ಅಥವಾ

ಒಟ್ಟು 704 ಕಡೆಗಳಲ್ಲಿ , 99 ವಚನಕಾರರು , 562 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

`ಹಸ್ತಮಸ್ತಕಸಂಯೋಗಾದ್ಭೂತಿಪಟ್ಟಸ್ಯ ಧಾರಣಾತ್ | ಶಿವದೇವೇತಿ ವಿಜ್ಞೇಯಃ ಸರ್ವಪಾಪೈಃ ಪ್ರಮುಚ್ಯತೇ || ಎಂದು ವೀರಶೈವಾಚಾರ್ಯನ ಹಸ್ತದ ವೀರಮಾಹೇಶ್ವರನಪ್ಪ ಶಿಷ್ಯನ ಮಸ್ತಕದ ಸಂಯೋಗದ ದೆಸೆಯಿಂದಲೂ ವಿಭೂತಿಯ ಪಟ್ಟವ ಧರಿಸೂದರ ದೆಸೆಯಿಂದಲೂ ಆ ಶಿಷ್ಯನು....ದೇಹಿ ಎಂದರಿಯಲ್ತಕ್ಕಾತನು. ಅಂತಪ್ಪ ವೀರಮಾಹೇಶ್ವರನು ಎಲ್ಲಾ ಪಾಪಂಗಳಿಂ ದಲೂ ಬಿಡಲ್ಪಡುತ್ತಿಹನಯ್ಯಾ ಶಾಂತವೀರೇಶ್ವರಾ.
--------------
ಶಾಂತವೀರೇಶ್ವರ
ಪ್ರಥಮಪಾದದಲ್ಲಿ ಒಂಕಾರಕ್ಕೆ ನಕಾರ ಬೀಜಾಕ್ಷರ. ಆ ನಕಾರ ಉಭಯ ಕೂಡಿದ ಮತ್ತೆ ಮಕಾರ ಬೀಜಾಕ್ಷರ. ಇಂತೀ ತ್ರಿವಿಧಾಕ್ಷರ ಒಡಗೂಡಿ ಒಡಲಾದ ಮತ್ತೆ ಶಿಕಾರ ಬೀಜಾಕ್ಷರ. ಇಂತೀ ಶಿಕಾರ ಮೂರನೊಡಗೂಡಿ ನಾಲ್ಕೆಂಬಲ್ಲಿಗೆ ಯಕಾರ ಬೀಜಾಕ್ಷರ. ಇಂತೀ ಪಂಚಾಕ್ಷರಿಯ ಮೂಲಮಂತ್ರ ಸಂಬಂಧವಾಗಲಾಗಿ ಪ್ರಣಮದ ಬೀಜ. ಆ ಪ್ರಣಮವು `ಒಂ ಭರ್ಗೋ ದೇವಃ' ಜಗಕ್ಕೆ ಕರ್ತೃ ನೀನಲಾ ಎಂದು. ಸಾಮ ಅರ್ಥವಣ ಯಜಸ್ಸು ಋಕ್ಕು ಉತ್ತರ ಖಂಡನ. ಇಂತೀ ಪಂಚವೇದಂಗಳಲ್ಲಿ ಚತುರ್ವೇದಿಗಳಪ್ಪರಲ್ಲದೆ, ಐಕ್ಯೋತ್ತರ ಚಿಂತನೆಯನೀ ವಿಪ್ರಕುಲ ಮಿಥ್ಯವಂತರು ಬಲ್ಲರೆ ? ಕಣ್ಣಿನಲ್ಲಿ ನೋಡುತ್ತ ಕಣ್ಗಾಣೆನೆಂಬವನಂತೆ ಶಾಪಹತರಿಗೆಲ್ಲಕ್ಕೂ ಲಲಾಮಬ್ಥೀಮಸಂಗಮೇಶ್ವರಲಿಂಗವು ಅಸಾಧ್ಯ ನೋಡಾ.
