ಅಥವಾ

ಒಟ್ಟು 51 ಕಡೆಗಳಲ್ಲಿ , 12 ವಚನಕಾರರು , 32 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮತ್ತೆಯು ಸಮಸ್ತವಾದ ಕರ್ಮಕೃತ ಶರೀರಿಗಳಿಗೆ ಭೋಗವುಳ್ಳುದೆ ತಪ್ಪದೆಂಬೆಯಾದಡೆ, ಶರೀರಗಳಿಗಾಗಲಿ ಪ್ರೇರಕಹರ್ತುದಿಂದಲ್ಲವೆಂಬುದೆ ಪ್ರಮಾಣ. ಶಿವ ಪ್ರೀತ್ಯರ್ಥವಾದಗ......ಳು ಕರ್ತವನೆಯ್ದುವವೆಂಬುದಕ್ಕೆ ಪ್ರಮಾಣವು ಎನಲು, ಪಿತೃವಧೆಯಿಂದ ಚಂಡೇಶ್ವರನು ಅನುಪಮ ಗಣಪದವನೈದಿದನು. ಸಿರಿಯಾಳನು ತನ್ನ ಮಗನನೆ ಹತಿಸಿ ಪುರಜನ ಬಾಂಧವರುಸಹಿತ ಶಿವಲೋಕವನೈದನೆ ? ಕಾಲಾಂತರದಲ್ಲಿ ಮನುಚೋಳನು ಪುತ್ರವಧೆ ಭ್ರೋಣಹತ್ಯವನು ಮಾ ಎಸಗಿ, ತನುವರಸಿ ಶಿವಲೋಕವೆಯ್ದನೆ ? ಅಯ್ಯೋಮ ರಾಜನು ವಿಪ್ರೋತ್ತಮನನೆ ವದ್ಥಿಸಿ ಲಿಂಗ ಗರ್ಭಾಂತರವನೆಯ್ದಿದನೆ ? ಅಂದು ಜಗವರಿಯಲದಂತಿರಲಿ. `ಸ್ವರ್ಗಕಾಮೋ ಯಜೇತ'ಯೆಂಬ ಶ್ರುತಿಪ್ರಮಾಣಿಂ ದಕ್ಷ ಪ್ರಜಾಪತಿ ಕ್ರಿಯೆಗಳಿಗೆ ಅಧ್ವರ ಕರ್ಮದಿಂದ ಶಿರಚ್ಛೇದಿಯಾಗಿ ಕುರಿದಲೆ ಪಡೆಯನೆ ? ಬರೀ ಅಚೇತನ ಕರ್ಮಂಗಳು ಕೊಡಬಲ್ಲವೆ ಸದ್ಗತಿ ದುರ್ಗತಿಗಳನು ? ಕರ್ತು ಪ್ರೇರಕ ಶಿವನಲ್ಲದೆ, `ಮನ್ನಿಮಿತ್ತಕೃತಂ ಪಾಪಮಪೀಡಾವಚಯೈ ಕಲ್ಪ್ಯತೇ' ಎನಲು, ಇಂತೀ ಚಿಟಿಮಿಟಿವಾದವೆಂಬುದು ಕೊಳ್ಳವು ಕೇಳಾ. ಶಿವಭಕ್ತಿಯೆಂಬ ಪ್ರಚಂಡ ರವಿಕಿರಣದ ಮುಂದೆ ಸಾಮಾನ್ಯಕರ್ಮವೆಂಬ ತಮ ನಿಲುವುದೆ ? ಮರುಳೆ ಆ `ವೋರಾಜಾನಮಧ್ವರಸ್ಯ ರುದ್ರಗಂ' ಎನಲು, `ಇಂದ್ರ ಉಪೇಂದ್ರಾಯ ಸ್ವಾಹಾ' ಎನಬಹುದೆ ? ಪ್ರಥಮಾಹುತಿಯಲ್ಲಿಯೆಂದು ಬೆಳಲು ಭಸ್ಮವಹವಾ ಆಹುತಿ ಫಲಂಗಳು. ಆದಡೆ ಕೆಳೆಯಾ ಶಿವಭಕ್ತಿಬಾಹ್ಯವಾದ ಪಾಪಕರ್ಮಕೆ ಬಂದ ವಿಪರೀತ ಪ್ರಾಪ್ತಿಗಳು, ವಿಷ್ಣು ಸುರರಿಗೆ ಹಿತವಾಗಿ ಭೃಗು ಸತಿಯ ಶಿರವನರಿದಡೆ, ಕರ್ಮ ದಶಜನ್ಮಂಗಳಿಗೆ ತಂದು, ಹೀನಪ್ರಾಣಿಗಳ ಯೋನಿಯಲ್ಲಿ ಬರಸಿದುದನರಿಯಿರೆ. ಮತ್ತೆಯೂ ಬಾಲೆಯ ಕೊಂದ ಕರ್ಮ ಕೃಷ್ಣಾವತಾರದಲ್ಲಿ ವ್ಯಾಧನಿಂದ ತನ್ನ ಕೊಲ್ಲಿಸಿತ್ತು. ಮತ್ತೆಯೂ ಬಲಿಯ ಬಂದ್ಥಿಸಿದ ಕರ್ಮ ಮುಂದೆ ನಾಗಾರ್ಜುನನಿಂದ ಕಟ್ಟಿಸಿತ್ತು, ಕೌರವಕುಲದ ಕೊಲಿಸಿದ ಕರ್ಮಫಲ ತನ್ನ ಯಾದವ ಕುಲವ ಕೊಲಿಸಿತ್ತು. ಮತ್ತಾ ಲೀಲೆಯಿಂದ ಮತ್ತೆಯೂ ಪರ್ವತನಾರಂದರ ಸತಿಯ ಬಲುಮೆ, ಇಂತೆ ಕೊಂಡ ಕರ್ಮಫಲ ರಾವಣಗೊಪ್ಪಿಸಿತ್ತು. ತನ್ನ ಪ್ರಿಯತಮೆಯೆನಿಸುವ ಸೀತಾಂಗನೆಯ ಇನ್ನು ಮಿಕ್ಕಿನ ದೇವದಾನವಮಾನವರನೊಕ್ಕಲಿಕ್ಕಿಯಾಡದಿಹುದೆಯಾ ಕರ್ಮವು. ಆದಡಾ ಕರ್ಮವು ಸ್ವತಂತ್ರವೋ, ಪರತಂತ್ರವೋ ಎಂಬೆಯಾದಡೆ, ಆ ಕರ್ಮ ಈಶ್ವರಾಜೆÕಯಲ್ಲದ ಕರ್ಮಿ ತಾನಾದಂತೆ, ಇದಂ ಗುರು ಕನಿಷ್ಠಾಧಮಮಧ್ಯಮ ಕ್ರಿಯೆಗಳಿಂ ವಿದ್ಥಿಸಿದ ವಿದ್ಥಿಗಳಿಂ, ವಿದ್ಥಿನಿಷೇಧ ಕರ್ಮಂಗಳೆಂಬ ಸಮೂಹಕರ್ಮಗಳಿಗೆ ತಾರತಮ್ಯವಿಡಿದು, ಪುಣ್ಯಪಾಪಂಗಳ ನಿರ್ಮಿಸಿ, ಅಜಾÕನಿಪಿತವ ಮಾಡಿದನೀಶ್ವರನು. ನಾಕನರಕಾದಿಗಳೆ ಸಾಧನವಾಗಿ, ಕರ್ಮಕರ್ತನನೆಯ್ದುವರೆ, ಕರ್ಮ ಕರ್ತನು ಈಶ್ವರನಾದಡೆ ಕರ್ಮನಿ ಶ್ವರಾಜೆÕಯಿಂದೈದುವಡೆ, ಆ ಕರ್ಮ ಕರ್ತನಹ ಈಶ್ವರನನು ಬ್ರಹ್ಮನ ಮೇಲ್ದಲೆಯನರಿದುದಲಾ. ಆ ಕರ್ಮ ಆತನನೆಯ್ದುದುಮೆನಲು, ಅಹಂಗಾಗದು. ವಿರಿಂಚನು ರಜೋಗುಣಹಂಕಾರದಿಂ ಸುರ ಕಿನ್ನರ ಗರುಡ ಗಾಂಧರ್ವ ಸಿದ್ಧ ವಿದ್ಯಾಧರರು ತಮ್ಮೊಳು ಬ್ರಹ್ಮವಾದದಿಂ ಸಂಪಾದಿಸಿ ತಿಳಿಯಲರಿಯದೆ, ಬ್ರಹ್ಮನಂ ಬೆಸಗೊಳಲು, ಬೊಮ್ಮವಾನೆನಲು, ಆ ಕ್ಷಣಂ ಗಗನದೊಳು ತೋರ್ಪ ಅತ್ಯನುಪಮ ದೇದೀಪ್ಯಮಾನ ತೇಜಃಪುಂಜ ಜ್ಯೋತಿರ್ಲಿಂಗಾಕಾರಮಂ ತೋರಲಾ ಬ್ರಹ್ಮೇಶ್ವರರು ಆ ವಸ್ತುನಿರ್ದೇಶಮಂ ಮಾಳ್ಪೆನೆಂದು ಪಿತಾಮಹನು ಚತುಸ್ಶಿರ ಮಧ್ಯದಲ್ಲಿ ಮೇಲ್ದಲೆಯಂ ಪುಟ್ಟಿಸಿ, ||ಶ್ರುತಿ|| `ಋತಂ ಸತ್ಯಂ ಪರಂ ಬ್ರಹ್ಮ'ಯೆಂದು ಋಗ್ಯಜುಸ್ಸಿನಲ್ಲಿ ನುತಿಸುತ್ತಂ ಇರಲು, ಬ್ರಹ್ಮಾದ್ಥಿಪತಿ ತತ್ಪರ ಬ್ರಹ್ಮಶಿವ ಇತಿ ಒಂ, ಇತಿ ಬ್ರಹ್ಮಾ ಇತಿ. ಇಂತೀ ಶ್ರುತಿ ಸಮೂಹವೆಲ್ಲವು ಶಿವನನೆ ಪರಬ್ರಹ್ಮವೆಂದು ಲಕ್ಷಿಸಿ, ಮತ್ತತನದಿಂ ಮರದೂ ಅಬ್ರಹ್ಮವೆನಲುಂ ದ್ರುಹಿಣನ ಮೇಲ್ದಲೆಯಂ ಅಪ್ರತಿಮ ತೇಜೋಮಯ ಲೀಲಾಲೋಲಾ ಶೀಲ ದುಷ್ಟನಿಗ್ರಹಿ ಶಿಷ್ಟ ಪ್ರತಿಪಾಲಕನನೆಯಾಕ್ಷಣಂ, ಘನರೌದ್ರ ಕೋಪಾಟೋಪಿಯೆನಿಸುವ ಕಾಲರುದ್ರಂ ಸಮೀಪಸ್ಥನಾಗಿರ್ದು, ಜ್ಯೇಷ್ಠಾ ತರ್ಜನಾಂಗುಲಿ ನಖಮುಖದಿಂ ಛೇದಿಸಲು, ವಿದ್ಥಿ ಭಯಾತುರನಾಗಿ `ಒಂ ನಮೋ ದೇವಾಯ ದೇವ್ಯೈ ನಮಃ, ಸೋಮಾಯ ಉಮಾಯೈ ನಮಃ' ಎಂದು ಸೋಮಾಷ್ಟಕದಿಂ ಸ್ತುತಿಸಿ, ನಮಿಸಿಯಜಿಸಿ ಮೆಚ್ಚಿಸಿ, ಸ್ವಾಮಿ ಸರ್ವೇಶ್ವರ, ಯ್ಯೋಮಕೇಶ, ದೇವದೇವ ಮಹಾಪ್ರಸಾದ. ಈ ಶಿರಮಂ ಬಿಸಾಟದಿರಿ, ಬಿಸಾಟಲು ಪುರತ್ರಯ ಜಗಮಳಿಗುತ್ತಂ ನಿಮಿತ್ತಂ ಪರಮ ಕೃಪಾನಿದ್ಥಿ ಪರಬ್ರಹ್ಮ ಪರಂಜ್ಯೋತಿ ಪರಮೇಶ್ವರ ಪರಮಭಟ್ಟಾರಕ ಪರಾತ್ಪರತರಸದಕ್ಷರ ಚಿನ್ಮೂರ್ತಿ ಸ್ವಯಂಭೋ ಸ್ವಾತಂತ್ರೇಶ್ವರಾಯೆನುತ ಕೀರ್ತಿಸುತ್ತಿರಲು, ಪರಬ್ರಹ್ಮ ನಿರೂಪದಿಂ ಕಾಲರುದ್ರನ ಕಪಾಲಮಂ ಧರಿಸಿದನಂದು. ಇನ್ನೆಮಗಿದೆ ಮತವೆಂದು ಸರ್ವದೆ ತಾ ಗರ್ವ ಕಂಡೂಷಮಂ ಉರ್ವಿಯೊಳೀಗಮೆ ತೀರ್ಚಿಪೆನೆಂದು ಪಿಡಿದು ನಡೆದಂ ಬ್ಥಿP್ಷ್ಞಟನಕಂದು. ಅಹಲ್ಯೆ ಸಾಯಿತ್ತಿದು, ಕರ ಹೊಸತು ಇನಿತರಿಂದ ಕಾಲರುದ್ರಂಗೆ ಬ್ರಹ್ಮೇತಿಯಾಯಿತ್ತೆಂಬ ಕರ್ಮವಾದಿ ಕೇಳಾದಡೆ. ||ಶಾಮಶ್ರುತಿ|| `ತ್ವಂ ದೇವೇಷು ಬ್ರಾಹ್ಮಣಾಹ್ವಯಃದುನುಷ್ಯೋಮನುಷ್ಯೇಮ ಬ್ರಾಹ್ಮಣಾಮುಪದಾವತ್ಯುಪದಾರತ್ಯಾ' ಎನಲು, `ಬ್ರಾಹ್ಮಣೋ ಭಗವಾನ್ ರುದ್ರಃ' ಎನಲು, `ಕ್ಷತ್ರಿಯಃ ಪರಮೋ ಹರಿಃ' ಎನುತಿರಲು, `ಪಿತಾಮಹಸ್ತು ವೈಶ್ಯಸಾತ್' ಎನಲು, ಬ್ರಾಹ್ಮಣೋತ್ತಮ ಬ್ರಾಹ್ಮಣಾದಿ ಪತಿ ಪರಬ್ರಹ್ಮವಿದ್ದಂತೆ. ತಾನೆ ಪರಬ್ರಹ್ಮಮೆನಲಾ ವಿದ್ಥಿಯ ಶಿಕ್ಷಿಪದು ವಿದಿತವಲ್ಲದೆ ನಿಷೇಧವಲ್ಲ. ಅದೆಂತೆನಲು, ಭೂಚಕ್ರವಳಯದೊಳು ಭೂಮೀಶನು ಅನ್ಯಾಯಗಳ ಶಿಕ್ಷಿಸಿದ ಭೂರಕ್ಷಣ್ಯವು, ಲೋಕಹಿತವಲ್ಲದೆ ದೋಷ ಸಾಧನಮೆಯೆಲ್ಲಾ, ಪಾಪಿಗೆ ತಕ್ಕ ಪ್ರಾಯಶ್ಚಿತ್ತಮೆಂದುಂಟಾಗಿ. ಇದು ಕಾರಣ, ಶಿಕ್ಷಯೋಗ್ಯನ ಶಿಕ್ಷಿಸಿದವದ ದೋಷವಿಲ್ಲೆಂದು ಭಾಟ್ಠ(?) ದೊಳೊಂದು ಪಕ್ಷಮಿರೆ, ಮತ್ತಮದಲ್ಲದೆ, ಅದೊಮ್ಮೆ ಹತ್ತುತಲೆಯವನಂ ಅತ್ಯುಗ್ರದಿಂ ವಂದಿಸಿದ ಶ್ರೀರಾಮಂಗೆ ಬ್ರಹ್ಮಹತ್ಯಾ ಬ್ರಹ್ಮಕರ್ಮ ವಿದ್ಯಾಬ್ರಹ್ಮರಿಂದಾವಾವ ಪ್ರಾಯಶ್ಚಿತ್ತದಿಂತೆಮ್ಮನೆ ಕೆಡದಿರಲು, ಆ ರಾಮಂ ಆ ರಾವಣಹತ ದೋಷನಿರುಹರಣಕ್ಕಾವುದು ಕಾಣದಿರಲು, ಶಂಭುಪೌರಾಣಿಕನೆಂಬ ನಾಮವಂ ತಾಳ್ದು, ಶಿವಂ ರಾಮಂಗೆ ಪ್ರತ್ಯಕ್ಷಮಾಗಿ, ಈ ದೋಷಕ್ಕೆ ಲಿಂಗಪ್ರತಿಷ್ಠೆಯ ನಿರೋಹರಣಮೆಂದರುಪಿ, ಅರಿದಾ ರಾಮಂಗಂ ಗಂಧಮಾದ ಪರ್ವತವೇ ಆದಿಯಾಗಿ, ಅದನು ಕೋಟೆಯ ಅವದ್ಥಿಯಾಗಿ ಶಿವಲಿಂಗಪ್ರತಿಷ್ಠೆಯಂ ಮಾಡೆ, ರಾಮೇಶ್ವರಲಿಂಗಮೆನಿಪ್ಪ ನಾಮಾಂಕಿತದಿಂ ತಕವಕ ಮಿಗೆವರಿದು ಸ್ವಾತ್ವಿಕಭಕ್ತಿಭಾವದಿಂದರ್ಚಿಸಿ ಸ್ತುತಿಸಿ, ಭೂವಳಯದೊಳೆಲ್ಲಂ ಪ್ರದಕ್ಷಿಣ ಮುಖದಿಂ ಶಿವಲಿಂಗಾಲಯಮನೆತ್ತಿಸಿ, ಅಂತಾ ಸಹಸ್ರಾವದ್ಥಿಯೆನಿಸುವ ದಶಗ್ರೀವ ವಧೆಯಂ ಪರಿಹರಿಸಿದ ಹಾಗೆ, ಶ್ರೀಮನ್ಮಹಾದೇವನೂ ದೇವಾದಿದೇವನೂ ದೇವಚಕ್ರವರ್ತಿ ದೇವಭಟ್ಟಾರಕನೂ ದೇವವೇಶ್ಯಾಭುಜಂಗನೂ ಸರ್ವದೇವತಾ ನಿಸ್ತಾರಕನೂ ಸರ್ವದೇವತಾ ಯಂತ್ರವಾಹಕನೂ ಒಂದಾನೊಂದೆಡೆಯಲ್ಲಿ ಮಹಾದೇವೇಶ್ವರನು ರುದ್ರೇಶ್ವರನು ಈಶ್ವರೇಶ್ವರನು ಶಂಕರೇಶ್ವರನೆನಿಪ ನಾಮಂಗಳಿಂ, ಭೂವಳಯದೊಳು ಲಿಂಗಪ್ರತಿಷ್ಠೆಯಂ ಬ್ರಹ್ಮಶಿರಚ್ಛೇದನ ನಿಮಿತ್ಯನಂ ಮಾಡಿದುದುಳ್ಳಡೆ, ಹೇಳಿರೆ ಕರ್ಮವಾದಿಗಳು. ಅಂತುಮದಲ್ಲದೆಯುಂ ಆ ಉಗ್ರನಿಂದಂ ಪಿತಾಮಹಂ ಅವದ್ಥಿಗಡಿಗೆ ಮಡಿವುದಂ ಕೇಳರಿಯಿರೆ. ಅದಲ್ಲದೆಯುಂ, ದP್ಷ್ಞಧ್ವರದೊಳಾ ದಕ್ಷ ಪ್ರಜಾಪತಿಯ ಶಿರವನರಿದು, ಕರಿಯದಲೆಯನೆತ್ತಿಸಿದ. ಅದಲ್ಲದೆಯುಂ ಸುತೆಗಳುಪಿದ ವಿರಂಚಿ ಹತಿಸಿದಂದು, ಅದಲ್ಲದೆಯುಂ ಸಮಸ್ತದೇವತೆಗಳ ಆಹಾರ ತೃಪ್ತಿಗೆ ಬೇಹ ಅಮೃತತರನಂ ಚರಣಾಂಗುಷ್ಠದಿಂದೊರಸಿದಂದು, ಅದಲ್ಲದೆಯುಂ ವಿಷ್ಣು ತಾನೆಯೆನಿಪ ವಿಶ್ವಕ್ಸೇನನ ತ್ರಿಶೂಲದಿಂದಿರಿದೆತ್ತಿ ಹೆಗಲೊಳಿಟ್ಟಂದು, ಅದಲ್ಲದೆಯುಂ ಮತ್ಸ್ಯ ಕೂರ್ಮ ವರಾಹ ನಾರಸಿಂಹ ತ್ರಿವಿಕ್ರಮಾದಿಗಳಂ ಮುಂದುವರಿದು ಕೊಂದಂದು ಅದಲ್ಲದೆಯುಂ ದೇವಿದ್ವಿಜರಿಗೆ ಗುರುವೆನಿಸುವ ಪಾವಕನ ಏಳು ನಾರಿಗೆಗಳ ಕೀಳುವಂದು, ಅದಲ್ಲದೆಯುಂ ಯಜÕವಾಟದೊಳು ಪ್ರಾಜÕನೆನಿಸುವ ಪೂಶಾದಿತ್ಯನ ಹಲ್ಲ ಕಳದು, ಭಾಗಾದಿತ್ಯನಂ ಮೀಂಟಿ ವಾಣಿಯ ಮೂಗಂ ಮಾಣದೆ ಕೊಯ, ದೇವಮಾತೃಕೆಯರ ದೊಲೆ ನಾಶಿಕವ ಚಿವುಟಿದಂದು, ಅದಲ್ಲದೆಯುಂ ಬ್ರಹ್ಮಾಂಡಕೋಟಿಗಳನೊಮ್ಮೆ ನಿಟಿಲತಟನಯನಂ ಲಟಲಟಿಸಿ ಶೀಘ್ರದಿಂದ ಸುಡಲು, ಸುರಾಸುರ ಮುನಿನಿವಹ ಹರಿಹಿರಣ್ಯಗರ್ಭರು ಶತಕೋಟಿ ಹತವಾದಂದು, ಪ್ರೊರ್ದದಾ ಬ್ರಹ್ಮಹತ್ಯಂ ನಿರ್ಧರಮಾಗಿ ಬೊಮ್ಮನ ಮೇಲ್ದಲೆಯೊಂದ ಚಿವುಟಿದುದರಿಂದಂ ಒಮ್ಮೆಯ ಶೂಲಪಾಣಿಗೆ ಬ್ರಹ್ಮೇತಿಯಾದುದತಿಚೋದ್ಯ ಚೋದ್ಯ. ಅವಲ್ಲದೆಯೂ ಬ್ರಹ್ಮ ಸಾಯನು. ಅಂಗಹೀನಮಾದುದಲ್ಲದೆ ಹೋಗಲಾ ಸಾಮಾನ್ಯ ಚರ್ಚೆ ಕರ್ಮಗತ ಕರ್ಮಿಯೆನಿಸುವ ನಿನ್ನ ಕರ್ಮವಾದವೆಲ್ಲಿಗೂ ಸಲ್ಲದು. ಬ್ರಹ್ಮಮಸ್ತಧಾರಣ ಲೀಲಾಲೋಲ ಶೀಲಬ್ರಹ್ಮೇಶ್ವರ ಪರಬ್ರಹ್ಮ ಶ್ರೀಮನ್ಮಹಾದೇವನ ನಾಮಕೀರ್ತನ ಮುತ್ರದಿಂದು ಬ್ರಹ್ಮಹತ್ಯಕೋಟಿಗಳುಂ ಮಹಾಪಾತಕವಗಣಿತಂ ನಿರಿಗೆಣೆಯಾದಕೂಲಮಂ ಭರದೊಳನಲ ಗ್ರಹಿಸಿದಂತಾಗುಮೆನೆ. ಬ್ರಹ್ಮ ಪಂಚಬ್ರಹ್ಮಮೆನಲು ಬ್ರಹ್ಮಪಾಪಕಾಶಿಯೆನಲು, ಶಿವಲಿಂಗ ದರ್ಶನ ಮಾತ್ರ ಬ್ರಹ್ಮಹತ್ಯವಳಿವವೆನಲು, ಆ ಶಿವನೆ ಬ್ರಹ್ಮಹತ್ಯವೆ ಇದುಯೆಂಬುದು ಮೊಲನ ಕೋಡಿನಂತೆ. ಇದು ಕಾರಣ, ಕರ್ಮ ಶಿವನಾಜೆÕವಿಡಿದು ಕರ್ಮಿಯ ಗ್ರಹಿಸೂದು. ಕರ್ಮಸಾರಿಯಲಿ ಕರ್ಮ ನಿರ್ಮಲಕರ್ಮ ಕಾರಣ ಕರ್ತೃವೆಂದರಿಯದಡೆ, ಎಲೆ ಕರ್ಮವಾದಿ, ನಿನಗೆ ಗತಿ ಉಂಟೆಂದುದು, ಬಸವಪ್ರಿಯ ಕೂಡಲಚೆನ್ನಸಂಗನ ವಚನ. || 65 ||
--------------
ಸಂಗಮೇಶ್ವರದ ಅಪ್ಪಣ್ಣ
ಸುರರೆಲ್ಲಾ ಮೇಣು ಸತ್ಯಕವಪ್ಪ ದ್ವಿಜರು ತಿರಿಯಕ್ಕಾಗಿ ವಿಭೂತಿಯ ಧರಿಸಿ ಇಹವರು, ನಿಷ್ಟಿಯರೆಲ್ಲಾ ಮೇಣು ಪಟ್ಟವರ್ಧನರು. ಬಟ್ಟಿತ್ತಾಗಿಯೆ ಬೊಟ್ಟನಿಟ್ಟು ಇಹವರು, ಸಿದ್ಧಾಯವ ತೆತ್ತು ಬಿತ್ತಿಯೆಂಬ ಒಕ್ಕಲಿಗರಾದವರು. ಅರ್ಧಚಂದ್ರಾಕೃತಿಯ ಗಂಧದವರು ಕೀಳುಜಾತಿಗಳಯ್ಯಾ. ನೀಳಗಂಧದವರೆಂದು ಹೇಳುವದು ಶೈವದೊಳಗಣ ವಿಭೂತಿಯ ಕಲ್ಪ. ಒಂ ತ್ರಿಪುಂಡ್ರಂ ಸುರವಿಪ್ರಾಣಾಂ ವರ್ತುಳಂ ನೃಜವೈಶ್ಯಯೊಃ | ಅರ್ಧಚಂದ್ರಂತು ಶೂದ್ರಾಣಾಂ ಅನ್ಯೇಷಾಮೂಧ್ರ್ವ ಪುಂಡ್ರಕಂ || ಎಂಬ ವಚನವಿಡಿದು, ಬತ್ತಲೆಗೊಂಬ ಮಾತಿನಲ್ಲಿ, ಮೆಚ್ಚ ಸೊಡ್ಡಳ.
--------------
ಸೊಡ್ಡಳ ಬಾಚರಸ
ವೇದವೆಂಬುದು ವೇದ್ಯರಿಗಲ್ಲದೆ ಸಾಧ್ಯವಲ್ಲ. ಅದೆಂತೆಂದಡೆ : ಬಿಂದು ವ್ಯಂಜನ ಗುರು ಲಘು ಸಮಾಸ ವಿಭಕ್ತಿಯ ನೇಮ ಬೀಜಾಕ್ಷರ ಐವತ್ತೆರಡರ ಭೇದದೊಳಗಲ್ಲದೆ, ಇಂತಿವೆಲ್ಲವೂ ಒಂದರಲ್ಲಿ ಹುಟ್ಟಿ, ಒಂದರಲ್ಲಿ ಬೆಳೆದು, ಒಂದರಲ್ಲಿ ಲಯವಹ ಕಾರಣ, ಇಂತೀ ವೇದಿಗಳೆಲ್ಲರೂ ವೇದಾಂತ ಸಿದ್ಧಾಂತದನುವನರಿಯದೆ, ಯಾಗವ ಮಾಡಿಹೆವೆಂದು ತಿಲ ಘೃತ ಸಮಿದೆ ಮೊದಲಾದ ಅಜಹತ ದಿಗ್ಭಂಧನಂಗಳಲ್ಲಿ ಪ್ರವರ್ತನ ಗ್ರಹಂಗಳಲ್ಲಿ ಕರ್ಮವ ಮಾಡಿ, ಅಗ್ನಿಗಾಹುತಿ ಕೊಟ್ಟಲ್ಲಿ , ಆತ ವೇದಾಂತನೆ ಬಲುರೋಗಾಂತನಲ್ಲದೆ ? ಇನ್ನು ವೇದಾಂತಸಿದ್ಧಿಯ ಕೇಳಿರೊ : ಪೂರ್ವದಲ್ಲಿ ಹುಟ್ಟುವದನರಿದು, ಮಧ್ಯದಲ್ಲಿ ಬೆಳೆವುದ ನಿಧಾನಿಸಿ, ಉತ್ತರದಲ್ಲಿ ಕಟ್ಟಕಡೆ ಎಂಬುದ ವಿಚಾರಿಸಿ ಲಕ್ಷಿಸಿ, ಇಂತೀ ತ್ರಿವಿಧದ ಭೇದವ ಕಿತ್ತುಹಾಕಿ, ಒಂ ಎಂಬ ಅರ್ಥವ ತಿಳಿದು, ನಯೆಂಬ ನಕಾರಮಂ ತಿಳಿದು, ನಾನಾರೆಂಬುದ ಭಾವಿಸಿ, ಮಯೆಂಬ ಮದರೂಪಂ ವರ್ಜಿಸಿ, ಶಿಯೆಂಬ ಶಿಕಾರವ ಸ್ವೀಕರಿಸಿ, ಯಯೆಂಬ ಯಕಾರವ ನಾಲ್ಕರಲ್ಲಿ ಏಕೀಕರಿಸಿದ ಮತ್ತೆ , ವೇದವೇದ್ಯನು ನೋಡಾ, ಲಲಾಮಬ್ಥಿಮಸಂಗಮೇಶ್ವರಲಿಂಗವು.
--------------
ವೇದಮೂರ್ತಿ ಸಂಗಣ್ಣ
ನಾನಾ ಜನ್ಮಂಗಳ ತಿರುಗಿ ಮಾನವ ಜನ್ಮಕ್ಕೆ ಬಂದು ಲಿಂಗೈಕ್ಯನಾಗಿರುವುದೇ ಚಂದ. ಶಾಸ್ತ್ರಂಗಳ ಓದಿ ಸಂಪಾದನೆಯ ಮಾಡಿ ಹೇಳಿ ಕೇಳುವ ಅಣ್ಣಗಳಿರಾ ಕೃತಯುಗದಲ್ಲಿ ಹನ್ನೆರಡು ಭಾರ ಜ್ಯೋತಿರ್ಲಿಂಗವನು ಬ್ರಹ್ಮರ್ಷಿಗಳು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿ ಆದಿಗಳು ಇರುವನಂತ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೊ. ತ್ರೇತಾಯುಗದಲ್ಲಿ ಲಕ್ಷ ಲಿಂಗವನು ನಮ್ಮ ರವಿಕುಲ ರಘುರಾಮರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿದ ಲಿಂಗವು ರವಿ ಶಶಿಯಾದಿಗಳು ಇರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡಿದ್ದವು ಕಾಣಿರೋ. ದ್ವಾಪರಯುಗದಲ್ಲಿ ಸೋಮವಂಶಿಕರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿವ ಲಿಂಗವು ಗ್ರಾಮಕ್ಕೆ ಒಂದು ಕಲ್ಕೇಶ್ವರನಾಗಿ ರವಿ ಶಶಿಗಳಿರುವನಕ ಸ್ಥಾವರಲಿಂಗವಾಗಿ ಸ್ಥಾಪ್ಯಗೊಂಡವು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕೃತ, ತ್ರೇತಾ, ದ್ವಾಪರ ಇವು ಮೂರು ಯುಗದಲ್ಲಿ ಬ್ರಹ್ಮ ಕ್ಷತ್ರಿಯರು ತಮ್ಮ ವೇದಮಂತ್ರದಿಂದ ನಿರ್ಮಿತವ ಮಾಡಿ, ಇದ್ದ ಲಿಂಗವನು ಅತಿಗಳೆದು ಇಷ್ಟಲಿಂಗಯೆಂದು ಅದಕ್ಕೆ ಪಾದ್ಯ ತೀರ್ಥ ಪ್ರಸಾದವನು ಅರ್ಪಿಸಿ, ಹುಟ್ಟಿದ ಮನುಜರೆಲ್ಲ ತಲೆತಲೆಗೊಂದು ಲಿಂಗವನು ಕಟ್ಟಿಕೊಂಡಿದ್ದರೇನಯ್ಯ, ಆ ಲಿಂಗಕ್ಕೆ ನಿಷ್ಕ್ರಿಯವಾಗಲಿಲ್ಲ. ಕಾರ್ಯಕ್ಕೆ ಬಾರದೆ ಅಕಾರ್ಯವಾಗಿ ಹೋಗಿತ್ತು ಕಾಣಿರೋ. ಅದು ಎಂತೆಂದರೆ : ಕೃತಯುಗದಲ್ಲಿ ಹುಟ್ಟಿದ ಮನುಜರು ಸುವರ್ಣಲಿಂಗವನು ಪೂಜೆಯ ಮಾಡಿಪ್ಪರು. ಆ ಸುವರ್ಣವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ತ್ರೇತಾಯುಗದಲ್ಲಿ ಹುಟ್ಟಿದ ಮನುಜರು ಕಾರಪತ್ರದ ಲಿಂಗದ ಪೂಜೆಯ ಮಾಡಲು, ಆ ಕಾರಪತ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಗಿತ್ತು ಕಾಣಿರೋ. ದ್ವಾಪರಯುಗದಲ್ಲಿ ಹುಟ್ಟಿದ ಮನುಜರು ನಾಗತಾಮ್ರದ ಲಿಂಗವನು ಪೂಜೆಯ ಮಾಡಲು ಆ ನಾಗತಾಮ್ರದ ಲಿಂಗವು ಕಲಿಯುಗದಲ್ಲಿ ಹುಟ್ಟಿದ ಮನುಜರ ರಾಯರ ದೇವರ ಭಂಡಾರಕ್ಕೆ ಯೋಗ್ಯವಾಯಿತ್ತು ಕಾಣಿರೋ. ಕಲಿಯುಗದಲ್ಲಿ ಹುಟ್ಟಿದ ಮನುಜರು ಕಲ್ಲುಲಿಂಗವನು ತಮ್ಮ ಕೈಲ್ಹಿಡಿದುಕೊಂಡು ಪಂಚಮುಖದ ಪರಮೇಶ್ವರದೇವರು ಎಮ್ಮ ಕರಸ್ಥಲಕ್ಕೆ ಬಂದನೆಂದು ಬಿಂಕವನು ಹೇಳುವ ಡೊಂಕುಮನುಜರು ಕಾಯ ಅಸುವಳಿದು ನೆಲಕ್ಕೆ ಬಿದ್ದು ಹೋಗುವಾಗ ಕೈಯಲ್ಲಿ ಕಲ್ಲುಲಿಂಗವು ಭೂಮಿ ಆಸ್ತಿಯನು ಭೂಮಿ ಕೂಡಿ ಹೋಗುವಾಗ ಒಂ ನಮಃಶಿವಾಯ ಎಂಬ ಮಂತ್ರವು ಮರೆತು ಹೋಯಿತು. ಅದ ಕಂಡು ನಗುತಿರ್ದಾತ ಸಿದ್ಧಮಲ್ಲನದಾತ ಮೇಗಣಗವಿಯ ಗುರುಸಿದ್ಧೇಶ್ವರಪ್ರಭುವೆ.
--------------
ಸಿದ್ಧಮಲ್ಲಪ್ಪ
ಮತ್ತಂ, ಪ್ರಣವಭೇದ ನಿರೂಪಣಾನಂತರದಲ್ಲಿ ಅಂಗಭೇದಮಂ ಪೇಳ್ವೆನೆಂತೆನೆ- ಶಿವಾಂಗ ಭೂತಾಂಗ ವಿದ್ಯಾಂಗ ಕೂಪಾಂಗ ಶಕ್ತ್ಯಂಗ ಸಾಮಾನ್ಯಂಗಂಗಳೆಂದಾರು ತೆರನೀ ಷಡಂಗಾಕ್ಷರಂಗಳಲ್ಲಿ ನಾದಬ್ರಹ್ಮಂ ಪರಿಪೂರ್ಣವಾಗಿಹುದಾ ಷಡಂಗಂಗಳಲ್ಲಿ ಮೊದಲ ಶಿವಾಂಗಕ್ಕೆ ವಿವರಂ- `ಆ ಈ ಊ Iೂ ಒ ಐ ಔ ಅಂ ಅಃ' ಎಂಬೀಯೊಂಬತ್ತ್ತು ವಿಕೃತಾಕ್ಷರಂಗಳಲ್ಲಿ ನಾಲ್ಕನೆಯ Iೂಕಾರಮಂ ಐದನೆಯ ಒ ಕಾರಮಂ ಎಂಟನೆಯ ಅಂ ಎಂಬ ಈ ಮೂರಕ್ಕರಮಂ ಬಿಟ್ಟು ಉಳಿದಾರಕ್ಕರಮಂ ಶಿವ ಸಂಜ್ಞಿತವಾದ ಹಕಾರದೊಡನೆ ಕೂಡಿಸೆ ಹಾಂ ಹೀಂ ಹೂಂ ಹೈಂ ಹೌಂ ಹಃ ಎಂಬೀ ಶಿವಷಡಂಗಮಂತ್ರವೆ ರಕಾರದಿಂ ಪೊರಗಪ್ಪುದರಿಂ ತಾಂತ್ರಿಕ ಶಿವಷಡಂಗವೆನಿಕುಂ. ರಕಾರದೊಡನೆ ಕೂಡಿ ಹ್ರಾಂ ಹ್ರೀಂ ಹ್ರೂಂ ಹೆಂ ಹ್ರೌಂ ಹ್ರಃ ಎಂಬ ವೈದಿಕ ಶಿವಷಡಂಗಮಂತ್ರವೆನಿಸುಗು ಮೀಯುಭಯಮಂತ್ರಕ್ಕಂ ಭೇದವಿಲ್ಲವೆಂದು ನಿರೂಪಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಆಧಾರಾದಿ ಷಡುಚಕ್ರಂಗಳು ಇವಕ್ಕೆ ವಿವರ: ಆಧಾರಸ್ಥಾನದಲ್ಲಿ ಚತುರ್ದಳ ಪದ್ಮವಿಹುದು ಅದು ಸುವರ್ಣವರ್ಣ ಅದಕ್ಕೆ ಅಕ್ಷರ ವಶಷಸ ಎಂಬ ನಾಲ್ಕಕ್ಷರ, ಅಧಿದೈವ ಬ್ರಹ್ಮನು. ಸ್ವಾಧಿಷ್ಠಾನ ಸ್ಥಾನದಲ್ಲಿ ಷಡ್ದಳ ಪದ್ಮವಿಹುದು, ಅದು ಕಪ್ಪುವರ್ಣ ಅದಕ್ಕೆ ಅಕ್ಷರ ಬಭಮಯರಲ ಎಂಬ ಷಡಕ್ಷರ, ವಿಷ್ಣು ಅಧಿದೈವ. ಮಣಿಪೂರದ ಸ್ಥಾನದಲ್ಲಿ ದಶದಳ ಪದ್ಮವಿಹುದು, ಅದು ಕೆಂಪುವರ್ಣ ಅದಕ್ಕೆ ಅಕ್ಷರ ಡಢಣ ತಥದಧನ ಪಫ ಎಂಬ ದಶ ಅಕ್ಷರ, ರುದ್ರನಧಿದೈವ. ಅನಾಹತಸ್ಥಾನದಲ್ಲಿ ದ್ವಾದಶದಳದ ಪದ್ಮವಿಹುದು, ಅದು ನೀಲವರ್ಣ, ಅದಕ್ಕೆ ಅಕ್ಷರ ಕಖಗಘಙ ಚ ಛ ಜಝಞ ಠ ಎಂಬ ದ್ವಾದಶ ಅಕ್ಷರ ಅದಕ್ಕೆ ಮಹೇಶ್ವರ ಅಧಿದೈವ. ವಿಶುದ್ಧಿಸ್ಥಾನದಲ್ಲಿ ಷೋಡಶದಳ ಪದ್ಮವಿಹುದು, ಅದು ಸ್ಪಟಿಕವರ್ಣ ಅದಕ್ಕೆ ಅಕ್ಷರ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಷೋಡಶಾಕ್ಷರ, ಅದಕ್ಕೆ ಸದಾಶಿವ ಅಧಿದೈವ. ಆಜ್ಞಾಸ್ಥಾನದಲ್ಲಿ ದ್ವಿದಳದ ಪದ್ಮವಿಹುದು. ಅದು ಮಾಣಿಕ್ಯವರ್ಣ, ಅದಕ್ಕೆ ಅಕ್ಷರ `ಹಕ್ಷ ಎಂಬ ದ್ವಯಾಕ್ಷರ. ಅದಕ್ಕೆ ಮಹಾಶ್ರೀಗುರು ಅಧಿದೈವ. ಅಲ್ಲಿಂದ ಮೇಲೆ ಬ್ರಹ್ಮರಂಧ್ರಸ್ಥಾನದಲ್ಲಿ ಸಹಸ್ರದಳ ಪದ್ಮವಿಹುದು. ಅದು ಹೇಮವರ್ಣ ಅಲ್ಲಿಗೆ ಓಂಕಾರವೆಂಬ ಅಕ್ಷರ ಪರಂಜ್ಯೋತಿ ಪರಬ್ರಹ್ಮ ಅದು ಅನಂತಕೋಟಿ ಸೂರ್ಯಪ್ರಕಾಶವಾಗಿ ಬೆಳಗುತ್ತಿಹುದು. ಅಲ್ಲಿಗೆ ಅಧಿದೈವ ಶ್ರೀಗುರು ಮೂರ್ತಿಯೇ ಕರ್ತನು. ಇಂತೀ ಷಟ್ ಚಕ್ರಂಗಳಂ ತಿಳಿದು ಪರತತ್ವದಲ್ಲಿ ಇರಬಲ್ಲಡೆ ಕೂಡಲಚೆನ್ನಸಂಗಯ್ಯನಲ್ಲಿ ಶರಣನೆನಿಸುವನು.
--------------
ಚನ್ನಬಸವಣ್ಣ
ಸಂಸಾರವ ಉತ್ತಾರವನ್ನು ಮಾಡುವನಾವವೇಳೆಯಾದುದು ವೇದ. ಒಂ ನಮಸ್ತಾರಾಯ ನಮಶ್ಶಂಭವೇ ಚ ವಯೋಭವೇ ಚ | ನಮಶ್ಶಂಕರಾಯ ಚ ಮಯಸ್ಕರಾಯ ಚ ನಮಶ್ಶಿವಾಯ || ಈ ಪರಿಯಲ್ಲಿ, ಶಿವಯೇಕೋದೇವನೆಂದು ನೆನೆದು ಬದುಕಿ, ಬಸವಪ್ರಿಯ ಕೂಡಲಚೆನ್ನಸಂಗನ.
--------------
ಸಂಗಮೇಶ್ವರದ ಅಪ್ಪಣ್ಣ
ಎಲ್ಲರಿಗಿಂದಧಿಕವು ಪುರಾತನರೆಂದು ಶರಣು ಶರಣೆನುತಿದೆ ವೇದ, ಶರಣೆಂದು ಸಾರುತಿದೆ ವೇದ ನೋಡಾ. ಒಂ ಅಥೋ ಯೇ ಅಸ್ಯ ಸತ್ವಾನೋಹಂ ತೇಭ್ಯೋಕರನ್ನಮಃ | ಪ್ರಮುಂಚ ಧನ್ವನಸ್ತ್ವಮುಭಯೇರಾತ್ನಿ ಯೋರ್ಜಾಂ ಯಾಶ್ಚತೇ ಹಸ್ತ ಇಷವಃ ಪರಾತಾ || ಎಂಬ ಶ್ರುತಿ, ಬಸವಪ್ರಿಯ ಕೂಡಚನ್ನಸಂಗಾ, ಸದ್ಭಕ್ತರಿಗೆ ಶರಣೆನುತ್ತಿದೆ ವೇದ.
--------------
ಸಂಗಮೇಶ್ವರದ ಅಪ್ಪಣ್ಣ
ಮತ್ತಮೀ ಷೋಡಶ ಸ್ವರಮೂರ್ತಿ ವಿವರಮೆಂ[ತೆ]ನೆ- ಅ ಶ್ರೀಕಂಠಂ, ಆ ಅನಂತಂ,[ಇ] ಸೂಕ್ಷ್ಮಂ, ಈ ತ್ರಿಮೂರ್ತಿ, ಉ ಅಮರೇಶ್ವರಂ, ಊ ದಿರ್ಘೇಶಂ, ಋ ಭಾರಭೂತಿ, Iೂ ಅತಿದೇಶಂ ಒ ಸ್ಥಾಣುಕಂ, ಓ ಧರಂ, ಏ ಝಂಡೇಶ, ಐ ಜಾತಕ. ಓ ಸದ್ಯೋಜಾತಂ, ಔ ಅನುಗ್ರಹೇಶ್ವರಂ, ಅಂ ಅಕ್ರೂರಂ, ಅಃ ಮಹಾಸೇನಂ. ಇಂತೀ ಮಹಾಲಿಂಗದೂಧ್ರ್ವಪಟ್ಟಿಕಾಖ್ಯ ವಿಶುದ್ಧಿ ಚಕ್ರಕೋಷ*ದಳ ನ್ಯಸ್ತ ಷೋಡಶಸ್ವರ ವಾಚ್ಯರಾದ ರುದ್ರರಿವರೆಂದು ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಮತ್ತಂ ಶಿವಷಟ್ಚಕ್ರನಿರೂಪಣಾನಂತರದಲ್ಲಿ ಶಕ್ತಿ ಷಟ್ಚಕ್ರಗಳೆಂತನೆ- ಪಿಂದಣೈವತ್ತೊಂದು ರುದ್ರವಾಚ್ಯಬೀಜಂಗಳೆ ಶಕ್ತಿ ಬೀಜಂಗಳಿವಕ್ಕೆ ವಿವರಂ. ಆ ಪೂರ್ಣೋದರಿ ಆ ರಿಜೆ ಇ ಶಾಲ್ಮಲಿ ಈ ಲೋಲಾಕ್ಷಿ ಉ ವರ್ತುಲಾಕ್ಷಿ ಊ ದೀರ್ಘಘೋಣೆ ಋ ದೀರ್ಘಮುಖಿ Iೂ ಗೋಮುಖಿ ಒ ದೀರ್ಘಜಿಹ್ವಾ ಓ ಕುಂಡೋದರಿ ಏ ಊಧ್ರ್ವಕೇಶಿ ಐ ವಿಕೃತಮುಖಿ ಓ ಜ್ವಾಲಾಮುಖಿ ಔ ಉಲ್ಕಮುಖಿ ಅಂ ಶ್ರೀಮುಖಿ ಅಃ ವಿದ್ಯಾಮುಖಿ ಇಂತೀ ಮಹಾಲಿಂಗದ ಶಕ್ತಿಯೂಧ್ರ್ವಪಟ್ಟಿಕಾಖ್ಯ ವಿಶುದ್ಧಿಚಕ್ರದ ಷೋಡಶಕೋಷ*ದಳ ನ್ಯಸ್ತ ಷೋಡಶರುದ್ರಶಕ್ತಿಯರಂ ನಿರವಿಸಿದೆಯಯ್ಯಾ, ಪರಶಿವಲಿಂಗಯ್ಯ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಬಳಿಕ್ಕಮೀ ಚಕ್ರಸ್ಥ ವರ್ನಂಗಳ್ಗೆ ವರ್ಗಭೇದಮುಂಟದೆಂತೆನೆ- ಸ್ಥಿತಿವರ್ಗ ಸೃಷ್ಟಿವರ್ಗ ಸಂಹಾರವರ್ಗಂಗಳೆಂಬೀ ವರ್ಗಂಗಳವರಲ್ಲಿ ಮೊದಲ ಸ್ಥಿತಿವರ್ಗವೊಂದರೊಳಗೆ ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಂಗಳಕ್ಕುಮಿವಕ್ಕೆ ವಿವರಂ. ಪೂರ್ವಾದೀಶಾನಾಂತಮಾಗಿ ಅಗ್ನಿ ಚಂದ್ರ ಸೂರ್ಯಮಂಡಲದಳ ನ್ಯಸ್ತಾಕ್ಷರಗಳೆಲ್ಲಂ ಸ್ಥಿತಿವರ್ಗ- ವಿವರೊಳ್ಸಾತ್ವಿಕವರ್ಗ ರಾಜಸವರ್ಗ ತಾಮಸವರ್ಗಗಳೆಂದು ತ್ರಿವಿಧಮಪ್ಪವರಲ್ಲಿ ಮೊದಲಗ್ನಿಮಂಡಲದೆಂಟು ದಳಂಗಳಲ್ಲಿಯ ಸ ಷ ಶ ವ ಲ ರ ಯ ಮ ಗಳೆಂಬಿವೆಂಟು ಸಾತ್ವಿಕಂಗಳೆನಿಪ- ವದರಾಚೆಯ ಚಂದ್ರಮಂಡಲದ ದಳೋಪದಳಂಗಳಲ್ಲಿ ಪೂರ್ವಾದೀಶಾನಾಂತಮಾಗಿ ನ್ಯಸ್ತವಾದ ಅ ಆ ಇ ಈ ಉ ಊ ಒ ಓ ಏ ಐ ಓ ಔ ಅಂ ಆಃ ಎಂಬೀ ಪದಿನಾರೆ ರಾಜಸಂಜ್ಞೆಂಗಳೆನಿಪ ವದರಾಚೆಯ ಸೂರ್ಯಮಂಡಲದ ಮೂವತ್ತೆರಡು ದಳಂಗಳೊಳಗ- ಣೆಂಟಕ್ಕರಂಗಳಗ್ನಿ ಮಂಡಲದೆಂಟುದಳಂಗಳಲ್ಲಿ ನ್ಯಸ್ತವಾಗಿರ್ದಪವವರ, ಶೂನ್ಯದಳಂಗಳೆಂಟಂ ಬಿಟ್ಟುಳಿದಿರ್ಪತ್ತು ನಾಲ್ಕು ದಳಂಗಳಲಿ ನ್ಯಸ್ತವಾದ ಕಖಗಘಙ ಚಛರುsುಜಞ ಟಠಡಢಣ ತಥದಧನ ಪಫಬಭಂಗಳೆಂಬಿರ್ಪತ್ತನಾಲ್ಕೆ ತಾಮಸಂಗಳೆನಿಪವೀ ವರ್ಗತ್ರಯಂ ಸ್ಥಿತಿವರ್ಗಗತವಾದುದೀ ಮೂರ್ಮೂರ್ವರ್ಗಾಕ್ಷರಂಗಳ ಸಂಜ್ಞೆಯಿಂದೆ ಮಂತ್ರಗಳನುದ್ಧರಿಪು ದಿನ್ನುಂ ಶುದ್ಧಪ್ರಸಾದ ಮೂಲಪ್ರಸಾದ ತತ್ವಪ್ರಸಾದ ಆದಿಪ್ರಸಾದ ಆತ್ಮಪ್ರಸಾದಂಗಳೆಂಬ ಪಂಚಪ್ರಸಾದ ಮಂತ್ರಗಳನೀ ಚಕ್ರಸ್ಥಾಕ್ಷರ ಸ್ಥಿತಿವರ್ಗದಿಂದುದ್ಧರಿಸಿ ಭಾವಿಪುದೆಂದೆಯಯ್ಯಾ, ಪರಮ ಶಿವಲಿಂಗೇಶ್ವರ ಸುಧಾಕರ ಶೇಖರಾ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಉತ್ತಮಾಂಗವೆನಿಸುವ ಶಿರಸ್ಸಿಗೆ ನಿತ್ಯವಿದೆಂದು ಹೇಳಿತ್ತು ವೇದ. ನೆಟ್ಟನೆ ಶಿವನಡಿಗೆರಗುವುದು, ಮತ್ತನ್ಯದೈವಕ್ಕೆರಗಲಾಗದೆಂದುದು ವೇದ. ಒಂ ಯಸ್ಮೈನಮಃ ಸಚ್ಛಿರೋಧರ್ಮ ಮೂಧ್ರ್ನಿ ನಾನಾಬ್ರಹ್ಮೋತ್ತರಾ | ಹನು ಯಜ್ಞೋದರಾ ವಿಷ್ಣು ಹೃದಯಂ ಸಂವತ್ಸರ ಪ್ರಜನನಮ್ || ಎಂದುದಾಗಿ, ಬಸವಪ್ರಿಯ ಕೂಡಲಚೆನ್ನಸಂಗಯ್ಯನಲ್ಲದೆ ಮತ್ತನ್ಯದೈವಕ್ಕೆರಗಿದಡೆ, ನಾಯಕನರಕ ತಪ್ಪದು.
