ಅಥವಾ

ಒಟ್ಟು 37 ಕಡೆಗಳಲ್ಲಿ , 22 ವಚನಕಾರರು , 37 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಾತಕ ಹೊಲೆಯೆಂದರಿದು ಬಿಟ್ಟಲ್ಲಿ, ಮತ್ತಾ ಗುಣ ಸ್ವೀಕರಿಸಬಹುದೆ ? ಇವೆಲ್ಲ ಅಲ್ಲಾ ಎಂದು ಬಲ್ಲತನವ ತಾನರಿದು, ಮತ್ತೆಲ್ಲರಲ್ಲಿ ಬೆರಸಬಹುದೆ ? ಒಡೆದ ಹಂಚಿಂಗೆ, ಹಿಡಿದು ಬಿಟ್ಟ ವ್ರತಕ್ಕೆ, ಮತ್ತಿವ ಒಡಗೂಡಬಹುದೆ ? ಇಂತೀ ಬಿಡುಗಡೆಯನರಿದಲ್ಲಿ, ಅನುಸರಣೆಯ ಮಾಡಿದಡೆ, ಎನ್ನೊಡೆಯ ಈಶಾನ್ಯಮೂರ್ತಿ ಮಲ್ಲಿಕಾರ್ಜುನಲಿಂಗವಾದಡೂ ಹರಶರಣರಿಗೆ ದೂರ.
--------------
ಶಿವಲೆಂಕ ಮಂಚಣ್ಣ
ಲಲನೆಯರ ನಟನೆಯೆಂಬ ಕುಟಿಲಕ್ಕೆ ಸಿಕ್ಕಿ, ಕೋಟಲೆಗೊಳದಿರ ಮರುಳು ಮಾನವ. ನಿಟಿಲತಟದಲ್ಲಿ ಮಠವ ಮಾಡಿಕೊಂಡು ನಿಶ್ಚಿಂತ ನಿರಾಳನಾಗಿರ. ಹುಸಿಯ ಮಾಯಾತಮಂಧಕೆ ದಿಟಪುಟದಿವಾಕರ ಎನ್ನೊಡೆಯ, ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭು ಕಾಣಿರೋ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಕಡಿ[ಯೆ] ಕುಳ್ಳಿರಿಸಿದಲ್ಲಿ, ಕತ್ತಿಯನೆತ್ತಿ ಹೊಡೆ[ಯೆ] ಹೊಡೆ[ಯೆ] ಬದುಕಿದವರುಂಟು, ತಲೆಯ ಕಡಲ ನಡುವೆ ಹಡಗೊ[ಡೆ]ದು ಹಲಗೆಯ ಹಿಡಿದು ತಡಿಗೆ ಸೇರಿ ಬದುಕಿದವರುಂಟು, ತಲೆಯ ಎನ್ನೊಡೆಯ ಕೂಡಲಸಂಗಮದೇವ ಬರೆದ ಬರಹವ ತೊಡೆಯಬಲ್ಲರೆ ಹರಿ ಸುರ ಬ್ರಹ್ಮಾದಿಗಳು.
--------------
ಬಸವಣ್ಣ
ಸತ್ವಕ್ಕೆ ತಕ್ಕ ಹೊರೆಯಲ್ಲದೆ, ಮತ್ತುಳಿದ ಮಾತಂಗವ ಹೊರಬಹುದೆ ? ಸತ್ವಕ್ಕೆ ತಕ್ಕ ನುಡಿಯಲ್ಲದಿರ್ದಡೆ, ಆತನ ಒಚ್ಚತಗೊಂಬರೆ ಹರಶರಣರು? ನಡೆ ನುಡಿ ಸಿದ್ಧಾಂತವಲ್ಲದೆ, ಹುಡಿಗರ ಮಾತ ಸುಡು. ಎನ್ನೊಡೆಯ ಕರೆಯಾ, ನಿಃಕಳಂಕ ಮಲ್ಲಿಕಾರ್ಜುನಾ.
--------------
ಮೋಳಿಗೆ ಮಾರಯ್ಯ
ಒಡಲ ಕಳವಳಕ್ಕೆ, ಬಾಯ ಸವಿಗೆ, ಬಯಸಿ ಉಂಡೆನಾದಡೆ ನಿಮ್ಮ ತೊತ್ತಿನ ಮಗನಲ್ಲ. ಬೇಡೆ, ಬೇಡೆ, ನಿಮ್ಮ ನಂಬಿದ ಸದ್ಭಕ್ತರ. ಅವರೊಕ್ಕುದನುಂಬೆನೆಂದಂತೆ ನಡೆವೆ. ಎನ್ನೊಡೆಯ ಕೂಡಲಸಂಗಮದೇವನೊಲ್ಲದವರ ಹಿಡಿದೆನಾದಡೆ ನಿಮ್ಮ ಪಾದದಾಣೆ.