--------------
ವೇದಮೂರ್ತಿ ಸಂಗಣ್ಣ
ನಿರಂಜನಾತೀತಷಟ್‍ಸ್ಥಲಬ್ರಹ್ಮ ಅಂಗವಾಗಿ ಆ ನಿರಂಜನಾತೀತ ಷಟ್‍ಸ್ಥಲಬ್ರಹ್ಮವನೊಡಗೂಡಿದ ಮಹಾಶರಣಂಗೆ ನಮೋ ನಮೋ ಎಂದು ಬದುಕಿದೆನು ಕಾಣಾ ಅಪ್ರಮಾಣಕೂಡಲಸಂಗಮದೇವಾ. || 661 ||
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದಡೂ ಹರಶರಣರಿಗೆ ದೂರ.
--------------
ಶಿವಲೆಂಕ ಮಂಚಣ್ಣ
ಕನ್ನವ ಸವೆವ ಕನ್ನಗತ್ತಿಗೆ ಕನ್ನ ಸವೆಯಿತ್ತೆ ಕೈ ತಟ್ಟಿತೆಂಬಂತೆ, ಹೊನ್ನೆನ್ನದು ಹೆಣ್ಣೆನ್ನದು ಮಣ್ಣೆನ್ನದು ಎಂದು, ಬಳಲುವಣ್ಣಗಳ ಬಾಯ ಟೊಣೆದು, ಇವು ಮೂರು ತನ್ನಿಂದ ಬಲ್ಲಿದರಲ್ಲಿಗೆ ಹೋಗದೆ ಮಾಣವು. ಇವರಲ್ಲಿ ಬನ್ನಬಟ್ಟು ಬಳಲುವ ಕರ್ಮಿಗಳಿಗಿನ್ನೆಲ್ಲಿಯ ಮುಕ್ತಿಯಯ್ಯಾ, ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ.
--------------
ಸ್ವತಂತ್ರ ಸಿದ್ಧಲಿಂಗ
ಗುರು ತೋರಿದನು ಲಿಂಗ- ಜಂಗಮವ. ಪಾದೋದಕ-ಪ್ರಸಾದವ ಕೊಳಹೇಳಿದನಲ್ಲದೆ ಇವ ತೊರೆಯ ಹೇಳಿದನೆ? ಅಹಮ್ಮೆಂದು ಪ್ರಸಾದದ್ರೋಹಿಗಳಾಗಿ, ನಾನೆ ಎಂದು ಲಿಂಗದ್ರೋಹಿಗಳಾಗಿ, ವಿಭೂತಿ-ರುದ್ರಾಕ್ಷಿ ಸಾಕ್ಷಾತ್ ಶಿವನೆಂದರಿಯದೆ, ಅವರಾಚರಣೆಯ ನೋಡಿ ನಿಂದಿಸಿ ಜಂಗಮದ್ರೋಹಿಗಳಾಗ ಹೇಳಿದನೆ? ಜಂಗಮದಲ್ಲಿ ಜಾತಿಯ, ಪ್ರಸಾದದಲ್ಲಿ ರುಚಿಯ, ಂಗದ್ಲ ಮೃದುವನರಸುವ, ಸಮಯದ್ಲ ವಿಶ್ವಾಸವಿಲ್ಲದ ಮಿಟ್ಟಿಯ ಭಂಡರ ತೋರರಯ್ಯಾ ಎನಗೆ ಕಪಿಲಸಿದ್ಧಮಲ್ಲಿಕಾರ್ಜುನ.
