ಅಥವಾ

ಒಟ್ಟು 8 ಕಡೆಗಳಲ್ಲಿ , 8 ವಚನಕಾರರು , 8 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕಂಗಳ ಮುಂದಣ ಬಯಲಿನೊಳಗೊಂದು ಪ್ರಕಾಶಾನ್ವಿತವಾದ ಮಹಾಚೋದ್ಯತರವಾದ ಗಗನಕೋಶವುಂಟು. ಅಲ್ಲೊಂದು ದಿವ್ಯತರವಾದ ಕಮಲವುಂಟು. ಆ ಕಮಲದ ಮಧ್ಯದಲ್ಲಿ ಆಣವತ್ರಯಾನ್ವಿತವಾದ ಮಹತ್ಕರ್ಣಿಕೆಯುಂಟು. ಮತ್ತದರಗ್ರದಂತರ್ವರ್ಣತ್ರಯಂಗಳೊಳಗೆ ನೀಲವಿದ್ರುಮರತ್ನ ಚಂದ್ರಪ್ರಕಾಶ ದಿವ್ಯಸಿಂಹಾಸನದ ಮೇಲೆ ಬೆಳಗುತ್ತಿರ್ಪ ಶಿವಲಿಂಗವನನುಸಂಧಾನಿಸಿ ಪೂಜಿಸುವ ಕ್ರಮವೆಂತೆಂದೊಡೆ : ಶ್ರೀಗುರುಕರುಣಕಟಾಕ್ಷವೀಕ್ಷಣಬಲದಿಂದ ಕಲ್ಮಷ ಕಂಟಕಾದಿಗಳಂ ತೊಲಗಿಸಿ, ಶಿವಲೋಕದ ಮಾರ್ಗವಿಡಿದು ಹೋಗಿ, ಆ ಶಿವಲೋಕದ ಸಮೀಪಕ್ಕೆ ಸೇರಿ, ಪರೀಕ್ಷೆಯ ಮಾಡಿ ನೋಡಲು, ಆ ಶಿವಲೋಕದ ಬಹಿರಾವರಣದಲ್ಲಿ ಮೂವತ್ತೆರಡು ಬಹಿರ್ಮುಖರು ಸಂಸ್ಥಿತರಾದ ವಿವರ : ಈಶಾನ್ಯ ಪರ್ಜನ್ಯ ಜಯಂತ ಮಹೇಂದ್ರ ಆದಿತ್ಯ ಸತ್ಯ ಭೃಂಷ ಅಂತರಿಕ್ಷ ಅಗ್ನಿ ವಿಮಾಷ ಥತ ಗ್ರಹಕ್ಷತ ಯಮ ಗಂಧರ್ವ ಭೃಂಗುರಾಜ ಮೃಗ ನಿರುತಿ ದೌವಾರಿಕ ಸುಗ್ರೀವ ಪುಷ್ಪದತ್ತ ವರುಣ ಅಸುರ ಶೇಷ ಋಭು ವಾಯು ನಾಗ ಮುಖ ಪಲಾಟಕ ಸೋಮ ಭೂತ ಅದಿತ ದಿತರೆಂಬುವರೇ ಮೂತ್ತೆರಡು ವಸ್ತುದೇವತೆಯರ ಒಡಂಬಡಿಸಿಕೊಂಡು ಅವರಿಂದೊಳಗಿರ್ಪ ಸೂರ್ಯವೀಥಿಯೆನಿಸುವ ತೃತೀಯವರ್ಣದ ಮೂವತ್ತೆರಡುದಳದಲ್ಲಿ ಎಂಟು ಶೂನ್ಯದಳಗಳನುಳಿದು, ಮಿಕ್ಕ ಇಪ್ಪತ್ತುನಾಲ್ಕುದಳಗಳಲ್ಲಿರುವ ಇಪ್ಪತ್ತುನಾಲ್ಕು ವಿಕಲಾಕ್ಷರಂಗಳೇ ಅಷ್ಟವಿಧೇಶ್ವರರು, ಅಷ್ಟದಿಕ್ಪಾಲಕರು, ಅಷ್ಟವಸುಗಳಾದ ವಿವರ : ಕ ಕಾರವೆ ಅನಂತ, ಖ ಕಾರವೆ ಇಂದ್ರ, ಗಕಾರವೆ ಧರ, ಘಕಾರವೆ ಸೂಕ್ಷ್ಮ , ಓಂಕಾರವೆ ಅಗ್ನಿ, ಚಕಾರವೆ ಧ್ರುವ, ಛಕಾರವೆ ಶಿವೋತ್ತಮ, ಜಕಾರವೆ ಯಮ, ಝಕಾರವೆ ಸೋಮ, ಞಕಾರವೆ ಏಕನೇತ್ರ, ಟಕಾರವೆ ನಿರುತಿ, ಠಕಾರವೆ ಆಪು, ಡಕಾರವೆ ರುದ್ರ, ಢಕಾರವೆ ವರುಣ, ಣಕಾರವೆ ಅನಿಲ, ತಕಾರವೆ ತ್ರಿಮೂರ್ತಿ, ಥಕಾರವೆ ವಾಯು, ದಕಾರವೆ ಅನಲ, ಧಕಾರವೆ ಶ್ರೀಕಂಠ, ನಕಾರವೆ ಕುಬೇರ, ಪಕಾರವೆ ಪ್ರತ್ಯೂಷ, ಫಕಾರವೆ ಶಿಖಂಡಿ, ಬಕಾರವೆ ಈಶಾನ, ಬಕಾರವೆ ಪ್ರಭಾಸ. ಇಂತೀ [ಅಷ್ಟ] ವಿಧೇಶ್ವರಾದಿಗಳಿಗಬ್ಥಿವಂದಿಸಿ, ಅದರಿಂದೊಳಗಿರ್ಪ ಚಂದ್ರವೀಥಿಯೆನಿಪ ದ್ವಿತೀಯಾವರಣದ ಷೋಡಶದಳದಲ್ಲಿರುವ ಷೋಡಶ ಸ್ವರಾಕ್ಷರಂಗಳೆ ಷೋಡಷರುದ್ರರಾದ ವಿವರ : ಅಕಾರವೆ ಉಮೇಶ್ವರ, ಆಕಾರವೆ ಭವ, ಇಕಾರವೆ ಚಂಡೇಶ್ವರ, ಈಕಾರವೆ ಶರ್ವ, ಉಕಾರವೆ ನಂದಿಕೇಶ್ವರ, ಊಕಾರವೆ ರುದ್ರ, ಋಕಾರವೆ ಮಹಾಕಾಳ, Iೂಕಾರವೆ ಉಗ್ರ, ಲೃಕಾರವೆ ಭೃಂಗಿರೀಟಿ, ಲೂೃಕಾರವೆ ಬ್ಥೀಮ, ಏಕಾರವೆ ಗಣೇಶ್ವರ, ಐಕಾರವೆ ಈಶಾನ, ಓಕಾರವೆ ವೃಷಭೇಶ್ವರ, ಔಕಾರವೆ ಪಶುಪತಿ, ಅಂ ಎಂಬುದೆ ಷಣ್ಮುಖಿ, ಅಃ ಎಂಬುದೆ ಮಹಾದೇವನು. ಇಂತಪ್ಪ ಷೋಡಶರುದ್ರರಿಗೆ ಸಾಷ್ಟಾಂಗವೆರಗಿ ಬಿನ್ನವಿಸಿಕೊಂಡು, ಅದರಿಂದೊಳಗಿರ್ಪ ಅಗ್ನಿವೀಥಿಯೆನಿಸುವ ಪ್ರಥಮಾವರಣ ಅಷ್ಟದಳಗಳಲ್ಲಿರ್ಪ ಅಷ್ಟವ್ಯಾಪಕಾಕ್ಷರಂಗಳೆ ಅಷ್ಟಶಕ್ತಿಯರಾದ ವಿವರ : ಸಕಾರವೆ ಉಮೆ, ಷಕಾರವೆ ಜ್ಯೇಷ್ಠೆ, ಶಕಾರವೆ ರೌದ್ರೆ, ವಕಾರವೆ ಕಾಳೆ, ಲಕಾರವೆ ಬಾಲೆ, ರಕಾರವೆ ಬಲಪ್ರಮಥಿನಿ, ಯಕಾರವೆ ಸರ್ವಭೂತದಮನೆ, ಮಕಾರವೆ ಮನೋನ್ಮನಿ. ಇಂತಪ್ಪ ಶಿವಶಕ್ತಿಯರ ಪಾದಪದ್ಮಂಗಳಿಗೆ ಸಾಷ್ಟಾಂಗವೆರಗಿ, ಪೊಡಮಟ್ಟು ಅದರಿಂದೊಳಗಿರ್ಪ ಅತಿರಹಸ್ಯವಾದ ಮೂವತ್ತೆರಡು ಕ್ಲೇಶಂಗಳಿಗಾಶ್ರಯವಾದ ಶಾಂತಿಬಿಂದುಮಯವಾದ ಅಂತರ್ಮಂಡಲದ ಚತುರ್ದಳದಲ್ಲಿರುವ ಚತುರಕ್ಷರಂಗಳೇ ಚತುಃಶಕ್ತಿಯರಾದ ವಿವರ : ಸಂ ಎಂಬುದೆ ಅಂಬಿಕೆ, ಅಂ ಎಂಬುದೆ ಗಣಾನಿ, ಡಿಂ ಎಂಬುದೆ ಈಶ್ವರಿ, ಕ್ಷುಂ ಎಂಬುದೇ ಉಮೆ. ಇಂತಪ್ಪ ಪರಶಕ್ತಿಯರ ಪಾದಾರವಿಂದವನು ಅನೇಕ ಪ್ರಕಾರದಿಂ ಸ್ತುತಿಮಾಡಿ ಬೇಡಿಕೊಂಡು ಅವರಪ್ಪಣೆವಿಡಿದು ಒಳಪೊಕ್ಕು, ಅಲ್ಲಿ ಕದಂಬಗೋಳಕಾಕಾರ ಸ್ಫುರಶಕ್ತಿದೀದ್ಥಿಕಾಯೆಂದುಂಟಾಗಿ ರಹಸ್ಯಕ್ಕೆ ರಹಸ್ಯವಾದ ಷಡಧ್ವಜನ್ಮಭೂಮಿಯಾದ ಶಕ್ತಿಶಿರೋಗ್ರದಲ್ಲಿ ಪಂಚಾಕಾಶ ಷಟ್ತಾರಕ ತ್ರಿವಿಧಲಿಂಗಾಂಗಗಳೆ ಕಕಾರವಾದ ಪರಬ್ರಹ್ಮದ ನೆಲೆಯನರಿಯುವುದೇ ಮುದ್ವೀರಪ್ರಿಯ ಸಂಗಮೇಶ್ವರನಲ್ಲಿ ಬೆರೆವಂಥ ನಿಜಯೋಗ ಕಾಣಿರೊ.
--------------
ಮುದ್ವೀರ ಸ್ವಾಮಿ
ಸರ್ವಬ್ರಹ್ಮಾಂಡವ ಗರ್ಭೀಕರಿಸಿಕೊಂಡಿರ್ದ ಮೂರ್ತಿಗೆ ಭಕ್ತನೆ ಎಡದ ಪಾದ, ಮಹೇಶ್ವರನೆ ಬಲದ ಪಾದ, ಪ್ರಸಾದಿಯೆ ಎಡದ ಹಸ್ತ, ಪ್ರಾಣಲಿಂಗಿಯೆ ಬಲದ ಹಸ್ತ, ಶರಣನೆ ಎಡದ ಕಣ್ಣು, ಐಕ್ಯನೆ ಬಲದ ಕಣ್ಣು, ಓಂಕಾರವೆ ನಿಜಮುಖ ನೋಡಾ ಝೇಂಕಾರ ನಿಜಲಿಂಗಪ್ರಭುವೆ.
--------------
ಜಕ್ಕಣಯ್ಯ
ಎನ್ನ ಸರ್ವಾಂಗವೆಲ್ಲವೂ ಲಿಂಗವಾದ ಪರಿಕ್ರಮವೆಂತೆಂದಡೆ; ಶ್ರೀಗುರು ಬಸವಣ್ಣನುಪದೇಶಿಸಿದ ಇಷ್ಟಲಿಂಗವೆನ್ನ ಸರ್ವಾಂಗದಲ್ಲಿ ಭಿನ್ನ ನಾಮಂಗಳಿಂದ ಪ್ರಕಾಶಿಸುತ್ತಿಹುದು. ಅದೆಂತೆಂದಡೆ ; ಸ್ಥೂಲಾಂಗದಲ್ಲಿ ಇಷ್ಟಲಿಂಗವೆಂದು, ಸೂಕ್ಷ್ಮಾಂಗದಲ್ಲಿ ಪ್ರಾಣಲಿಂಗವೆಂದು ಕಾರಣಾಂಗದಲ್ಲಿ ಭಾವಲಿಂಗವೆಂದು ತ್ರಿಭೇದವಾಗಿಹುದು. ಇಂತು ಅಂಗವ ಕುರಿತು ಮೂರು ತೆರನಾಯಿತ್ತು. ಇನ್ನು ಇಂದ್ರಿಯಂಗಳ ಕುರಿತು ಆರು ತೆರನಾಗಿರ್ಪುದು. ಅದು ಹೇಗೆಂದಡೆ; ಹೃದಯದಲ್ಲಿ ಮಹಾಲಿಂಗವೆಂದು, ಶ್ರೋತ್ರದಲ್ಲಿ ಪ್ರಸಾದಲಿಂಗವೆಂದು, ತ್ವಕ್ಕಿನಲ್ಲಿ ಜಂಗಮಲಿಂಗವೆಂದು, ನೇತ್ರದಲ್ಲಿ ಶಿವಲಿಂಗವೆಂದು, ಜಿಹ್ವೆಯಲ್ಲಿ ಗುರುಲಿಂಗವೆಂದು, ಘ್ರಾಣದಲ್ಲಿ ಆಚಾರಲಿಂಗವೆಂದು, ಇಂತು ಷಡಿಂದ್ರಿಯಂಗಳಲ್ಲಿ ಷಡ್ವಿಧಲಿಂಗವಾಗಿ ತೋರಿತ್ತು. ಇಂತೀ ಮರ್ಯಾದೆಯಲ್ಲಿ ಜ್ಞಾನ-ಕರ್ಮೇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗಂದಡೆ; ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಭೇದವಿಲ್ಲ. ಅದೆಂತೆಂದಡೆ, ಶ್ರೋತ್ರಕ್ಕೂ ವಾಕ್ಕಿಗೂ ಭೇದವಿಲ್ಲ, ಶಬ್ದಕ್ಕೂ ವಚನಕ್ಕೂ ಭೇದವಿಲ್ಲ; ತ್ವಕ್ಕಿಗೂ ಪಾಣಿಗೂ ಭೇದವಿಲ್ಲ, ಸ್ಪರ್ಶಕ್ಕೂ ಆದಾನಕ್ಕೂ ಭೇದವಿಲ್ಲ; ನೇತ್ರಕ್ಕೂ ಪಾದಕ್ಕೂ ಭೇದವಿಲ್ಲ, ರೂಪಿಗೂ ಗಮನಕ್ಕೂ ಭೇದವಿಲ್ಲ, ಜಿಹ್ವೆಗೂ ಗುಹ್ಯಕ್ಕೂ ಭೇದವಿಲ್ಲ, ರಸಕ್ಕೂ ಆನಂದಕ್ಕೂ ಭೇದವಿಲ್ಲ; ಘ್ರಾಣಕ್ಕೂ ಗುದಕ್ಕೂ ಭೇದವಿಲ್ಲ, ಗಂಧಕ್ಕೂ ವಿಸರ್ಜನಕ್ಕೂ ಭೇದವಿಲ್ಲ, ಇನ್ನು ಶ್ರೋತ್ರವೆಂಬ ಜ್ಞಾನೇಂದ್ರಿಯಕ್ಕೂ ವಾಕ್ಕೆಂಬ ಕರ್ಮೇಂದ್ರಿಯಕ್ಕೂ ಶಬ್ದ ವಿಷಯ, ಮೂಲಭೂತ ಆಕಾಶ, ಈಶಾನಮೂರ್ತಿ ಅಧಿದೇವತೆ. ತ್ವಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾಣಿಯೆಂಬ ಕರ್ಮೇಂದ್ರಿಯಕ್ಕೂ ಸ್ಪರ್ಶನ ವಿಷಯ, ಮೂಲಭೂತ ವಾಯು, ತತ್ಪುರುಷಮೂರ್ತಿ ಅಧಿದೇವತೆ. ದೃಕ್ಕೆಂಬ ಜ್ಞಾನೇಂದ್ರಿಯಕ್ಕೂ ಪಾದವೆಂಬ ಕರ್ಮೇಂದ್ರಿಯಕ್ಕೂ ರೂಪು ವಿಷಯ, ಮೂಲಭೂತ ಅಗ್ನಿ, ಅಘೋರಮೂರ್ತಿ ಅಧಿದೇವತೆ. ಜಿಹ್ವೆಯೆಂಬ ಜ್ಞಾನೇಂದ್ರಿಯಕ್ಕೂ ಗುಹ್ಯವೆಂಬ ಕರ್ಮೇಂದ್ರಿಯಕ್ಕೂ ರಸ ವಿಷಯ, ಮೂಲಭೂತ ಅಪ್ಪು, ವಾಮದೇವಮೂರ್ತಿ ಅಧಿದೇವತೆ, ಘ್ರಾಣವೆಂಬ ಜ್ಞಾನೇಂದ್ರಿಯಕ್ಕೂ ಪಾಯುವೆಂಬ ಕರ್ಮೇಂದ್ರಿಯಕ್ಕೂ ಗಂಧ ವಿಷಯ, ಮೂಲಭೂತ ಪೃಥ್ವಿ, ಸದ್ಯೋಜಾತಮೂರ್ತಿ ಅಧಿದೇವತೆ. ಇಂತೀ ಜ್ಞಾನೇಂದ್ರಿಯಂಗಳಿಗೆಯೂ ಕರ್ಮೇಂದ್ರಿಯಂಗಳಿಗೆಯೂ ಹೃದಯವೆ ಆಶ್ರಯಸ್ಥಾನವಾದ ಕಾರಣ, ಹೃದಯ ಆಕಾಶವೆನಿಸಿತ್ತು. ಅಲ್ಲಿ ಸ್ಥೂಲ ಸೂಕ್ಷ್ಮ ಕಾರಣ ರೂಪಿಂದೆಲ್ಲಾ ಇಂದ್ರಿಯಂಗಳಿರುತ್ತಿಹವು. ಗುರೂಪದೇಶದಿಂದ ಎಲ್ಲಾ ಇಂದ್ರಿಯಂಗಳಲ್ಲಿಯೂ ಲಿಂಗವೆ ಪ್ರಕಾಶಿಸುತ್ತಿಹುದು. ಅದು ಹೇಗೆಂದಡೆ; ಘ್ರಾಣದ ಘ್ರಾಣವೆ ಆಚಾರಲಿಂಗ; ಜಿಹ್ವೆಯ ಜಿಹ್ವೆಯೆ ಗುರುಲಿಂಗ; ನೇತ್ರದ ನೇತ್ರವೆ ಶಿವಲಿಂಗ; ತ್ವಕ್ಕಿನ ತ್ವಕ್ಕೆ ಜಂಗಮಲಿಂಗ; ಶ್ರೋತ್ರದ ಶ್ರೋತ್ರವೆ ಪ್ರಸಾದಲಿಂಗ; ಹೃದಯದ ಹೃದಯವೆ ಮಹಾಲಿಂಗ. ಈ ಆರು ಲಿಂಗಕ್ಕೆ ಅಂಗಸ್ಥಲ ಆರು; ಅವಾವುವೆಂದಡೆ; ಐಕ್ಯ ಶರಣ ಪ್ರಾಣಲಿಂಗಿ ಪ್ರಸಾದಿ ಮಹೇಶ್ವರ ಭಕ್ತ ಎಂದೀ ಆರು ಅಂಗಸ್ಥಲಗಳು. ಇವಕ್ಕೆ ವಿವರ; ಆತ್ಮಾಂಗದಲ್ಲಿ ಸದ್ಭಾವ ಹಸ್ತದಿಂದ ಎಲ್ಲಾ ಇಂದ್ರಿಯಂಗಳ ಪರಿಣಾಮವನು ಸಮರಸಭಕ್ತಿಯಿಂದ ಮಹಾಲಿಂಗಕ್ಕರ್ಪಿಸುವಾತನೆ ಐಕ್ಯ. ವ್ಯೋಮಾಂಗದಲ್ಲಿ ಸುಜ್ಞಾನಹಸ್ತದಿಂದ ಸುಶಬ್ದದ್ರವ್ಯವನು