ಬೆವಸಾಯವ ಮಾಡಿ ಮನೆಯ ಬೀಯಕ್ಕೆ ಬತ್ತವಿಲ್ಲದಿರ್ದಡೆ,
ಆ ಬೆವಸಾಯದ ಘೋರವೇತಕ್ಕಯ್ಯಾ ?
ಕ್ರಯವಿಕ್ರಯವ ಮಾಡಿ ಮನೆಯ ಸಂಚ ನಡೆಯದನ್ನಕ್ಕ
ಆ ಕ್ರಯವಿಕ್ರಯದ ಘೋರವೇತಕ್ಕಯ್ಯಾ ?
ಒಡೆಯನನೋಲೈಸಿ ತನುವಿಂಗೆ ಅಷ್ಟಭೋಗವ ಪಡೆಯದಿರ್ದಡೆ
ಆ ಓಲಗದ ಘೋರವೇತಕ್ಕಯ್ಯಾ ?
ಭಕ್ತನಾಗಿ ಭವಂ ನಾಸ್ತಿಯಾಗದಿರ್ದಡೆ;
ಆ ಉಪದೇಶವ ಕೊಟ್ಟ ಗುರು,
ಕೊಂಡ ಶಿಷ್ಯ,_ ಇವರಿಬ್ಬರ ಮನೆಯಲ್ಲಿ ಮಾರಿ
ಹೊಗಲಿ,
ಗುಹೇಶ್ವರನೆಂಬವನತ್ತಲೆ ಹೋಗಲಿ.