ಅಥವಾ

ಒಟ್ಟು 36 ಕಡೆಗಳಲ್ಲಿ , 1 ವಚನಕಾರರು , 36 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಈಶ್ವರನ ಕಾಬುದೊಂದಾಸೆಯುಳ್ಳೊಡೆ ಪರದೇಶಕ್ಕೆ ಹೋಗಿ ಬಳಲದಿರು, ಕಾಶಿಯಲ್ಲಿ ಕಾಯವ ವಿನಾಶವ ಮಾಡಲುಬೇಡ. ನಿನ್ನಲ್ಲಿ ನೀ ತಿಳಿದು ನೋಡಾ, ಸರ್ವೇಶ ಮುಳ್ಳಗುತ್ತ ತೆರಹಿಲ್ಲೆಂದಡೆ, ಒಂದು ಗೋಂಟ ಸಾರಿರ್ದನೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕಂಡು ಕೊಟ್ಟೆಹೆನೆಂಬುದು ಖಂಡಿತಂಗಲ್ಲದೆ ಪರಿಪೂರ್ಣಂಗುಂಟೆ ? ಉಂಡು ತೇಗಿಹೆನೆಂಬುದು ನಿತ್ಯತೃಪ್ತಂಗುಂಟೆ ? ಒಂದನರಿದು ಒಂದ ಮರೆದೆನೆಂದು ಸಂದೇಹಕ್ಕೊಳಗಾದವಂಗೆ` ಲಿಂಗವಿಲ್ಲ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಆದಿಶಕ್ತಿವಿಡಿದಾಡುವರೆಲ್ಲರು ಜಂಗಮವಲ್ಲ, ಅನಾದಿಶಕ್ತಿವಿಡಿದಾಡುವರೆಲ್ಲರು ಜ್ಞಾನಿಗಳಲ್ಲ, ಆದಿ ಅನಾದಿಯೆಂಬೀ ಎರಡ ಭೇದಿಸಿ ದಾಂಟಿ, ಇಚ್ಛಾಶಕ್ತಿಯ ಇಚ್ಛೆಯ ಮರೆದು, ಕ್ರಿಯಾಶಕ್ತಿಯ ಭಾವವ ಬಿಟ್ಟು, ಜ್ಞಾನಶಕ್ತಿಯ ಠಾವವನೊಲ್ಲದೆ, ತಾನು ತಾನಾದವಂಗೆ ಏನೂ ಇದಿರಿಲ್ಲಾ, ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಭಟಂಗೆ ಬ್ಥೀತಿ ಉಳ್ಳನ್ನಕ್ಕ ರಣವ ಹೊಗಬಲ್ಲನೆ? ಬಲ್ಲವ ಅರಿಯದವರಲ್ಲಿ ಗೆಲ್ಲ ಸೋಲಕ್ಕೆ ಹೋರುವನ್ನಬರ ಬಲ್ಲವನಹನೆ? ಅರಿದು ನುಡಿಯಲಿಲ್ಲ, ಮರೆದು ಸುಮ್ಮನಿರಲಿಲ್ಲ. ಆರು ಎಂದಂತೆ ಎನಲಿಲ್ಲ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅದ್ವೈತವ ನುಡಿದು ಅಬದ್ಧ ಅಂಗಕ್ಕಾಗಿ ಬದ್ಧರ ಬಾಗಿಲಲ್ಲಿ ಹೊದ್ದುಕೊಂಬನರಫಲ್ಲಾ ಎಂದು ಮತ್ತೆ ಅದ್ವೈತಕ್ಕೆ ಕದ್ದೆಹತನವೆ ? ಇಂತೀ ಅಬದ್ಧರ ಕಂಡು ಮುನ್ನವೆ ಹೊದ್ದಬೇಡ, ಎಂದನಂಬಿಗ ಚೌಡಯ್ಯ
--------------
ಅಂಬಿಗರ ಚೌಡಯ್ಯ
ಸಕಲಭೋಗ ವಿಲಾಸಿತ ಲಿಂಗಕ್ಕೆಂದಲ್ಲಿ ತನ್ನಂಗಕ್ಕೆ ಶೃಂಗಾರವುಂಟೆ ? ಶ್ರೀರುದ್ರಾಕ್ಷಿ ವಿಭೂತಿಯ ಸ್ವಸ್ಥಾನದಲ್ಲಿ ತನ್ನಂಗಕ್ಕೆ ಶೃಂಗಾರವೆಂದು ಮಾಡಿದಡೆ, ಆ ನಿಜಪದದಂಗವೊಂದು ಇಲ್ಲ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ತನ್ನ ಬುದ್ಧಿ ತನ್ನ ಚಿತ್ತದಲ್ಲಿ ಅಡಗಿದ ಮತ್ತೆ ನಾಡೆಲ್ಲರ ಕೂಡಿ ಓದಿ ಹಾಡಿ ಹೇಳಲೇತಕ್ಕೆ? ತನ್ನ ತಾನರಿದಲ್ಲಿ ಕಾಬ ಇದಿರು ತನಗೆ ಅನ್ಯಬ್ಥಿನ್ನವಿಲ್ಲಾ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಲಿಂಗವನರಿದೆಹೆನೆಂದಡೆ ಗುರುವಿಗೆ ಹಂಗು, ಗುರುವನರಿದೆಹೆನೆಂದಡೆ ಲಿಂಗದ ಹಂಗು, ಉಭಯವ ಮೀರಿ ಕಂಡೆಹೆನೆಂದಡೆ ಬೇರೊಂದೊಡಲುಂಟು. ಒಡಲು ಒಡೆದಲ್ಲದೆ ಬೇರೊಂದೆಡೆಯಿಲ್ಲ ಎಂದನಂಬಿಗ Zõ್ಞಡಯ್ಯ.