--------------
ಸಿದ್ಧರಾಮೇಶ್ವರ
ಅನುಭಾವಲಿಂಗದ ಮರ್ಮವನರಿವುದರಿದು, ಲಿಂಗಸಂಜ್ಞೆಯನರಿವುದರಿದು, ಲಿಂಗವೆಂದಾದುದೆಂದರಿವುದರಿದು, ಲಿಂಗವಂತಹುದಿಂತಹುದೆಂದರಿವುದರಿದು ನೋಡಾ. ಲಿಂಗದಲ್ಲಿಯೆ ಅಗಮ್ಯವಯ್ಯ. ಭೂಮಿಯೆ ಪೀಠಕೆ, ಆಕಾಶವೆ ಲಿಂಗವೆಂದರಿದಾತನು ಲಿಂಗವನರಿದಾತನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗದ ಆದಿ ಬ್ರಹ್ಮ, ಮಧ್ಯ ವಿಷ್ಣು, ಅಂತ್ಯ ರುದ್ರ. ಇಂತೀ ತ್ರಿಮೂರ್ತಿಲಿಂಗವೆಂದರಿದಾತನು ಲಿಂಗವನರಿದವನಲ್ಲ. ಲಿಂಗದಲ್ಲಿ[ಯೆ] ಅಗಮ್ಯವಯ್ಯ. ಲಿಂಗಮಧ್ಯೇ ಜಗತ್ಸರ್ವಂ ತ್ರೈಲೋಕ್ಯಂ ಸಚರಾಚರಂ ಲಿಂಗಬಾಹ್ಯಾತ್ ಪರಂ ನಾಸ್ತಿ ತಸ್ಮೈ ಶ್ರೀಗುರವೇ ನಮಃ ಎಂಬ ಭಾವರಹಿತ ಲಿಂಗವು `ಬ್ರಹ್ಮ ವಿಷ್ಣ್ವಾದಿದೇವಾನಾಮಪ್ಯಗೋಚರಂ' ಎಂದು ಇದಂ ಮಾಹೇಶ್ವರಂ ಜ್ಯೋತಿರಾಪಾತಾಲೇ ವ್ಯವಸ್ಥಿತಂ ಅತೀತಂ ಸತ್ಯಲೋಕಾದೀನನಂತಂ ದಿವ್ಯಮೀಶ್ವರಂ ಲಲಾಟಲೋಚನಂ ಚಾಂದ್ರೀ ಕಲಾಪಂ ಚತುರ್ದಶಂ ಅಂತರ್ವತೇಹ ನಿರ್ದೇಹಂ ಗುರುರೂಪಂ ವ್ಯವಸ್ಥಿತಂ ಪಾದಭಿನ್ನಂ ಹಿ ಲೋಕೇನ ಮೌಳಿಬ್ರಹ್ಮಾಂಡಭಿತ್ತಯೇ ಭುಜಪ್ರಾಂತದಿಗಂತಾನಾಂ ಭೂತಾನಾಂ ಪತಯೇ ನಮಃ ನಾದಲಿಂಗಮಿತಿಜ್ಞೇಯಂ ಬಿಂದುಪೀಠಮುದಾಹೃತಂ ನಾದಬಿಂದುಯುತಂ ರೂಪಂ ಲಿಂಗಾಕಾರಮಿಹೋಚ್ಯತೇ ಎಂಬ ಲಿಂಗಮೆಂದು ಲಿಯತೇ ಗಮ್ಯತೇ ಯತ್ರ ಯೇನಸರ್ವಂ ಚರಾಚರಂ ತದೇತಲ್ಲಿಂಗಮಿತ್ಯುಕ್ತಂ ಲಿಂಗತತ್ತ್ವಪರಾಯಣೈಃ ಲಕಾರಂ ಲಯಸಂಪ್ರೋಕ್ತಂ ಗಕಾರಂ ಸೃಷ್ಟಿಮೇವ ಚ ಲಯಾನಾಂ ಗಮನಶ್ಚೈವ ಲಿಂಗಾಕಾರಮಿಹೋಚ್ಯತೇ ಎಂದರಿದಾತನು ಉರಿಲಿಂಗಪೆದ್ದಿಪ್ರಿಯ ವಿಶ್ವೇಶ್ವರನೆಂದರಿದ ಶರಣಂಗೆ ಸುಲಭ, ಮಿಕ್ಕಿನವರಿಗಳಿಗಲಭ್ಯವಯ್ಯಾ.
--------------
ಉರಿಲಿಂಗಪೆದ್ದಿ
ತಾ ಸವಿದಲ್ಲದೆ ಆ ಸವಿಯ ಲಿಂಗಕ್ಕರ್ಪಿಸಲಾಗದು. ಅದೇನು ಕಾರಣವೆಂದಡೆ, ಆ ಲಿಂಗವು ಕಹಿ-ಸಿಹಿಯರಿಯದಾಗಿ. ಇದು ಕಾರಣ, ಕಹಿ ಎಂದು ಕಳೆದು, ಸಿಹಿ ಎಂದು ಕೊಂಡಡೆ, ಕೊಂಡುದು ಕಿಲ್ಬಿಷ, ಕೂಡಲಸಂಗಮದೇವಾ.
