ಒಟ್ಟು 146 ಕಡೆಗಳಲ್ಲಿ , 18 ವಚನಕಾರರು , 86 ವಚನಗಳಲ್ಲಿ ಈ ಪದವನ್ನು ಬಳಸಿರುತ್ತಾರೆ
ಮೊಲೆಯಿಲ್ಲದಾವಿಂಗೆ ತಲೆ[ಯೆ] ಮೊಲೆ !ಮನದಲ್ಲಿ ಉಣ್ಣು ಕಂಡಾ, ಮನದಲ್ಲಿ ಉಣ್ಣು ಕಂಡಾ !ತಾ ಸತ್ತು, ಹಾಲ ಕುಡಿಯ ಬಲ್ಲಡೆ,ಗುಹೇಶ್ವರನೆಂಬ ಲಿಂಗವು ತಾನೆ ಕಂಡಾ !
ಮನವೆಂಬ ಮಂಟಪದ ನೆಳಲಲ್ಲಿ ನೆನೆಹೆಂಬ ಜಾÕನಜ್ಯೋತಿಯ ಬೆಳಗನಿಟ್ಟುಘನಪುರುಷ ಪವಡಿಸೈದಾನೆ, ಎಲೆ ಅವ್ವಾ.ಅದನೊಂದೆರಡೆನ್ನದೆ ಮೂರು ಬಾಗಿಲ ಮುಚ್ಚಿ ನಾಲ್ಕ ಮುಟ್ಟದೆಐದ ತಟ್ಟದೆ ಇರು ಕಂಡಾ, ಎಲೆ ಅವ್ವಾ.ಆರೇಳೆಂಟೆಂಬ ವಿಹಂಗಸಂಕುಳದ ಉಲುಹು ಪ್ರಬಲವಾದಡೆ,ಕಪಿಲಸಿದ್ಧಮಲ್ಲಿಕಾರ್ಜುನನು ನಿದ್ರೆಗೆಟ್ಟಲ್ಲಿರನು.
ಆಡಿ ಅಳುಪದಿರಾ, ಲೇಸಮಾಡಿ ಮರುಗದಿರಾ, ಎಲೆ ಮನವೆ.ಕೂಡಿ ತಪ್ಪದಿರಾ, ಬೇಡಿದವರಿಗಿಲ್ಲೆನ್ನದಿರು ಕಂಡಾ.ನಾಡ ಮಾತು ಬೇಡ, ಸೆರಗೊಡ್ಡಿ ಬೇಡುಕೂಡಲಸಂಗನ ಶರಣರ. 279
ಜಾನು ಜಂಗೆಯಲ್ಲಿ ಹುಟ್ಟಿ ಜಂಗಮವೆನಿಸಿಕೊಳಬಹುದೆ ?ಆಠಾವು ಹಿಂಗಿದಡೆ ಭಂಗಿತನು ಕಂಡಾ.ಅಂತರಂಗದಲೊದಗೂದನರಿಯರುಗುಹೇಶ್ವರನೆಂಬುದು ಮೀರಿದ ಘನವು
ಅನಂತಾನಂತಕಾಲ ನಿತ್ಯವೆಂಬಿರಿ ಸಂಸಾರ.ಸಂಸಾರವೆಂಬುದು ಹುಸಿ ಕಂಡಾ ಎಲವೋ!ಇಂದಿನಿಂದಿನ ಸುಖ ಇಂದಿಂಗೆ ಪರಿಣಾಮ.ದಿನದಿನದ ಸುಖ ಹುಸಿ ಕಂಡಾ ಎಲ್ಲವೊ!ಘನಘನವೆಂಬ ರೂಪಿಂಗೆ ರತಿಯಿಲ್ಲಯ್ಯಾ.ಮಹಾಲಿಂಗ ಗಜೇಶ್ವರನಲ್ಲಿ ತಿಳಿದು ನೋಡಾ ಎಲ್ಲವೊ!