ಆನಂದಭಕ್ತಿಯಿಂದ ಪ್ರಸಾದಲಿಂಗಕ್ಕರ್ಪಿಸುವಾತನೆ ಶರಣ. ಅನಿಲಾಂಗದಲ್ಲಿ ಮನೋಹಸ್ತದಿಂದ ಸುಸ್ಪರ್ಶನದ್ರವ್ಯವನು ಅನುಭಾವಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಾಣಲಿಂಗಿ. ಅನಲಾಂಗದಲ್ಲಿ ನಿರಹಂಕಾರಹಸ್ತದಿಂದ ಸುರೂಪುದ್ರವ್ಯವನು ಅವಧಾನಭಕ್ತಿಯಿಂದ ಶಿವಲಿಂಗಕ್ಕರ್ಪಿಸುವಾತನೆ ಪ್ರಸಾದಿ, ಜಲಾಂಗದಲ್ಲಿ ಸುಬುದ್ಧಿ ಹಸ್ತದಿಂದ ಸುರಸದ್ರವ್ಯವನು ನೈಷಿ*ಕಾಭಕ್ತಿಯಿಂದ ಗುರುಲಿಂಗಕ್ಕರ್ಪಿಸುವಾತನೆ ಮಾಹೇಶ್ವರ. ಭೂಮ್ಯಂಗದಲ್ಲಿ ಸುಚಿತ್ತಹಸ್ತದಿಂದ ಸುಗಂಧದ್ರವ್ಯವನು ಸದ್ಭಕ್ತಿಯಿಂದ ಆಚಾರಲಿಂಗಕ್ಕರ್ಪಿಸುವಾತನೆ ಭಕ್ತ. ಇನ್ನು ಷಡಾಧಾರಂಗಳಲ್ಲಿ ಷಡಕ್ಷರರೂಪದಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ, ನಕಾರವೆ ಆಚಾರಲಿಂಗ, ಮಕಾರವೆ ಗುರುಲಿಂಗ, ಶಿಕಾರವೆ ಶಿವಲಿಂಗ, ವಾಕಾರವೆ ಜಂಗಮಲಿಂಗ, ಯಾಕಾರವೆ ಪ್ರಸಾದಲಿಂಗ, ಓಂಕಾರವೆ ಮಹಾಲಿಂಗ, ಎಂದು ಆರು ತೆರನಾಗಿಹವು. ಅದೆಂತೆಂದಡೆ; ಆಧಾರದಲ್ಲಿ ನಕಾರ, ಸ್ವಾಧಿಷಾ*ನದಲ್ಲಿ ಮಕಾರ, ಮಣಿಪೂರಕದಲ್ಲಿ ಶಿಕಾರ, ಅನಾಹತದಲ್ಲಿ ವಾಕಾರ, ವಿಶುದ್ಧಿಯಲ್ಲಿ ಯಕಾರ, ಆಜ್ಞೆಯಲ್ಲಿ ಓಂಕಾರ, ಇಂತೀ ಮರ್ಯಾದೆಯಲ್ಲಿ ಷಡ್ಧಾತುವಿನಲ್ಲಿ ಷಡಕ್ಷರರೂಪಿಂದ ಷಡ್ಲಿಂಗ ಸ್ಥಾಪ್ಯವಾಗಿಹವು. ಅದು ಹೇಗೆಂದಡೆ; ತ್ವಙ್ಮಯವಾಗಿಹುದು ಓಂಕಾರ, ರುಧಿರಮಯವಾಗಿಹುದು ನಕಾರ, ಮಾಂಸಮಯವಾಗಿಹುದು ಮಕಾರ, ಮೇಧೋಮಯವಾಗಿಹುದು ಶಿಕಾರ, ಅಸ್ಥಿಮಯವಾಗಿಹುದು ವಾಕಾರ, ಮಜ್ಜಾಮಯವಾಗಿಹುದು ಯಕಾರ. ಇಂತೀ ಷಡ್ಧಾತುವೆ ಷಡಕ್ಷರಮಯವಾಗಿ, ಅವೆ ಲಿಂಗಂಗಳಾಗಿ, ಒ?ಹೊರಗೆ ತೆರಹಿಲ್ಲದೆ ಸರ್ವಾಂಗವೆಲ್ಲವೂ ಲಿಂಗಮಯವಾದ ಇರವು. ಅದು ತಾನೆ ಶಿವನಿರವು, ಅದು ತಾನೆ ಶಿವನ ಭವನ. ಅದು ತಾನೆ ಶಿವನ ವಿಶ್ರಾಮಸ್ಥಾನ. ಇಂತೀ ಷಟ್ಸ್ಥಲಬ್ರಹ್ಮವನರಿದಾತನೆ ಶರಣ, ಆತನೆ ಲಿಂಗೈಕ್ಯ. ಇಂತೀ ಷಟ್ಸ್ಥಲಬ್ರಹ್ಮವೆಂಬುದು ಅಪ್ರಮಾಣ ಅಗೋಚರ ಅನಿರ್ವಾಚ್ಯವಾದ ಕಾರಣ, ವಚಿಸುತ್ತ ವಚಿಸುತ್ತ ವಚಿಸುತ್ತ ವಚನಗೆಟ್ಟಿತ್ತು. ಉಪ್ಪು ನೀರೊಳು ಕೂಡಿದಂತೆ, ವಾರಿಕಲ್ಲು ಅಂಬುಧಿಯೊಳು ಬಿದ್ದಂತೆ, ಶಿಖಿಕರ್ಪೂರ ಯೋಗದಂತೆ ಆದೆನಯ್ಯಾ ಕೂಡಲಚೆನ್ನಸಂಗಯ್ಯನಲ್ಲಿ, ಬಸವಣ್ಣನ ಭಾವಹಸ್ತ ಮುಟ್ಟಿದ ಕಾರಣ.
--------------
ಚನ್ನಬಸವಣ್ಣ
ಅನಾದಿ ಸದಾಶಿವತತ್ವ, ಅನಾದಿ ಈಶ್ವರತತ್ವ, ಅನಾದಿ ಮಹೇಶ್ವರತತ್ವವೆಂಬ, ಅನಾದಿ ತ್ರಿತತ್ವಂಗಳು ತಾನಲ್ಲ. ಆದಿ ಸದಾಶಿವತತ್ವ, ಆದಿ ಈಶ್ವರತತ್ವ, ಆದಿ ಮಹೇಶ್ವರತತ್ವವೆಂಬ ಆದಿ ತ್ರಿತತ್ವಂಗಳು ತಾನಲ್ಲ. ಶಂಕರ ಶಶಿಧರ ಗಂಗಾಧರ ಗೌರೀಶ ಕಳಕಂಠ ರುದ್ರ, ಕಪಾಲಮಾಲಾಧರ ರುದ್ರ,ಕಾಲಾಗ್ನಿರುದ್ರ, ಏಕಪಾದರುದ್ರ, ಮಹಾಕಾಲರುದ್ರ, ಮಹಾನಟನಾಪಾದರುದ್ರ, ಊಧ್ರ್ವಪಾದರುದ್ರ, ಬ್ರಹ್ಮಕಪಾಲ ವಿಷ್ಣುಕಂಕಾಳವ ಪಿಡಿದಾಡುವ ಪ್ರಳಯಕಾಲರುದ್ರರು, ತ್ರಿಶೂಲ ಖಟ್ವಾಂಗಧರರು ವೃಷಭವಾಹನರು ಪಂಚಮುಖರುದ್ರರು, ಶೂನ್ಯಕಾಯನೆಂಬ ಮಹಾರುದ್ರ, ಅನೇಕಮುಖ ಒಂದುಮುಖವಾಗಿ ವಿಶ್ವರೂಪರುದ್ರ, ವಿಶ್ವಾಧಿಕಮಹಾರುದ್ರ, ಅಂಬಿಕಾಪತಿ ಉಮಾಪತಿ ಪಶುಪತಿ ಮೊದಲಾದ ಗಣಾಧೀಶ್ವರರೆಂಬ ಮಹಾಗಣಂಗಳು ತಾನಲ್ಲ. ಸಹಸ್ರಶಿರ ಸಹಸ್ರಾಕ್ಷ ಸಹಸ್ರಬಾಹು ಸಹಸ್ರಪಾದವನುಳ್ಳ ವಿರಾಟ್ಪುರುಷನು ತಾನಲ್ಲ. ವಿಶ್ವತೋಮುಖ ವಿಶ್ವತೋಚಕ್ಷು ತಾನಲ್ಲ. ವಿಶ್ವತೋಪಾದವನುಳ್ಳ ಮಹಾಪುರುಷ ತಾನಲ್ಲ. ಪತಿ-ಪಶು-ಪಾಶಂಗಳೆಂಬ ಸಿದ್ಧಾಂತಜ್ಞಾನತ್ರಯಂಗಳು ತಾನಲ್ಲ. ತ್ವಂ ಪದ ತತ್‍ಪದ ಅಸಿಪದವೆಂಬ ವೇದಾಂತಪದತ್ರಯ ಪದಾರ್ಥಂಗಳು ತಾನಲ್ಲ. ಜೀವಹಂಸ ಪರಮಹಂಸ ಪರಾಪರಹಂಸನೆಂಬ ಹಂಸತ್ರಯಂಗಳು ತಾನಲ್ಲ. ಬ್ರಹ್ಮ ವಿಷ್ಣು ರುದ್ರ ಈಶ್ವರ ಸದಾಶಿವರೆಂಬ ಪಂಚಮೂರ್ತಿಗಳು ತಾನಲ್ಲ. ಆ ಸದಾಶಿವತತ್ವದಲ್ಲುತ್ಪತ್ಯವಾದ ಪೃಥ್ವಿ ಅಪ್ಪು ತೇಜ ವಾಯು ಆಕಾಶ ಚಂದ್ರ ಸೂರ್ಯಾತ್ಮರೆಂಬ ಅಷ್ಟತನುಮೂರ್ತಿಗಳು ತಾನಲ್ಲ. ಅಸ್ಥಿ ಮಾಂಸ ಚರ್ಮ ನರ ರೋಮ -ಈ ಐದು ಪೃಥ್ವಿಯಿಂದಾದವು. ಪಿತ್ಥ ಶ್ಲೇಷ್ಮ ರಕ್ತ ಶುಕ್ಲ ಮೂತ್ರ -ಈ ಐದು ಅಪ್ಪುವಿನಿಂದಾದವು. ಕ್ಷುದೆ ತೃಷೆ ನಿದ್ರೆ ಆಲಸ್ಯ ಸಂಗ -ಈ ಐದು ಅಗ್ನಿಯಿಂದಾದವು. ಪರಿವ ಪಾರುವ ಸುಳಿವ ಕೂಡುವ ಅಗಲುವ -ಈ ಐದು ವಾಯುವಿನಿಂದಾದವು. ವಿರೋಧಿಸುವ ಅಂಜಿಸುವ ನಾಚುವ ಮೋಹಿಸುವ ಅಹುದಾಗದೆನುವ -ಈ ಐದು ಆಕಾಶದಿಂದಾದವು. ಇಂತೀ ಪಂಚಭೌತಿಕದ ಪಂಚವಿಂಶತಿ ಗುಣಂಗಳಿಂದಾದ ದೇಹವು ತಾನಲ್ಲ. ಶ್ರೋತ್ರ ತ್ವಕ್ಕು ನೇತ್ರ ಜಿಹ್ವೆ ಘ್ರಾಣವೆಂಬ ಜ್ಞಾನೇಂದ್ರಿಯಂಗಳು ತಾನಲ್ಲ. ವಾಕು ಪಾದ ಪಾಣಿ ಪಾಯು ಗುಹ್ಯವೆಂಬ ಕರ್ಮೇಂದ್ರಿಯಂಗಳು ತಾನಲ್ಲ. ಶಬ್ದ ಸ್ಪರ್ಶ ರೂಪ ರಸ ಗಂಧಂಗಳೆಂಬ ಪಂಚವಿಷಯಂಗಳು ತಾನಲ್ಲ, ವಚನ ಗಮನ ದಾನ ವಿಸರ್ಗ ಆನಂದವೆಂಬ ಕರ್ಮೇಂದ್ರಿಯಂಗಳ ತನ್ಮಾತ್ರೆಗಳು ತಾನಲ್ಲ, ಇಡೆ ಪಿಂಗಳೆ ಸುಷುಮ್ನಾ ಗಾಂಧಾರೀ ಹಸ್ತಿಜಿಹ್ವಾ ಪೂಷೆ ಪಯಸ್ವಿನೀ ಅಲಂಬು ಲಕುಹ ಶಂಕಿನೀ-ಎಂಬ ದಶನಾಡಿಗಳು ತಾನಲ್ಲ. ಪ್ರಾಣ ಅಪಾನ ವ್ಯಾನ ಉದಾನ ಸಮಾನ ನಾಗ ಕೂರ್ಮ ಕ್ರಕರ ದೇವದತ್ತ ಧನಂಜಯವೆಂಬ ದಶವಾಯುಗಳು ತಾನಲ್ಲ. ಸ್ಥೂಲತನು, ಸೂಕ್ಷ್ಮತನು, ಕಾರಣತನು, ನಿರ್ಮಲತನು, ಆನಂದತನು, ಚಿನ್ಮಯತನು, ಚಿದ್ರೂಪತನು, ಶುದ್ಧತನುವೆಂಬ ಅಷ್ಟತನುಗಳು ತಾನಲ್ಲ. ಜೀವಾತ್ಮ ಅಂತರಾತ್ಮ ಪರಮಾತ್ಮ ನಿರ್ಮಲಾತ್ಮ ಶುದ್ಧಾತ್ಮ ಜ್ಞಾನಾತ್ಮ ಭೂತಾತ್ಮ ಮಹಾತ್ಮವೆಂಬ ಅಷ್ಟ ಆತ್ಮಂಗಳು ತಾನಲ್ಲ. ಸಂಸ್ಥಿತ ತೃಣೀಕೃತ ವರ್ತಿನಿ ಕ್ರೋಧಿನಿ ಮೋಹಿನಿ ಅತಿಚಾರಿಣಿ ಗಂಧಚಾರಿಣಿ ವಾಸಿನಿಯೆಂಬ ಅಂತರಂಗದ ಅಷ್ಟಮದಂಗಳು ತಾನಲ್ಲ. ಕುಲ ಛಲ ಧನ ರೂಪ ಯೌವ್ವನ ವಿದ್ಯೆ ರಾಜ್ಯ ತಪವೆಂಬ ಬಹಿರಂಗ ಅಷ್ಟಮದಂಗಳು ತಾನಲ್ಲ. ರಸ ರುಧಿರ ಮಾಂಸ ಮೇದಸ್ಸು ಅಸ್ಥಿ ಮಜ್ಜೆ ಶುಕ್ಲವೆಂಬ ಸಪ್ತಧಾತುಗಳು ತಾನಲ್ಲ. ತನುವ್ಯಸನ, ಮನವ್ಯಸನ, ಧನವ್ಯಸನ, ರಾಜ್ಯವ್ಯಸನ, ವಿಶ್ವವ್ಯಸನ, ಉತ್ಸಾಹವ್ಯಸನ, ಸೇವಕವ್ಯಸನವೆಂಬ ಸಪ್ತವ್ಯಸನಂಗಳು ತಾನಲ್ಲ. ಕ್ಷುತ್ ಪಿಪಾಸೆ ಶೋಕ ಮೋಹ ಜನನ ಮರಣವೆಂಬ ಷಡೂರ್ಮಿಗಳು ತಾನಲ್ಲ. ಕಾಮ ಕ್ರೋಧ ಲೋಭ ಮೋಹ ಮದ ಮತ್ಸರವೆಂಬ ಅರಿಷಡ್ವರ್ಗಂಗಳು ತಾನಲ್ಲ. ಜಾತಿ, ವರ್ಣ, ಆಶ್ರಮ, ಕುಲ, ಗೋತ್ರ, ನಾಮಗಳೆಂಬ ಷಟ್‍ಭ್ರಮೆಗಳು ತಾನಲ್ಲ. ಆಸ್ತಿ, ಜಾಯತೇ, ಪರಿಣಮತೇ, ವರ್ಧತೇ, ವಿನಶ್ಯತಿ, ಅಪಕ್ಷೀಯತೇ ಎಂಬ ಷಡ್ಭಾವವಿಕಾರಂಗಳು ತಾನಲ್ಲ. ಅನ್ನಮಯ ಪ್ರಾಣಮಯ ಮನೋಮಯ ವಿಜ್ಞಾನಮಯ ಆನಂದಮಯವೆಂಬ ಪಂಚಕೋಶಂಗಳು ತಾನಲ್ಲ. ಸತ್ವ ರಜ ತಮೋಗುಣತ್ರಯಂಗಳು ತಾನಲ್ಲ. ಅಧ್ಯಾತ್ಮಿಕ, ಆಧಿದೈವಿಕ, ಆಧಿಭೌತಿಕವೆಂಬ ತಾಪತ್ರಯಂಗಳು ತಾನಲ್ಲ. ವಿಶ್ವ ತೈಜಸ ಪ್ರಾಜ್ಞವೆಂಬ ಜೀವತ್ರಯಂಗಳು ತಾನಲ್ಲ. ವಾತ ಪಿತ್ಥ ಕಫಂಗಳೆಂಬ ದೋಷತ್ರಯಂಗಳು ತಾನಲ್ಲ. ಆಣವ ಮಾಯಾ ಕಾರ್ಮಿಕವೆಂಬ ಮಲತ್ರಯಂಗಳು ತಾನಲ್ಲ. ಸುಖ ದುಃಖ ಪುಣ್ಯ ಪಾಪಂಗಳು ತಾನಲ್ಲ. ಸಂಚಿತ, ಪ್ರಾರಬ್ಧ, ಆಗಾಮಿಯೆಂಬ ಕರ್ಮತ್ರಯಂಗಳು ತಾನಲ್ಲ. ಅಗ್ನಿಮಂಡಲ, ಆದಿತ್ಯಮಂಡಲ, ಚಂದ್ರಮಂಡಲವೆಂಬ ಮಂಡಲತ್ರಯಂಗಳು ತಾನಲ್ಲ. ಆಧಾರ, ಸ್ವಾಧಿಷಾ*ನ, ಮಣಿಪೂರಕ, ಅನಾಹತ, ವಿಶುದ್ಧಿ, ಆಜ್ಞೆ ಎಂಬ ಷಡುಚಕ್ರಂಗಳ ದಳ ವರ್ಣ ಅಕ್ಷರಂಗಳು ತಾನಲ್ಲ. ಜಾಗ್ರ ಸ್ವಪ್ನ ಸುಷುಪ್ತಿ ತೂರ್ಯ ತೂರ್ಯಾತೀತಗಳೆಂಬ ಪಂಚಾವಸ್ಥೆಗಳು ತಾನಲ್ಲ. ಜಾಗ್ರದಲ್ಲಿಯ ಜಾಗ್ರ, ಜಾಗ್ರದಲ್ಲಿಯ ಸ್ವಪ್ನ, ಜಾಗ್ರದಲ್ಲಿಯ ಸುಷುಪ್ತಿ, ಜಾಗ್ರದಲ್ಲಿಯ ತೂರ್ಯ, ಜಾಗ್ರದಲ್ಲಿಯ ತೂರ್ಯಾತೀತವೆಂಬ ಜಾಗ್ರಪಂಚಾವಸ್ಥೆಗಳು ತಾನಲ್ಲ. ಸ್ವಪ್ನದಲ್ಲಿಯ ಜಾಗ್ರ, ಸ್ವಪ್ನದಲ್ಲಿಯ ಸ್ವಪ್ನ, ಸ್ವಪ್ನದಲ್ಲಿಯ ಸುಷುಪ್ತಿ, ಸ್ವಪ್ನದಲ್ಲಿಯ ತೂರ್ಯ, ಸ್ವಪ್ನದಲ್ಲಿಯ ತೂರ್ಯಾತೀತವೆಂಬ ಸ್ವಪ್ನಪಂಚಾವಸ್ಥೆಗಳು ತಾನಲ್ಲ. ಸುಷುಪ್ತಿಯಲ್ಲಿಯ ಜಾಗ್ರ, ಸುಷುಪ್ತಿಯಲ್ಲಿಯ ಸ್ವಪ್ನ, ಸುಷುಪ್ತಿಯಲ್ಲಿಯ ಸುಷುಪ್ತಿ , ಸುಷುಪ್ತಿಯಲ್ಲಿಯ ತೂರ್ಯ, ಸುಷುಪ್ತಿಯಲ್ಲಿಯ ತೂರ್ಯಾತೀತವೆಂಬ ಸುಷುಪ್ತಿಯ ಪಂಚಾವಸ್ಥೆಗಳು ತಾನಲ್ಲ. ತೂರ್ಯದಲ್ಲಿಯ ಜಾಗ್ರ, ತೂರ್ಯದಲ್ಲಿಯ ಸ್ವಪ್ನ, ತೂರ್ಯದಲ್ಲಿಯ ಸುಷುಪ್ತಿ, ತೂರ್ಯದಲ್ಲಿಯ ತೂರ್ಯ, ತೂರ್ಯದಲ್ಲಿಯ ತೂರ್ಯಾತೀತವೆಂಬ ತೂರ್ಯಪಂಚಾವಸ್ಥೆಗಳು ತಾನಲ್ಲ. ತೂರ್ಯಾತೀತದಲ್ಲಿಯ ಜಾಗ್ರ, ತೂರ್ಯಾತೀತದಲ್ಲಿಯ ಸ್ವಪ್ನ , ತೂರ್ಯಾತೀತದಲ್ಲಿಯ ಸುಷುಪ್ತಿ, ತೂರ್ಯಾತೀತದಲ್ಲಿಯ ತೂರ್ಯ, ತೂರ್ಯಾತೀತದಲ್ಲಿಯ ತೂರ್ಯಾತೀತವೆಂಬ ತೂರ್ಯಾತೀತಪಂಚಾವಸ್ಥೆಗಳು ತಾನಲ್ಲ. ಸಕಲ-ಶುದ್ಧ-ಕೇವಲಾವಸ್ಥೆಗಳು ತಾನಲ್ಲ. ಸಕಲದಲ್ಲಿಯ ಸಕಲ, ಸಕಲದಲ್ಲಿಯ ಶುದ್ಧ, ಸಕಲದಲ್ಲಿಯ ಕೇವಲವೆಂಬ ಸಕಲತ್ರಿಯಾವಸ್ಥೆಗಳು ತಾನಲ್ಲ. ಶುದ್ಧದಲ್ಲಿಯ ಸಕಲ, ಶುದ್ಧದಲ್ಲಿಯ ಶುದ್ಧ, ಶುದ್ಧದಲ್ಲಿಯ ಕೇವಲವೆಂಬ ಶುದ್ಧತ್ರಿಯಾವಸ್ಥೆಗಳು ತಾನಲ್ಲ. ಕೇವಲದಲ್ಲಿಯ ಸಕಲ, ಕೇವಲದಲ್ಲಿಯ ಶುದ್ಧ, ಕೇವಲದಲ್ಲಿಯ ಕೇವಲವೆಂಬ ಕೇವಲತ್ರಿಯಾವಸ್ಥೆಗಳು ತಾನಲ್ಲ. ಜ್ಞಾತೃ ಜ್ಞಾನ ಜ್ಞೇಯವೆಂಬ ಜ್ಞಾನತ್ರಯಂಗಳು ತಾನಲ್ಲ. ಯಮ ನಿಯಮ ಆಸನ ಪ್ರಾಣಾಯಾಮ ಪ್ರತ್ಯಾಹಾರ ಧ್ಯಾನ ಧಾರಣ ಸಮಾಧಿಯೆಂಬ ಅಷ್ಟಾಂಗಯೋಗಂಗಳು ತಾನಲ್ಲ. ಧರ್ಮ ಅರ್ಥ ಕಾಮ ಮೋಕ್ಷಂಗಳೆಂಬ ಚತುರ್ವಿಧ ಪುರುಷಾರ್ಥಂಗಳು ತಾನಲ್ಲ. ಸಾಲೋಕ್ಯ ಸಾಮೀಪ್ಯ ಸಾರೂಪ್ಯ ಸಾಯುಜ್ಯವೆಂಬ ಚತುರ್ವಿಧಪದಂಗಳು ತಾನಲ್ಲ. ಅಣಿಮಾ ಗರಿಮಾ ಲಘಿಮಾ ಮಹಿಮಾ ಪ್ರಾಪ್ತಿ ಪ್ರಕಾವ್ಯ ಇಶಿತ್ವ ವಶಿತ್ವ ಎಂಬ ಅಷ್ಟಮಹದೈಶ್ವರ್ಯಂಗಳು ತಾನಲ್ಲ. ರಾಜಸಹಂಕಾರ ತಾಮಸಹಂಕಾರ ಸ್ವಹಂಕಾರವೆಂಬ ಅಹಂಕಾರತ್ರಯಂಗಳು ತಾನಲ್ಲ. ಅಂಜನಾಸಿದ್ಧಿ, ಘುಟಿಕಾಸಿದ್ಧಿ, ರಸಸಿದ್ಧಿ, ಪಾದೋದಕಸಿದ್ಧಿ, ಪರಕಾಯ ಪ್ರವೇಶ, ದೂರಶ್ರವಣ, ದೂರದೃಷ್ಟಿ, ತ್ರಿಕಾಲಜ್ಞಾನವೆಂಬ ಅಷ್ಟಮಹಾಸಿದ್ಧಿಗಳು ತಾನಲ್ಲ. ಉದರಾಗ್ನಿ ಮಂದಾಗ್ನಿ ಶೋಕಾಗ್ನಿ ಕ್ರೋಧಾಗ್ನಿ ಕಾಮಾಗ್ನಿಯೆಂಬ ಪಂಚಾಗ್ನಿಗಳು ತಾನಲ್ಲ. ಪ್ರಕೃತಿ, ಪುರುಷ, ಕಾಲ, ಪರ, ವ್ಯೋಮಾಕಾಶಂಗಳು ತಾನಲ್ಲ. ಊಧ್ರ್ವಶೂನ್ಯ, ಅಧಃಶೂನ್ಯ, ಮಧ್ಯಶೂನ್ಯ, ಸರ್ವಶೂನ್ಯವಾಗಿಹ ಸಹಜನಿರಾಲಂಬವೇ ತಾನೆಂದರಿದ ಮಹಾಶರಣಂಗೆ ನಾಮ ರೂಪ ಕ್ರಿಯಾತೀತವಾಗಿಹ ಮಹಾಘನವೇ ತನ್ನ ಶಿರಸ್ಸು ನೋಡಾ. ದಿವ್ಯಜ್ಞಾನವೇ ತನ್ನ ಚಕ್ಷು, ಅಚಲಪದವೇ ತನ್ನ ಪುರ್ಬು, ಅಚಲಾತೀತವೇ ತನ್ನ ಹಣೆ ನೋಡಾ. ನಿರಾಕುಳಪದವೇ ತನ್ನ ನಾಸಿಕ, ನಿರಂಜನಾತೀತವೆ ತನ್ನ ಉಶ್ವಾಸ-ನಿಶ್ವಾಸ ನೋಡಾ. ನಿರಾಮಯವೇ ತನ್ನ ಕರ್ಣ, ನಿರಾಮಯಾತೀತವೇ ತನ್ನ ಕರ್ಣದ್ವಾರ ನೋಡಾ. ಅಮಲ ನಿರ್ಮಲವೇ ತನ್ನ ಗಲ್ಲ, ಅಮಲಾತೀತವೇ ತನ್ನ ಗಡ್ಡಮೀಸೆ ಕೋರೆದಾಡೆ ನೋಡಾ. ನಾದಬಿಂದುಕಳಾತೀತವೆ ತನ್ನ ತಾಳೋಷ*ಸಂಪುಟ ನೋಡಾ. ಅಕಾರ, ಉಕಾರ, ಮಕಾರ, ನಾದ ಬಿಂದು ಅರ್ಧಚಂದ್ರ ನಿರೋದಿನಾದಾಂತ ಶಕ್ತಿವ್ಯಾಪಿನಿ ವ್ಯೋಮರೂಪಿಣಿ ಅನಂತ ಆನಂದ ಅನಾಶ್ರಿತ ಸುಮನೆ ಉನ್ಮನಿ ಇಂತೀ ಪ್ರಣವದಲ್ಲಿ ಉತ್ಪತ್ಯವಾದ ಷೋಡಶಕಳೆ ತನ್ನ ಷೋಡಶ ದಂತಂಗಳು ನೋಡಾ. ಆ ದಂತಂಗಳ ಕಾಂತಿ ಅನೇಕಕೋಟಿ ಸಿಡಿಲೊಡೆದ ಬಯಲಪ್ರಕಾಶವಾಗಿಹುದು ನೋಡಾ. ತನ್ನ ಕೊರಳೆ ನಿರಾಕುಳ, ತನ್ನ ಭುಜಂಗಳೆ ಅಪ್ರಮಾಣ ಅಗೋಚರ ನೋಡಾ. ತನ್ನ ಹಸ್ತಾಂಗುಲಿ ನಖಂಗಳೆ ಪರತತ್ವ, ಶಿವತತ್ವ, ಗುರುತತ್ವ, ಲಿಂಗತತ್ವಂಗಳು ನೋಡಾ. ಪರಬ್ರಹ್ಮವೇ ತನ್ನ ಎದೆ, ಆ ಪರಬ್ರಹ್ಮವೆಂಬ ಎದೆಯಲ್ಲಿ ನಿರಂಜನಪ್ರಣವ ಅವಾಚ್ಯಪ್ರಣವವೆಂಬ ಸಣ್ಣ ಕುಚಂಗಳು ನೋಡಾ. ಚಿತ್ತಾಕಾಶ ಭೇದಾಕಾಶವೆ ತನ್ನ ದಕ್ಷಿಣ ವಾಮ ಪಾಶ್ರ್ವಂಗಳು ನೋಡಾ. ಬಿಂದ್ವಾಕಾಶವೇ ತನ್ನ ಬೆನ್ನು ನೋಡಾ. ಮಹಾಕಾಶವೇ ತನ್ನ ಬೆನ್ನ ನಿಟ್ಟೆಲವು ನೋಡಾ. ಪಂಚಸಂಜ್ಞೆಯನುಳ್ಳ ಅಖಂಡಗೋಳಕಾಕಾರಲಿಂಗವೆ ತನ್ನ ಗರ್ಭ ನೋಡಾ. ಆ ಗರ್ಭ ಅನೇಕಕೋಟಿ ಸೂರ್ಯಚಂದ್ರಾಗ್ನಿ ಪ್ರಕಾಶವಾಗಿಹುದುನೋಡಾ. ಆ ಗರ್ಭದಲ್ಲಿ ಅನೇಕಕೋಟಿತತ್ವಂಗಳು, ಅನೇಕಕೋಟಿ ಸದಾಶಿವರು, ಅನೇಕಕೋಟಿ ಮಹೇಶ್ವರರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಸದಾಶಿವರು, ಅನೇಕಕೋಟಿರುದ್ರರು, ಅನೇಕಕೋಟಿ ವಿಷ್ಣಾ ್ವದಿಗಳಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಬ್ರಹ್ಮರು, ಅನೇಕಕೋಟಿ ಋಷಿಗಳು ಅನೇಕಕೋಟಿ ಚಂದ್ರಾದಿತ್ಯರು ಅಡಗಿಹರು ನೋಡಾ. ಆ ಗರ್ಭದಲ್ಲಿ ಅನೇಕಕೋಟಿ ಇಂದ್ರರು, ಅನೇಕಕೋಟಿ ದೇವರ್ಕಗಳು, ಅನೇಕಕೋಟಿ ಬ್ರಹ್ಮಾಂಡಗಳಡಗಿಹವು ನೋಡಾ. ತನ್ನ ನಡುವೆ ವ್ಯೋಮಾತೀತವು, ತನ್ನ ಕಟಿಸ್ಥಾನವೇ ಕಲಾಪ್ರಣವ, ತನ್ನ ಪಚ್ಚಳವೆ ಅನಾದಿಪ್ರಣವ ಆದಿಪ್ರಣವ ನೋಡಾ. ತನ್ನ ಉಪಸ್ಥವೇ ಬ್ರಹ್ಮ, ವಿಷ್ಣು, ರುದ್ರ, ಈಶ್ವರ, ಸದಾಶಿವ ಮೊದಲಾದ ಸಮಸ್ತ ದೇವರ್ಕಗಳಿಗೂ ಜನನಸ್ಥಳವಾಗಿಹ ನಿರ್ವಾಣಪದ ನೋಡಾ. ಶಿವಸಂಬಂಧ, ಶಕ್ತಿಸಂಬಂಧವಾಗಿಹ ಓಂಕಾರವೆ ತನ್ನ ಒಳದೊಡೆ ನೋಡಾ. ಸಚ್ಚಿದಾನಂದ ಪರಮಾನಂದವೆ ತನ್ನ ಒಳಪಾದ ಕಂಬಗಳು ನೋಡಾ. ಚಿದಾತ್ಮ ಪರಮಾತ್ಮನೆ ತನ್ನ ಹರಡು, ಅತಿಸೂಕ್ಷ್ಮಪಂಚಾಕ್ಷರವೆ ತನ್ನ ಪಾದಾಂಗುಷಾ*ಂಗುಲಿಗಳೆಂಬ ಸಾಯುಜ್ಯಪದ ನೋಡಾ. ತನ್ನ ಸ್ವರವೆ ಪರಾಪರ, ತನ್ನ ಮಾತೇ ಮಹಾಜ್ಯೋತಿರ್ಮಯಲಿಂಗ, ಚಿನ್ಮಯ ಚಿದ್ರೂಪ ಚಿತ್ಪ್ರಕಾಶವೆ ತನ್ನ ವಪೆ ನೋಡಾ. ಇಷ್ಟಲಿಂಗ, ಪ್ರಾಣಲಿಂಗ, ಭಾವಲಿಂಗ, ಆಚಾರಲಿಂಗ, ಗುರುಲಿಂಗ, ಶಿವಲಿಂಗ, ಜಂಗಮಲಿಂಗ, ಪ್ರಸಾದಲಿಂಗ, ಮಹಾಲಿಂಗ ಮೊದಲಾಗಿ ಇನ್ನೂರ ಹದಿನಾರು ಷಡುಸ್ಥಲಲಿಂಗವೆ ತನ್ನಂತಃಸ್ಥಾನದಲ್ಲಿ ಧರಿಸಿಹ ಆಭೂಷಣಂಗಳು ನೋಡಾ. ಮಹಾಲಿಂಗವೇ ತುರುಬು, ಶಿವಜ್ಞಾನವೆ ಶೃಂಗಾರವಾಗಿಹ ತನ್ನ ತಾನರಿದು ಅಂತಃಶೂನ್ಯ, ಅಧಃಶೂನ್ಯ, ಬಹಿಃಶೂನ್ಯ, ದಶದಿಶಾಶೂನ್ಯ ನಿರಾಕಾರವಾಗಿಹ ತನ್ನ ಅಂಗ ಪ್ರತ್ಯಂಗ ಸ್ವರೂಪ ಸ್ವಭಾವಂಗಳ ತಿಳಿದು ಮಹಾಶರಣನು ತಾನೆ ಗುರು, ತಾನೆ ಲಿಂಗ, ತಾನೆ ಜಂಗಮ, ತಾನೆ ಪರಮಪಾದೋದಕಪ್ರಸಾದ ನೋಡಾ. ತಾನೆ ನಾದಬಿಂದುಕಳಾತೀತ ನೋಡಾ. ತಾನೆ ಶೂನ್ಯ ನಿಶ್ಶೂನ್ಯನು, ತಾನೆ ಘನಶೂನ್ಯ, ಮಹಾಘನಶೂನ್ಯ ನೋಡಾ. ತಾನೆ ಬಯಲು ನಿರ್ಬಯಲು, ತಾನೆ ನಿರುಪಮ ನಿರಾಕಾರ ತಾನೆ ನಿರಾಳ ನಿರಾಲಂಬ ನೋಡಾ. ತಾನೆ ಸಚ್ಚಿದಾನಂದ ನಿತ್ಯಪರಿಪೂರ್ಣನು, ತನ್ನಿಂದಧಿಕವಪ್ಪ ಪರಬ್ರಹ್ಮವೊಂದಿಲ್ಲವಾಗಿ ತಾನೆ ಸ್ವಯಂಜ್ಯೋತಿರ್ಲಿಂಗ ನೋಡಾ ಅಪ್ರಮಾಣಕೂಡಲಸಂಗಮದೇವಾ.
--------------
ಬಾಲಸಂಗಯ್ಯ ಅಪ್ರಮಾಣ ದೇವ
ಮೇಣಾ ಮಂತ್ರಮೂರ್ತಿಗೆ ನಾದವೆ ಕಿರೀಟಮದೆಂತೆನೆ ಯಾ ಪರಶಿವನ ನಿಷ್ಕಳಶಕ್ತಿಯದೆ ನಾದವದೆಯಾದಿಶಕ್ತಿಯದೆ ಓಂಕಾರವದರುತ್ಪತ್ತಿಯೆಂತೆನೆ ಅಕಾರವೆ ನಾದ ಉಕಾರವೆ ಬಿಂದುವುಭಯಂಗೂಡಿ ಅವು `ಓ ಭವತಿ'ಯೆಂದೊಂದೆಯಾಗಿ ಓ ಎನಿಸಿತ್ತದರಂತೆ ಆ ಓ ಕೂಡಿ ಔಯೆನಿಸಿತ್ತು ಹಾಂಗೆಯೆ ಆ ಇ ಕೂಡಿ ಎ ಎನಿಸಿತ್ತದರಂತೆ ಅ ಏ ಕೂಡಿ ಐ ಏ ಓ ಔ ಯೆಂಬೀ ಚತುರಕ್ಷರಂಗಳ್ರೂಪಾಂತರದಿಂ ಸಂಧ್ಯಕ್ಷರಂಗಳೆನಿಸುಗುಮವರೋಳ್ ಓಕಾರವೆ ಆದಿಶಕ್ತಿಯ ಧ್ವಜಾಕಾರ ರೇಖೆಗಳೆ, ಈ ಮೂಲಪ್ರಸಾದ ಮಂತ್ರಮೂರ್ತಿಯ ಕಿರೀಟವೆಂದು ನಿರವಿಸಿದೆಯಯ್ಯಾ, ಪರಶಿವಲಿಂಗೇಶ್ವರ.
--------------
ಇಮ್ಮಡಿ ಮುರಿಘಾ ಗುರುಸಿದ್ಧ / ಗುರುಸಿದ್ಧಸ್ವಾಮಿ
ಒಂದೇ ಆಗಿರ್ದ ಪರಶಿವನು ಮೂರಾಗಿ ಮೂರರಿಂದೆ ಪೂಜೆಗೊಂಡು ಎರಡಾಗಿ ಮೂರು ಎರಡು ಭೇದವಿಲ್ಲದೆ ಒಂದಾಗಿ ತೋರಿದಿರಿ. ಅದೆಂತೆಂದೊಡೆ :ಅಖಂಡ ಪರಶಿವನ ಭೇದಿಸಿ ಕಾಂಬಲು ತೋರಿದ ನಾದವೇ ಗುರುವಾಗಿ, ಬಿಂದುವೆ ಲಿಂಗವಾಗಿ, ಕಳೆಯೇ ಜಂಗಮವಾಗಿ, ಸುಜಲವೆ ಪಾದೋದಕವಾಗಿ, ತಿಳಿಯೇ ಪ್ರಸಾದವಾಗಿ, ಕಾಣಿಸುವ ಸುಪ್ರಕಾಶದ ತೇಜಪುಂಜವೆ ಶ್ರೀವಿಭೂತಿಯಾಗಿ, ಸೂರ್ಯ ಚಂದ್ರಾದಿಗಳೆ ರುದ್ರಾಕ್ಷಿಮಣಿಯಾಗಿ, ಪಿಂಡಬ್ರಹ್ಮಾಂಡಕೊಂದೆ ಎನಿಸಿದ ಓಂಕಾರವೆ ಸರ್ವಮಂತ್ರಗಳ ಶ್ರೇಷ* ಆದಿಮಂತ್ರವೆನಿಸಿ, ಬ್ರಹ್ಮಾಂಡ ಅಷ್ಟಾವರಣದ ಇನ್ನೊಂದು ಪರಿಯಾಗಿ ತೋರಿ, ಹಲವು ಪರಿಯಲಿ ಲೀಲೆಯಾಗಿ ಮೆರೆದ ಹಲವು ಹಲವಲ್ಲದೆ ಹಲವು ಒಂದಾಗಿ, ಒಂದೆ ತಾನಾದ ನಿರುಪಮ ನಿರಾಳ ಮಹತ್ಪ್ರಭು ಮಹಾಂತಯೋಗಿ.