--------------
ಬಸವಣ್ಣ
ಸಮಯದಲ್ಲಿ ಸಮ್ಮತನು ಆಚಾರದ ನೆಲೆಯನರಿದು, ಹೃದಯದ ಕತ್ತಲೆಯ ಉದಯದಲ್ಲಿಯೇ ಕಳೆದ. ಮುಟ್ಟುವುದ ಮುಟ್ಟದೆ ಕಳೆದ; ಮುಟ್ಟದುದ ಮುನ್ನವೆ ಕಳೆದ. ಅಯ್ಯಾ ಆಯ್ಯಾ ಎಂದಲ್ಲಿಯೆ ಕಲಿಯಾದ. ಕೇಸರಿಸಮ ಜೋಗ; ಐದರ ಮದಸೇನೆ ಮುರಿಯಿತ್ತು, ಎನ್ನೊಡೆಯ ಕೂಡಲಚೆನ್ನಸಂಗಯ್ಯ ಹಿಡಿವಡೆದ
--------------
ಚನ್ನಬಸವಣ್ಣ
ಕುದುರೆ- ಸತ್ತಿಗೆಯವರ ಕಂಡಡೆ ಹೊರಳಿಬಿದ್ದು ಕಾಲಹಿಡಿವರು, ಬಡಭಕ್ತರು ಬಂದಡೆ `ಎಡೆುಲ್ಲ, ಅತ್ತ ಸನ್ನಿ' ಎಂಬರು. ಎನ್ನೊಡೆಯ ಕೂಡಲಸಂಗಯ್ಯನವರ ತಡಗೆಡಹಿ ಮೂಗ ಕೊಯ್ಯದೆ ಮಾಬನೆ 414
--------------
ಬಸವಣ್ಣ
ಅಘಟಿತ ಘಟಿತನ ಒಲವಿನ ಶಿಶು ಕಟ್ಟಿದೆನು ಜಗಕ್ಕೆ ಬಿರಿದನು. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರಂಗಳಿಗೆ ಇಕ್ಕಿದೆನು ಕಾಲಲಿ ತೊಡರನು. ಗುರುಕೃಪೆಯೆಂಬ ತಿಗುರನಿಕ್ಕಿ ಮಹಾಶರಣೆಂಬ ತಿಲಕವನಿಕ್ಕಿ ನಿನ್ನ ಕೊಲುವೆ ಗೆಲುವೆ ಶಿವಶರಣೆಂಬ ಅಲಗ ಕೊಂಡು. ಬಿಡು ಬಿಡು ಕರ್ಮವೆ, ನಿನ್ನ ಕೊಲ್ಲದೆ ಮಾಣೆನು. ಕೆಡಹಿಸಿಕೊಳ್ಳದೆನ್ನ ನುಡಿಯ ಕೇಳಾ. ಕೆಡದ ಶಿವಶರಣೆಂಬ ಅಲಗನೆ ಕೊಂಡು ನಿನ್ನ ಕೊಲುವೆ ಗೆಲುವೆ ನಾನು. ಬ್ರಹ್ಮಪಾಶವೆಂಬ ಕಳನನೆ ಸವರಿ, ವಿಷ್ಣು ಮಾಯೆಯೆಂಬ ಎಡೆಗೋಲನೆ ನೂಕಿ, ಎನ್ನೊಡೆಯ ಚೆನ್ನಮಲ್ಲಿಕಾರ್ಜುನಯ್ಯ ತಲೆದೂಗಲಿ ಕಾದುವೆನು ನಾನು.
--------------
ಅಕ್ಕಮಹಾದೇವಿ
ಅಂದಣವನೇರಿದ ಸೊಣಗನಂತೆ ಕಂಡಡೆ ಬಿಡದು ತನ್ನ ಮುನ್ನಿನ ಸ್ವಭಾವವನು. ಸುಡು, ಸುಡು, ಮನವಿದು ವಿಷಯಕ್ಕೆ ಹರಿವುದು, ಮೃಡ ನಿಮ್ಮನನುದಿನ ನೆನೆಯಲೀಯದು. ಎನ್ನೊಡೆಯ ಕೂಡಲಸಂಗಮದೇವಾ ನಿಮ್ಮ ಚರಣವ ನೆನೆವಂತೆ ಕರುಣಿಸು- ಸೆರಗೊಡ್ಡಿ ಬೇಡುವೆ, ನಿಮ್ಮ ಧರ್ಮ. 34
--------------
ಬಸವಣ್ಣ
ಕಾಣಬಹುದೆ ಪರುಷದ ಗಿರಿ ಅಂಧಕಂಗೆ ಮೊಗೆಯಬಹುದೆ ರಸದ ಬಾವಿ ನಿರ್ಭಾಗ್ಯಂಗೆ ತೆಗೆಯಬಹುದೆ ಕಡವರವು ದಾರಿದ್ರಂಗೆ ಕರೆಯಬಹುದೆ ಕಾಮಧೇನು ಅಶುದ್ಧಂಗೆ ಹೊನ್ನ ಹುಳುವ ಕಂಡು ನರಿ ತನ್ನ ಬಾಲವ ಹುಣ್ಣು ಮಾಡಿಕೊಂಡಡೆ ಹೋಲಬಹುದೆ ಎನ್ನೊಡೆಯ ಕೂಡಲಸಂಗನ ಶರಣರನು ಪುಣ್ಯವಿಲ್ಲದೆ ಕಾಣಬಹುದೆ 268
--------------
ಬಸವಣ್ಣ
ಗಜ ಗಮನ, ಅಹಿತ ಶರಸಂಧಾನ, ಮಯೂರನ ಶಯನ, ಮಾರ್ಜಾಲನ ಧ್ಯಾನ, ಕಂಠೀರವನ ಲಾಗು, ಬಕಮೂರ್ತಿಯ ಅನುಸಂಧಾನ, ಅಳಿಯ ಗಂಧ ಭುಂಜನೆ, ಮಧು ಮಕ್ಷಿಕದ ಘೃತಗೊಡ ವಾಸ, ಮೂಷಕದ ದ್ವಾರಭೇದ, ಮರೆವಾಸವೈದುವ ಸಂಚ, ಚೋರನ ಕಾಹು, ಪರಿಚಾರಕನ ವೇಳೆ, ಸಾಹಿತ್ಯನ ಉಪಮೆ, ಸಂಗೀತರ ಸಂಚು, ತಾಳಧಾರಿಯ ಕಳವು, ವಾದ್ಯಭೇದಕನ ಮುಟ್ಟು, ಘ್ರಾಣನ ಹರಿತ, ಭಾವಜ್ಞನ ಚಿತ್ತ . ಇಂತೀ ನಾನಾ ಗಣಂಗಳ ಲಕ್ಷಾಲಕ್ಷಿತವ ತಿಳಿದು, ಶ್ರುತ ದೃಷ್ಟ ಅನುಮಾನ ಮುಂತಾದ ನಾನಾ ಭೇದಂಗಳಲ್ಲಿ ವಿಚಾರಿಸಿ ಕಂಡು, ನಾನಾರೆಂಬುದದೇನೆಂದು ತಿಳಿದು, ತನಗೂ ಇದಿರಿಂಗೂ ಪಡಿಪುಚ್ಚವಿಲ್ಲದೆ, ಸಿಂಧುವಿನೊಳಗಾದ ಸಂಭ್ರಮಂಗಳ ಸಂಚಾರದ ಅಂಗವೆಲ್ಲ ಹೋಗಿ ನಿರಂಗವಾದಂತೆ. ಅಂಗವಾತ್ಮನ ಸಂಗ, ಈ ಅಂಗವೆಂದು ತಿಳಿದು, ಆವ ಸ್ಥಲವನಂಗೀಕರಿಸಿದಲ್ಲಿಯೂ ಪರಿಪೂರ್ಣವಾಗಿ ಏನ ಹಿಡಿದಲ್ಲಿಯೂ ತಲೆವಿಡಿಯಿಲ್ಲದೆ ಏನ ಬಿಟ್ಟಲ್ಲಿಯೂ ಕುಳವಿಡಿಯಿಲ್ಲದೆ ಕರ್ಪುರ ಮಹಾಗಿರಿಯ ಸುಟ್ಟಡೆ ಒಕ್ಕುಡಿತೆ ಬೂದಿ ಇಲ್ಲದಂತೆ, ಚಿತ್ತನಿಶ್ಚಯವಾದ ಸದ್ಭಕ್ತ ಪರಮ ವಿರಕ್ತನ ಇರವು ಇದು. ಎನ್ನೊಡೆಯ ಚೆನ್ನಬಸವಣ್ಣನ ಹರವರಿಯ ತೆರನಿದು. ಸಾಧ್ಯ ಮೂವರಿಗಾಯಿತ್ತು , ಅಸಾಧ್ಯವಸಂಗತ. ನಿಃಕಳಂಕ ಕೂಡಲಚೆನ್ನ ಸಂಗಮದೇವರೆಂದರಿದವಂಗೆ ಅಸಾಧ್ಯ ಸಾಧ್ಯವಾಯಿತ್ತು ?