--------------
ಬಸವಣ್ಣ
`ಸರ್ವಂ ಶಿವಮಯಂ ಜಗತ್' ಎಂಬುದ ತಿಳಿಯದೆ ನುಡಿದವರ ನುಡಿಯಂತೆ ನಡೆಯದಿರಾ ಮನವೆ. `ಸರ್ವಂ ಶಿವಮಯಂ ಜಗತ್' ಎಂದು ತಿಳಿದು ತಿಳಿದು ಸುಖಿಯಾಗು ಮನವೆ. ಪಿಂಡ ಬ್ರಹ್ಮಾಂಡಕ್ಕೆ `ತಿಲಷೋಡಶಭಾಗೇನ ಭೇದೋ ನಾಸ್ತಿ ವರಾನನೇ' ಎಂಬುದು ಪುಸಿಯಲ್ಲ ನೋಡಾ ಮನವೆ. ಈಶ್ವರನ ಪಂಚಮುಖಂದ ಪಂಚತತ್ವಗಳುದಯಿಸಿದವು. ಈ ತತ್ವಂಗಳೊಂದೊಂದು ಕೂಡಿ ತನ್ನ ಚೈತನ್ಯ ಬೆರಸಿದಲ್ಲಿ, ಪಿಂಡ ಬ್ರಹ್ಮಾಂಡವೆನಿಸಿತ್ತು ನೋಡಾ ಮನವೆ. ತನ್ನ ತಾನರಿದು ನೋಡಿದಡೆ, `ಸರ್ವಂ ಶಿವಕಪಿಲಸಿದ್ಧಮಲ್ಲಿಕಾರ್ಜುನಮಯಂ ಜಗತ್' ಎಂದರಿದು ಬಂದಿತ್ತು ನೋಡಾ ಮನವೆ.
--------------
ಸಿದ್ಧರಾಮೇಶ್ವರ
ವೇದ ವೇದಂಗಳೆಲ್ಲ ಶಿವನ ಹೊಗಳಿ ನಿರ್ಮಲವಾದವು ನೋಡಾ `ಓಂ ನಮಃ ಸೋಮಾಯ ಚ ರುದ್ರಾಯ ಚ' ಎಂದು ವೇದವಾಕ್ಯ ನೋಡಾ. `ನಮಸ್ತಾಮ್ರಾಯ ಚಾರುಣಾಯ ಚ' ಎಂದು ಪಂಡಿತಮುಖಪ್ರಸಿದ್ಧ ನೋಡಾ. `ನಮಃ ಶೃಂಗಾಯ ಚ ಪಶುಪತಯೇ ಚ' ಎಂದು ವೇದಾಧ್ಯಾಯಿಗಳರಿಕೆ ನೋಡಾ. `ನಮಃ ಶಿವಾಯ ಚ ಶಿವತರಾಯ ಚ' ಎಂದು ಕಪಿಲಸಿದ್ಧಮಲ್ಲಿಕಾರ್ಜುನನ ಪಂಚಮುಖದಲ್ಲಿ ನಿತ್ಯ ನಿತ್ಯ ಘೋಷ ನೋಡಾ, ಕೇದಾರಯ್ಯಾ.