--------------
ಅಂಬಿಗರ ಚೌಡಯ್ಯ
ಪಿಸಿತ ನಡುವೆ ಇದ್ದ ಕಿರಾತಂಗೆ ಹೊಸ ವಾಸನೆಯ ಬಲ್ಲನೆ? ಸಕಲವ್ಯಾಪಾರದಲ್ಲಿ ಮೂಡಿ ಮುಳುಗುವವ ಸುಖದ ತದ್ರೂಪರ ಬಲ್ಲನೆ? ವಿಕಳತೆಗೊಂಡು ಅಖಿಳರ ಕೂಡಿ ಸುಖದುಃಖದಲ್ಲಿ ಬೇವವಂಗೆ ಅಕಳಂಕತನವುಂಟೆ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಮಾತೆ ಸೂತಕವಾಗಿ ಸಂದೇಹವ ಮಾಡುವಲ್ಲಿ ಅದೇತರಿಂದ ಒದಗಿದ ಕುರುಹು ? ಶಿಲೆಯ ಪ್ರತಿಷೆ*ಯ ಮಾಡಿ ತನ್ನ ಒಲವರ ವಿಶ್ವಾಸದಿಂದ ಬಲಿಕೆಯನರಿವುದು ಶಿಲೆಯೊರಿ ಮನವೊರಿ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಶರಣ ಸತಿ, ಲಿಂಗ ಪತಿ ಎಂಬರು. ಶರಣ ಹೆಣ್ಣಾದ ಪರಿಯಿನ್ನೆಂತು ? ಲಿಂಗ ಗಂಡಾದ ಪರಿಯಿನ್ನೆಂತು ? ನೀರು ನೀರು ಕೂಡಿ ಬೆರೆದಲ್ಲಿ, ಭೇದಿಸಿ ಬೇರೆ ಮಾಡಬಹುದೆ ? ಗಂಡು ಹೆಣ್ಣು ಯೋಗವಾದಲ್ಲಿ ಆತುರ ಹಿಂಗೆ ಘಟ ಬೇರಾಯಿತ್ತು. ಇದು ಕಾರಣ ಶರಣ ಸತಿ, ಲಿಂಗ ಪತಿ ಎಂಬ ಮಾತು ಮೊದಲಿಂಗೆ ಮೋಸ, ಲಾಭಕ್ಕಧೀನವುಂಟೆರಿ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಸಮಯವ ಮಾಡಿ ಹಣವ ತೆಗೆಯಲೇತಕ್ಕೆ ? ಆಚಾರಕ್ಕೂ ಹಣದಾಸೆಗೂ ಸರಿಯೆ ? ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಪುಷ್ಪವ ಕಂಡುದಕ್ಕೆ ಮತ್ತೆ ಮೂದಲೆ ಉಂಟೆ? ವ್ರತಗೆಟ್ಟವಂಗೆ, ಆಚಾರಭ್ರಷ್ಟಂಗೆ, ಪರಸತಿ ಪರಧನ ದುರ್ಭಿಕ್ಷಂಗೆ, ಪರ ಅಪರವನರಿಯದ ಪಾತಕಂಗೆ ಅಘೋರನರಕಕ್ಕೆಡೆಯಿಲ್ಲ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಕುರುಹೆಂಬೆನೆ ಕಲ್ಲಿನಲ್ಲಿ ಹತ್ತಿದ ಹಾವಸೆ, ಅರಿವೆಂಬೆನೆ ಕಾಣಬಾರದ ಬಯಲು, ಒಂದನಹುದು ಒಂದನಲ್ಲಾಯೆಂದು ಬಿಡಬಾರದು. ಬಿಟ್ಟಡೆ ಸಮಯವಿಲ್ಲ, ಜಿಡ್ಡ ಹಿಡಿದಡೆ ಜ್ಞಾನವಿಲ್ಲ, ಉಭಯದ ಗುಟ್ಟಿನಲ್ಲಿ ಕೊಳೆವುತ್ತಿದೇನೆ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಅರಿವುದೊಂದು ವಾಯು, ಮರೆವುದೊಂದು ವಾಯು. ಉಭಯದಿಂ ತೋರುವ ವಾಯು ಒಂದೆಯಾಗಿ, ವಾಳುಕದ ಒಳ ಹೊರಗಿನ ನೀರಿನಂತೆ ವೆಗ್ಗಳಿಸಿದಡೆ ನಿಂದು ತೆಗೆದಡೆ ಅಲ್ಲಿಯ ಅಡಗುವಂತೆ, ಅರಿದು ನುಡಿದು ನಡೆದಡೆ ಜ್ಞಾನಿ, ನುಡಿದ ನುಡಿಗೆ ನಡೆಯಡಗೆ ಆತನೆ ಜೀವಭಾವಿ ಎಂದನಂಬಿಗ ಚೌಡಯ್ಯ.
--------------
ಅಂಬಿಗರ ಚೌಡಯ್ಯ
ಇನ್ನಷ್ಟು ... -->