--------------
ಹಡಪದ ರೇಚಣ್ಣ
ಮುರಿಸಬೇಕು ಹೊಲೆಯರ ಕೈಯಿಂದವರ ಮನೆಯನು, ಕೆರಿಸಬೇಕು ಮಂಡೆಯನೇಳು ಪಟ್ಟಿಯ ಮಾಡಿ, ಕುಳ್ಳಿರಿಸಬೇಕು ಕತ್ತೆಯ ನಡುಬೆನ್ನ ಮೇಲೆ, ಹುಟ್ಟಿಗೆಯನುಡಿಸಬೇಕು, ಹಳೆಮರವ ಸತ್ತಿಗೆಯ ಹಿಡಿಯಬೇಕವಗೆ, ನಿಟ್ಟೊರಸಬೇಕು ನೊಸಲಕ್ಷರವ, ನಾಲಿಗೆಯ ಸರ್ರಸರ್ರನೆ ಸೀಳಬೇಕು, ಎನ್ನೊಡೆಯ ಮಹಾಮಹಿಮ ಸೊಡ್ಡಳಂಗೆ ಅನ್ಯದೈವ ಸರಿಯೆಂಬ ಕುನ್ನಿಮಾನವನ.
--------------
ಸೊಡ್ಡಳ ಬಾಚರಸ
ಅಳಿಸಂಕುಲವೆ, ಮಾಮರವೆ, ಬೆಳುದಿಂಗಳೆ, ಕೋಗಿಲೆಯೆ ನಿಮ್ಮನೆಲ್ಲರನೂ ಒಂದ ಬೇಡುವೆನು. ಎನ್ನೊಡೆಯ ಚೆನ್ನಮಲ್ಲಿಕಾರ್ಜುನದೇವ ಕಂಡಡೆ ಕರೆದು ತೋರಿರೆ.
--------------
ಅಕ್ಕಮಹಾದೇವಿ
ಅಯ್ಯಾ, ಶಿವಭಕ್ತರು ನುಡಿವಲ್ಲಿ ಜಾಣತನದಿಂದ ನುಡಿವರು. ನೀಡುವಲ್ಲಿ ಭೇದದಿಂದ ನೀಡುವರು. ಕೊಡುವಲ್ಲಿ ಸತ್ಪಾತ್ರಕ್ಕೆ ಕೊಡುವರು. ಬಿಡುವಲ್ಲಿ ಶರಣಗೋಷಿ*ಯ ಬಿಡುವರು. ಪೊಡವಿಯೊಳಿವರ ಭಕ್ತರೆನ್ನಬಹುದೆ ? ಅದಂತಿರಲಿ, ಎನ್ನೊಡೆಯ ಬಸವಪ್ರಿಯನಡಿಗಳ ನೆನೆವ ಶರಣ ಲಿಂಗೈಕ್ಯರು ಮೆಡುವ ಪಡುಗ ಪಾದರಕ್ಷೆಯ ಕಾಯಿರಿಸಯ್ಯ, ಚೆನ್ನಬಸವಣ್ಣಾ.
--------------
ಹಡಪದ ಅಪ್ಪಣ್ಣ
ಮಾತಿನ ಮಾತಿನ ಗೀತಾಂತದಲ್ಲಿ ಜಾಣನಾಗಿರಬಹುದು. ಸ್ತೋತ್ರದ .. ..ಪರಿಣತೆಯಲ್ಲಿ ಜಾಣನಾಗಿರಬಹುದು. ಅಂತರಂಗ ಬಹಿರಂಗವಂತನಾಗಿರಬಹುದು. ಕಾಂತೆಯರ ರತಿಗುಣವರ್ಜಿತರಾಗಿರಬಹುದು. ಕ್ಷೇತ್ರವಾಸಿಗಳಾಗಿರಬಹುದು, ತನುನಿಗ್ರಹ ಮಾಡಬಹುದು. ವೈವಾಸದ ಕೊಂಬೆ ಕಿಂಚಿತ್ತಾಗಿ ಹೊದೆಯಬಹುದು. ಹಿಡಿದು.. ..ಮುಚ್ಚಿ ಪೂರೈಸದಿರ್ದಡೆ, ಎನ್ನೊಡೆಯ ಕುಂಭೇಶ್ವರನ ಶರಣರ ನಚ್ಚಿನ ಮಚ್ಚಿನ ಇಚ್ಛಾವಾಸವೃತ್ತಿಯಾದ ಕುಂಭಾರ ಗಂಡನಲ್ಲಿ .. ..ಲದ್ಗುಗವು.
--------------
ಹೊಡೆಹುಲ್ಲ ಬಂಕಣ್ಣ
ಇನ್ನಷ್ಟು ... -->