಮನಾ ಕಾರ್ಯಂ ತ್ರಿಪುಂಡ್ರಮಿತಿ ಪದ್ಮಭೂಃ ||'' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಸರ್ವೇ ತಪಸ್ವಿನಃ ಪ್ರೋಕ್ತಾಃ ಸರ್ವೇ ಯಜ್ಞೇಷು ಭಾಗಿನಃ | ರುದ್ರಭಕ್ತಾ ಸ್ಮøತಾಸ್ಸರ್ವೇ ತ್ರಿಪುಂಡ್ರಾಂಕಿತಮಸ್ತಕಾಃ ||'' ಇಂತೆಂದುದಾಗಿ, ಇದಕ್ಕೆ ಕ್ರಿಯಾಸಾರೇ : ``ಶಿರೋ ಲಲಾಟೇ ಶ್ರವಣೋದ್ವಯಾಗ್ನಿರ್ವಾಭುಜದ್ವಯಂ | ವಕ್ಷೋ ನಾಭಿಃ ಪೃಷ*ಭಾಗೇ | ಕಕುದಿತ್ಯೇಕದೋದಶ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಮೂಧ್ನೇ ಲಾಲಟೇ ಕರ್ಣೇ ಚ ಚಕ್ಷುಷೇ ಮಸ್ತಕಸ್ತಥಾ | ಅನ್ಯ ಬಾಹು ಭುಜದ್ವಂದ್ವಂ ಸ್ಥಾನಾವಪ್ಯುದರಂ ತಥಾ || ಮಣಿಬಂಧೇಷು ಧೃತ್ವಾ ಪಾಶ್ರ್ವೇ ನಾಭಿಮೇಢ್ರಂ ಚ ಪೃಷ್ಟಕಂ | ಊರೂ ಚ ಚಾಮಕಾಶ್ಚ ೈವ ಸಂಷ್ಟಪಿ ಯಥಾಕ್ರಮಂ || ವಿಧಿವತ್‍ಭಸ್ಮಸ್ನಾನಂ ಧಾರಣಂ ಮೋಕ್ಷಕಾರಣಂ || '' ಇಂತೆಂದುದಾಗಿ, ಇದಕ್ಕೆ ಮಹಾಲಿಂಗಪುರಾಣೇ : ``ಶಿರೋ ಫಾಲಃ ಕರ್ಣಕಂ ತೌಚ ಬಾಹೂ ಚ ಮಣಿಬಂಧಕೇ | ಹೃದಯಂ ಚ ಪರಂ ಚೈವ ನಾಭಿ ಭುಜದ್ವಯಂ ತಥಾ || ಓಷಾ*ವಪಿ ಚ ವಿಜ್ಞೇಯೋ ಷೋಡಶಃ ಸಂಧಯಃ ಸ್ಮøತಾಃ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಲಲಾಟಾಂಘ್ರಿವಾಂ ಭುಜಾತ್ ಹೃದಯಂ ನಾಭಿರೇವ ಚ | ಅಪರೇ ಸಂಧಯೋ ಜ್ಞೇಯಾ ಅಷ್ಟಸ್ಥಾನಂ ಚ ಭೂಷಣಂ || ಭಸ್ಮಸ್ನಾನಂ ನರೋ ತೀರ್ಥಂ ಗಂಗಾಸ್ನಾನಂ ದಿನೇ ದಿನೇ | ಭಸ್ಮರೂಪಂ ಶಿವಂ ಸಾಕ್ಷಾದ್ಭಸ್ಮ ತ್ರೈಲೋಕ್ಯಸಾಧನಂ || '' ಇಂತೆಂದುದಾಗಿ, ಇದಕ್ಕೆ ಯಜುರ್ವೇದ : ``ಓಂ ಭಾಗದ್ವಯೇವಾಯೇವಂ ಪ್ರಣಯೇತಿ ಬ್ರಾಹ್ಮಣಃ | ಆ ಋಷಯಃ ಉದ್ಧರೇವ ಬ್ರಾಹ್ಮಣೋ ವೈ ಸರ್ವದೇವತಾಃ | ಸರ್ವಾದಿ ದೇವೈಃ ಆನಂದೇವತಾಭಿರುದ್ಧತಿ || '' ಇಂತೆಂದುದಾಗಿ, ಇದಕ್ಕೆ ಈಶ್ವರೋsವಾಚ : ``ಜಲಸ್ನಾನಂ ತಪಃ ಪುಣ್ಯಂ ಮಂತ್ರಸ್ನಾನಂ ಕುಲಕ್ಷಯಃ| ವಿಭೂತಿರೇಣುಮಾತ್ರೇಣ ತತ್ಫಲಂ ಶ್ರುಣು ಪಾರ್ವತಿ || '' ಇಂತೆಂದುದಾಗಿ, ಇದಕ್ಕೆ ಕೂರ್ಮಪುರಾಣೇ : ``ಶ್ರೀಮತ್ ತ್ರಿಪುಂಡ್ರಮಹಾತ್ಮ್ಯಂ ಯಃ ಪಠೇತ್ ಸತತಂ ನರಃ | ಈಹೇಷ್ಟಾನ್ ಸಕಲಾನ್ ಪ್ರಾಪ್ಯ ಗಚ್ಛಂತಿ ಪರಮಂ ಪದಂ ||'' ಇಂತೆಂದುದಾಗಿ, ಇದನರಿದು ಶ್ರೀ ವಿಭೂತಿಯ ಧರಿಸದ ಕರ್ಮಿಯ ಎನಗೊಮ್ಮೆ ತೋರದಿರಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಇನ್ನು ಲಿಂಗಧಾರಣ ಮಹಾತ್ಮೆಯ ಸ್ಥಲವೆಂತೆಂದಡೆ : ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವ ಮೊದಲಾದ ಸಮಸ್ತಗಣಂಗಳೆಲ್ಲರು ಶಿವಲಿಂಗಧಾರಣವಾಗಿ ಶಿವಪೂಜೆಯ ಮಾಡಿದರು ನೋಡಾ. ಚಂದ್ರಾದಿತ್ಯ ಇಂದ್ರಾದಿ ದೇವರ್ಕಳೆಲ್ಲರು ಶಿವಲಿಂಗಧಾರಣವಾಗಿ ಶಿವಪೂಜೆಯ ಮಾಡಿದರು ನೋಡಾ. ಮನು ಮುನಿ ಯತಿ ರಾಕ್ಷಸರು ಮೊದಲಾಗಿ ಶಿವಲಿಂಗಧಾರಣವಾಗಿ ಶಿವಪೂಜೆಯಮಾಡಿ, ಶಿವಪ್ರಸಾದವ ಕೊಂಡು ತಮ್ಮ ತಮ್ಮ ಪದವಿಯ ಪಡೆದು ಬದುಕಿದರು ನೋಡಾ. ಇದಕ್ಕೆ ಶಿವಧರ್ಮಪುರಾಣೇ : ``ಇಂದ್ರ ನೀಲಮಯಂ ಲಿಂಗಂ ವಿಷ್ಣುಃ ಪೂಜಯತೇ ಸದಾ | ವಿಷ್ಣುತ್ವಂ ಪ್ರಾಪ್ಯತೇ ತೇನ ಸಾದ್ಭುತಂ ಚ ಸನಾತನಂ || ಬ್ರಹ್ಮಾ ಪೂಜಯತೇ ನಿತ್ಯಂ ಲಿಂಗಂ ಶೈಲಮಯಂ ಶುಭಂ | ತಸ್ಯ ಸಂಪೂಜನಾತ್ತೇನ ಪ್ರಾಪ್ತಂ ಬ್ರಾಹ್ಮತ್ವಮುತ್ತಮುಂ || ಮುಕ್ತಾಫಲಮಯಂ ಲಿಂಗಂ ಸೋಮಃ ಪೂಜಯತೇ ಸದಾ | ತೇನ ಸೋಮೇನ ಸಂಪ್ರಾಪ್ತಂ ಸೋಮತ್ವಂ ಸತತೋಜ್ಜಲಂ || ಶಕ್ರೋsಪಿ ದೇವರಾಜೇಂದ್ರೋ ಲಿಂಗಂ ಮಣಿಮಯಂ ಶುಭಂ | ಭಕ್ತ್ಯಾ ಪೂಜಯತೇ ನಿತ್ಯಂ ತೇನ ಶಕ್ರತ್ವಮಾಪ್ತವಾನ್ || ಲಿಂಗಂ ರತ್ನಮಯಂ ಚಾರು ವರುಣೋsರ್ಚಯತೇ ಸದಾ | ತೇನ ತದ್ವರುಣತ್ವಂ ಹಿ ಪ್ರಾಪ್ತಂ ವೃದ್ಧಿಸಮನ್ವಿತಂ || ಲಿಂಗಂ ಹೇಮಮಯಂ ಕಾಂತಂ ಧನದೋsರ್ಚಯತೇ ಸದಾ | ತೇನಾsಸೌಧನದೋ ದೇವೋ ಧನದತ್ವಮವಾಪ್ತವಾನ್ || ಸಂಪೂಜ್ಯ ಕಾಂಸ್ಯಕಂ ಲಿಂಗಂ ವಸವಃ ಕಾಮಮಾಪ್ನುಯುಃ | ನಾಗಾಃ ಪ್ರವಾಲಜಂ ಲಿಂಗಂ ರಾಜ್ಯಂ ಸಂಪೂಜ್ಯ ಲೇಭಿರೇ | ಏವಂ ದೇವಾಃ ಸ ಗಂಧರ್ವಾಃ ಸ ಯಕ್ಷೋರಗರಾಕ್ಷಸಾಃ | ಪೂಜಯಂತಿ ಸದಾಕಾಲಮೀಶಾನಂ ಸುರನಾಯಕಂ || ಸರ್ವಂ ಲಿಂಗಮಯಂ ಲೋಕೇ ಸರ್ವಂ ಲಿಂಗೇ ಪ್ರತಿಷಿ*ತಂ | ತಸ್ತಾತ್ ಸಂಪೂಜ್ಯಯೇನ್ನಿತ್ಯಂ ಯದಿಚ್ಛೇತ್ ಸಿದ್ಧಿಮಾತ್ಮನಃ ||'' ಇಂತೆಂದುದಾಗಿ, ಇದಕ್ಕೆ ವ್ಯಾಸ ಜೈಮಿನಿ ಸಂವಾದೇ:ವ್ಯಾಸ ಉವಾಚ- ``ಇತಿಹಾಸೇಷು ವೇದೇಷು ಪುರಾಣೇಷು ಪುರಾತನೈಃ | ಮಹರ್ಷಿಭಿರ್ಮಹಾದೇವೋ ಶಿವಲಿಂಗಂತು ಧಾರಯೇತ್ || ಸುರಾಸುರೇಂದ್ರದೇವಾಶ್ಚ ಲಿಂಗಧಾರಣಯಾ ಸದಾ | ತಥಾಗಸ್ತ್ಯಾದಿ ಮುನಯೋ ದೂರ್ವಾಸು ನಂದಿಕೇಶ್ವರಃ | ಮಹಾಕಾಲೋ ದಧೀಚಿಶ್ಚ ಪಾಣಿನಿಶ್ಚ ಕಣಾದಕಃ | ಸ್ಕಂದೋ ಭೃಂಗಿರೀಟರ್ವೀರಭದ್ರಾಶ್ಚ ಪ್ರಮಥಾದಯಃ || ಅಜೋ ಹರಿಃ ಸಹಸ್ರಾಕ್ಷೋ ಬಾಣಾಸುರದಶಾನನೌ | ವಶಿಷ*ರುರುವಾಲ್ಮೀಕಿಭಾರದ್ವಾಜಾತ್ರಿಗೌತಮಾಃ || ಏತೇ ಪರಮಶೈವಾಶ್ಚ ಭಜಂತಿ ಪರಯಾ ಮುದಾ | ಪ್ರಸಾದ ಸೇವನಾತ್‍ಧ್ಯಾನಾದರ್ಚನಾದ್ಧಾರಣಾದಪಿ ||'' ಇಂತೆಂದುದಾಗಿ, ಇದಕ್ಕೆ ವಾತುಲತಂತ್ರೇ : ``ಬ್ರಹ್ಮವಿಷ್ಣುಸುರೇಶಾದಿ ದೇವತಾಃ ಪರಯಾ ಮುದಾ | ಶಿರೋಭಿರ್ಧಾರಯಂತ್ಯೇತಾ ಃ ಶಿವಲಿಂಗಮಹರ್ನಿಶಂ || ಪಾಣಿನಿಶ್ಚ ಕಣಾದಶ್ಚ ಕಪಿಲೋ ಗೌತಮಾದಯಃ | ಪ್ರಸಾದಸೇವನಾದ್ಧ್ಯಾನಾದರ್ಚನಾದ್ಧಾರಣಾದಪಿ || ಕಂಠೇಷು ಹರಕಂಠಾದಿ ಮುನಯೋ ಮಾನವಾಸ್ತಥಾ | ಸರ್ವದಾ ಶಿವಲಿಂಗಂತು ಧಾರಯಂತಿ ಯಜಂತಿ ಚ ||'' ಇಂತೆಂದುದಾಗಿ, ಇದಕ್ಕೆ ಈಶ್ವರೋýವಾಚ : ``ಉತ್ತಮಾಂಗೇ ಗಲೇ ಕಕ್ಷೇ ಸರ್ವದಾ ಧಾರಯೇತ್ ಶಿವಂ | ಮಂತ್ರಾದ್ಯುತ್ಪಾರ್ಜನೇಯುವೇ ಭೋಜನೇýಪಿ ಸದಾ ಶುಚಿಃ||'' ಇಂತೆಂದುದಾಗಿ, ಇದಕ್ಕೆ ಈಶ್ವರೋýವಾಚ : ``ಗಚ್ಚನ್ ತಿಷ*ನ್ ಸ್ವಪನ್ ಜಾಗ್ರನ್ ಉನ್ಮಿಷನ್ ನಿಮಿಷನ್ನಪಿ | ಶುಚಿರ್ವಾಪ್ಯಶುಚಿರ್ವಾಪಿ ಲಿಂಗಂ ಸರ್ವತ್ರ ಧಾರಯೇತ್ ||'' ಇಂತೆಂದುದಾಗಿ, ಇದಕ್ಕೆ ಶ್ರೀ ಮಹಾದೇವ ಉವಾಚ : ``ಉದರೇ ಧಾರಯೇಲ್ಲಿಂಗಂ ಗ್ರಾಮಸ್ಯಾಧಿಪತಿರ್ಭವೇತ್ | ವಕ್ಷಸಾ ಧಾರಯೇಲ್ಲಿಂಗಂ ಇಂದ್ರಸ್ಯಾಧಿಪತಿರ್ಭವೇತ್ || ಕಂಠೇತು ಧಾರಯೇಲ್ಲಿಂಗಂ ಬ್ರಾಹ್ಮಣಾಧಿಪತಿರ್ಭವೇತ್ | ಅಪರೇ ಧಾರಯೇಲ್ಲಿಂಗಂ ರಾಕ್ಷಸ್ಯಾಧಿಪತಿರ್ಭವೇತ್ || ಸ್ಕಂದೇ ತು ಧಾರಯೇಲ್ಲಿಂಗಮೀಪ್ಸಿತಂ ಲಭತೇ ಧೃವಂ | ಶಿರಸಾ ಧಾರಯೇಲ್ಲಿಂಗಂ ಗಣತ್ವೇನ ಸಯುಜ್ಯತೇ | ತೇ ಸ್ಥಾನೇಷು ಧಾರಯೇಲ್ಲಿಂಗ ಸರ್ವಸಿದ್ಧಿ ಫಲಪ್ರದಂ ||'' ಇಂತೆಂದುದಾಗಿ, ಇದಕ್ಕೆ ಲೈಂಗ್ಯಪುರಾಣೇ : ``ಲಿಂಗಪ್ರಣಿತಥಾ ಲಿಂಗಂ ಶಿಖಾಯಾಂ ಧಾರಯೇತ್ಸುದೀಃ | ತದಸ್ಥಾನಾಧಿಕಂ ದಿವ್ಯಂ ಬ್ರಹ್ಮರಂಧ್ರಂ ವಿಶೇಷತಃ || ಮೂಧ್ರ್ನಿವಾ ಧಾರಯೇಲ್ಲಿಂಗಂ ನ ತಥಾ ಚ ದ್ವಿಜಯೋ ಜಯೇತ್ | ಈಶಾವಾ ನಿತ್ಯಸಂಯೋಗೋ ಪರಯೋನಿರನಿಷ್ಟಯಃ | ನಾಭೇರಧೋ ಲಿಂಗಧಾರಿ ಪಾಪೇನ ಚ ಸ ಯುಜ್ಯತೇ | ನಾಭ್ಯೋಧ್ರ್ವೇ ಲಿಂಗಧಾರೀ ಚ ಸೌಭಾಗ್ಯಜ್ಞಾನವರ್ಧನಂ ||'' ಇಂತೆಂದುದಾಗಿ, ಇದಕ್ಕೆ ಉಮಾಮಹೇಶ್ವರ ಸಂವಾದೇ : ``ಜಾತಾ ದರ್ಶನಕರ್ತಾರಃ ಶ್ರಾವಯಂತಿ ಜಗತ್ರಯಂ | ಕಕ್ಷೇ ಬ್ರಹ್ಮಾ ಕರೇ ವಿಷ್ಣುಃ ಕಂಠೇ ಮಾಹೇಶ್ವರಸ್ಸದಾ || ವ್ಯೋಮಾತೀತಸ್ತು ಶಿರಸಿ ಮುಖೇ ರುದ್ರಸ್ತು ಧಾರಯೇತ್ | ಈಶ್ವರಸ್ತ್ವಮಲೈಕ್ಯೇ ತು ಉತ್ತಮಾಂಗೇ ಸದಾಶಿವಃ | ಇತಿ ದೇವಗಣೋ ಧೃತ್ವಾ ಲಿಂಗಂತು ಯಜತೇ ಸದಾ || ನಾಭಿಂ ಚ ಹೃದಯೇ ಮೂಧ್ರ್ನಿ ಸರ್ವಾವಸ್ಥಾಸು ಸರ್ವದಾ | ತ್ರೀಲಿಂಗಧಾರಣಂ ಕುರ್ಯಾದೇವೀ ನಿತ್ಯಂ ಮಮಪ್ರಿಯಃ || ಕಾಯಸಂಬಂಧ ಲಿಂಗೇನರಹಿತಶ್ಚಾಪಿಯೋ ಭವೇತ್ | ನಿಮುಷಾರ್ಧಂ ವಿಯೋಗೇನ ವಿಶೇಷೋತ್ವಾತ್ ಕೋಭವೇತ್ || ಇಂತೆಂದುದಾಗಿ, ಇದಕ್ಕೆ ಅಥರ್ವಣವೇದೇ : ``ಓಂ ತ್ರಯೋ ದೇವಾ ಲಿಂಗಂ ಧಾರಯಂತಿ | ಋಷಯಃ ಶಿವಲಿಂಗಧಾರಯಂತಿ | ತಸ್ಮಾದ್ದೇವಲಿಂಗ ಧಾರಯಂತಿ | ಅಜಹರಿ ಲಿಂಗಂ ಧಾರಯಂತಿ | ಸುರೇಂದ್ರದೈತ್ಯಾ ಧಾರಯಂತಿ ||'' ಇಂತೆಂದುದಾಗಿ, ಇದಕ್ಕೆ ಋಗ್ವೇದೇ : ``ಸೋಮೇ ರುದ್ರಾಯುವಮೇತಾವ್ಯಸ್ಮಿ ವಿಶ್ವಾತಮಾಷುಭೇಷಾವಿದತ್ತಂ | ಅವಸ್ಯತಂ ಮುಲಚತಯಿಂ ನೋ ಅಸ್ತಿತನುಕ್ಷುಬಂಧಂ ಕ್ರುಷಮೇನೋ ಅಸ್ತಿತ್||'' ಇಂತೆಂದುದಾಗಿ, ಇದಕ್ಕೆ ಅಥರ್ವಣವೇದೇ : ``ಚತುರ್ವೇದಾ ಲಿಂಗ ಧಾರಯಂತಿ | ಅನಂತಾ ವೈ ವೇದಾಃ ಲಿಂಗಂ ಧಾರಯಂತಿ ||'' ಇಂತೆಂದುದು ಶ್ರುತಿ. ಇದನರಿದು ಶ್ರೀವಿಭೂತಿ ರುದ್ರಾಕ್ಷಿ ಶಿವಲಿಂಗಧಾರಣವಿಲ್ಲದ ಕರ್ಮಿಯನೆನಗೊಮ್ಮೆ ತೋರದಿರಯ್ಯ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಭವಿತನಕ್ಕೆ ಹೇಸಿ ಭಕ್ತನಾಗಬೇಕೆಂಬಾತನು ಸದ್ಗುರುವನರಸಿಕೊಂಡು ಬಂದು ಅವರ ಕಾರುಣ್ಯದಿಂದ ಮುಕ್ತಿಯಂ ಪಡೆದೆನೆಂದು ಆ ಶ್ರೀಗುರುವಿಂಗೆ ದಂಡಪ್ರಣಾಮಂ ಮಾಡಿ ಭಯಭಕ್ತಿಯಿಂದ ಕರಂಗಳಂ ಮುಗಿದು ನಿಂದಿರ್ದು ಎಲೆ ದೇವಾ ! ಎನ್ನ ಭವಿತನಮಂ ಹಿಂಗಿಸಿ ನಿಮ್ಮ ಕಾರುಣ್ಯದಿಂದೆನ್ನ ಭಕ್ತನಂ ಮಾಡುವುದೆಂದು ಶ್ರೀಗುರುವಿಂಗೆ ಬಿನ್ನಹವಂ ಮಾಡಲು ಆ ಶ್ರೀಗುರುವು ಅಂತಪ್ಪ ಭಯಭಕ್ತಿ ಕಿಂಕರತೆಯೊಳಿಪ್ಪ ಶಿಶುವಂ ಕಂಡು ತಮ್ಮ ಕೃಪಾವಲೋಕನದಿಂ ನೋಡಿ ಆ ಭವಿಯ ಪೂರ್ವಾಶ್ರಯಮಂ ಕಳೆದು ಪೂನರ್ಜಾತನಂ ಮಾಡಿ ಆತನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ಅಗ್ನಿರಿತಿ ಭಸ್ಮ ಓಂ ವಾಯುರಿತಿ ಭಸ್ಮ ಓಂ ಜಲಮಿತಿ ಭಸ್ಮ ಓಂ ಸ್ಥಲಮಿತಿ ಭಸ್ಮ ಓಂ ವ್ಯೋಮೇತಿ ಭಸ್ಮ ಓಂ ಸೋಮೇತಿ ಭಸ್ಮ ಓಂ ಸೂರ್ಯೇತಿ ಭಸ್ಮ ಓಂ ಆತ್ಮೇತಿ ಭಸ್ಮ ಎಂಬೀ ಮಂತ್ರದಿಂದ ಆತನ ಅಷ್ಟತನುವಂ ಶುದ್ಧವ ಮಾಡುವುದು ಇನ್ನು ಆತನ ಜೀವ ಶುದ್ಧವ ಮಾಡುವ ಕ್ರಮವೆಂತೆಂದಡೆ_ ಓಂ ಅಸ್ಯ ಪ್ರಾಣಪ್ರತಿಷಾ* ಮಂತ್ರಸ್ಯ ಬ್ರಹ್ಮವಿಷ್ಣು ಮಹೇಶ್ವರಾ ಋಷಯಃ ಋಗ್ಯಜುಃ ಸಾಮಾಥರ್ವಣಾ ಶ್ಫಂದಾಂಸಿ ಸದಾಶಿವ ಮಹಾಪ್ರಾಣ ಇಹಪ್ರಾಣ ಮಮ ಜೀವ ಅಯಂ ತಥಾ ಮಮಾಸಕ್ತ ಸರ್ವೇಂದ್ರಿಯಾಣಿ ವಾಙ್ಮನಶ್ಚಕ್ಷುಃ ಶ್ರೋತ್ರ ಜಿಹ್ವಾಘ್ರಾಣ ಮನೋಬುದ್ಧಿ ಚಿತ್ತ ವಿಜ್ಞಾನವ? ಮಮ ಶರೀರೇ ಅಂಗಸ್ಯ ಸುಖಂ ಸ್ಥಿರಿಷ್ಯತಿ ಜೀವಃ ಶಿವಃ ಶಿವೋ ಜೀವಃ ಸಜೀವಃ ಕೇವಲಃ ಶಿವಃ ಪಾಶಬದ್ಧೋ ಭವೇಜ್ಜೀವಃ ಪಾಶಮುಕ್ತಃ ಶದಾಶಿವಃ ಎಂದೀ ಮಂತ್ರದಿಂದ ಆತನ ಜೀವನ ಶುದ್ಧವಂ ಮಾಡುವುದು. ಇನ್ನು ಆತ್ಮಶುದ್ದವ ಮಾಡುವ ಕ್ರಮವೆಂತೆಂದಡೆ_ ಓಂ ಶಿವಾತ್ಮಕಸುಖಂ ಜೀವೋ ಜೀವಾತ್ಮಕಸುಖಂ ಶಿವಃ ಶಿವಜೀವಾತ್ಮಸಂಯೋಗೇ ಪ್ರಾಣಲಿಂಗಂ ತಥಾ ಭವೇತ್ ಎಂದೀ ಮಂತ್ರದಿಂದ ಆತನ ಆತ್ಮನ ಶುದ್ಧವಂ ಮಾಡುವುದು. ಇನ್ನು ವಾಕ್ಕು ಪಾಣಿ ಪಾದ ಗುಹ್ಯ ಪಾಯುವೆಂಬ ಕರ್ಮೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತವಂ ತೊಡೆದು ಲಿಂಗಲಿಖಿತವಂ ಮಾಡುವ ಕ್ರಮವೆಂತೆಂದಡೆ_ ಓಂ [ಮೇ] ನೇತ್ರೇ ತ್ರ್ಯಂಬಕಃ ಪಾತು ಮುಖಂ ಪಾತು ಮಹೇಶ್ವರಃ ಕuõ್ರ್ಞ ಪಾತು ಶಂಭುರ್ಮೇ ನಾಸಿ ಕಾಯಾಂ ಭವೋದ್ಭವಃ ವಾಗೀಶಃ ಪಾತು ಮೇ ಜಿಹ್ವಾಮೋಷ*ಂ ಪಾತ್ವಂಬಿಕಾಪತಿಃ ಎಂದೀ ಮಂತ್ರದಿಂದ ಆತನ ಪಂಚೇಂದ್ರಿಯಂಗಳ ಮೇಲಣ ಇಂದ್ರಿಯ ಲಿಖಿತಮಂ ತೊಡೆದು ಲಿಂಗಲಿಖಿತವಂ ಮಾಡುವುದು. ಇನ್ನು ಮನ ಬುದ್ಧಿ ಚಿತ್ತ ಅಹಂಕಾರವೆಂಬ ಅಂತಃಕರಣ ಚತುಷ್ಟಯಂಗಳ ನಿವರ್ತನೆಯ ಮಾಡುವ ಕ್ರಮವೆಂತೆಂದಡೆ_ ಮನದಲ್ಲಿ ಧ್ಯಾನವಾಗಿ ಬುದ್ಧಿಯಲ್ಲಿ ವಂಚನೆಯಿಲ್ಲದೆ ಚಿತ್ತವು ದಾಸೋಹದಲ್ಲಿ ಅಹಂಕಾರವು ಜ್ಞಾನದಲ್ಲಿ ಈ ಮರ್ಯಾದೆಯಲ್ಲಿ ಚತುರ್ವಿಧಮಂ ನಿವರ್ತನೆಯಂ ಮಾಡುವುದು. ಇನ್ನು ಆತಂಗೆ ಪಂಚಗವ್ಯಮಂ ಕೊಟ್ಟು ಏಕಭುಕ್ತೋಪವಾಸಂಗಳಂ ಮಾಡಿಸಿ ಪಂಚಭೂತಸ್ಥಾನದ ಅಧಿದೇವತೆಗಳಂ ತೋರುವುದು ಅವಾವೆಂದಡೆ_ ಬ್ರಹ್ಮಾ ವಿಷ್ಣುಶ್ಚ ರುದ್ರಶ್ಚ ಈಶ್ವರಶ್ಚ ಸದಾಶಿವಃ ಏತೇ ಗರ್ಭಗತಾ ಯಸ್ಯ ತಸ್ಮೈ ಶ್ರೀಗುರವೇ ನಮಃ ಎಂದೀ ಮಂತ್ರದಿಂದ ಆತನ ಪಂಚಭೂತ ಶುದ್ಧಿಯಂ ಮಾಡುವುದು. ಈ ಕ್ರಮದಲ್ಲಿ ಶುದ್ಧಾತ್ಮನಂ ಮಾಡಿದ ಬಳಿಕ ಆತನನ್ನು ಗಣತಿಂಥಿಣಿಯ ಮುಂದೆ ನಿಂದಿರಿಸುವುದು. ನಿಂದಿರ್ದಾತನಂ ದಂಡಪ್ರಣಾಮಮಂ ಮಾಡಿಸುವ ಕ್ರಮವೆಂತೆಂದಡೆ_ ಅನಂತ ಜನ್ಮಸಂಪ್ರಾಪ್ತ ಕರ್ಮೇಂಧನವಿದಾಹಿನೇ ಜ್ಞಾನಾನಲಪ್ರಭಾವಾಯ ತಸ್ಮೈ ಶ್ರೀಗುರವೇ ನಮಃ ಕರ್ಮಣಾ ಮನಸಾ ವಾಚಾ ಗುರು ಭಕ್ತೈತುವತ್ಸಲಃ ಶರೀರಂ ಪ್ರಾಣಮರ್ಥಂ ಚ ಸದ್ಗುರುಭ್ಯೋ ನಿವೇದಯೇತ್ ಪ್ರಣಮ್ಯ ದಂಡವದ್ಭೂಮೌ ಅಷ್ಟಮಂತ್ರೈಃ ಸಮರ್ಚಯೇತ್ ಶ್ರೀಗುರೋಃ ಪಾದಪದ್ಮಂಚ ಗಂಧಪುಷ್ಪಾಕ್ಷತಾದಿಭಿಃ ಅನ್ಯಥಾ ವಿತ್ತಹೀನೋ[s]ಪಿ ಗುರುಭಕ್ತಿಪರಾಯಣಃ ಕೃತ್ವಾ ದಂಡನಮಸ್ಕಾರಂ ಸ್ವಶರೀರಂ ನಿವೇದಯೇತ್ ಎಂದೀ ಮಂತ್ರದಿಂದ ದಂಡಪ್ರಣಾಮವಂ ಮಾಡಿಸುವುದು ಆತನ ರೈವಿಡಿದೆತ್ತುವ ಕ್ರಮವೆಂದರೆ ಗುರುಃ ಪಿತಾ ಗುರುರ್ಮಾತಾ ಗುರುರೇವ ಹಿ ಬಾಂಧವಃ ಗುರುದೈವಾತ್ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಓಂ ಗುರುದೇವೋ ಭವ, ಓಂ ಪಿತೃದೇವೋ ಭವ, ಓಂ ಆಚಾರ್ಯದೇವೋ ಭವ ಎಂದೀ ಮಂತ್ರದಿಂದ ಆತನ ಕೈವಿಡಿದೆತ್ತುವುದು ಇನ್ನು ಭೂಶುದ್ಧಿಯಂ ಮಾಡುವ ಕ್ರಮವೆಂತೆಂದಡೆ_ ಓಂ ಶಿವಶಿವ ಶಿವಾಜ್ಞಾ ವಿಷ್ಣುಪ್ರವರ್ತಮಾನುಷಾ ಅಪವಿತ್ರಃ ಪವಿತ್ರೋವಾ ಸರ್ವಾವಸ್ಥಾಂಗತೋ[s]sಪಿ ವಾ ಯಃ ಸ್ಮರೇತ್ ಪುಂಡರೀಕಾಕ್ಷಂ ಸ ಬಾಹ್ಯಾಭ್ಯಂತರಃ ಶುಚಿಃ ಪ್ರಥ್ವಿ ತ್ವಯಾ ಧೃತಾ ದೇವಿ ದೇವತ್ವಂ ವಿಷ್ಣುನಾ ಧೃತಾ ಪಂಚದಾರಾಮಯೋ ದೇವಿ ಪವಿತ್ರಂ ಕುರು ಚಾಸನಮ್ ಸಮ್ಮಾರ್ಜನಂ ಶತಂ ಪುಣ್ಯಂ ಸಹಸ್ರಮನುಲೇಪನಮ್ ರೇಖಾಶತಸಹಸ್ರೇಷು ಅನಂತಂ ಪದ್ಮಮುಚ್ಯತೇ ಬಂಧೋ ಭವಹರಶ್ಚೈವ ಸ್ವಸ್ತಿಕಂ ಶತ್ರುನಾಶನಮ್ ಪದ್ಮಂ ಪುಣ್ಯಂ ಫಲಂ ಚೈವ ಮುದ್ರಾ ತು ಮೋಕ್ಷಸಾಧನಮ್ ಎಂದೀ ಮಂತ್ರದಿಂದ ಭೂಶುದ್ಧಿಯ ಮಾಡುವದು. ಇನ್ನು ಆತನ ಚೌಕಮಧ್ಯದಲ್ಲಿ ಕುಳ್ಳಿರಿಸುವ ಕ್ರಮವೆಂತೆಂದಡೆ- ಓಂ ನಮೋ ರುದ್ರೇಭ್ಯೋ ಯೇ ಪೃಥ್ವಿವ್ಯಾಂ ಯೇ[s]ಂತರಿಕ್ಷೇ ಯೇ ದಿವಿ ಯೇಷಾಮನ್ನಂ ವಾತೋ ವರ್ಷಮಿಷವಸ್ತೇಭ್ಯೋ ದಶಪ್ರಾಚೀರ್ದಶ ದಕ್ಷಿಣಾ ದಶ ಪ್ರತೀಚೀರ್ದಶೋದೀಚೀರ್ದಶೋಧ್ರ್ವಾಸ್ತೇಭ್ಯೋ ನಮಸ್ತೇನೋ ಮೃಡಯಂತು ತೇ ಯಂ ದ್ವಿಷ್ಟೋ ಯಶ್ಚನೋ ದ್ವೇಷ್ಟಿ ತಂ ವೊ ಜಂಬೇ ದಧಾಮಿ ಚಾಂ ಪೃಥಿವ್ಯಾ ಮೇರು ಪೃಷ* ಋಷಿಃ ಕೂರ್ಮೋ ದೇವತಾ ಜಗತೀ ಛಂದಃ ಆಸನೇ ವಿನಿಯೋಗಃ ಎಂದೀ ಮಂತ್ರದಿಂದ ಶ್ರೀಗುರು ಆತನ Zõ್ಞಕಮಧ್ಯದಲ್ಲಿ ಕುಳ್ಳಿರಿಸುವುದು. ಇನ್ನು ನಾಲ್ಕೂ ಕಲಶದ ಪ್ರತ್ಯೇಕ ಪ್ರಧಾನ ದೇವತೆಗಳಂ ಕುಳ್ಳಿರಿಸಿ ಗುರುಕಲಶವಂ ಸ್ಥಾಪ್ಯವಂ ಮಾಡುವ ಕ್ರಮವೆಂತೆಂದಡೆ- ಚೌಕಮಧ್ಯೇ ಸುಮಾಂಗಲ್ಯಂ ಷೋಡಶಂ ಕಲಶಂ ತಥಾ ಭಾಸುರಂ ತಂಡುಲಂ ತಸ್ಯ ಪಂಚಸೂತ್ರಂ ತಥೈವ ಚ ತೇಷು ತೀರ್ಥಾಂಬುಪೂರ್ಣೇಷು ನಿದಧ್ಯಾದಾಮ್ರಪಲ್ಲವಾನ್ ದೂರ್ವಾಂಕುರಸುಪೂಗಾನಿ ನಾಗವಲ್ಲೀದಲಾನ್ಯಪಿ ಓಂ ತತ್ಪುರುಷಾಯ ನಮಃ ತತ್ಪುರುಷವಕ್ತ್ರಾಯ ನಮಃ ಓಂ ಅಘೋರರಾಯ ನಮಃ ಅಘೋರವಕ್ತ್ರಾಯ ನಮಃ ಓಂ ಸದ್ಯೋಜಾತಾಯ ನಮಃ ಸದ್ಯೋಜಾತವಕ್ತ್ರಾಯ ನಮಃ ಓಂ ವಾಮದೇವಾಯ ನಮಃ ವಾಮದೇವವಕ್ತ್ರಾಯ ನಮಃ ಓಂ ಈಶಾನಾಯ ನಮಃ ಈಶಾನವಕ್ತ್ರಾಯ ನಮಃ ಓಂ ತತ್ಪುರುಷ ಅಘೋರ ಸದ್ಯೋಜಾತ ವಾಮದೇವ ಈಶಾನ ವಕ್ತ್ರೇಭ್ಯೋ ನಮಃ ಎಂದು ಈ ಮಂತ್ರದಿಂದ ಗುರುಕಲಶಕ್ಕೆ ಪಂಚಸೂತ್ರಂಗಳನಿಕ್ಕಿ ಪಂಚಪಲ್ಲವಂಗಳನಿಕ್ಕಿ ಪಂಚಮುಖಂಗಳನಿಕ್ಕಿ ಗುರುಕಲಶವಂ ಸ್ಥಾಪ್ಯವಂ ಮಾಡುವುದು. ಇನ್ನು ಜಲಶುದ್ಧವಂ ಮಾಡುವ ಕ್ರಮವೆಂತೆಂದಡೆ - ಓಂ ನಮಃ ಶಿವಾಯ ನಮಸ್ತೇ ಅಸ್ತು ಭಗವನ್ ವಿಶ್ವೇಶ್ವರಾಯ ಮಹಾದೇವಾಯ ತ್ರ್ಯಂಬಕಾಯ ತ್ರಿಪುರಾಂತಕಾಯ ತ್ರಿಕಾಲಾಗ್ನಿಕಾಲಾಯ ಕಾಲಾಗ್ನಿರುದ್ರಾಯ ನೀಲಕಂಠಾಯ ಮೃತ್ಯುಂಜಯಾಯ ಸರ್ವೇಶ್ವರಾಯ ಸದಾಶಿವಾಯ ಶ್ರೀಮನ್ಮಹಾದೇವಾಯ ನಮಃ ಓಂ ನಿಧನಪತಯೇ ನಮಃ ನಿಧನಪತಾಂತಿಕಾಯ ನಮಃ ಓಂ ಊಧ್ರ್ವಾಯ ನಮಃ ಊಧ್ರ್ವಲಿಂಗಾಯ ನಮಃ ಓಂ ಹಿರಣ್ಯಾಯ ನಮಃ ಹಿರಣ್ಯಲಿಂಗಾಯನಮಃ ಓಂ ಸುವರ್ಣಾಯ ನಮಃ ಸುವರ್ಣಲಿಂಗಾಯ ನಮಃ ಓಂ ದಿವ್ಯಾಯ ನಮಃ ದಿವ್ಯಲಿಂಗಾಯ ನಮಃ ಓಂ ಭವಾಯ ನಮಃ ಭವಲಿಂಗಾಯ ನಮಃ ಓಂ ಶಿವಾಯ ನಮಃ ಶಿವಲಿಂಗಾಯ ನಮಃ ಓಂ ಜ್ಯೇಷಾ*ಯ ನಮಃ ಜ್ಯೇಷ*ಲಿಂಗಾಯ ನಮಃ ಓಂ ಶ್ರೇಷಾ*ಯ ನಮಃ ಶ್ರೇಷ*ಲಿಂಗಾಯ ನಮಃ ಓಂ ಜ್ವಲಾಯ ನಮಃ ಜ್ವಲಲಿಂಗಾಯ ನಮಃ ಓಂ ಸ್ಥೂಲಾಯ ನಮಃ ಸ್ಥೂಲಲಿಂಗಾಯ ನಮಃ ಓಂ ಸೂಕ್ಷ್ಮಾಯ ನಮಃ ಸೂಕ್ಷ್ಮಲಿಂಗಾಯ ನಮಃ ಓಂ ಶೂನ್ಯಾಯ ನಮಃ ಶೂನ್ಯಲಿಂಗಾಯ ನಮಃ ಓಂ ನೇತ್ರಾಯ ನಮಃ ನೇತ್ರಲಿಂಗಾಯ ನಮಃ ಓಂ ಶ್ರೋತ್ರಾಯ ನಮಃ ಶ್ರೋತ್ರಲಿಂಗಾಯ ನಮಃ ಓಂ ಘ್ರಾಣಾಯ ನಮಃ ಘ್ರಾಣಲಿಂಗಾಯ ನಮಃ ಓಂ ಪ್ರಾಣಾಯ ನಮಃ ಪ್ರಾಣಲಿಂಗಾಯ ನಮಃ ಓಂ ವ್ಯೋಮಾಯ ನಮಃ ವ್ಯೋಮಲಿಂಗಾಯ ನಮಃ ಓಂ ಆತ್ಮಾಯ ನಮಃ ಆತ್ಮಲಿಂಗಾಯ ನಮಃ ಓಂ ಪರಮಾಯ ನಮಃ ಪರಮಲಿಂಗಾಯ ನಮಃ ಓಂ ಶರ್ವಾಯ ನಮಃ ಶರ್ವಲಿಂಗಾಯ ನಮಃ ಓಂ ಶಾಂತಾಯ ನಮಃ ಶಾಂತಲಿಂಗಾಯ ನಮಃ ಓಮೇತತ್ಸೋಮಸ್ಯ ಸೂರ್ಯಸ್ಯ ಸರ್ವಲಿಂಗಂ ಸ್ಥಾಪಯತಿ ಪಾಣಿಮಂತ್ರಂ ಪವಿತ್ರಮ್ ಓಂ ನಮಸ್ತೇ ಸರ್ವೋ ವೈ ರುದ್ರಸ್ತಸ್ಮೈ ರುದ್ರಾಯ ನಮೋsಸ್ತು ನಮೋ ಹಿರಣ್ಯಬಾಹವೇ ಹಿರಣ್ಯವರ್ಣಾಯ ಹಿರಣ್ಯರೂಪಾಯ ಹಿರಣ್ಯಪತಯೇ ಅಂಬಿಕಾಪತಯೇ ಉಮಾಪತಯೇ ಪಶುಪತಯೇ ನಮೋ ನಮಃ ಋತಂ ಸತ್ಯಂ ಪರಬ್ರಹ್ಮ ಪುರುಷಂ ಕೃಷ್ಣಪಿಂಗಲಂ ಊಧ್ರ್ವರೇತಂ ವಿರೂಪಾಕ್ಷಂ ವಿಶ್ವರೂಪಾಯ ವೈ ನಮೋ ನಮಃ ಓಂ ಸದ್ಯೋಜಾತಂ ಪ್ರಪದ್ಯಾಮಿ ಸದ್ಯೋಜಾತಾಯ ವೈ ನಮೋ ನಮಃ ಭವೇ ಭವೇ ನಾತಿಭವೇ ಭವಸ್ವ ಮಾಂ ಭವೋದ್ಭವಾಯ ನಮಃ ಓಂ ವಾಮದೇವಾಯ ನಮೋ ಜ್ಯೇಷಾ*ಯ ನಮಃ ಶ್ರೇಷಾ*ಯ ನಮೋ ರುದ್ರಾಯ ನಮಃ ಕಾಲಾಯ ನಮಃ ಕಲವಿಕರಣಾಯ ನಮೋ ಬಲವಿಕರಣಾಯ ನಮೋ ಬಲಾಯ ನಮೋ ಬಲಪ್ರಮಥನಾಥಾಯ ನಮಃ ಸರ್ವಭೂತದಮನಾಯ ನಮೋ ಮನೋನ್ಮನಾಯ ನಮಃ ಓಂ ಅಘೋರೇಭ್ಯೋsಥ ಘೋರೇಭ್ಯೋ ಘೋರಘೋರತರೇಭ್ಯಃ ಸರ್ವೇಭ್ಯಸ್ಯರ್ವ ಸರ್ವೇಭ್ಯೋ ನಮಸ್ತೇ ಅಸ್ತು ರುದ್ರರೂಪೇಭ್ಯಃ ಶ್ರೀ ಸದಾಶಿವಾಯ ನಮಃ ಓಂ ತತ್ಪುರುಷಾಯ ವಿದ್ಮಹೇ ಮಹಾದೇವಾಯ ಧೀಮಹಿ ತನ್ನೋ ರುದ್ರಃ ಪ್ರಚೋದಯಾತ್ ಓಮೀಶಾನಃ ಸರ್ವವಿದ್ಯಾನಾಮೀಶ್ವರಃ ಸರ್ವಭೂತಾನಾಂ ಬ್ರಹ್ಮಾಧಿಪತಿಬ್ರಹ್ಮಣೋsಧಿಪತಿಬ್ರ್ರಹ್ಮಾ ಶಿವೋ ಮೇ ಅಸ್ತು ಸದಾಶಿವೋಂ ಕದ್ರುದ್ರಾಯ ಪ್ರಚೇತಸೇ ಮೀಡುಷ್ಟಮಾಯ ತವ್ಯಸೇ ವೋಚೇಮ ಶಂತಮಗ್‍ಂ ಹೃದೇ ಏಕಃ ಶಿವ ಏವಾನ್ಯರಹಿತಾಯ ತೇ ನಮೋ ನಮಃ ಓಂ ವಿಶ್ವಂ ಭೂತಂ ಭುವನಂ ಚಿತ್ರಂ ಬಹುಧಾಜಾತಂ ಜಾಯಮಾನಂ ಚ ಯತ್ ಓಂ ಶಂ ಚ ಮೇ ಮಯಶ್ಚ ಮೇ ಪ್ರಿಯಂ ಚ ಮೇ[s] ಸುಕಾಮಶ್ಚ ಮೇ ಕಾಮಶ್ಚ ಮೇ ಸೌಮನಶ್ಚ ಮೇ ಭದ್ರಂ ಚ ಮೇ ಶ್ರೇಯಶ್ಚ ಮೇ ವಸ್ಯಶ್ಚ ಮೇ ಯಶಶ್ಚ ಮೇ ಭಗಶ್ಚ ಮೇ ದ್ರವಿಣಂ ಚ ಮೇ ಯಂತಾ ಚ ಮೇ ಧರ್ತಾ ಚ ಮೇ ಕ್ಷೇಮಶ್ವಮೇ ಧೃತಿಶ್ಚಮೇ ವಿಶ್ವಂ ಚ ಮೇ ಮಹಶ್ಚಮೇ ಸಂವಿಚ್ಚ ಮೇ ಜ್ಞಾತ್ರಂ ಚ ಮೇ ಸೂಶ್ಚ ಮೇ ಪ್ರಸೂಶ್ಚ ಮೇ ಸೀರಂ ಚ ಮೇ ಲಯಶ್ಚಯ ಮೇ ಅಮೃತಂ ಚ ಮೇ ಯಕ್ಷ್ಮಂಚ ಮೇ[s] ಮೃತಂ ಚ ಮೇ ನಾಮಯಶ್ಚ ಮೇ ಜೀವಾತು ಶ್ಚ ಮೇ ದೀರ್ಘಾಯುತ್ವಂ ಚ ನಮಿತ್ರಂ ಚ ಮೇS ಭಯಂ ಚಮೇ ಸುಗಂಧಂ ಚ ಮೇ ಶಯನಂ ಚ ಮೇ ಸೂಷಾ ಚ ಮೇ ಸುದಿನಂ ಚ ಮೇ ಓಂ ಸಹನಾವವತು ಸಹ £õ್ಞ ಭುನಕ್ತು ಸಹ ವೀರ್ಯಂ ಕರವಾವಹೈ ತೇಜಸ್ವಿನಾವಧೀತಮಸ್ತು ಮಾ ವಿದ್ವಿಷಾವಹೈ ಓಂ ಶಾಂತಿಃ ಶಾಂತಿಃ ಶಾಂತಿಃ ಎಂದೀ ಮಂತ್ರದಿಂದ ಜಲಶುದ್ಧವಂ ಮಾಡುವುದು. ಇನ್ನು ಜಂಗಮಕ್ಕೆ ಪಾದಾರ್ಚನೆಯಂ ಮಾಡುವ ಕ್ರಮವೆಂತೆಂದಡೆ_ ಅಂಗುಷಾ*ಗ್ರೇ ಅಷ್ಟಷಷ್ಟಿ ತೀರ್ಥಾನಿ ನಿವಸಂತಿ ವೈ ಸಪ್ತಸಾಗರಪಾದಾಧಸ್ತದೂಧ್ರ್ವೇ ಕುಲಪರ್ವತಾಃ ಚರಸ್ಯ ಪಾದತೀರ್ಥೇನ ಲಿಂಗಮಜ್ಜನಮುತ್ತಮವಮ್ ತತ್ಪ್ರಸಾದಂ ಮಹಾದೇವಿ ನೈವೇದ್ಯಂ ಶುಭಮಂಗಲಮ್ ಈ ಮಂತ್ರದಿಂದ ಪಾದಾರ್ಚನೆಯಂ ಮಾಡುವುದು. ಇನ್ನು ಕುಮಾರಠಾವನು ಜಲಾಭಿವಾಸವ ಮಾಡುವ ಕ್ರಮವೆಂತೆಂದಡೆ_ ಜ್ವಾಲಾಮಾಲಾವೃತಾಂಗಾಯ ಜ್ವಲನಸ್ತಂಭರೂಪಿಣೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಕುಮಾರಠಾವನ್ನು ಜಲಾಧಿವಾಸವ ಮಾಡಿಸುವುದು. ಇನ್ನು ಆ ಶಿಷ್ಯನ ಹಸ್ತವಂ ಶೋಧಿಸುವ ಕ್ರಮವೆಂತೆಂದಡೆ_ ಓಂ ತ್ರಾತ್ವಿಯಂ ಶಕ್ತಿಃ ಶ್ರೀಕರಂ ಚ ಪವಿತ್ರಂ ಚ ರೋಗಶೋಕಭಯಾಪಹವರಿï ಮನಸಾ ಸಹ ಹಸ್ತೇಭ್ಯೋ ಪದ್ಭ್ಯಾಮುದ್ಧರಣಾಯ ಚ ಎಂದೀ ಮಂತ್ರದಿಂದ ಶಿಷ್ಯನ ಹಸ್ತವಂ ಶೋಧಿಸುವುದು. ಇನ್ನು ವಿಭೂತಿಯ ಧರಿಸುವ ಕ್ರಮವೆಂತೆಂದಡೆ_ ಮೂಧ್ರ್ನಿ ಲಲಾಟೇ ಕರ್ಣೇ ಚ ಚಕ್ಷುಷೋಘ್ರ್ರಾಣಕೇ ತಥಾ ಆಸ್ಯೇ ದ್ವಾಭ್ಯಾಂ ಚ ಬಾಹುಭ್ಯಾಂ ತನ್ಮೂಲತನವಸ್ತಥಾ ಮಣಿಬಂಧೇ ಚ ಹೃತ್ಪಾಶ್ರ್ವೇ ನಾಭೌ ಮೇಢ್ರೇ ತಥೈವ ಚ ಉರೌ ಚ ಜಾನುಕೇ ಚೈವ ಜಂಘಾ ಪೃಷೆ*ೀ ತಥೈವ ಚ ಪಾದೇ ದ್ವಾತ್ರಿಂಶತಿಶ್ಚೈವ ಪಾದಸಂಧೌ ಯಥಾ ಕ್ರಮಾತ್ ಇತ್ಯುದ್ಧೂಳನಂ ಸ್ನಾನಂ ಧಾರಣಂ ಮೋಕ್ಷಕಾರಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮೂವತ್ತೆರಡು ಸ್ಥಾನಗಳಲ್ಲಿ ವಿಭೂತಿಯಂ ಧರಿಸುವುದು. ಇನ್ನು ರುದ್ರಾಕ್ಷಿಯಂ ಧರಿಸುವ ಕ್ರಮವೆಂತೆಂದಡೆ_ ಓಂ ಹ್ರೂಂ ಶ್ರೂಂ ಭ್ರೂಂ ರೂಂ ಬ್ರೂ_ ಪ್ರರೂಮಪಿ ಸ್ರೀಯಂ ಕ್ಷೇಕ್ಷಮಪಿಕ್ಷೂ ಹ್ರೀಂ ನಮೋಂತಿ ಮಯಯೇ ಇತಿ ಪೂರ್ವೋಕ್ತ ಮಂತ್ರಾನಂತರೇ ಪ್ರಾಣನಾಯಮ್ಯ ಸಮಸ್ತ ಪಾಪಕ್ಷಯಾರ್ಥಂ ಶಿವಜ್ಞಾನಾವಾಪ್ತ್ಯರ್ಥಂ ಸಮಷ್ಟಿಮಂತ್ರೈಃ ಸಹ ಧಾರಣಂ ಕರಿಷ್ಯೇ ಇತಿ ಸಂಕಲ್ಪ್ಯ_ ಶಿರಸಾ ಧಾರಯೇತ್ಕೋಟಿ ಕರ್ಣಯೋರ್ದಶಕೋಟಿಭಿಃ ಶತಕೋಟಿ ಗಳೇ ಬದ್ಧಂ ಸಹಸ್ರಂ ಬಾಹುಮೂಲಯೋಃ ಅಪ್ರಮಾಣಫಲಂ ಹಸ್ತೇ ರುದ್ರಾಕ್ಷಂ ಮೋಕ್ಷಸಾಧನವರಿï ಎಂದೀ ಮಂತ್ರದಿಂದ ಆ ಶಿಷ್ಯನ ಹಸ್ತಂಗಳಲ್ಲಿ ರುದ್ರಾಕ್ಷಿಯಂ ಧರಿಸುವುದು, ಇನ್ನು ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವ ಕ್ರಮವೆಂತೆಂದಡೆ_ ಮಹಾದೇವಾಯ ಮಹತೇ ಜ್ಯೋತಿಷೇSನಂತತೇಜಸೇ ನಮಃ ಶಿವಾಯ ಶಾಂತಾಯ ಬ್ರಹ್ಮಣೇ ಲಿಂಗಮೂರ್ತಯೇ ಎಂದೀ ಮಂತ್ರದಿಂದ ಜಲಾಧಿವಾಸದೊಳಗಣ ಕುಮಾರಠಾವಂ ತೆಗೆಯುವದು. ಇನ್ನು ಶಿಲೆಯ ಪೂವಾಶ್ರಯವಂ ಕಳೆವ ಪರಿಯೆಂತೆಂದಡೆ_ ವಿಶ್ವತಶ್ಚಕ್ಷುರುತ ವಿಶ್ವತೋಮುಖೋ ವಿಶ್ವತೋಬಾಹುರುತ ವಿಶ್ವತಃಸ್ವಾತ್ ಸಂಬಾಹುಭ್ಯಾಂ ದಮತಿ ಸಂಪದಂ ತ್ರಯೀ_ ದ್ರ್ಯಾವಾಭೂಮೀ ಜನಯನ್ ದೇವ ಏಕಃ ಎಂದೀ ಮಂತ್ರದಿಂದ ಆ ಶಿಲೆಯ ಪೂರ್ವಾಶ್ರಯವಂ ಕಳೆವುದು. ಇನ್ನು ಆ ಶಿಲೆಗೆ ಪ್ರಾಣ ಪ್ರತಿಷೆ*ಯಂ ಮಾಡುವ ಕ್ರಮವೆಂತೆಂದಡೆ_ ಓಂ ವಿಶ್ವಾಧಿಕೋ ರುದ್ರೋ ಮಹರ್ಷಿಃ ಸರ್ವೋ ಹ್ಯೇಷ ರುದ್ರ ಸ್ತಸ್ಮೈ ರುದ್ರಾಯ ತೇ ಅಸ್ತು ನಮೋ ರುದ್ರೋ ವೈ ಕ್ರೂರೋ_ ರುದ್ರಃ ಪಶುನಾಮಧಿಪತಿಸ್ತಥಾ ದೇವಾ ಊಧ್ರ್ವಬಾಹವೊ_ ರುದ್ರಾ ಸ್ತುನ್ವಂತಿ ಯಸ್ಮಾತ್ಪರಂ ನಾಪರಮಸ್ತಿ ಕಿಂಚಿದ್ಯಸ್ಯಾನಾ ಣೀಯೋ ನ ಧ್ಯೇಯಃ ಕಿಂಚಿತ್ ಶಿವ ಏಕೋ ಧ್ಯೇಯಃ ಎಂದೀ ಮಂತ್ರದಿಂದ ಆ ಶಿಲೆಗೆ ಪ್ರಾಣಪ್ರತಿಷೆ*ಯಂ ಮಾಡುವುದು. ಇನ್ನು ದೇವರಿಗೆ ಸ್ನಪನಕ್ಕೆರೆಯುವ ಕ್ರಮವೆಂತೆಂದಡೆ_ ಸಪುಷ್ಪಶೀರ್ಷಕಂ ಲಿಂಗಂ ತಥಾ ಸ್ನಪನಮಾಚರೇತ್ ಪಯೋಧಧ್ಯಾಜಮಧ್ವಿಕ್ಷುರಸೈರ್ಮೂಲೇನ ಪಂಚಭಿಃ ಓಮನಂತ ಶುಚಿರಾಯುಕ್ಷ ಭಕ್ತಂ ತಿಸ್ತರತಾತ್ ಪರಮಂ ನಿಯಮುಚ್ಯತೇರ್ಮರಾತಸ್ಯ ಅವಿರಸ ಭುವನಂ ಜ್ಯೋತಿರೂಪಕವರಿï ಎಂದೀ ಮಂತ್ರದಿಂದ ದೇವರಿಗೆ ಸ್ನಪನಕ್ಕೆರೆವುದು. ಇನ್ನು ದೇವರಿಗೆ ವಸ್ತ್ರವಂ ಸಮರ್ಪಿಸುವುದೆಂತೆಂದಡೆ - ವ್ಯೋಮರೂಪ ನಮಸ್ತೇSಸ್ತು ವ್ಯೋಮತ್ಮಾಯ ಪ್ರಹರ್ಷಿಣೇ ವಾಸಾಂಸಿ ಚ ವಿಚಿತ್ರಾಣಿ ಸರವಂತಿ ಮೃದೂನಿ ಚ ಶಿವಾಯ ಗುರವೇ ದತ್ತಂ ತಸ್ಯ ಪುಣ್ಯಫಲಂ ಶೃಣು ಏವಂ ತದ್ವಸ್ತ್ರತಂತೂನಾಂ ಪರಿಸಂಖ್ಯಾತ ಏವ ಹಿ ತಾವದ್ವರ್ಷಸಹಸ್ರಾಣಿ ರುದ್ರಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ವಸ್ತ್ರವಂ ಸಮರ್ಪಿಸುವುದು. ಇನ್ನು ದೇವರಿಗೆ ಗಂಧವಂ ಸಮರ್ಪಿಸುವ ಕ್ರಮವೆಂತೆಂದಡೆ- ಚಂದನಾಗರುಕರ್ಪೂರತಮಾಲದಳಕುಂಕುಮಂ ಉಶೀರಕೋಷ*ಸಂಯುಕ್ತಂ ಶಿವಗಂಧಾಷ್ಟಕಂ ಸ್ಮೃತವಮ್ ಆಚಮಾನಸ್ತು ಸಿದ್ಧಾರ್ಥಂ ಅವಧಾರ್ಯ ಯಥೈವ ಚ ಅಷ್ಟಗಂಧಸಮಾಯುಕ್ತಂ ಪುಣ್ಯಪ್ರದಸಮನ್ವಿತವಮ್ ಎಂದೀ ಮಂತ್ರದಿಂದ ದೇವರಿಗೆ ಗಂಧಮಂ ಸಮರ್ಪಿಸುವುದು. ಇನ್ನು ದೇವರಿಗೆ ಅಕ್ಷತೆಯನರ್ಪಿಸುವ ಕ್ರಮವೆಂತೆಂದಡೆ ಅಭಿನ್ನಶಂಖವಚ್ಚೈವ ಸುಶ್ವೇತವ್ರೀಹಿತಂಡುಲವಮ್ ಸ್ಮೃತಂ ಶಿವಾರ್ಚನಾಯೋಗ್ಯಂ ನೇತರಂ ಚ ವರಾನನೇ ಗಂಧಾಕ್ಷತಸಮಾಯುಕ್ತಂ ಶಿವಮುಕ್ತೇಶ್ಚಕಾರಣಮ್ ಸರ್ವವಿಘ್ನವಿನಿರ್ಮುಕ್ತಂ ಶಿವಲೋಕೇ ಮಹೀಯತೇ ಎಂದೀ ಮಂತ್ರದಿಂದ ದೇವರಿಗೆ ಅಕ್ಷತೆಯಂ ಸಮರ್ಪಿಸುವುದು. ಇನ್ನು ದೇವರಿಗೆ ಪುಷ್ಪವಂ ಸಮರ್ಪಿಸುವ ಕ್ರಮವೆಂತೆಂದಡೆ - ಮಲ್ಲಿಕೋತ್ಪಲಪುನ್ನಾಗಕದಂಬಾಶೋಕಚಂಪಕಮ್ ಸೇವಂತಿಕರ್ಣಿಕಾರಾಖ್ಯಂ ತ್ರಿಸಂಧ್ಯಾರಕ್ತಕೇಸರೀ ಕದಂಬವನಸಂಭೂತಂ ಸುಗಂಧಿಂ ಚ ಮನೋಹರಮ್ ತತ್ವತ್ರಯಾತ್ಮಕಂ ದಿವ್ಯಂ ಪುಷ್ಪಂ ಶಂಭೋSರ್ಪಯಾಮಿ ತೇ ಎಂದೀ ಮಂತ್ರದಿಂದ ದೇವರಿಗೆ ಪುಷ್ಪವ ಸಮರ್ಪಿಸುವದು. ಇನ್ನು ದೇವರಿಗೆ ಧೂಪವ ಸಮರ್ಪಿಸುವ ಕ್ರಮವೆಂತೆಂದಡೆ- ಗುಗ್ಗುಲಂ ಘೃತಸಂಯುಕ್ತಂ ಲಿಂಗಮಭ್ಯಚ್ರ್ಯ ಸಂದಹೇತ್ ವನಸ್ಪತಿವಾಸನೋಕ್ತಂ ಗಂಧಂ ದದ್ಯಾತ್ತಮುತ್ತಮಮ್ ಅರ್ಪಣಾದೇವ ದೇವಾಯ ಭಕ್ತಪಾಪಹರಾಯ ಚ ಎಂಬೀ ಮಂತ್ರದಿಂದ ದೇವರಿಗೆ ಧೂಪವನರ್ಪಿಸುವುದು. ಇನ್ನು ದೇವರಿಗೆ ದೀಪವ ಸಮರ್ಪಿಸುವ ಕ್ರಮವೆಂತೆಂದಡೆ- ಸ್ವಪ್ರಕಾಶ ಮಹಾತೇಜ ಸರ್ವಾಂತಸ್ತಿಮಿರಾಪಹೆ ಸ ಬಾಹ್ಯಾಭ್ಯಂತರಂ ಜ್ಯೋತಿರ್ದೀಪೊSಯಂ ಪ್ರತಿಗೃಹ್ಯತಾಮ್ ಎಂಬೀ ಮಂತ್ರದಿಂದ ದೇವರಿಗೆ ದೀಪವನರ್ಪಿಸುವುದು. ಇನ್ನು ದೇವರಿಗೆ ನೈವೇದ್ಯವನರ್ಪಿಸುವ ಕ್ರಮವೆಂತೆಂದಡೆ- ಕ್ಷೀರವಾರಿದಿ[s]ಸಂಭೂತಮಮೃತಂ ಚಂದ್ರಸನ್ನಿಭಮ್ ನೈವೇದ್ಯಂ ಷಡ್ರಸೋಪೇತಂ ಶಾಶ್ವತಾಯ ಸಮರ್ಪಿತಮ್ ಎಂಬೀ ಮಂತ್ರದಿಂದ ದೇವರಿಗೆ ನೈವೇದ್ಯವ ಸಮರ್ಪಿಸುವುದು. ಇನ್ನು ದೇವರಿಗೆ ತಾಂಬೂಲವ ಸಮರ್ಪಿಸುವ ಕ್ರಮವೆಂತೆಂದಡೆ- ಪೂಗಸಂಭೂತಕರ್ಪೂರ ಚೂರ್ಣಪರ್ಣದ್ವಿಸಂಯುತಃ ತ್ರಯೋದಶಕಲಾತ್ಮಾನಂ ತಾಂಬೂಲಂ ಫಲಮುಚ್ಯತೇ ಎಂದೀ ಮಂತ್ರದಿಂದ ದೇವರಿಗೆ ತಾಂಬೂಲವ ಸಮರ್ಪಿಸುವುದು. ಇನ್ನು ದೇವರಿಗೆ ಮಂತ್ರಪುಷ್ಪವ ಸಮರ್ಪಿಸುವ ಕ್ರಮವೆಂತೆಂದಡೆ ತ್ರಿಯಂಬಕಂ ಯಜಾಮಹೇ ಸುಗಂಧಿಂ ಪುಷ್ಟಿವರ್ಧನವಮ್ ಉರ್ವಾರುಕಮಿವ ಬಂಧನಾನ್ಮುೃತ್ಯೋರ್ಮುಕ್ಷೀಯ ಮಾಮೃತಾತ್ ಎಂಬೀ ಮಂತ್ರದಿಂದ ದೇವರಿಗೆ ಮಂತ್ರಪುಷ್ಪವಂ ಸಮರ್ಪಿಸುವುದು. ಇನ್ನು ದೇವರಿಗೆ ನಮಸ್ಕಾರವಂ ಮಾಡುವ ಕ್ರಮವೆಂತೆಂದಡೆ- ಪಿÀಠಂ ಯಸ್ಯಾ ಧರಿತ್ರೀ ಜಲಧರಕಲಶಂ ಲಿಂಗಮಾಕಾಶಮೂರ್ತಿಂ ನಕ್ಷತ್ರಂ ಪುಷ್ಪಮಾಲ್ಯಂ ಗ್ರಹಗಣಕುಸುಮಂ ನೇತ್ರಚಂದ್ರಾರ್ಕವಹ್ನಿಮ್ ಕುಕ್ಷಿಂ ಸಪ್ತ ಸಮುದ್ರಂ ಭುಜಗಿರಿಶಿಖರಂ ಸಪ್ತಪಾತಾರಿಪಾದಂ ವೇದಂ ವಕ್ತ್ರಂ ಷಡಂಗಂ ದಶದಿಶಸನಂ ದಿವ್ಯಲಿಂಗಂ ನಮಾಮಿ ಎಂಬೀ ಮಂತ್ರದಿಂದ ದೇವರಿಗೆ ನಮಸ್ಕಾರವಂ ಮಾಡುವುದು. ಇನ್ನು ದೇವರಿಗೆ ಅನುಷಾ*ನವಂ ಮಾಡುವ ಕ್ರಮವೆಂತೆಂದಡೆ- ``ಏತೇಷಾಂ ಪುರುಷೋsಸ್ತು'' ಎಂದೀ ಮಂತ್ರದಿಂದ ದೇವರಿಗೆ ಅನುಷಾ*ನವಂ ಮಾಡುವುದು. ಇನ್ನು ಅನುಷಾ*ನವಂ ಮಾಡಿದ ಬಳಿಕ ಶ್ರೀಗುರುವು ಶಿಷ್ಯಂಗೆ ಉರಸ್ಥಲದ ಸಜ್ಜೆಯಲ್ಲಿ ಲಿಂಗವ ಧರಿಸುವ ಕ್ರಮವೆಂತೆಂದಡೆ- ಅಯಂ ಮೇ ಹಸ್ತೊ ಭಗವಾನ್ ಅಯಂ ಮೇ ಭಗವತ್ತರಃ ಅಯಂ ಮೇ ವಿಶ್ವಭೇಷಜಃ ಅಯಂ ಶಿವಾಭಿಮರ್ಶನಃ ಅಯಂ ಮಾತಾ ಅಯಂ ಪಿತಾ ಅಯಂ ಜೀವಾತುರಗಮತ್ ಇದಂ ತವ ಸಮರ್ಪಣಂ ಸುಬಂಧವೇ ನಿರೀಹಿ ಎಂದೀ ಮಂತ್ರದಿಂದ ಆ ಶಿಷ್ಯನ ಅಂಗದ ಮೇಲೆ ಲಿಂಗಪ್ರತಿಷೆ*ಯಂ ಮಾಡುವುದು. ಇನ್ನು ಆ ಶಿಷ್ಯನ ವಾಯುಪ್ರಾಣಿತ್ವವಂ ಕಳೆದು ಲಿಂಗಪ್ರಾಣಿಯ ಮಾಡುವ ಕ್ರಮವೆಂತೆಂದಡೆ- ಓಂ ಅಪಿ ಚ ಪ್ರಾಣಾಪಾನವ್ಯಾನೋದಾನಸಮಾನಾದಿ ತಚ್ಚೈತನ್ಯ ಸ್ವರೂಪಸ್ಯ ಪರಮೇಶ್ವರಸ್ಯ ಓಂ ಶ್ರದ್ಧಾಯಾಂ ಪ್ರಾಣೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಪ್ರಾಣಾಯ ಸ್ವಾಹಾ ಓಂ ಶ್ರದ್ಧಾಯಾಮಪಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಅಪಾನಾಯ ಸ್ವಾಹಾ ಓಂ ಶ್ರದ್ಧಾಯಾಂ ವ್ಯಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ವ್ಯಾನಾಯ ಸ್ವಾಹಾ ಓಂ ಶ್ರದ್ಧಾಯಾಮುದಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಉದಾನಾಯ ಸ್ವಾಹಾ ಓಂ ಶ್ರದ್ಧಾಯಾಂ ಸಮಾನೇನ ವಿಷ್ಣೋSಮೃತಂ ಜುಹೋಮಿ ಶಿವೋ ಮಾಂ ವಿಷಪ್ರದಾಹಾಯ ಸಮಾನಾಯ ಸ್ವಾಹಾ ಎಂದೀ ಮಂತ್ರದಿಂದ ಆ ಶಿಷ್ಯನ ವಾಯುಪ್ರಾಣಿತ್ವವ ಕಳೆದು ಲಿಂಗ ಪ್ರಾಣಿಯಂ ಮಾಡುವುದು. ಇನ್ನು ಆ ಶಿಷ್ಯಂಗೆ ಅಗ್ರೋದಕವನ್ನು ಸರ್ವಾಂಗದ ಮೇಲೆ ತಳಿವ ಕ್ರಮವೆಂತೆಂದಡೆ- ಶಿವಃ ಪಶ್ಯತಿ ಶಿವೋ ದೃಶ್ಯತೇ ಅಹೋರಾತ್ರಂ ಶಿವಸನ್ನಿಧಾವೈಕಮೇನಂ ಪ್ರಯುಜ್ಯತೇ ತ್ರೈಜಾತಾಮಿ ಯಜೇಕಂ ಆ ಸರ್ವೇಭ್ಯೋಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ಸರ್ವೇಭ್ಯೋ ಹಿ ಕಾಮೇಭ್ಯೋ ಅಗ್ನೀನಾಂ ಪ್ರಯುಜ್ಯತೇ ತ್ರೈಜಾತಾಮಿಯಜೇಕಂ ಅಭಿಚಾರನ್ ಇತಿ ಸರ್ವೋ ವೈ ಏಷ ಯಜ್ಞಃ ಯತ್ರೋಪಾತ್ತಯಜ್ಞಃ ಸರ್ವೇಷಾಮೇನಂ ಯಜ್ಞೇನ ಜಾಯತೇ ನ ದೇವತಾಭ್ಯಾಂ ಆ ಉಚ್ಯತೇ ದ್ವಾದಶಕಪಾಲ ಪೂರುಷೋ ಭವತಿ ತಂ ತೇ ಯಜೇತ ಕಪಾಲ ಸ್ತ್ರೀಸಾಮುದ್ರೈ- ತ್ರಯಂ ತ್ರಯೀ ಮೇ ಲೋಕಾ ಏಷಾಮ್- ಲೋಕಾನಾಮಪ್ಯುತ್ತರೋತ್ತರ ಜ್ಞೇಯೋ ಭವತಿ ಎಂದೀ ಮಂತ್ರದಿಂದ ಆ ಶಿಷ್ಯಂಗೆ ಸರ್ವಾಂಗದಲ್ಲಿ ಅಗ್ರೋದಕವಂ ತಳೆವುದು. ಇನ್ನು ಆ ಶಿಷ್ಯನ ಭಾಳದಲ್ಲಿವಿಭೂತಿಯ ಪಟ್ಟವಂ ಕಟ್ಟುವ ಕ್ರಮವೆಂತೆಂದಡೆ ಓಂ ತ್ರಿಪುಂಡ್ರಂ ಸತತಂ ತ್ರಿಪುಂಡ್ರಂ ಸರ್ವದೇವಲಲಾಟಪಟ್ಟತ್ರಿಪುಂಡ್ರಂ ಸಪ್ತಜನ್ಮಕೃತಂ ಪಾಪಂ ಭಸ್ಮೀಭೂತಂ ತತಃ ಕ್ಷಣಮ್ ಎಂದೀ ಮಂತ್ರದಿಂದ ಆ ಶಿಷ್ಯನ ಭಾಳದಲ್ಲಿ ವಿಭೂತಿ ಪಟ್ಟವಂ ಕಟ್ಟುವುದು. ಇನ್ನು ಆ ಶಿಷ್ಯನ ದುರಕ್ಷರವ ತೊಡೆವ ಕ್ರಮವೆಂತೆಂದಡೆ- ಐಶ್ವರ್ಯಕಾರಣಾಧ್ಭೂತಿರ್ಭಾಸನಾದ್ಭಸಿತಂ ತಥಾ ಸರ್ವಾಂಗಾಭ್ಯರ್ಚನಾದ್ಭಸ್ಮ ಚಾಪದಕ್ಷರಣಾತ್ ಕ್ಷರಂ ತತೋಭೂತಪ್ರೇತಪಿಶಾಚಬ್ರಹ್ಮರಾಕ್ಷಸ - ಅಪಸ್ಮಾರಭವಭೀತಿಭ್ಯೋ ಭೀಕಾರಣಾದ್ರಕ್ಷಾ ರಕ್ಷತೇ ಏತಾನಿ ತಾನಿ ಶಿವಮಂತ್ರ ಪವಿತ್ರಿತಾನಿ ಭಸ್ಮಾನಿ ಕಾಮದಹನಾಂಗ ವಿಭೂಷಿತಾನಿ ತ್ರೈಪುಂಡ್ರಕಾನಿ ರಚಿತಾನಿ ಲಲಾಟಪಟ್ಟೇ ಲುಂಪಂತಿ ದೈವಲಿಖಿತಾನಿ ದುರಕ್ಷರಾಣಿ ಎಂದೀ ಮಂತ್ರದಿಂದ ಆ ಶಿಷ್ಯನ ದುರಕ್ಷರವಂ ತೊಡೆವುದು. ಇನ್ನು ಆ ಶಿಷ್ಯನ ಲಲಾಟದಲ್ಲಿ ಲಿಂಗಲಿಖಿತವಂ ಬರೆವ ಕ್ರಮವೆಂತೆಂದಡೆ- ``ಓಂ ಓಂ ಓಂ ನಮಃ ಶಿವಾಯ ಸರ್ವಜ್ಞಾನಧಾಮ್ನೇಱಱ ಎಂದೀ ಮಂತ್ರದಿಂದ ಆ ಶಿಷ್ಯನ ಲಲಾಟದಲ್ಲಿ ಶಿವಲಿಖಿತಮಂ ಬರೆವುದು. ಇನ್ನು ಆ ಶಿಷ್ಯನ ಮಸ್ತಕದಲ್ಲಿ ಹಸ್ತವನಿರಿಸುವ ಕ್ರಮವೆಂತೆಂದಡೆ- ಉದ್ಯದ್ಭಾಸ್ಕರ ಕೋಟಿ ಪ್ರಕಾಶ ಮಹಾದರ್ಶನ ದಿವ್ಯಮೂರ್ತಿಭೀಷಣಮ್ ಭುಜಂಗಭೂಷಣಂ ಧ್ಯಾಯೇತ್ ದಿವ್ಯಾಯುಧಂ ರುದ್ರವರಿï ಸರ್ವೈಸ್ತಪಸ್ವಿಭಿಃ ಪ್ರೋಕ್ತಂ ಸರ್ವಜ್ಞೇಷು ಭಾಗಿನಮ್ ರುದ್ರಭಕ್ತಂ ಸ್ಮೃತಾಃ ಸರ್ವೇ ತ್ರಿಪುಂಡ್ರಾಂಕಿತಮಸ್ತಕಮ್ ಎಂದೀ ಮಂತ್ರದಿಂದ ಆ ಶಿಷ್ಯನ ಮಸ್ತಕದ ಮೇಲೆ ಹಸ್ತವನ್ನಿರಿಸುವುದು. ಇನ್ನು ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವ ಕ್ರಮವೆಂತೆಂದಡೆ - ಕರ್ಣದ್ವಾರೇ ಯಥಾವಾಕ್ಯಂ ಸದ್ಗುರೋರ್ಲಿಂಗಮೀರ್ಯತೇ ಇಷ್ಟಪ್ರಾಣಸ್ತಥಾಭಾವೋ ತ್ರಿಧಾಮ್ನೈಕ್ಯಮಿದಂ ಶೃಣು ಕರ್ಣೇ ಶಿಷ್ಯಸ್ಯ ಶನಕೈಃ ಶಿವಮಂತ್ರಮುದೀರಯೇತ್ ಸ ತು ಬದ್ಧಾಂಜಲಿಃ ಶಿಷ್ಯೋ ಮಂತ್ರತದ್ಧ್ಯಾನಮಾನಸಃ ಎಂದೀ ಮಂತ್ರದಿಂದ ಆ ಶಿಷ್ಯನ ಕರ್ಣದಲ್ಲಿ ಶಿವಮಂತ್ರವಂ ನಿರೂಪಿಸುವುದು. ಇನ್ನು ಶತಪತ್ರದೊಳಗಣ ಮನಪ್ರಾಣದೊಳಗಿಪ್ಪ ಪ್ರಾಣಲಿಂಗಕ್ಕೊಂದು ಇಷ್ಟಲಿಂಗ ಸ್ಥಲಮಂ ತೋರಿಸಿ ಆ ಶಿಷ್ಯನಂ ಕೃತಕೃತ್ಯನಂ ಮಾಡಿದ ಶ್ರೀಗುರುವಿಂಗೆ ನಮೋ ನಮಃ ಎಂದು ಬದುಕಿದನಯ್ಯಾ ಕೂಡಲಚೆನ್ನಸಂಗಮದೇವಾ.
--------------
ಚನ್ನಬಸವಣ್ಣ
-->