--------------
ಸಂಗಮೇಶ್ವರದ ಅಪ್ಪಣ್ಣ
ಮತ್ತಮಾ ಶಿವಪೂಜಾವಿಧಿಗೆ ದೇಶ ಕಾಲ ಸ್ಥಾನ ದ್ರವ್ಯ ಪ್ರಯೋಜನಾದಿ ಗಳಂ ತಾಂತ್ರಿಕ ವೈದಿಕಮೆಂಬೆರಡೂ ಪೂಜಾಭೇದಂದಳಂ, ಅಂತಃಶೌಚ ಬಾಹ್ಯ ಶೌಚಯೆಂಬೆರಡೂ ಶೌಚಭೇದಂಗಳಂ, ಶೋಷಣ ದಹನ ಪ್ಲಾವನಮೆಂಬ ಕ್ರಿಯೆಗಳಂ, ಆತ್ಮಶುದ್ಧಿ ಸ್ಥಾನಶುದ್ಧಿ ದ್ರವ್ಯ ಶುದ್ಧಿ [ಲಿಂಗಶುದ್ಧಿ] ಮಂತ್ರ ಶುದ್ಧಿಯೆಂಬ ಪಂಚ ಶುದ್ಧಿಗಳ ವಿಸ್ತರಿಸುದವರಲ್ಲಿ ಶೌಚಾಚಮನಸ್ನಾನ ಭಸ್ಮರುದ್ರಾಕ್ಷಧಾರಣ ಕವಚ ಮಂತ್ರ ಕಲಾನ್ಯಾಸ ಧ್ಯಾನಾದಿ ರಚನೆಂಗೆಯ್ದುದೇ ಆತ್ಮಶುದ್ಧಿ ಎನಿಸೂದು. ಸಮ್ಮಾರ್ಜನಾನುಲೇಪನ ವರ್ಣಕ ಗಂಧಪುಷ್ಪಧೂಪ ದೀಪಾದಿ ನಿರ್ಮಲೋಪ ಕರಣಂಗಳಿಂ ಚೌಕಮನಲಂಕರಿಪುದೆ ಸ್ಥಾನ ಶುದ್ಧಿ ಎನಿಸೂದು. ಜಲಗಂಧಾಕ್ಷತಾ ಪುಷ್ಪಾದಿಗಳಂ ನಿರೀಕ್ಷಿಸಿ, ಭಸ್ಮಮಂತ್ರವಾರಿಗಳಿಂ ಸಂಪ್ರೋಕ್ಷಣಂಗೆಯ್ವುದೆ ದ್ರವ್ಯಶುದ್ಧಿ ಎನಿಸೂದು. ಅನಾಮಿಕ ಮಧ್ಯಮೆಗಳ ಮಧ್ಯದಲ್ಲಿ ನವೀನಕುಸುಮವಿಡಿದು ಅಂಗುಷ*ತರ್ಜನಿಗಳಿಂ ಮೊದಲ ನಿರ್ಮಾಲ್ಯಮಂ ತ್ಯಜಿಸಿ, ಲಿಂಗಪೀಠಮಂವಾರಿಯಿಂ ಪ್ರಕ್ಷಾಲನಂ ಗೆಯ್ವುದೆ ಲಿಂಗಶುದ್ಧಿ ಎನಿಸೂದು. ಸಕಲಪೂಜಾತ್ರ್ಥಮಾಗಿ ಒಂ ನಮಃ ಶಿವಾಯ ಸ್ವಾಹಾ ಎಂದುಚ್ಚರಿಪುದೆ ಮಂತ್ರಶುದ್ಧಿಯಹುದೆಂದೊಡಂ ಬಟ್ಟು, ಬಳಿಕ ಅಸ್ತ್ರಮುದ್ರೆ ಚಕ್ರಮುದ್ರೆ ಮಹಾಮುದ್ರೆ ಶೋಧನಿಮುದ್ರೆ ಸಂಹಾರ ಪಂಚಮುಖ ಮುದ್ರೆ ಸುರಭಿಮುದ್ರೆ ದ್ರವ್ಯಮುದ್ರೆ ಮುಕುಳಿಕಾಮುದ್ರೆ ಪದ್ಮಮುದ್ರೆ ಶಶಕರ್ಣವೆÅದ್ರೆ ಶಕ್ತಿಮುದ್ರೆ ಬೀಜಮುದ್ರೆ ಶಾಂತಿಮುದ್ರೆ ಆವಾಹನ ಮುದ್ರೆ ಮನೋರಮಮುದ್ರೆ ಧ್ವಜಮುದ್ರೆ ಲಿಂಗಮುದ್ರೆ ಗಾಯತ್ರಿಮುದ್ರೆ ಕಾಲಕಂಢ ಮುದ್ರೆ ಶೂಲಮುದ್ರೆ ನಮಸ್ಕಾರಮುದ್ರೆ ಯೋನಿಮುದ್ರೆ [ವಿ]ಬ್ದೊಟ..... ಮುದ್ರೆ....ರ ಮುದ್ರೆ ಎಂಬ ಸಕಲ ಮುದ್ರಾಲಕ್ಷಣವನರಿದಾಯಾ ಯೋಗ್ಯ ಕ್ರಿಯೆಗಳಿಲ್ಲಿ ಪ್ರಯೋಗಿಸಿ, ಬಳಿಕ ಕೂರ್ಮ ಆನಂತಸಿಂಹ ಪದ್ಮವಿ.......... ಪೀಠಂಗಳಲ್ಲಿ......ಮಾದ ಸಿಂಹಾಸನಕ್ಕೆ ಶ್ವೇತರಕ್ತಪೀತಶ್ಯಾಮವರ್ಣದ ಸಿಂಹಾ ಕಾರಮಾದ ಧರ್ಮಜ್ಞಾನ ವೈರಾಗ್ಯ ಐಶ್ವರ್ಯವೆ,ಬ ನಾಲ್ಕೆ ಕ್ರಮದಿಂದಾಗ್ನ್ಯಾದಿ ದಿಕ್ಕಿನ ಪಾದಚತುಷ್ಟಯಂಗಳು, ರಾಜಾವರ್ತಪ್ರಭೆಯ ರೂಪಮಾದ ಅಧರ್ಮ ಅಜ್ಞಾನ ಅವೈರಾಗ್ಯ ಅನೈಶ್ವರ್ಯವೆಂಬ ನಾಲ್ಕೆ ಕ್ರಮದಿ ಪೂರ್ವಾದಿ ದಿಕ್ಕಿನ ಪಾದಚತುಷ್ಟಯಂಗಳು ಮೇಲೆ ಅಣಿಮಾದಿಗಳೆ ಪೂರ್ವಾದ್ಯಷ್ಟದಿಕ್ಕಿನ ದಳಂಗಳು, ವಾಮಾದಿ ಸರ್ವಭೂತ ದಮನಾಂತಮಾದ ರುದ್ರವೆ ಪೂರ್ವಾ ದ್ಯಷ್ಟದಿಕ್ಕಿನ ಕೇಸರಂಗಳು, ವೈರಾಗ್ಯವೆ ಕರ್ಣಿಕೆ ವಾಮೆ ಮೊದಲು ಮನೋನ್ಮನಿ ಕಡೆಯಾದ ನವಶಕ್ತಿಗಳೆ ಪೂರ್ವಾದಿಮಧ್ಯಾಂತವಾದ ಕರ್ಣಿಕಾಬೀಜಂಗಳು, ಬಳಿಕದರ ಮೇಲೆ ಅಗ್ನಿರವಿಶಶಿ ಮಂಡಲತ್ರಯಂಗಳು, ಬಳಿಕದರ ಮೇಲೆ ತಮೋರಜಸತ್ವಗುಣಂಗಳವರ ಮೇಲೆ ಜೀವಾತ್ಮ ಅಂತರಾತ್ಮ ಪರಮಾತ್ಮರು ಗಳವರ ಮೇಲೆ ಆತ್ಮತತ್ವ ವಿದ್ಯಾತತ್ವ ಶಿವಶತ್ವಂಗಳಿಂತು ಪರಿವಿಡಿದಾಯತ ಮಾದ ಸಿಂಹಾಸನಮಂ ಪರಿಕಲ್ಪಿಸಿ ಲಿಂಗಾರ್ಚನೆಯಂ ಮಾಳ್ಪುದಯ್ಯಾ ಶಾಂತ ವೀರೇಶ್ವರಾ.