--------------
ಸಿದ್ಧರಾಮೇಶ್ವರ
ಪಾದಪೂಜೆಯ ಮಾಡಿ ಪಾದತೀರ್ಥವ ಪಡೆದುಕೊಂಬ ಕ್ರಮವು ಎಂತೆಂದಡೆ : 'ದೇಶಿಕಸ್ಯ ಪದಾಂಗುಷ್ಠೇ ಲಿಖಿತಾ ಪ್ರಣವಂ ತತಃ | ಪಾದಪೂಜಾವಿಧಿಂ ಕೃತ್ವಾ ವಿಶೇಷಂ ಶೃಣು ಪಾರ್ವತಿ ||' ಎಂದುದಾಗಿ, ಭಯಭಕ್ತಿ ಕಿಂಕುರ್ವಾಣದಿಂದೆ ಜಂಗಮಕ್ಕೆ ಪಾದಾರ್ಚನೆಯಂ ಮಾಡಿ ಗದ್ದುಗೆಯನಿಕ್ಕಿ ಮೂರ್ತವ ಮಾಡಿಸಿ ತನ್ನ ಕರಕಮಲವಂ ಮುಗಿದು ಅಯ್ಯಾ, ಹಸಾದ ಮಹಾಪ್ರಸಾದ ಪೂರ್ವಜನ್ಮ ನಿವಾರಣಂ ದೀಕ್ಷಾಗುರು ಶಿಕ್ಷಾಗುರು ಮೋಕ್ಷಗುರು ಗುರುವಿನಗುರು ಪರಮಗುರು ಪರಮಾರಾಧ್ಯ ಶ್ರೀಪಾದಗಳಿಗೆ ಶರಣು ಶರಣಾರ್ಥಿಯೆಂದು 'ಪ್ರಣಮ್ಯ ದಂಡವದ್ಭೂಮೌ ಇಷ್ಟಮಂತ್ರಂ [ಸದಾಜಪೇತ್] ಶ್ರೀ ಗುರೋಃ ಪಾದಪದ್ಮಂ ಚ ಗಂಧಪುಷ್ಪಾsಕ್ಷತಾದಿಭಿಃ ||' ಎಂದುದಾಗಿ, ದೀರ್ಘದಂಡ ನಮಸ್ಕಾರವಂ ಮಾಡಿ ಪಾದಪೂಜೆಗೆ ಅಪ್ಪಣೆಯಂ ತಕ್ಕೊಂಡು ಮೂರ್ತವಂ ಮಾಡಿ ಲಿಂಗವ ನಿರೀಕ್ಷಿಸಿ ತನ್ನ ಅಂಗೈಯಲ್ಲಿ ಓಂಕಾರ ಪ್ರಣವಮಂ ವಿಭೂತಿಯಲ್ಲಿ ಬರೆದು ಆ ಜಂಗಮದ ಎರಡು ಪಾದಗಳ ತನ್ನ ಕರಕಮಲದಲ್ಲಿ ಲಿಂಗೋಪಾದಿಯಲ್ಲಿ ಪಿಡಿದುಕೊಂಡು ಎರಡು ಅಂಗುಷ್ಠಗಳಲ್ಲಿ ಪ್ರಣವಮಂ ಬರೆದು, ಅಷ್ಟವಿಧಾರ್ಚನೆ ಷೋಡಶೋಪಚಾರವ ಮಾಡಿ ನಮಸ್ಕರಿಸಿ, ಆ ಪೂಜೆಯಂ ಇಳುಹಿ ಬಟ್ಟಲೊಳಗೆ ಪ್ರಣವಮಂ ಬರೆದು ಬ್ರಹ್ಮರಂಧ್ರದಲ್ಲಿರ್ದ ಸತ್ಯೋದಕವೆಂದು ಭಾವಿಸಿ, ಆ ಉದಕದ ಬಲದಂಗುಷ್ಠದ ಮೇಲೆ ನೀಡುವಾಗ ಆಱುವೇಳೆ ಷಡಕ್ಷರವ ನುಡಿದು ಇಷ್ಟಲಿಂಗವೆಂದು ಭಾವಿಸಿ, ಎಡದಂಗುಷ್ಠದ ಮೇಲೆ ನೀಡುವಾಗ ಐದುವೇಳೆ ಪಂಚಾಕ್ಷರವ ನುಡಿದು ಪ್ರಾಣಲಿಂಗವೆಂದು ಭಾವಿಸಿ, ಎರಡಂಗುಷ್ಠದ ಮಧ್ಯದಲ್ಲಿ ಉದಕವ ನೀಡುವಾಗ ಒಂದು ವೇಳೆ 'ಓಂ ಬಸವಲಿಂಗಾಯನಮಃ' ಎಂದು ಸ್ಮರಿಸಿ, ಭಾವಲಿಂಗವೆಂದು ಭಾವಿಸಿ ದ್ರವನೆಲ್ಲವ ತೆಗೆದು ಮತ್ತೆ ಪೂಜೆಯ ಮಾಡಿ ನಮಸ್ಕರಿಸಿ ಶರಣಾರ್ಥಿಯೆಂದು ಆ ಜಂಗಮವು ಸಲ್ಲಿಸಿದ ಮೇಲೆ ತಾನು ಪಾದತೀರ್ಥವ ಸಲ್ಲಿಸುವುದು. ಪಂಚಾಂಗುಲಿ ಪಂಚಾಕ್ಷರಿಯಿಂದಲಿ ಲಿಂಗಕರ್ಪಿಸಿ ಆ ಪಂಚಾಂಗುಲಿಯುತ ಜಿಹ್ವೆಯಿಂದ ಸ್ವೀಕರಿಸುವುದು ಗುರುಪಾದೋದಕ. ಲಿಂಗವನೆತ್ತಿ ಅಂಗೈಯಲ್ಲಿರ್ದ ತೀರ್ಥವ ಸಲ್ಲಿಸಿದುದು ಲಿಂಗಪಾದೋದಕ. ಬಟ್ಟಲೊಳಗಿರ್ದ ತೀರ್ಥವ ಸಲಿಸಿದುದು ಜಂಗಮಪಾದೋದಕ. ಈ ತ್ರಿವಿಧ ಪಾದೋದಕ ಒಂದೇ ಎಂದರಿವುದು. ಹೀಗೆ ಕ್ರಮವರಿದು ಸಲಿಸುವರ್ಗೆ ಮುಕ್ತಿಯಾಗುವುದಕ್ಕೆ ತಡವಿಲ್ಲವೆಂದಾತ ನಮ್ಮ ಶಾಂತಕೂಡಲಸಂಗಮದೇವ.
--------------
ಗಣದಾಸಿ ವೀರಣ್ಣ
ಕಾಮುಕಗೆ ದುರ್ಜನಗೆ ಕಪಟಿಗೆ ಹೇಮಚೋರಗೆ ಕಾರುಕ ಸಮ್ಮಗಾರಗೆ ಆವ ಭಾವದ ವ್ರತವ ಮಾಡಲಿಕ್ಕೆ, ಅವ ಭಾವಿಸಿ ನಡೆಯಬಲ್ಲನೆ? ಕಾಗೆಗೆ ರಸಾನ್ನ ಮುಂದಿರಲಿಕೆ, ಹರಿವ ಕೀಟಕಂಗೆ ಸರಿವುದಲ್ಲದೆ ಮತ್ತೆ ಅದು ಸವಿಯಸಾರವ ಬಲ್ಲುದೆ? ಇಂತೀ ಇವು ತಮ್ಮ ಜಾತಿಯ ಲಕ್ಷಣವ ಕೊಂದಡೂ ಬಿಡವಾಗಿ, ವ್ರತಾಚಾರವ ಸಂಬಂದ್ಥಿಸುವಲ್ಲಿ ಶರಣರೆಲ್ಲರ ಕೂಡಿ, ಈ ಗುಣ ಅಹುದು ಅಲ್ಲ ಎಂದು ಹೇಳಿ, ಜಾತಿವರ್ಗದ ಗುಣವ ನೀಕರಿಸಿ ಬಿಡಿಸಿ, ಸುಜಾತಿಯ ಅರಸಿನ ಪಟ್ಟವಂ ಕಟ್ಟಿ ಶರಣರೆಲ್ಲರು ನಿಹಿತಾಚಾರದಲ್ಲಿ ಸಹಭೋಜನವಂ ಮಾಡಿ ಇಂತೀ ಗುಣನಿಹಿತವ್ರತ ಅಜಾತನ ಒಲುಮೆ, ಆಚಾರವೆ ಪ್ರಾಣವಾದ ರಾಮೇಶ್ವರಲಿಂಗದ ನಿಹಿತದ ಶೀಲದ ನೇಮ.
