ಅಥವಾ

ಒಟ್ಟು 4 ಕಡೆಗಳಲ್ಲಿ , 2 ವಚನಕಾರರು , 2 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಊರ್ವಸಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರಲ್ಲದೆ, ಹಂದಿ ಕರ್ಪೂರವ ತಿಂದು ಎಲ್ಲರಿಗೆ ಮುತ್ತ ಕೊಟ್ಟಡೆ ಮಚ್ಚುವರೆ, ಹುಡುಹುಡು ಎಂದಟ್ಟುವರಲ್ಲದೆ ? ನಡೆನುಡಿ ಶುದ್ಧವುಳ್ಳವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರಲ್ಲದೆ, ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಅನುಭಾವವ ಮಾಡಿದಡೆ ಮಚ್ಚುವರೆ ? ನಡೆನುಡಿ ಶುದ್ಧವಿಲ್ಲದವರು ಪುರಾತನರ ವಚನವ ಓದಿದಡೆ ಆ ಹಂದಿಗಿಂದ ಕರಕಷ್ಟ, ಎನ್ನಯ್ಯಪ್ರಿಯ ಇಮ್ಮಡಿ ನಿಃಕಳಂಕಮಲ್ಲಿಕಾರ್ಜುನಾ.
--------------
ಮೋಳಿಗೆ ಮಹಾದೇವಿ
ಹರ[ನಿತ್ತಾ]ಗ್ರಹ ನಿಗ್ರಹದ ಬೆಸನ, ಗುರುನಿರೂಪವೆಂದು ಕೈಕೊಂಡು, ಕರುಣಿ ಬಸವಣ್ಣ ಕೈಲಾಸದಿಂದ ಗುರುಲಿಂಗಜಂಗಮಕ್ಕೆ ಭಕ್ತಿಯ ಮಾಡಬೇಕೆಂದು ಏಳುನೂರೆಪ್ಪತ್ತು ಅಮರಗಣಂಗಳು ಸಹಿತ ಮತ್ರ್ಯಲೋಕಕ್ಕೆ ಬಂದನಯ್ಯಾ. ಶಿವಸಮಯಕ್ಕಾಧಾರವಾದನಯ್ಯಾ, ಬಸವಣ್ಣನು. ಜಡರುಗಳ ಮನದ ಕತ್ತಲೆಯ ಕಳೆಯಲೆಂದು ಕಟ್ಟಿತ್ತು ಕಲ್ಯಾಣದಲ್ಲಿ ಮಹಾಮಠವು. ಪರಮನಟ್ಟಿದ ಓಲೆ ಬಂದಿಳಿಯಿತ್ತು, ಬಿಜ್ಜಳನ ಸಿಂಹಾಸನದ ಮುಂದೆ. ಅದತಂದು ಓದಿದಡೆ ಸೃಷ್ಟಿಯ ಸೇನಬೋವರಿಗೆ ತಿಳಿಯದು ಛಪ್ಪನ್ನ ದೇಶದ ಭಾಷೆಯ ಲಿಪಿ ಮುನ್ನವಲ್ಲ. ಇದನೋದಿದವರಿಗೆ ಆನೆ ಸೇನೆ ಕುದುರೆ ಭಂಡಾರ ಅರವತ್ತಾರು ಕರಣಿಕರಿಗೆ ಮುಖ್ಯನ ಮಾಡುವೆನೆಂದು ಬಿಜ್ಜಳ ಭಾಷೆಯ ಕೊಡುತ್ತಿರಲು, ಹರನಿರೂಪವ ಶಿರದ ಮೇಲಿಟ್ಟು ಶಿವಶರಣೆಂದು ಬಸವಣ್ಣನೋದಿ ಮೆಟ್ಟಿ ತೆಗೆಸಿದನಯ್ಯಾ ಅರವತ್ತಾರು ಕೋಟಿ ವಸ್ತುವ ಅರಮನೆಗೆ. ರಾಜ್ಯಕ್ಕೆ ಅರಮನೆಗೆ [ಶಿರಃ ಪ್ರಧಾನ]ನಾಗಿ ಹರಗಣಂಗಳಿಗೆ ಗತಿಮತಿ ಚೈತನ್ಯನಾಗಿ ಕೂಡಲಚೆನ್ನಸಂಗಯ್ಯನಲ್ಲಿ ಅಂಡಜದೊಳಗಿದ್ದು ಶಿವನ ಭಂಡಾರಿಯಾದನಯ್ಯಾ ಎನ್ನ ತಂದೆ ಪೂರ್ವಾಚಾರಿ ಸಂಗನಬಸವಣ್ಣನು.
--------------
ಚನ್ನಬಸವಣ್ಣ
-->