ಹೊತ್ತಾರೆ ಪೂಜಿಸಲು ಬೇಡ ಕಂಡಾ.ಬೈಗೆಯೂ ಪೂಜಿಸಲು ಬೇಡ ಕಂಡಾ.ಇರುಳುವುನು ಹಗಲುವನು ಕಳೆದು,ಪೂಜೆಯನು ಪೂಜಿಸಲು ಬೇಕು ಕಂಡಾ,ಇಂತಪ್ಪ ಪೂಜೆಯನು ಪೂಜಿಸುವರ,ಎನಗೆ ನೀ ತೋರಾ ಗುಹೇಶ್ವರಾ.
ಮನಶುದ್ಧವಾಗಿ ಮಜ್ಜನಕ್ಕೆರೆದರೆ ಭಾವ ಮತ್ತೇಕಯ್ಯಾ ?ಪತ್ರ ಪುಷ್ಪ ರಂಗವಲ್ಲಿಯನಿಕ್ಕಲೇನು, ಭಿತ್ತಿಯ ಚಿತ್ತಾರವೆ ?ಅವರು ಕಾಣಬೇಕು, ಇವರು ಕಾಣಬೇಕೆಂಬಭ್ರಮೆಯ ಭ್ರಮಿತರು ಅಂಗಹೀನರು.ಮನದಂಗವನಗಲರು, ಲಿಂಗ ಮತ್ತೆಲ್ಲಿಯದೋ ?ಸದಮದವಳಿದು ನಿಜವನರಿದಡೆ ಲಿಂಗಕ್ಕೆ ಪೂಜೆ ಕಂಡಾ,ಕೂಡಲಚೆನ್ನಸಂಗಯ್ಯ ಸಾಹಿತ್ಯನಾಗಿಹನು.
ನಿನ್ನ ಜನ್ಮದ ಪರಿಭವವ ಮರದೆಯಲ್ಲಾ ಮನವೆ,ಲಿಂಗವ ನಂಬು ಕಂಡಾ ಮನವೆ,ಜಂಗಮವ ನೆರೆ ನಂಬು ಕಂಡಾ, ಎಲೆ ಮನವೆ,ಕೂಡಲಸಂಗಮದೇವರ ಬೆಂಬತ್ತು ಕಂಡಾ, ಎಲೆ ಮನವೆ.
ಎನ್ನ ಈ ಸಂಸಾರದ ಬಾಳುವೆ ನೆಲೆಯಿಲ್ಲ ಕಂಡಾ !ಆದಡೆ, ಶಿವನೆ ನೀನು ಕಾಡುವ ಕಾಟ ನೆಲೆಯಿಲ್ಲ.ಸಂಸಾರದ ಕೂಡೆ ಕಾಡುವುದು ಲಯ.ಇಂತೀ ಎರಡೂ ಲಯವಾದಡೆನಾನು ನೀನೂ ಕೂಡಿ ನಿತ್ಯರಾಗಿ ಸುಖಿಯಿಸುವ, ಸಕಳೇಶ್ವರದೇವಾ.
ಉರಗನ ಫಣಾಮಣಿಯ ಬೆಳಗನರಿ ಕಂಡಾ.ಉರವಣಿಸಿ ಮೇಲಕ್ಕೆ ಹಾರುವ ಹದ್ದಿನ ಪರಿಯನರಿ ಕಂಡಾ.ಸರಸ್ವತಿ ಸಿರಿಯೊಡನೇಕಾಂತದಲ್ಲಿಹ ಪರಿಯನರಿ ಕಂಡಾ.ಹರಿಯಜರುದ್ರರ ಕರ್ಮವನಳಿದ ಪರಿಯನರಿ ಕಂಡಾ.ನಿಜಗುರು ಸ್ವತಂತ್ರಸಿದ್ಧಲಿಂಗೇಶ್ವರಾ, ತಾನೆಂದರಿ ಕಂಡಾ.
ಮಾತಿನ ಮಾತಿಂಗೆ ನಿನ್ನ ಕೊಂದಹರೆಂದುಎಲೆ ಹೋತೇ ಅಳು, ಕಂಡಾ !ವೇದವನೋದಿದವರ ಮುಂದೆ ಅಳು, ಕಂಡಾ !ಶಾಸ್ತ್ರ ಕೇಳಿದವರ ಮುಂದೆ ಅಳು, ಕಂಡಾ !ನೀನತ್ತುದಕ್ಕೆ ತಕ್ಕುದ ಮಾಡುವ ಕೂಡಲಸಂಗಮದೇವ.
ರೂಪುವಿರಹಿತ ಲಿಂಗ ಕಂಡಾ !ಗುರುವುಳ್ಳನ್ನಕ್ಕ ಶಿಷ್ಯನಲ್ಲಾ, ಲಿಂಗವುಳ್ಳನ್ನಕ್ಕ ಜಂಗಮವಲ್ಲಾ,ಪ್ರಸಾದವುಳ್ಳನ್ನಕ್ಕ ಭಕ್ತನಲ್ಲಾ.ಲಿಂಗೈಕ್ಯನಾದಡೆ; ಸ್ಥಾವರವಿರಹಿತ ಶರಣಭರಿತನಾಗಿರಬೇಕು.ಕಾಯಕ್ಕೆ ಸಾಹಿತ್ಯವೆಲ್ಲಿಯಾದಡೆಯು ಉಂಟುಆತ್ಮಸಾಹಿತ್ಯವಪೂರ್ವ ನೋಡಾ !ಆಚಾರ[ಸಾಹಿತ್ಯ]ವೆ ಲೋಕ, ಅನಾಚರ[ಸಾಹಿತ್ಯ]ವೆ ಶರಣಇದು ಕಾರಣ ಕೂಡಲಚೆನ್ನಸಂಗಯ್ಯಾಅನಾಚಾರಗಲ್ಲದೆ ಪ್ರಸಾದವಿಲ್ಲ.
ಅಂಕ ಕಂಡಾ, ಕೋಲಾಸೆ ಮತ್ತೇಕಯ್ಯಾಲೆಂಕ ಕಂಡಾ, ಪ್ರಾಣದಾಸೆ ಮತ್ತೇಕಯ್ಯಾಭಕ್ತ ಕಂಡಾ, ತನುಮನಧನದಾಸೆ ಮತ್ತೇಕಯ್ಯಾನಿಮ್ಮ ಅಂಕೆಗೆ ಝಂಕೆಗೆ ಶಂಕಿತನಾದಡೆಎನ್ನ ಲೆಂಕತನಕ್ಕೆ ಹಾನಿ ಕೂಡಲಸಂಗಮದೇವಾ.
ಕಾಮಿತವಿಲ್ಲ ಕಲ್ಪಿತವಿಲ್ಲ ನಾಮಸೀಮೆಯೆಂಬುದಿಲ್ಲ.ಭಾವಿಸಲಿಲ್ಲ ಲಕ್ಷಿಸಲಿಲ್ಲ ರೂಹಿಸಲಿಲ್ಲ.ವಾಙ್ಮನಾತೀತವೆಂದಲ್ಲಿ ನೆನೆಯಲಿಲ್ಲ.ಅತ್ಯತಿಷ್ಠದ್ದಶಾಂಗುಲವೆಂದಲ್ಲಿ ಲಕ್ಷಿಸಲಿಲ್ಲ.ಸರ್ವಗೌಪ್ಯ ಮಹಾದೇವಾಯೆಂದಲ್ಲಿ ರೂಹಿಸಲಿಲ್ಲ.ಇಲ್ಲ ಇಲ್ಲ ಎನಲಿಲ್ಲ ಅಲ್ಲಿಯೇ ನಿರ್ಲೇಪವಾದಸೌರಾಷ್ಟ್ರ ಸೋಮೇಶ್ವರಲಿಂಗವ ಕಂಡಾ.
ಕೇಳು ಕೇಳೆನ್ನ ಭಾಷೆ, ಅರಿದು ಕಂಡಾ ಅವ್ವಾ,ನಲ್ಲನೊಮ್ಮೆ ತೋರಿದಡೆ ಎನ್ನ ಸರಿಹರಿ ನೋಡಿದೆ ಅವ್ವಾ.ಕಪಿಲಸಿದ್ಧಮಲ್ಲಿನಾಥ ರೂಪಂಬಿಟ್ಟು ಅಗಮ್ಯನಾದಡೆಅಗಮ್ಯ ರೂಪಂಬಿಡಿಸಿ ಹಿಡಿವೆನೆ ಅವ್ವಾ.