--------------
ಅಕ್ಕಮ್ಮ
ಭಕ್ತನಾಗಿ ಹುಟ್ಟಿ ಮತ್ತೊಬ್ಬರಲ್ಲಿ ಬೇಡುವುದೆ ಕಷ್ಟ. ಹೊತ್ತು ಹೋರಿ ಭೂಮಿಯ ಅಗೆವಲ್ಲಿ ಮೊತ್ತದ ಜೀವಂಗಳು ಸತ್ತುದ ದೃಷ್ಟವ ಕಂಡಲ್ಲಿಯೆ ಮಾಡುವ ಮಾಟ ನಷ್ಟ. ಇದನರಿತು ವಿರಕ್ತರಾಗಿ ಹೋದಲ್ಲಿ, ಮತ್ತೊಬ್ಬರ ಅಪ್ಪಾ ಅಣ್ಣಾ ಎಂದು ಚಿತ್ತ ಕಲಕುವದು ಕಷ್ಟ. ಈ ಹೊತ್ತ ದೇಹಕ್ಕೆ ನಗೆಯ ಚಿತ್ತದ ಕಾಯಕ, ಇದನೊಪ್ಪುಗೊ, ಆತುರವೈರಿ ಮಾರೇಶ್ವರಾ.
--------------
ನಗೆಯ ಮಾರಿತಂದೆ
ಶ್ರೀಮತ್ಸಜ್ಜನ ಶುದ್ಧಶಿವಾಚಾರರಾಗಿ ಅಷ್ಟಾವರಣವೆ ಅಂಗವಾಗಿ, ಪಂಚಾಚಾರವೆ ಪ್ರಾಣವಾಗಿ, ಬಸವೇಶ್ವರದೇವರ ಸಾಂಪ್ರದಾಯಕರೆಂದು ನುಡಿದು ನಡೆದರೆ ಭಕ್ತರೆಂಬೆ, ಪುರಾತನರೆಂಬೆ. ಅಂತಪ್ಪ ಭಕ್ತಂಗೆ ಈ ಮೂಜಗವೆಲ್ಲ ಸರಿಯಲ್ಲವೆಂಬೆ. ಆ ಭಕ್ತಂಗೆ ಶಿವನ ಗದ್ದುಗೆಯೆ ಕೈಲಾಸವಾಗಿಪ್ಪುದು ನೋಡಾ. ಈ ಶಿವಾಚಾರದ ಪಥವನರಿಯದೆ ಇರುಳು ಹಗಲು ಅನಂತ ಸೂತಕಪಾತಕಂಗಳೊಳಗೆ ಮುಳುಗಾಡಿ ಮತಿಗೆಟ್ಟು ಪಂಚಾಂಗವ ಬೊಗಳುವ ಭ್ರಷ್ಟ ಮಾದಿಗರ ಮಾತು ಅಂತಿರಲಿ. ಪಂಚಾಂಗ ಕೇಳಿದ ದಕ್ಷಬ್ರಹ್ಮನ ತಲೆಯೇಕೆ ಹೋಯಿತು ? ಪಂಚಾಂಗ ಕೇಳಿದ ಪಂಚಪಾಂಡವರು ದೇಶಭ್ರಷ್ಟರಾದರೇಕೆ ? ಪಂಚಾಂಗ ಕೇಳಿದ ಶ್ರೀರಾಮನ ಹೆಂಡತಿ ರಾವಣಗೆ ಸೆರೆಯಾದಳೇಕೆ ? ಪಂಚಾಂಗ ಕೇಳಿದ ಇಂದ್ರನ ಶರೀರವೆಲ್ಲ ಯೋನಿಮಂಡಲವೇಕಾಯಿತು ? ಪಂಚಾಂಗ ಕೇಳಿದ ದ್ವಾರಾವತಿ ಪಟ್ಟಣದ ನಾರಾಯಣನ ಹೆಂಡಿರು ಹೊಲೆಮಾದಿಗರನ್ನು ಕೂಡಿದರೇಕೆ ? ಪಂಚಾಂಗ ಕೇಳಿದ ಸರಸ್ವತಿಯ ಮೂಗು ಹೋಯಿತೇಕೆ ? ಪಂಚಾಂಗ ಕೇಳಿದ ಕಾಮ ಸುಟ್ಟು ಭಸ್ಮವಾದನೇಕೆ ? ಪಂಚಾಂಗ ಕೇಳಿದ ಬ್ರಹ್ಮ ವಿಷ್ಣು ಇಂದ್ರ ಮೊದಲಾದ ಮೂವತ್ತುಮೂರುಕೋಟಿ ದೇವರ್ಕಳು ತಾರಕಾಸುರನಿಂದ ಬಾಧೆಯಾಗಿ ಕಂಗೆಟ್ಟು ಶಿವನ ಮೊರೆಯ ಹೊಕ್ಕರೇಕೆ ? ಕುರುಡ ಕುಂಟ ಹಲ್ಲುಮುರುಕ ಗುರುತಲ್ಪಕನ ಬಲವ ಕೇಳಲಾಗದು. ಶುಭದಿನ ಶುಭಲಗ್ನ ಶುಭವೇಳೆ ಶುಭಮುಹೂರ್ತ ವ್ಯತಿಪಾತ ದಗ್ಧವಾರವೆಂದು ಸಂಕಲ್ಪಿಸಿ ಬೊಗಳುವರ ಮಾತ ಕೇಳಲಾಗದು. ಗುರುವಿನಾಜ್ಞೆಯ ಮೀರಿ, ಸತ್ತರೆ ಹೊಲೆ, ಹಡೆದರೆ ಹೊಲೆ, ಮುಟ್ಟಾದರೆ ಹೊಲೆ ಎಂದು ಸಂಕಲ್ಪಿಸಿಕೊಂಬುವಿರಿ. ನಿಮ್ಮ ಮನೆ ಹೊಲೆಯಾದರೆ ನಿಮ್ಮ ಗುರುಕೊಟ್ಟ ಲಿಂಗವೇನಾಯಿತು ? ವಿಭೂತಿ ಏನಾಯಿತು ? ರುದ್ರಾಕ್ಷಿ ಏನಾಯಿತು ? ಮಂತ್ರವೇನಾಯಿತು ? ಪಾದೋದಕ ಪ್ರಸಾದವೇನಾಯಿತು ? ನಿಮ್ಮ ಶಿವಾಚಾರವೇನಾಯಿತು ? ನೀವೇನಾದಿರಿ ಹೇಳಿರಣ್ಣಾ ? ಅರಿಯದಿದ್ದರೆ ಕೇಳಿರಣ್ಣಾ. ನಿಮ್ಮ ಲಿಂಗ ಪೀತಲಿಂಗ; ನೀವು ಭೂತಪ್ರಾಣಿಗಳು. ನಿಮ್ಮ ಮನೆಯೊಳಗಾದ ಪದಾರ್ಥವೆಲ್ಲ ಹೆಂಡಕಂಡ ಅಶುದ್ಧ ಕಿಲ್ಬಿಷವೆನಿಸಿತ್ತು. ಇದ ಕಂಡು ನಾಚದೆ, ಮತ್ತೆ ಮತ್ತೆ ಶುಭಲಗ್ನವ ಕೇಳಿ, ಮದುವೆಯಾದ ಅನಂತ ಜನರ ಹೆಂಡಿರು ಮುಂಡೆಯರಾಗಿ ಹೋದ ದೃಷ್ಟವ ಕಂಡು ಪಂಚಾಂಗವ ಕೇಳಿದವರಿಗೆ ನಾಯಿ ಮಲವ ಹಂದಿ ಕಿತ್ತುಕೊಂಡು ತಿಂದಂತಾಯಿತ್ತು ಕಾಣಾ ನಿಸ್ಸಂಗ ನಿರಾಳ ನಿಜಲಿಂಗಪ್ರಭುವೆ.
--------------
ನಿರಾಲಂಬ ಪ್ರಭುದೇವ
ಇನ್ನಷ್ಟು ... -->