--------------
ಮಡಿವಾಳಪ್ಪ / ಕಡಕೋಳ ಮಡಿವಾಳಪ್ಪ
ಪ್ರಥಮದಲ್ಲಿ ನಾಮ ರೂಪು ಕ್ರೀ ಏನೂ ಏನೂ ಇಲ್ಲದ ಮಹಾಘನ ಶೂನ್ಯಬ್ರಹ್ಮವು. ಆ ಶೂನ್ಯಬ್ರಹ್ಮದಿಂದ ಶುದ್ಧ ಪ್ರಣವ. ಆ ಶುದ್ಧ ಪ್ರಣವಧಿಂದ ಚಿತ್ತು ಭಾವದಕ್ಷರ. ಆ ಚಿತ್ತು ಭಾವದಕ್ಷರದಿಂದ ಪರಶಕ್ತಿ. ಆ ಪರಾಶಕ್ತಿಯಿಂದ ಅಕ್ಷರತ್ರಯಂಗಳು. ಆ ಅಕ್ಷರತ್ರಯಂಗಳಿಂದ ಓಂಕಾರ. ಆ ಓಂಕಾರವೆ ಬಸವಣ್ಣನು. ಆ ಬಸವಣ್ಣನೆ ಎನ್ನ ವದನಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಲದ ಭುಜಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ಭುಜಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಮಧ್ಯಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಬಲದ ತೊಡೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಎಡದ ತೊಡೆಗೆ ಯಕಾರಾವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಯತಕ್ಕೆ ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಯತಕ್ಕೆ ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸನ್ನಿಹಿತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರೀಗೆ ಅವಾಚ್ಯ ಸ್ವರೂಪಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಮಹಾಶೂನ್ಯ ಸ್ವರೂಪನಾಗಿ ಬಂದನಯ್ಯ ಬಸವಣ್ಣ. ಎನ್ನ ರುಧಿರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಂಸಕ್ಕೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮೇದಸ್ಸಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಸ್ಥಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಜ್ಜೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಗಮಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದೇಹಭಾವ ಕೊಂದಹೆನೆಂದು ಬಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೊನ್ನು ಹೆಣ್ಣು ಮಣ್ಣೆಂಬ ಸಕಲಾಸೆಯ ಕೊಂದಹೆನೆಂದು ಸಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಂದ್ರಿಯ ವಿಷಯಂಗಳ ಕೊಂದಹೆನೆಂದು ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಾದಕ್ಕೆ ಆಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬಿಂದುವಿಂಗೆ ಉಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕಳೆಗೆ ಮಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶ್ವಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ತೈಜಸಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ ಎನ್ನ ಪ್ರಜ್ಞೆಗೆ ತೃಪ್ತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸತ್ವಕ್ಕೆ ಶುದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ರಜಕ್ಕೆ ಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ತಮಕ್ಕೆ ಪ್ರಸಿದ್ಧಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನಗೆ ಬಕಾರವೆ ಗುರುವಾಗಿ ಬಂದನಯ್ಯ ಬಸವಣ್ಣ. ಎನಗೆ ಸಕಾರವೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನಗೆ ವಕಾರವೆ ಜಂಗಮವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಥೂಲತನುವಿಂಗೆ ಇಷ್ಟಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸೂಕ್ಷ ್ಮತನುವಿಂಗೆ ಪ್ರಾಣಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಕಾರಣತನುವಿಂಗೆ ಭಾವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶಿವ ಕ್ಷೇತ್ರಜ್ಞ ಕರ್ತಾರ ಭಾವ ಚೈತನ್ಯ ಅಂತರ್ಯಾಮಿಯೆಂಬ ಷಡುಮೂರ್ತಿಗಳಿಗೆ ನಕಾರ ಮಃಕಾರ ಶಿಕಾರ ವಾಕಾರ ಯಕಾರ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಸ್ಸಿಂಗೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಬ್ರಹ್ಮತತ್ವಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಷ್ಣುತತ್ವಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ರುದ್ರತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಈಶ್ವರತತ್ವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸದಾಶಿವತತ್ವಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಹಾಶ್ರೀಗುರುತತ್ವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೃಥ್ವಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪ್ಪುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಗ್ನಿತತ್ವಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಕಾಶಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆತ್ಮಂಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣವಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಪಾನವಾಯುವಿಂಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವ್ಯಾನವಾಯುವಿಂಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಉದಾನವಾಯುವಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮಾನವಾಯುವಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ ಎನ್ನ ಪಂಚವಾಯುವಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆಧಾರಚಕ್ರಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಾಧಿಷಾ*ನಚಕ್ರಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಣಿಪೂರಚಕ್ರಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅನಾಹತಚಕ್ರಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ವಿಶುದ್ಧಿಚಕ್ರಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಆಜ್ಞಾಚಕ್ರಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರ್ದಳಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡುದಳಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶದಳಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶದಳಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿದಳಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚತುರಾಕ್ಷರಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷಡಾಕ್ಷರಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದಶಾಕ್ಷರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶಾಕ್ಷರಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಾಕ್ಷರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಿಯಾಕ್ಷರಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಮ. ಎನ್ನ ಕೆಂಪುವರ್ಣಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೀಲವರ್ಣಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕುಂಕುಮವರ್ಣಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪೀತವರ್ಣಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ವೇತವರ್ಣಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಣಿಕ್ಯವರ್ಣಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ರಾಗ್ರಾವಸ್ಥೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ವಪ್ನಾವಸ್ಥೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸುಷುಪ್ತಾವಸ್ಥೆಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತೂರ್ಯಾವಸ್ಥೆಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅತೀತಾವಸ್ತೆಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿರಾವಸ್ಥೆಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಂತಃಕರಣಂಗಳಿಗೆ ಚತುರ್ವಿಧ ಬಿಂದು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅರಿಷಡ್ವರ್ಗಂಗಳಿಗೆ ಷಡ್ವಿಧಧಾತು ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದಶವಾಯುಗಳಿಗೆ ದಶವಿದ ಕ್ಷೇತ್ರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ದ್ವಾದಶೇಂದ್ರಿಯಂಗಳಿಗೆ ದ್ವಾದಶ ವಿಕೃತಿಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಷೋಡಶಕಲೆಗೆ ಷೋಡಶಕಲಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರ ಮಮಕಾರಗಳಿಗೆ ವಿದ್ಯಾಲಿಂಗವಾಗಿ ಬಂದನಯ್ಯಬಸವಣ್ಣ. ಎನ್ನ ಭಕ್ತಿಸ್ಥಲಕ್ಕೆ ಆಚಾರಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಮಾಹೇಶ್ವರಸ್ಥಲಕ್ಕೆ ಗುರುಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಸಾದಿಸ್ಥಲಕ್ಕೆ ಶಿವಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಪ್ರಾಣಲಿಂಗಿಸ್ಥಳಕ್ಕೆ ಜಂಗಮಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಶರಣಸ್ಥಲಕ್ಕೆ ಪ್ರಸಾದಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಐಕ್ಯಸ್ಥಲಕ್ಕೆ ಮಹಾಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ತಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಬುದ್ಧಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅಹಂಕಾರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಮನಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಭಾವಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಕ್ರಿಯಾಶಕ್ತಿಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜ್ಞಾನಶಕ್ತಿಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಇಚ್ಛಾಶಕ್ತಿಗೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆದಿಶಕ್ತಿಗೆ ವಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪರಶಕ್ತಿಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಚಿತ್ಶಕ್ತಿಗೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರದ್ಧೆಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನಿಷೆ*ಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅವಧಾನಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಅನುಭಾವಕ್ಕೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಆನಂದಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಸಮರಸಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶಬ್ದಕ್ಕೆ ಗುರುವಾಗಿ ಬಂದನಯ್ಯ ಬಸವಣ್ಣ. ಎನ್ನ ಸ್ಪರುಶನಕ್ಕೆ ಲಿಂಗವಾಗಿ ಬಂದನಯ್ಯ ಬಸವಣ್ಣ. ಎನ್ನ ರೂಪಿಂಗೆ ಶಿವಲಾಂಛನವಾಗಿ ಬಂದನಯ್ಯ ಬಸವಣ್ಣ. ಎನ್ನ ರಸಕ್ಕೆ ಶಿವಪ್ರಸಾದವಾಗಿ ಬಂದನಯ್ಯ ಬಸವಣ್ಣ. ಎನ್ನ ಗಂಧಕ್ಕೆ ಶಿವಾನುಭಾವವಾಗಿ ಬಂದನಯ್ಯ ಬಸವಣ್ಣ ಎನ್ನ ನಾಸಿಕಕ್ಕೆ ನಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಜಿಹ್ವೆಗೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ನೇತ್ರಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ತ್ವಕ್ಕಿಂಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಶ್ರೋತ್ರಕ್ಕೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಹೃದಯಕ್ಕೆ ಓಂಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ವಾಕ್ಕಿಂಗೆ ಯಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಣಿಗೆ ವಾಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾದಕ್ಕೆ ಶಿಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಗುಹ್ಯಕ್ಕೆ ಮಃಕಾರವಾಗಿ ಬಂದನಯ್ಯ ಬಸವಣ್ಣ. ಎನ್ನ ಪಾಯುವಿಂಗೆ ನಕಾರವಾಗಿ ಬಂದನಯ್ಯ ಬಸವಣ್ಣ. ಇಂತೀ ಪಂಚೇಂದ್ರಿಯಂಗಳೆ ಪಂಚಮಹಾಯಜ್ಞ. ಆ ಪಂಚಮಹಾಯಜ್ಞದಲ್ಲಿ ಎನ್ನ ಮನ ಹಾರೈಸಿ ಪೂರೈಸಿ ಒಲಿದು ಕೇಳಿತ್ತು ಮುಟ್ಟಿತ್ತು ನೋಡಿತ್ತು ರುಚಿಸಿತ್ತು ವಾಸಿಸಿತ್ತು. ಎನ್ನ ಮಾನಸ ವಾಚಕ ಕಾಯಕ ಕರಣಂಗಳೆಲ್ಲವು ಪಂಚಮಹಾಯಜ್ಞ ಸೋಂಕಿ ಪಂಚಮಹಾಯಜ್ಞವಪ್ಪುದು ತಪ್ಪದು. ಅದೆಂತೆಂದಡೆ- ಮಹಾಜ್ಯೋತಿಯ ಸೋಂಕಿದ ಉತ್ತಮ ಅಧಮ ತೃಣ ಮೊದಲಾದವೆಲ್ಲವು ಮಹಾ ಅಗ್ನಿಯ ಸೋಂಕಿ ಮಹಾ ಅಗ್ನಿಯಪ್ಪುದು ತಪ್ಪದು. ಇಂತಪ್ಪ ಮಹಾಯಜ್ಞವನೊಳಕೊಂಡಿಪ್ಪ ಮೂಲಾಗ್ನಿಯೇ ಬಸವಣ್ಣ. ಆ ಬಸವಣ್ಣನೆ ಗುರು ಲಿಂಗ ಜಂಗಮ ಪ್ರಸಾದ ಪಾದೋದಕ ವಿಭೂತಿ ರುದ್ರಾಕ್ಷಿ ಪಂಚಾಕ್ಷರಿಯೇ ಚಿದ್ಬ ್ರಹ್ಮ. ಆ ಚಿದ್ಬ ್ರಹ್ಮವೇ ಬಸವಣ್ಣ. ಆ ಬಸವಣ್ಣನೇ ಎನಗೆ ಅಷ್ಟಾವರಣ ಸ್ವರೂಪನಾದ ಸಚ್ಚಿದಾನಂದ ಬಸವಣ್ಣ. ನಿತ್ಯಪರಿಪೂರ್ಣ ಬಸವಣ್ಣ. ಅಖಂಡಾದ್ವಯ ಬಸವಣ್ಣ. ನಿರಂಜನ ಬಸವಣ್ಣ. ನಿರ್ಮಾಯ ಬಸವಣ್ಣ, ನಿರಾಚರಣ ಬಸವಣ್ಣ. ನಿರ್ಜನಿತ ಬಸವಣ್ಣ. ನಿರ್ಲೇಪ ಬಸವಣ್ಣ. ನಿಃಕಪಟಿ ಬಸವಣ್ಣ. ಅಸಾಧ್ಯ ಸಾಧಕ ಬಸವಣ್ಣ. ಅಭೇದ್ಯ ಭೇದಕ ಬಸವಣ್ಣ. ಚಿತ್ಪ್ರಕಾಶ ಬಸವಣ್ಣ. ಇಂತಪ್ಪ ಬಸವಣ್ಣನ ಅಂಗವೆ ಚಿದಾಕಾಶ. ಆ ಚಿದಾಕಾಶದ ಮಧ್ಯದಲ್ಲಿ ಚಿತ್ಪ್ರಾಣವಾಯು. ಆ ಚಿತ್ಪ್ರಾಣವಾಯುವಿನ ಮಧ್ಯದಲ್ಲಿ ಚಿದಾಗ್ನಿ. ಆ ಚಿದಾಗ್ನಿಯ ಮಧ್ಯದಲ್ಲಿ ಚಿಜ್ಜಲ. ಆ ಚಿಜ್ಜಲದ ಮಧ್ಯದಲ್ಲಿ ಚಿದ್ಭೂಮಿ. ಆ ಚಿದ್ಭೂಮಿಯ ಮಧ್ಯದಲ್ಲಿ ಹೃದಯ. ಆ ಹೃದಯದ ಮಧ್ಯದಲ್ಲಿ ಆಕಾರ ಉಕಾರ ಮಕಾರ ಪ್ರಣಮಪೀಠ. ಆ ಪ್ರಣವಪೀಠದ ಮಧ್ಯದಲ್ಲಿ ಜಂಗಮ ಆ ಜಂಗಮವ ಮಕುಟದಲ್ಲಿ ಶೂನ್ಯಲಿಂಗ. ಆ ಶೂನ್ಯಲಿಂಗದಲ್ಲಿ ಚಿದಂಬರ, ಆ ಚಿದಂಬರರಲ್ಲಿ ಶಿವಶಕ್ತಿ. ಆ ಶಿವಶಕ್ತಿಯಲ್ಲಿ ಪಂಚಶಕ್ತಿ. ಆ ಪಂಚಶಕ್ತಿಯಲ್ಲಿ ಪಂಚನಾದ. ಆ ಪಂಚನಾದದಲ್ಲಿ ಪಂಚಸಾದಾಖ್ಯ. ಆ ಪಂಚಸಾದಾಖ್ಯದಲ್ಲಿ ಈಶ್ವರ. ಆ ಈಶ್ವರನಲ್ಲಿ ಮಾಹೇಶ್ವರ. ಆ ಮಾಹೇಶ್ವರನಲ್ಲಿ ರುದ್ರ. ಆ ರುದ್ರನಲ್ಲಿ ತ್ರಯವಯ ಹಿರಣ್ಯಗರ್ಭ ವಿರಾಟ್‍ಮೂರ್ತಿ. ಇಂತೀ ಎಂಬತ್ತುಮೂರು ಮೂರ್ತಿಗಳೊಳಗೆ ಎಂಬತ್ತೆರಡೆ ಬಸವಣ್ಣನಂಗವೊಂದೆ ಪ್ರಾಣ. ಆ ಪ್ರಾಣ ಚೈತನ್ಯ ಶೂನ್ಯವೆ ಗೋಳಕ ಗೋಮುಖ ವೃತ್ತಾಕಾರವಾಗಿ ಕರಸ್ಥಲದಲ್ಲಿ ಪಿಡಿದು ಆ ಲಿಂಗದ ಆದಿಪ್ರಣಮವೆ ಪೀಠ, ಆಕಾರವೆ ಕಂಠ, ಉಕಾರವೆ ಗೋಮುಖ, ಮಕಾರವೆ ವರ್ತುಳ, ನಾಳ ಬಿಂದು ಮಹಾತೇಜ. ನಾದವೆ ಅಖಂಡಲಿಂಗ. ಇಂತಪ್ಪ ಬಸವಣ್ಣನ ನಿತ್ಯತ್ವವೆ ಲಿಂಗ; ಪೂರ್ಣತ್ವವೆ ಗುರು. ಚಿತ್ಪ್ರಕಾಶವೆ ಜಂಗಮ. ಆನಂದವೆ ಪ್ರಸಾದ, ಚಿದ್ರಸದ ಪ್ರವಾಹವೆ ಪಾದತೀರ್ಥ. ಇಂತಪ್ಪ ಬಸವಣ್ಣ ಅನಂತಕೋಟಿ ಬ್ರಹ್ಮಾಂಡಗಳ ರೋಮಕೂಪದಲ್ಲಿ ಸಂಕಲ್ಪಿಸಿ ಅಲ್ಲಿದ್ದಾತ್ಮಂಗೆ ಸುಜ್ಞಾನ ಕ್ರೀಯನಿತ್ತು ತದ್ ಭೃತ್ಯ ಕರ್ತೃ ತಾನಾಗಿ ಇಷ್ಟಾರ್ಥಸಿದ್ಧಿಯನೀವುತಿಪ್ಪ ಬಸವಣ್ಣನ ಭೃತ್ಯರ ಭೃತ್ಯರ ತದ್‍ಭೃತ್ಯನಾಗಿರಿಸಿ ಬಸವಣ್ಣನ ಪಡುಗ ಪಾದರಕ್ಷೆಯ ಹಿಡಿವ ಭಾಗ್ಯವಯೆನಗೀವುದಯ್ಯ, ಪರಂಜ್ಯೋತಿ ಮಹಾಲಿಂಗಗುರು ಸಿದ್ಧಲಿಂಗಪ್ರಭುವಿನಲ್ಲಿ ಬಸವಣ್ಣನ ಅರುಹಿಕೊಟ್ಟ ಸಿದ್ಧೇಶ್ವರನ ಶ್ರೀಪಾದಪದ್ಮದಲ್ಲಿ ಭೃಂಗನಾಗಿರ್ದೆನಯ್ಯಾ, ಬೋಳಬಸವೇಶ್ವರ ನಿಮ್ಮ ಧರ್ಮ ನಿಮ್ಮ ಧರ್ಮ.
--------------
ಗುಮ್ಮಳಾಪುರದ ಸಿದ್ಧಲಿಂಗ
ಅಕಾರವದು ಸತ್ವ, ಉಕಾರವದು ರಜ, ಮಕಾರವದು ತಮ. ಅಕಾರವದು ಬ್ರಹ್ಮಜನಕ, ಉಕಾರವದು ವಿಷ್ಣುಜನಕ, ಮಕಾರವದು ರುದ್ರಜನಕ. ಅಕಾರವದು ಸೃಷ್ಟಿ, ಉಕಾರವದು ಸ್ಥಿತಿ, ಮಕಾರವದು ಲಯ. ಅಕಾರವದು ಪೀತ, ಉಕಾರವದು ಶ್ಯಾಮ, ಮಕಾರವದು ಶುಕ್ಲ. ಅಕಾರವದು ವಿಧಿ, ಉಕಾರವದು ವಿಧಾನ, ಮಕಾರವದು ಧ್ಯಾನ. ಅಕಾರವದು ಪಾತಾಳ, ಉಕಾರವದು ಮೃತ್ರ್ಯ, ಮಕಾರವದು ಸ್ವರ್ಗ. ಅಕಾರ ಉಕಾರ ಮಕಾರ ಮೂರರ ಏಕತ್ವವೆ ಓಂಕಾರ. ಆ ಓಂಕಾರವೆ ಆಶಕ್ತಿಯ ಗದ್ದುಗೆ. ಆ ಗದ್ದುಗೆಯೆ ಕಪಿಲಸಿದ್ಧಮಲ್ಲಿಕಾರ್ಜುನನ ಅರಮನೆ ನೋಡಾ.
--------------
ಸಿದ್ಧರಾಮೇಶ್ವರ
-->