--------------
ಶಾಂತವೀರೇಶ್ವರ
ಈ ಪ್ರಕಾರದಲ್ಲಿ ಗುರುವಿನ ಹಸ್ತದಲ್ಲಿ ಹುಟ್ಟಿ ಲಿಂಗದೇಹಿಯೆನಿಸಿಕೊಂಡ ಜ್ಞಾನಿಪುರುಷನು ತನ್ನ ಜ್ಞಾನಸ್ವರೂಪವನರಿಯಬೇಕಯ್ಯ. ಆ ಜ್ಞಾನವೇ ಆರುತೆರನಾಗಿಪ್ಪುದು. ಅವಾವವೆಂದಡೆ: ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗವೆಂದು ಇಂತೀ ಆರುತೆರನಾಗಿಪ್ಪುದು. ಈ ಷಡ್ವಿಧವ್ರತವನರಿದು ಆಚರಿಸುವ ಕ್ರಮವೆಂತುಟಯ್ಯಯೆಂದಡೆ: ಆಧಾರಚಕ್ರಸ್ಥಾನದಲ್ಲಿ ನಾಲ್ಕೆಸಳಕಮಲದ ವ ಶ ಷ ಸಯೆಂಬ ನಾಲ್ಕು ಬೀಜಾಕ್ಷರದ ಪೃಥ್ವಿತತ್ವದ ಕೆಂಪುವರ್ಣದ ನೆಲೆಯನರಿಯಬೇಕಯ್ಯ. ಸ್ವಾಧಿಷಾ*ನಚಕ್ರದಲ್ಲಿ ಆರೆಸಳಕಮಲದ ಬ ಭ ಮ ಯ ರ ಲಯೆಂಬ ಆರು ಬೀಜಾಕ್ಷರ ಯುಕ್ತವಾದ ಅಪ್ಪುತತ್ವದ ನೀಲವರ್ಣದ ನೆಲೆಯನರಿಯಬೇಕಯ್ಯ. ಮಣಿಪೂರಕಚಕ್ರಸ್ಥಾನದಲ್ಲಿ ಹತ್ತೆಸಳಕಮಲದ ಡ ಢ ಣ ತ ಥ ದ ಧ ನ ಪ ಫ ಯೆಂಬ ಹತ್ತು ಬೀಜಾಕ್ಷರ ಸ್ವಾಯತವಾಗಿಪ್ಪ ಅಗ್ನಿತತ್ವದ ಕುಂಕುಮವರ್ಣದ ನೆಲೆಯನರಿಯಬೇಕಯ್ಯ. ಅನಾಹತಚತ್ರಸ್ಥಾನದಲ್ಲಿ ಹನ್ನೆರಡೆಸಳಕಮಲದ ಕ ಖ ಗ ಘ ಙ ಚ ಛ ಜ ರುsು ಞ ಟ ಠಯೆಂಬ ಹನ್ನೆರಡು ಬೀಜಾಕ್ಷರಯುಕ್ತವಾಗಿರ್ಪ ವಾಯುತತ್ವದ ಶ್ವೇತವರ್ಣದ ನೆಲೆಯನರಿಯಬೇಕಯ್ಯ. ವಿಶುದ್ಧಿಚಕ್ರಸ್ಥಾನದಲ್ಲಿ ಹದಿನಾರೆಸಳಕಮಲದ ಅ ಆ ಇ ಈ ಉ ಊ ಋ ಋೂ ಎ ಏ ಐ ಒ ಓ ಔ ಅಂ ಅಃ ಎಂಬ ಹದಿನಾರು ಬೀಜಾಕ್ಷರ ಸ್ವಾಯತವಾಗಿಪ್ಪ ಆಕಾಶತತ್ವದ ಸ್ಫಟಿಕವರ್ಣದ ನೆಲೆಯನರಿಯಬೇಕಯ್ಯ. ಆಜ್ಞಾಚಕ್ರಸ್ಥಾನದಲ್ಲಿ ಎರಡೆಸಳಕಮಲದ ಹಂ ಸ ಯೆಂಬ ಎರಡು ಬೀಜಾಕ್ಷರಯುಕ್ತವಾಗಿಪ್ಪ ಆತ್ಮತತ್ವದ ಮಾಣಿಕ್ಯವರ್ಣದ ನೆಲೆಯನರಿಯಬೇಕಯ್ಯ. ಇವೆಲ್ಲವಕ್ಕೂ ಮೇಲಣತತ್ವವೆನಿಸುವ ಬ್ರಹ್ಮರಂದ್ರದಲ್ಲಿ ಸಾವಿರೆಸಳಕಮಲದ, ಸಾವಿರ ಬೀಜಾಕ್ಷರ ಸರ್ವತೋಮುಖವಾಗಿಪ್ಪ ಭೇದವನರಿಯಬೇಕಯ್ಯ. ಇನ್ನೀ ಚಕ್ರಂಗಳಿಗೆ ಲಿಂಗಸ್ವಾಯತಯುಕ್ತವಾಗಿಪ್ಪ ಭೇದವ ಹೇಳಿಹೆನು: ಆಧಾರಚಕ್ರದ ನಾಲ್ಕೆಸಳಕಮಲದ ಮಧ್ಯದಲ್ಲಿ ಆಚಾರಲಿಂಗವ ಸ್ವಾಯತವ ಮಾಡಿ ಸ್ವಾಧಿಷಾ*ನಚಕ್ರದ ಆರೆಸಳಕಮಲದ ಮಧ್ಯದಲ್ಲಿ ಗುರುಲಿಂಗವ ಮೂರ್ತಿಗೊಳಿಸಿ ಮಣಿಪೂರಕಚಕ್ರದ ಹತ್ತೆಸಳಕಮಲದ ಮಧ್ಯದಲ್ಲಿ ಶಿವಲಿಂಗವ ಸಂಬಂಧಿಸಿ ಅನಾಹತಚಕ್ರದ ಹನ್ನೆರಡೆಸಳಕಮಲದ ಮಧ್ಯದಲ್ಲಿ ಪ್ರಸಾದಲಿಂಗವ ಮೂರ್ತಿಗೊಳಿಸಿ ಆಜ್ಞಾಚಕ್ರದ ಎರಡೆಸಳಕಮಲದ ಮಧ್ಯದಲ್ಲಿ ಮಹಾಲಿಂಗವ ನೆಲೆಗೊಳಿಸಿ ಪ್ರಾಣದಲ್ಲಿ ಆಚಾರಲಿಂಗವ ಸಂಬಂಧಿಸಿ ಜಿಹ್ವೆಯಲ್ಲಿ ಗುರುಲಿಂಗವ ಸ್ವಾಯತವಮಾಡಿ ನೇತ್ರದಲ್ಲಿ ಶಿವಲಿಂಗವ ಮೂರ್ತಿಗೊಳಿಸಿ ತ್ವಕ್ಕಿನಲ್ಲಿ ಜಂಗಮಲಿಂಗವ ನೆಲೆಗೊಳಿಸಿ ಶ್ರೋತ್ರದಲ್ಲಿ ಪ್ರಸಾದಲಿಂಗವ ಸಂಬಂಧಿಸಿ ಭಾವದಲ್ಲಿ ಮಹಾಲಿಂಗವ ನೆಲೆಗೊಳಿಸಿ ಬ್ರಹ್ಮರಂಧ್ರದಲ್ಲಿರ್ಪ ಪರಿಪೂರ್ಣಲಿಂಗವು ಸರ್ವಾಂಗದಲ್ಲಿಯು ಸ್ವಾಯತವಾಗಲು ಅಂಗಸಂಗಗಳೆಲ್ಲವು ಲಿಂಗಸಂಗಗಳಾಗಿ ಲಿಂಗ ದೃಕ್ಕೇ ನಿರಂತರ ಪ್ರಕಾಶಿಸುತಿಪ್ಪುದಯ್ಯ. ಲಿಂಗಪ್ರಭೆಯೊಳಗೆ ಶಿವಶಿವಾಯೆನುತಿರ್ದೆನಯ್ಯಾ ಮಹಾಲಿಂಗಗುರು ಶಿವಸಿದ್ಧೇಶ್ವರ ಪ್ರಭುವೇ.
--------------
ತೋಂಟದ ಸಿದ್ಧಲಿಂಗ ಶಿವಯೋಗಿಗಳು
ಚಾಂಡಾಲನಾದಡೇನು ಶಿವಭಕ್ತನೆ ಕುಲಜನು. ಆತನೊಡನೆ ನುಡಿಗಡಣವ ಮಾಡೂದೆನುತಿ[ದೆ] ವೇದ ಶ್ರುತಿ. ಕುಲವ ನೋಡಲು ಬೇಡ, ಛಲವ ನೋಡಲು ಬೇಡ. ಎಲ್ಲರಿಂದ ಹಿರಿಯರು ಆತನಿದ್ದಲ್ಲಿ ಇರುತಿಪ್ಪುದೆನುತಿ[ದೆ] ವೇದ. ಒಂ ಅಪಿ ವಾ ಯಶ್ಚಾಂಡಾಲಶ್ಶಿವ ಇತಿ ವಾಚಂ ವದೇತ್ತೇನ ಸಹ ಸಂವಿಶೇತ್ತೇನ ಸಹ ಭುಂಜೇತ್ ತೇನ ಸಹ ಸಂವದೇತ್ || ಇಂತೆನುತಿದ್ದುದು ಶ್ರುತಿವಾಕ್ಯ. ನಮ್ಮ ಭಕ್ತರನು ಅವರಿವರೆಂದು ಕುಲವನೆತ್ತಿ ನುಡಿದಂಗೆ, ಇಪ್ಪತ್ತೇಳುಕೋಟಿನರಕ ತಪ್ಪದು, ಬಸವಪ್ರಿಯ ಕೂಡಲಚೆನ್ನಸಂಗಮದೇವಾ.
--------------
ಸಂಗಮೇಶ್ವರದ ಅಪ್ಪಣ್ಣ
ಇನ್ನಷ್ಟು ... -->